Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಸೆಂಬರ್ 11ರಂದು ದರ್ಶನ್​ಗೆ ಶಸ್ತ್ರಚಿಕಿತ್ಸೆ; ಇಲ್ಲಿದೆ ಸರ್ಜರಿಯ ಸಂಪೂರ್ಣ ವಿವರ

ತೀವ್ರ ಬೆನ್ನು ನೋವು ಇರುವುದರಿಂದ ದರ್ಶನ್ ಅವರಿಗೆ ಶಸ್ತ್ರ ಚಿಕಿತ್ಸೆ ಅಗತ್ಯವಿದೆ ಎಂದು ವೈದ್ಯರು ಸಲಹೆ ನೀಡಿದ್ದರು. ಹಾಗಾಗಿ ದರ್ಶನ್ ಅವರಿಗೆ ಮಧ್ಯಂತರ ಜಾಮೀನು ನೀಡಲಾಗಿತ್ತು. ಈಗ ಸರ್ಜರಿ ಕಾರಣಕ್ಕೆ ಜಾಮೀನು ಅವಧಿ ವಿಸ್ತರಣೆ ಮಾಡಲಾಗಿದೆ. ಡಿ.11ರಂದು ದರ್ಶನ್ ಅವರಿಗೆ ವೈದ್ಯರು ಲುಂಬರ್ ಡಿಕಂಪ್ರೆಷನ್ ಅಂಡ್ ಫ್ಯೂಷನ್ ಸರ್ಜರಿ ಮಾಡಲಿದ್ದಾರೆ.

ಡಿಸೆಂಬರ್ 11ರಂದು ದರ್ಶನ್​ಗೆ ಶಸ್ತ್ರಚಿಕಿತ್ಸೆ; ಇಲ್ಲಿದೆ ಸರ್ಜರಿಯ ಸಂಪೂರ್ಣ ವಿವರ
ದರ್ಶನ್​
Follow us
Ramesha M
| Updated By: ಮದನ್​ ಕುಮಾರ್​

Updated on: Dec 09, 2024 | 10:48 PM

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್​ ಅವರಿಗೆ ಡಿಸೆಂಬರ್​ 11ರಂದು ಶಸ್ತ್ರಚಿಕಿತ್ಸೆ ಮಾಡಲಾಗುವುದು. ಈ ಬಗ್ಗೆ ಹೈಕೋರ್ಟ್​ಗೆ ವರದಿ ಸಲ್ಲಿಕೆ ಮಾಡಲಾಗಿದೆ. ಈಗಾಗಲೇ ದರ್ಶನ್​ಗೆ ನೀಡಲಾಗುತ್ತಿರುವ ಚಿಕಿತ್ಸೆಯ ವಿವರಗಳನ್ನು ಕೂಡ ಕೋರ್ಟ್​ಗೆ ನೀಡಲಾಗಿದೆ. ದರ್ಶನ್ ಪರ ವಕೀಲರು 5 ಸರ್ಟಿಫಿಕೆಟ್​ಗಳನ್ನ ಹೈಕೋರ್ಟ್​ಗೆ ಸಲ್ಲಿಸಿದ್ದಾರೆ. ಡಿಸೆಂಬರ್​ 2ರ ವೈದ್ಯರ ವರದಿಯಲ್ಲಿ ಸರ್ಜರಿಯ ವಿವರ ಉಲ್ಲೇಖ ಮಾಡಲಾಗಿದೆ. ಲುಂಬರ್ ಡಿಕಂಪ್ರೆಷನ್ ಅಂಡ್ ಫ್ಯೂಷನ್ ಎಂಬ ಸರ್ಜರಿ ಮಾಡಲಾಗುವುದು ಎಂದು ತಿಳಿಸಲಾಗಿದೆ.

ಲುಂಬರ್ ಡಿಕಂಪ್ರೆಷನ್ ಅಂಡ್ ಫ್ಯೂಷನ್ ಸರ್ಜರಿಯಿಂದ ಬೆನ್ನುಹುರಿ ಚಟುವಟಿಕೆ ಸಹಜಗೊಳಿಸಬಹುದು. ಇದರಿಂದ ದರ್ಶನ್ ಅವರ ಬೆನ್ನುಹುರಿ ನೋವು ಕಡಿಮೆ ಮಾಡಬಹುದು. ಜೀವನದ ಗುಣಮಟ್ಟ ಹೆಚ್ಚಿಸಬಹುದೆಂದು ವೈದ್ಯರ ವರದಿಯಲ್ಲಿ ಹೇಳಲಾಗಿದೆ. ಈ ಸರ್ಜರಿಯ ಬಗ್ಗೆ ಈಗಾಗಲೇ ದರ್ಶನ್ ಹಾಗೂ ಪತ್ನಿ ವಿಜಯಲಕ್ಷ್ಮಿಗೆ ಮನವರಿಕೆ ಮಾಡಲಾಗಿದೆ.

