AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ವಿದೇಶಕ್ಕೆ ತೆರಳಿದ್ದು ನಿಜವೇ? ವೈರಲ್ ಆಗ್ತಿರೋ ವಿಡಿಯೋ ಅಸಲಿಯತ್ತೇನು?

ನಟ ದರ್ಶನ್ ಅವರು ತಮ್ಮ ಹೊಸ ಚಿತ್ರ 'ಡೆವಿಲ್' ನ ಚಿತ್ರೀಕರಣಕ್ಕಾಗಿ ವಿದೇಶ ಪ್ರವಾಸಕ್ಕೆ ತೆರಳುತ್ತಿದ್ದಾರೆ. ನ್ಯಾಯಾಲಯದ ಅನುಮತಿ ಪಡೆದ ಅವರು ದುಬೈ ಮತ್ತು ಯುರೋಪ್‌ನಲ್ಲಿ ಚಿತ್ರೀಕರಣದಲ್ಲಿ ಭಾಗವಹಿಸಲಿದ್ದಾರೆ. ವಿಮಾನ ನಿಲ್ದಾಣದಲ್ಲಿ ಕಂಡುಬಂದ ಅವರ ವಿಡಿಯೋ ವೈರಲ್ ಆಗಿದೆ. ಇದರ ಅಸಲಿಯತ್ತಿನ ಬಗ್ಗೆ ಇಲ್ಲಿದೆ ವಿವರ.

ದರ್ಶನ್ ವಿದೇಶಕ್ಕೆ ತೆರಳಿದ್ದು ನಿಜವೇ? ವೈರಲ್ ಆಗ್ತಿರೋ ವಿಡಿಯೋ ಅಸಲಿಯತ್ತೇನು?
ದರ್ಶನ್
ರಾಜೇಶ್ ದುಗ್ಗುಮನೆ
|

Updated on: Jun 25, 2025 | 8:48 AM

Share

ನಟ ದರ್ಶನ್ (Darshan) ಅವರು ಸದ್ಯ ‘ಡೆವಿಲ್’ ಸಿನಿಮಾ ಶೂಟ್​ನಲ್ಲಿ ಬ್ಯುಸಿ ಆಗಿದ್ದಾರೆ. ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಸಂಕಷ್ಟ ಅನುಭವಿಸಿದ್ದ ಅವರು ಈಗ ಹೊರ ಬಂದು ಮತ್ತೆ ಎಂದಿನಂತೆ ಜೀವನ ನಡೆಸುತ್ತಿದ್ದಾರೆ. ದರ್ಶನ್ ಅವರು ಈಗ ವಿದೇಶಕ್ಕೆ ತೆರಳಲು ರೆಡಿ ಆಗಿದ್ದಾರೆ. ‘ಡೆವಿಲ್’ ಸಿನಿಮಾ ಶೂಟ್​​ಗಾಗಿ ದರ್ಶನ್ ವಿದೇಶಕ್ಕೆ ಹೊಗಬೇಕಿದೆ. ಹೀಗಿರುವಾಗಲೇ ಅವರು ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡ ವಿಡಿಯೋ ಒಂದು ವೈರಲ್ ಆಗಿದೆ.

ದರ್ಶನ್ ಅವರಿಗೆ ಜಾಮೀನು ಸಿಕ್ಕಾಗ ಬೆಂಗಳೂರು ಬಿಟ್ಟು ಹೋಗಲು ಅನುಮತಿ ಇರಲಿಲ್ಲ. ಆ ಬಳಿಕ ಅವರು ದೇಶದ ಎಲ್ಲ ಕಡೆಗಳಲ್ಲಿ ಓಡಾಡಲು ಒಪ್ಪಿಗೆ ಪಡೆದರು. ಈಗ ವಿದೇಶಕ್ಕೆ ಹೋಗಲು ಅವರಿಗೆ ಅನುಮತಿ ಸಿಕ್ಕಿದೆ. ದುಬೈ ಹಾಗೂ ಯುರೋಪ್​ನಲ್ಲಿ ‘ಡೆವಿಲ್’ ಸಿನಿಮಾ ಶೂಟ್ ನಡೆಯಲಿದೆ. ಅದರಲ್ಲಿ ದರ್ಶನ್ ಭಾಗಿ ಆಗಬೇಕಿದೆ. ಈಗ ಅವರು ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದು ಸಾಕಷ್ಟು ಕುತೂಹಲ ಮೂಡಿಸಿದೆ. ಅವರ ಜೊತೆ ಪತ್ನಿ ವಿಜಯಲಕ್ಷ್ಮಿ ಹಾಗೂ ಮಗ ಕೂಡ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ
Image
‘ಆರ್ಯನ್ ಯಾವಾಗಲೂ ನಾನು ಮುಸ್ಲಿಂ ಎಂದೇ ಹೇಳುತ್ತಾನೆ’; ಗೌರಿ ಖಾನ್
Image
‘ಆನಂದ್’ ಸಿನಿಮಾದ ಸಾಂಗ್ ಶೂಟಿಂಗ್ ವೇಳೆ ನಡೆದಿತ್ತು ಫನ್ನಿ ಘಟನೆ
Image
‘ಅದು ನಡೆದಿಲ್ಲ’; ಹಾರ್ದಿಕ್ ಜೊತೆಗಿನ ಲವ್ವಿ-ಡವ್ವಿ ಬಗ್ಗೆ ಇಶಾ ಮಾತು
Image
ಕನ್ನಡದ ಪ್ರಶಾಂತ್ ನೀಲ್ ಜೊತೆ ಕೈ ಜೋಡಿಸಿದ ಅಲ್ಲು ಅರ್ಜುನ್? ಖಡಕ್ ಟೈಟಲ್

