AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್​ ಖೈದಿ ಸಂಖ್ಯೆ 6106; ಈ ನಂಬರ್​ನಲ್ಲೇ ವಾಹನ ನೋಂದಣಿಗೆ ಹೆಚ್ಚಿದೆ ಬೇಡಿಕೆ

ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್​ ಕಳಿಸಿದ್ದ ಎಂಬ ಕಾರಣಕ್ಕೆ ರೇಣುಕಾ ಸ್ವಾಮಿ ಎಂಬಾತನನ್ನು ಕೊಲೆ ಮಾಡಿದ ಆರೋಪದಲ್ಲಿ ದರ್ಶನ್​ ಜೈಲು ಸೇರಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಚಾರಣಾಧೀನ ಖೈದಿ ಆಗಿರುವ ಅವರಿಗೆ 6106 ಖೈದಿ ನಂಬರ್​ ಕೊಡಲಾಗಿದೆ. ಈ ಸಂಖ್ಯೆಯಲ್ಲೇ ತಮ್ಮ ಹೊಸ ವಾಹನಗಳ ನೋಂದಣಿ ಮಾಡಿಸಿಕೊಳ್ಳಲು ಕೆಲವು ಅಭಿಮಾನಿಗಳು ಮುಂದಾಗಿದ್ದಾರೆ. ಫ್ಯಾನ್ಸ್ ಪಾಲಿಗೆ ಇದು ಲಕ್ಕಿ ನಂಬರ್​ ಎಂಬ ಭಾವನೆ ಕೆಲವರಿಗೆ ಮೂಡಿದೆ.

ದರ್ಶನ್​ ಖೈದಿ ಸಂಖ್ಯೆ 6106; ಈ ನಂಬರ್​ನಲ್ಲೇ ವಾಹನ ನೋಂದಣಿಗೆ ಹೆಚ್ಚಿದೆ ಬೇಡಿಕೆ
ದರ್ಶನ್​
ರಾಮ್​, ಮೈಸೂರು
| Edited By: |

Updated on:Jun 24, 2024 | 12:28 PM

Share

ನಟ ದರ್ಶನ್​ (Darshan) ಅವರನ್ನು ಅಪಾರವಾಗಿ ಪ್ರೀತಿಸುವ ಅಭಿಮಾನಿಗಳು ಇದ್ದಾರೆ. ಎಂಥದ್ದೇ ಸಂದರ್ಭದಲ್ಲೂ ಅವರನ್ನು ಬಿಟ್ಟುಕೊಡುವುದಿಲ್ಲ ಎಂಬ ಜನರು ಇದ್ದಾರೆ. ಇತ್ತೀಚೆಗೆ ದರ್ಶನ್​ ಅವರು ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಸೇರಿದ್ದರೂ ಕೂಡ ಅವರ ಪರವಾಗಿಯೇ ಕೆಲವು ಫ್ಯಾನ್ಸ್​ (Darshan Fans) ಜೈಕಾರ ಕೂಗುತ್ತಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ದರ್ಶನ್​ ಅಭಿಮಾನಿಗಳು ಇನ್ನಷ್ಟು ಆ್ಯಕ್ಟೀವ್​ ಆಗಿದ್ದಾರೆ. ಅಚ್ಚರಿ ಏನೆಂದರೆ, ದರ್ಶನ್​ಗೆ ಜೈಲಿನಲ್ಲಿ ನೀಡಿದ ಖೈದಿ ನಂಬರ್​ (Darshan Jail Number) ಕೂಡ ಈಗ ಅಭಿಮಾನಿಗಳ ಪಾಲಿನ ಲಕ್ಕಿ ನಂಬರ್​ ಆಗುತ್ತಿದೆ!

