Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೊನೆ ಉಸಿರು ಇರೋವರೆಗೂ ದರ್ಶನ್ ನನ್ನ ಮಗ’; ವಿವಾದಕ್ಕೆ ತೆರೆ ಎಳೆದ ಸುಮಲತಾ  

ದರ್ಶನ್ ಅವರು ಇನ್ಸ್ಟಾಗ್ರಾಮ್ ನಲ್ಲಿ ಎಲ್ಲರನ್ನೂ ಅನ್​ಫಾಲೋ ಮಾಡಿದ ನಂತರ ಹುಟ್ಟಿಕೊಂಡ ಊಹಾಪೋಹಗಳಿಗೆ ಸುಮಲತಾ ಅವರು ಸ್ಪಷ್ಟನೆ ನೀಡಿದ್ದಾರೆ. ಅವರು ದರ್ಶನ್ ಜೊತೆಗಿನ ಬಾಂಧವ್ಯದ ಬಗ್ಗೆ ಖಚಿತಪಡಿಸಿದ್ದಾರೆ ಮತ್ತು ಸಾಮಾಜಿಕ ಜಾಲತಾಣದ ಬಗ್ಗೆ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ಆ ಬಗ್ಗೆ ಈ ಸ್ಟೋರಿಯಲ್ಲಿ ಮಾಹಿತಿ ಇದೆ.

‘ಕೊನೆ ಉಸಿರು ಇರೋವರೆಗೂ ದರ್ಶನ್ ನನ್ನ ಮಗ’; ವಿವಾದಕ್ಕೆ ತೆರೆ ಎಳೆದ ಸುಮಲತಾ  
ಸುಮಲತಾ-ದರ್ಶನ್
Follow us
ರಾಜೇಶ್ ದುಗ್ಗುಮನೆ
|

Updated on: Mar 12, 2025 | 2:02 PM

ನಟ ದರ್ಶನ್ ಅವರು ಇನ್​ಸ್ಟಾಗ್ರಾಮ್​ನಲ್ಲಿ ಎಲ್ಲರನ್ನೂ ಅನ್​ಫಾಲೋ ಮಾಡಿದ್ದಾರೆ. ದರ್ಶನ್ ಅವರ ಈ ನಡೆ ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ಕಾಕತಾಳೀಯ ಎಂಬಂತೆ ಸುಮಲತಾ ಅವರು ಇನ್​ಸ್ಟಾಗ್ರಾಮ್ ಸ್ಟೇಟಸ್​ಗಳಲ್ಲಿ ಮಾರ್ಮಿಕವಾಗಿ ಪೋಸ್ಟ್​ಗಳನ್ನು ಮಾಡುತ್ತಾ ಬಂದರು. ಈ ಎರಡೂ ಬೆಳವಣಿಗೆ ಮಧ್ಯೆ ಲಿಂಕ್ ಮಾಡಲಾಯಿತು. ದರ್ಶನ್ (Darshan) ಹಾಗೂ ಸುಮಲತಾ ಸಂಬಂಧ ಹಾಳಾಗಿದೆ ಎಂದು ಹೇಳಲಾಗಿತ್ತು. ಈ ಬಗ್ಗೆ ಈಗ ಸುಮಲತಾ ಅವರೇ ಸ್ಪಷ್ಟನೆ ನೀಡಿದ್ದಾರೆ. ‘ಕೊನೆ ಉಸಿರು ಇರೋವರೆಗೂ ದರ್ಶನ್ ನನ್ನ ಮಗ’ ಎಂದಿದ್ದಾರೆ.

ಎಲ್ಲರನ್ನೂ ಅನ್​ಫಾಲೋ ಮಾಡಿದ್ದಾರೆ..

