ದರ್ಶನ್​ ಖೈದಿ ಸಂಖ್ಯೆ 6106; ಈ ನಂಬರ್​ನಲ್ಲೇ ವಾಹನ ನೋಂದಣಿಗೆ ಹೆಚ್ಚಿದೆ ಬೇಡಿಕೆ

ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್​ ಕಳಿಸಿದ್ದ ಎಂಬ ಕಾರಣಕ್ಕೆ ರೇಣುಕಾ ಸ್ವಾಮಿ ಎಂಬಾತನನ್ನು ಕೊಲೆ ಮಾಡಿದ ಆರೋಪದಲ್ಲಿ ದರ್ಶನ್​ ಜೈಲು ಸೇರಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಚಾರಣಾಧೀನ ಖೈದಿ ಆಗಿರುವ ಅವರಿಗೆ 6106 ಖೈದಿ ನಂಬರ್​ ಕೊಡಲಾಗಿದೆ. ಈ ಸಂಖ್ಯೆಯಲ್ಲೇ ತಮ್ಮ ಹೊಸ ವಾಹನಗಳ ನೋಂದಣಿ ಮಾಡಿಸಿಕೊಳ್ಳಲು ಕೆಲವು ಅಭಿಮಾನಿಗಳು ಮುಂದಾಗಿದ್ದಾರೆ. ಫ್ಯಾನ್ಸ್ ಪಾಲಿಗೆ ಇದು ಲಕ್ಕಿ ನಂಬರ್​ ಎಂಬ ಭಾವನೆ ಕೆಲವರಿಗೆ ಮೂಡಿದೆ.

ದರ್ಶನ್​ ಖೈದಿ ಸಂಖ್ಯೆ 6106; ಈ ನಂಬರ್​ನಲ್ಲೇ ವಾಹನ ನೋಂದಣಿಗೆ ಹೆಚ್ಚಿದೆ ಬೇಡಿಕೆ
ದರ್ಶನ್​
Follow us
| Updated By: ಮದನ್​ ಕುಮಾರ್​

Updated on:Jun 24, 2024 | 12:28 PM

ನಟ ದರ್ಶನ್​ (Darshan) ಅವರನ್ನು ಅಪಾರವಾಗಿ ಪ್ರೀತಿಸುವ ಅಭಿಮಾನಿಗಳು ಇದ್ದಾರೆ. ಎಂಥದ್ದೇ ಸಂದರ್ಭದಲ್ಲೂ ಅವರನ್ನು ಬಿಟ್ಟುಕೊಡುವುದಿಲ್ಲ ಎಂಬ ಜನರು ಇದ್ದಾರೆ. ಇತ್ತೀಚೆಗೆ ದರ್ಶನ್​ ಅವರು ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಸೇರಿದ್ದರೂ ಕೂಡ ಅವರ ಪರವಾಗಿಯೇ ಕೆಲವು ಫ್ಯಾನ್ಸ್​ (Darshan Fans) ಜೈಕಾರ ಕೂಗುತ್ತಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ದರ್ಶನ್​ ಅಭಿಮಾನಿಗಳು ಇನ್ನಷ್ಟು ಆ್ಯಕ್ಟೀವ್​ ಆಗಿದ್ದಾರೆ. ಅಚ್ಚರಿ ಏನೆಂದರೆ, ದರ್ಶನ್​ಗೆ ಜೈಲಿನಲ್ಲಿ ನೀಡಿದ ಖೈದಿ ನಂಬರ್​ (Darshan Jail Number) ಕೂಡ ಈಗ ಅಭಿಮಾನಿಗಳ ಪಾಲಿನ ಲಕ್ಕಿ ನಂಬರ್​ ಆಗುತ್ತಿದೆ!

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಎ2 ಆಗಿರುವ ದರ್ಶನ್​ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರುವ ಅವರು ವಿಚಾರಣಾಧೀನ ಖೈದಿ ಆಗಿದ್ದಾರೆ. ಅವರಿಗೆ 6106 ಖೈದಿ ನಂಬರ್​ ನೀಡಲಾಗಿದೆ. ಈ ನಂಬರ್​ ಮೇಲೆ ಕೆಲವು ಅಭಿಮಾನಿಗಳಿಗೆ ಆಕರ್ಷಣೆ ಹೆಚ್ಚಿದೆ. ಇದೇ ನಂಬರ್​ನಲ್ಲಿ ಹೊಸ ವಾಹನಗಳ ನೋಂದಣಿ ಮಾಡಿಸಿಕೊಳ್ಳಲು ಕೆಲವು ಫ್ಯಾನ್ಸ್​ ಮುಂದಾಗಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಊಟ, ನಿದ್ರೆ, ಕೆಲಸ ಬಿಟ್ಟು ದರ್ಶನ್​ಗಾಗಿ ಜೈಲಿನ ಹೊರಗೆ ಕಾದಿರುವ ಅಭಿಮಾನಿಗಳು