ದರ್ಶನ್ ಅವರನ್ನು ವಿಮಾನ ನಿಲ್ದಾಣದಲ್ಲಿ ನೋಡಿದ ಅನೇಕರು ಅವರು ವಿದೇಶಕ್ಕೆ ತೆರಳಿದರು ಎನ್ನುತ್ತಿದ್ದಾರೆ. ಆದರೆ, ಇದು ಸುಳ್ಳು ಎನ್ನಲಾಗುತ್ತಿದೆ. ಏಕೆಂದರೆ, ದರ್ಶನ್ ಅವರಿಗೆ ವಿದೇಶ ಪ್ರಯಾಣಕ್ಕೆ ಕೋರ್ಟ್ ಅನುಮತಿ ನೀಡಿದ್ದು ಜುಲೈ 1ರಿಂದ ಜುಲೈ 27ರವರೆಗೆ. ಜುಲೈ 1ಕ್ಕೆ ಇನ್ನೂ ಒಂದು ವಾರ ಬಾಕಿ ಇದೆ. ಹೀಗಾಗಿ ಅವರು ಹೈದರಾಬಾದ್ ಅಥವಾ ಬೇರೆ ಯಾವುದಾದರೂ ಪ್ರದೇಶಕ್ಕೆ ತೆರಳಿರಬಹುದು ಎಂದು ಊಹಿಸಲಾಗುತ್ತಿದೆ.

View this post on Instagram

A post shared by @_naavu._

ನ್ಯಾಯಾಲಯದಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಮುಂದಿನ ವಿಚಾರಣೆಯ ದಿನಾಂಕದಲ್ಲಿ ದರ್ಶನ್ ಅವರು ತಪ್ಪದೇ ಹಾಜರಾಗಬೇಕು ಎಂದು ಕೋರ್ಟ್ ಸೂಚನೆ ನೀಡಿದೆ. ಈ ಷರತ್ತಿನ ಮೇರೆಗೆ ಅವರಿಗೆ ವಿದೇಶಕ್ಕೆ ಹೋಗಲು ಕೋರ್ಟ್ ಅನುಮತಿ ನೀಡಿದೆ.

ಇದನ್ನೂ ಓದಿ: ದರ್ಶನ್ ಮನೆ ಪಕ್ಕವೇ ನಾಗಶೇಖರ್ ಮನೆ; ಹೇಗಿದೆ ಇಬ್ಬರ ನಡುವಿನ ನಂಟು?

ದರ್ಶನ್ ನಟನೆಯ ‘ಡೆವಿಲ್’ ಚಿತ್ರವನ್ನು ‘ಮಿಲನ’ ಪ್ರಕಾಶ್ ನಿರ್ದೇಶನ ಹಾಗೂ ನಿರ್ಮಾಣ ಮಾಡುತ್ತಿದ್ದಾರೆ. ಇತ್ತೀಚೆಗೆ ದರ್ಶನ್ ಜೈಲಿನ ಉಡುಗೆಯಲ್ಲಿ ಕಾಣಿಸಿಕೊಂಡ ಫೋಟೋ ವೈರಲ್ ಆಗಿತ್ತು. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡಿದ್ದರು. ಇದರಿಂದ ದರ್ಶನ್ ಸಿನಿಮಾ ಬಗ್ಗೆ ಸಾಕಷ್ಟು ಕುತೂಹಲ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!