ದರ್ಶನ್ ಅವರು ಸುಮಲತಾ ಅವರನ್ನು ಮಾತ್ರವಲ್ಲ ಎಲ್ಲರನ್ನೂ ಅನ್​ಫಾಲೋ ಮಾಡಿದ್ದಾರೆ. ಇದನ್ನು ಗಮನಿಸಬೇಕು ಎಂದು ಸುಮಲತಾ ಒತ್ತಿ ಹೇಳಿದ್ದಾರೆ. ‘ಸಾಮಾಜಿಕ ಜಾಲತಾಣದಲ್ಲಿ ಅನ್​ಫಾಲೋ ಮಾಡಿದರೆ ಸಂಬಂಧ ಹಾಳಾಗುತ್ತದೆಯೇ? ಈ ವಿಚಾರವನ್ನು ಕೇಳಿ ನಗಬೇಕಾ, ಬೇಸರಗೊಳ್ಳಬೇಕಾ ಗೊತ್ತಾಗುತ್ತಿಲ್ಲ’ ಎಂದು ಟಿವಿ9ಗೆ ಸುಮಲತಾ ಎಕ್ಸ್​ಕ್ಲೂಸಿವ್​ ಹೇಳಿಕೆ ನೀಡಿದ್ದಾರೆ.

‘ನನ್ನ ಕೊನೆಯ ಉಸಿರು ಇರುವವರೆಗೂ ದರ್ಶನ್​ ನನ್ನ ಮಗನೇ. ದರ್ಶನ್​ನ ಗುರಿಯಾಗಿಸಿಕೊಂಡು ನಾನು ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಮಾಡಿಲ್ಲ. ದರ್ಶನ್​ ಇನ್​ಸ್ಟಾಗ್ರಾಂನಲ್ಲಿ ಯಾರನ್ನೂ ಸಹ ಫಾಲೋ ಮಾಡುತ್ತಿಲ್ಲ. ವಿನೀಶ್​ನನ್ನು ಕೂಡ ಅನ್​​ಫಾಲೋ ಮಾಡಿದ್ದಾರೆ’ ಎಂದಿದ್ದಾರೆ ಸುಮಲತಾ.

ಇದನ್ನೂ ಓದಿ
Image
ಸುಮಲತಾ-ದರ್ಶನ್ ಮಧ್ಯೆ ಬಿರುಕು? ಈ ಬೆಳವಣಿಗೆ ನೋಡಿದ್ರೆ ನೀವೂ ಒಪ್ತೀರಿ
Image
ಅಕ್ಕನ ಮಗನನ್ನೇ ‘ಡೆವಿಲ್’ ಚಿತ್ರದಿಂದ ಹೊರಗಿಟ್ಟ ದರ್ಶನ್; ಕಾರಣ ನೀಡಿದ ನಟ
Image
ಚಂದನ್ ಶೆಟ್ಟಿ ಜೊತೆ ಮತ್ತೆ ಬಾಳುತ್ತೀರಾ? ನೇರವಾಗಿ ಉತ್ತರ ನೀಡಿದ ನಿವೇದಿತಾ
Image
ಮತ್ತೆ ಚಂದನ್ ಶೆಟ್ಟಿ ತಬ್ಬಿಕೊಂಡು ಕಣ್ಣೀರು ಹಾಕಿದ ನಿವೇದಿತಾ ಗೌಡ

ಸೋಶಿಯಲ್ ಮೀಡಿಯಾ ಬಗ್ಗೆ ಆತಂಕ

‘ಎಲ್ಲರೂ ಸಾಮಾಜಿಕ ಜಾಲತಾಣಕ್ಕೆ ಹೆಚ್ಚು ಆದ್ಯತೆ ಕೊಡುತ್ತಿದ್ದೇವೆ ಅನ್ನಿಸುತ್ತದೆ. ಆದರೆ, ನಾನು ಸಾಮಾಜಿಕ ಜಾಲತಾಣಕ್ಕೆ ಹೆಚ್ಚು ಮಹತ್ವ ಕೊಡುವುದಿಲ್ಲ. ಸೋಶಿಯಲ್ ಮೀಡಿಯಾ ಯೂಸ್​ಫುಲ್ ಟೂಲ್. ಅದೇ ರೀತಿ ಇದು ಡೇಂಜರಸ್ ವೆಪನ್ ಕೂಡ ಹೌದು’ ಎಂದು ಸುಮಲತಾ ಹೇಳಿದ್ದಾರೆ.