ಸೋಶಿಯಲ್​ ಮೀಡಿಯಾದಲ್ಲಿ ಕೆಲವು ಅಭಿಮಾನಿಗಳು ಕಣ್ಣೀರಿಡುತ್ತಾ ದರ್ಶನ್​ ಪರವಾಗಿ ವಿಡಿಯೋ ಹಂಚಿಕೊಳ್ಳುತ್ತಿದ್ದಾರೆ. ‘ನಮ್ಮ ಬಾಸ್​ ತಪ್ಪು ಮಾಡಿಲ್ಲ’ ಎಂದು ಕೂಗಿ ಹೇಳುತ್ತಿದ್ದಾರೆ. ಆದಷ್ಟು ಬೇಗ ದರ್ಶನ್​ ಅವರು ಬಿಡುಗಡೆ ಆಗಿ ಹೊರಗೆ ಬರಬೇಕು ಎಂದು ಫ್ಯಾನ್ಸ್​ ಹಂಬಲಿಸುತ್ತಿದ್ದಾರೆ. ದರ್ಶನ್​ ಅರೆಸ್ಟ್​ ಆದಾಗಿನಿಂದಲೂ ಅಭಿಮಾನಿಗಳಲ್ಲಿ ಚಡಪಡಿಕೆ ಹೆಚ್ಚಾಗಿದೆ.

ಇದನ್ನೂ ಓದಿ: ಉಪ್ಪು ಖಾರ ಇಲ್ಲದ ಊಟ, ಸೊಳ್ಳೆ ಕಾಟ: ಪವಿತ್ರಾ ಗೌಡಗೆ ನರಕವಾಯ್ತು ಜೈಲು

ಪರಪ್ಪನ ಅಗ್ರಹಾರದಲ್ಲಿ ಇರುವ ದರ್ಶನ್​ ಅವರನ್ನು ನೋಡಲೇಬೇಕು ಎಂದು ಕೆಲವು ಅಭಿಮಾನಿಗಳು ಹಠ ಹಿಡಿದಿದ್ದಾರೆ. ದೂರದ ಊರುಗಳಿಂದ ಬಂದಿರುವ ಫ್ಯಾನ್ಸ್​ ಈಗಾಗಲೇ ಜೈಲಿನ ಮುಂದೆ ನಿಂತು ಕಾಯುತ್ತಿದ್ದಾರೆ. ‘ಅವರನ್ನು ನೋಡಿಕೊಂಡೇ ನಾವು ಊರಿಗೆ ಹೋಗೋದು’ ಎಂದು ಕೆಲವರು ಕಣ್ಣೀರು ಹಾಕುತ್ತಿದ್ದಾರೆ. ಸದ್ಯಕ್ಕೆ ದರ್ಶನ್​, ಪವಿತ್ರಾ ಹಾಗೂ ಅವರ ಸಹಚರರು ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:58 am, Mon, 24 June 24

ತಾಜಾ ಸುದ್ದಿ
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?
ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?
ಭೋರ್ಗರೆಯುತ್ತಿದೆ ಚುಂಚನಕಟ್ಟೆ ಜಲಪಾತ, ವೈಭವ ನೋಡಲು ಪ್ರವಾಸಿಗರ ದಂಡು
ಭೋರ್ಗರೆಯುತ್ತಿದೆ ಚುಂಚನಕಟ್ಟೆ ಜಲಪಾತ, ವೈಭವ ನೋಡಲು ಪ್ರವಾಸಿಗರ ದಂಡು
ಭಾರತ ಫೈನಲ್​ ಮ್ಯಾಚ್​ ಗೆಲುವಿಗೆ ಈ ಐದು ಕಾರಣಗಳು, ಯಾವುವು ಗೊತ್ತಾ?
ಭಾರತ ಫೈನಲ್​ ಮ್ಯಾಚ್​ ಗೆಲುವಿಗೆ ಈ ಐದು ಕಾರಣಗಳು, ಯಾವುವು ಗೊತ್ತಾ?
T20 World Cup: ದ್ರಾವಿಡ್ ಭಾವನಾತ್ಮಕ ಸಂಭ್ರಮಾಚರಣೆ ಹೇಗಿದೆ ನೋಡಿ
T20 World Cup: ದ್ರಾವಿಡ್ ಭಾವನಾತ್ಮಕ ಸಂಭ್ರಮಾಚರಣೆ ಹೇಗಿದೆ ನೋಡಿ