ದರ್ಶನ್ ಅವರಿಗೆ ಜನರಲ್ ಅನಸ್ತೇಶಿಯಾ ಕೊಟ್ಟು ಸರ್ಜರಿ ಮಾಡಲಾಗುವುದು. ಈ ಬಗ್ಗೆ ನ್ಯೂರೋ ಸರ್ಜನ್ ವಿಭಾಗದ ಮುಖ್ಯಸ್ಥ ನವೀನ್​ ಅವರಿಂದ ವರದಿ ನೀಡಲಾಗಿದೆ. ಮುಖ್ಯ ಆಡಳಿತಾಧಿಕಾರಿ ಸ್ಮಿತಾ ತಮ್ಮಯ್ಯ ಅವರು ಕೋರ್ಟ್​ಗೆ ವರದಿ ಸಲ್ಲಿಸಿದ್ದಾರೆ. ಸದ್ಯಕ್ಕೆ ದರ್ಶನ್ ಅವರ ಮಧ್ಯಂತರ ಜಾಮೀನು ಅವಧಿ ವಿಸ್ತರಣೆ ಆಗಿದೆ. ಚಿಕಿತ್ಸೆಗೆ ಅನುಕೂಲ ಆಗಲಿ ಎಂಬ ದೃಷ್ಟಿಯಿಂದ ಈ ಆದೇಶ ನೀಡಲಾಗಿದೆ.

ಇದನ್ನೂ ಓದಿ: ಎದೆಗೂಡಿನ 17 ಮೂಳೆ ಮುರಿದಿವೆ; ಕೊಲೆ ಎನ್ನಲು ಹಲವು ಸಾಕ್ಷ್ಯಗಳಿವೆ: ಎಸ್​ಪಿಪಿ ವಾದ

ಹಲವು ವರ್ಷಗಳಿಂದ ದರ್ಶನ್ ಅವರಿಗೆ ಬೆನ್ನು ನೋವಿನ ಸಮಸ್ಯೆ ಇದೆ. ‘ಕಾಟೇರ’ ಸಿನಿಮಾದ ಶೂಟಿಂಗ್ ಸಂದರ್ಭದಲ್ಲಿ ಕೂಡ ಅವರಿಗೆ ನೋವು ಕಾಣಿಸಿಕೊಂಡಿತ್ತು. ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ 2ನೇ ಆರೋಪಿಯಾಗಿ ದರ್ಶನ್ ಜೈಲು ಸೇರಿದ್ದು, ಬಳಿಕ ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ಶಿಫ್ಟ್​ ಮಾಡಲಾಯಿತು. ಆಗ ಅವರಿಗೆ ಬೆನ್ನುನೋವು ಹೆಚ್ಚಾಯಿತು.

ದರ್ಶನ್ ಅವರಿಗೆ ಬೆನ್ನು ನೋವು ಹೆಚ್ಚಾದ ಕಾರಣ 6 ವಾರಗಳ ಕಾಲ ಮಧ್ಯಂತರ ಜಾಮೀನು ನೀಡಲಾಯಿತು. ಡಿಸೆಂಬರ್​ 11ಕ್ಕೆ ಅವರ ಜಾಮೀನು ಅವಧಿ ಅಂತ್ಯ ಆಗುವುದರಲ್ಲಿತ್ತು. ಆದರೆ ಅವರ ಪರ ವಕೀಲರು ಜಾಮೀನು ಅವಧಿ ವಿಸ್ತರಿಸಲು ಮನವಿ ಮಾಡಿದ್ದರು. ಮುಂದಿನ ಆದೇಶದ ತನಕ ಜಾಮೀನು ಅವಧಿ ವಿಸ್ತರಣೆ ಮಾಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Daily Devotional: ದೇವಸ್ಥಾನದಲ್ಲಿ ಮಹಿಳೆಯರು ಹೂವು ಧರಿಸುವುದು ಶುಭವೇ?
Daily Devotional: ದೇವಸ್ಥಾನದಲ್ಲಿ ಮಹಿಳೆಯರು ಹೂವು ಧರಿಸುವುದು ಶುಭವೇ?
Daily horoscope: ಹುಣ್ಣಿಮೆಯ ದಿನದ ರಾಶಿ ಫಲಗಳನ್ನು ತಿಳಿಯಿರಿ
Daily horoscope: ಹುಣ್ಣಿಮೆಯ ದಿನದ ರಾಶಿ ಫಲಗಳನ್ನು ತಿಳಿಯಿರಿ
ಮಂಗಳೂರಿನಲ್ಲೊಂದು ಎದೆ ಝಲ್ ಎನಿಸುವ ಭೀಕರ ಅಪಘಾತ
ಮಂಗಳೂರಿನಲ್ಲೊಂದು ಎದೆ ಝಲ್ ಎನಿಸುವ ಭೀಕರ ಅಪಘಾತ
ಮಾತಿಗೆ ಮಾತು ಬೆಳೆದು ಕಂಡಕ್ಟರ್​-ಪ್ರಯಾಣಿಕರ ನಡುವೆ ಹೊಡೆದಾಟ!
ಮಾತಿಗೆ ಮಾತು ಬೆಳೆದು ಕಂಡಕ್ಟರ್​-ಪ್ರಯಾಣಿಕರ ನಡುವೆ ಹೊಡೆದಾಟ!
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