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಎ2 ಆಗಿರುವ ದರ್ಶನ್​ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರುವ ಅವರು ವಿಚಾರಣಾಧೀನ ಖೈದಿ ಆಗಿದ್ದಾರೆ. ಅವರಿಗೆ 6106 ಖೈದಿ ನಂಬರ್​ ನೀಡಲಾಗಿದೆ. ಈ ನಂಬರ್​ ಮೇಲೆ ಕೆಲವು ಅಭಿಮಾನಿಗಳಿಗೆ ಆಕರ್ಷಣೆ ಹೆಚ್ಚಿದೆ. ಇದೇ ನಂಬರ್​ನಲ್ಲಿ ಹೊಸ ವಾಹನಗಳ ನೋಂದಣಿ ಮಾಡಿಸಿಕೊಳ್ಳಲು ಕೆಲವು ಫ್ಯಾನ್ಸ್​ ಮುಂದಾಗಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಊಟ, ನಿದ್ರೆ, ಕೆಲಸ ಬಿಟ್ಟು ದರ್ಶನ್​ಗಾಗಿ ಜೈಲಿನ ಹೊರಗೆ ಕಾದಿರುವ ಅಭಿಮಾನಿಗಳು

ಸೋಶಿಯಲ್​ ಮೀಡಿಯಾದಲ್ಲಿ ಕೆಲವು ಅಭಿಮಾನಿಗಳು ಕಣ್ಣೀರಿಡುತ್ತಾ ದರ್ಶನ್​ ಪರವಾಗಿ ವಿಡಿಯೋ ಹಂಚಿಕೊಳ್ಳುತ್ತಿದ್ದಾರೆ. ‘ನಮ್ಮ ಬಾಸ್​ ತಪ್ಪು ಮಾಡಿಲ್ಲ’ ಎಂದು ಕೂಗಿ ಹೇಳುತ್ತಿದ್ದಾರೆ. ಆದಷ್ಟು ಬೇಗ ದರ್ಶನ್​ ಅವರು ಬಿಡುಗಡೆ ಆಗಿ ಹೊರಗೆ ಬರಬೇಕು ಎಂದು ಫ್ಯಾನ್ಸ್​ ಹಂಬಲಿಸುತ್ತಿದ್ದಾರೆ. ದರ್ಶನ್​ ಅರೆಸ್ಟ್​ ಆದಾಗಿನಿಂದಲೂ ಅಭಿಮಾನಿಗಳಲ್ಲಿ ಚಡಪಡಿಕೆ ಹೆಚ್ಚಾಗಿದೆ.

ಇದನ್ನೂ ಓದಿ: ಉಪ್ಪು ಖಾರ ಇಲ್ಲದ ಊಟ, ಸೊಳ್ಳೆ ಕಾಟ: ಪವಿತ್ರಾ ಗೌಡಗೆ ನರಕವಾಯ್ತು ಜೈಲು

ಪರಪ್ಪನ ಅಗ್ರಹಾರದಲ್ಲಿ ಇರುವ ದರ್ಶನ್​ ಅವರನ್ನು ನೋಡಲೇಬೇಕು ಎಂದು ಕೆಲವು ಅಭಿಮಾನಿಗಳು ಹಠ ಹಿಡಿದಿದ್ದಾರೆ. ದೂರದ ಊರುಗಳಿಂದ ಬಂದಿರುವ ಫ್ಯಾನ್ಸ್​ ಈಗಾಗಲೇ ಜೈಲಿನ ಮುಂದೆ ನಿಂತು ಕಾಯುತ್ತಿದ್ದಾರೆ. ‘ಅವರನ್ನು ನೋಡಿಕೊಂಡೇ ನಾವು ಊರಿಗೆ ಹೋಗೋದು’ ಎಂದು ಕೆಲವರು ಕಣ್ಣೀರು ಹಾಕುತ್ತಿದ್ದಾರೆ. ಸದ್ಯಕ್ಕೆ ದರ್ಶನ್​, ಪವಿತ್ರಾ ಹಾಗೂ ಅವರ ಸಹಚರರು ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:58 am, Mon, 24 June 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್