ಇದನ್ನೂ ಓದಿ:‘ನಾನು ನೋಡೋದೂ ಇಲ್ಲ’; ಅಶ್ಲೀಲ ಕಮೆಂಟ್​ಗಳಿಗೆ ಡೋಂಟ್ ಕೇರ್ ಎಂದ ನಿವೇದಿತಾ

ದರ್ಶನ್​ಗೂ ಇದಕ್ಕೂ ಸಂಬಂಧವಿಲ್ಲ..

‘ನನ್ನ ಸಾಮಾಜಿಕ ಖಾತೆಯಲ್ಲಿ ದರ್ಶನ್​ನ ಫಾಲೋ ಮಾಡ್ತಿದ್ದೇನೆ. ನಾನು ಯಾರನ್ನೋ ಗುರಿಯಾಗಿಸಿ ಪೋಸ್ಟ್ ಮಾಡಿರಲಿಲ್ಲ. ನಾನು ಹಾಕಿದ್ದ ಪೋಸ್ಟ್​ಗೂ ದರ್ಶನ್​ಗೂ ಸಂಬಂಧವಿಲ್ಲ. ಇದೊಂದು ಸಿಲ್ಲಿ ವಿಚಾರ ಎಂದು ನನಗೆ ಅನಿಸುತ್ತದೆ. ನಮ್ಮ ಪ್ರೀತಿ ವಿಶ್ವಾಸದಲ್ಲಿ ಯಾವುದೇ ವ್ಯತ್ಯಾಸವಿಲ್ಲ. ನನ್ನ ಜೀವನದಲ್ಲಿ ಋಣಾತ್ಮಕ ಚಿಂತನೆಗಳಿಗೆ ಜಾಗವಿಲ್ಲ. ನನ್ನ ಬಗ್ಗೆ ಕೆಟ್ಟದಾಗಿ ಮಾತಾಡಿದವರಿಗೂ ಒಳ್ಳೆಯದಾಗಲಿ ಎಂದು ಬಯಸುವವನು ನಾನು. ನಮ್ಮ ಮನೆಯಲ್ಲಿ ದರ್ಶನ್ ಇಲ್ಲದೆ ಯಾವ ಕಾರ್ಯಕ್ರಮ ನಡೆಯಲ್ಲ’ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ವಿಧಾನಸಭೆಯಲ್ಲಿ ಮೊಬೈಲ್ ಬಳಸಿದ್ದಕ್ಕೆ ಕೋಪಗೊಂಡ ಬಿಹಾರ ಸಿಎಂ ನಿತೀಶ್ ಕುಮಾರ್
ವಿಧಾನಸಭೆಯಲ್ಲಿ ಮೊಬೈಲ್ ಬಳಸಿದ್ದಕ್ಕೆ ಕೋಪಗೊಂಡ ಬಿಹಾರ ಸಿಎಂ ನಿತೀಶ್ ಕುಮಾರ್
ಗೊತ್ತಿರದ ವಿಷಯದ ಬಗ್ಗೆ ಮಾತಾಡುವ ಜಾಯಮಾನ ನನ್ನದಲ್ಲ: ಪಾಟೀಲ್
ಗೊತ್ತಿರದ ವಿಷಯದ ಬಗ್ಗೆ ಮಾತಾಡುವ ಜಾಯಮಾನ ನನ್ನದಲ್ಲ: ಪಾಟೀಲ್
ಹರಪನಹಳ್ಳಿಯಲ್ಲಿ ಆಲಿಕಲ್ಲು ಸಹಿತ ಮಳೆ: ವರ್ಷದ ಮೊದಲ ಮಳೆಗೆ ಜನರು ಖುಷ್
ಹರಪನಹಳ್ಳಿಯಲ್ಲಿ ಆಲಿಕಲ್ಲು ಸಹಿತ ಮಳೆ: ವರ್ಷದ ಮೊದಲ ಮಳೆಗೆ ಜನರು ಖುಷ್
ಯತ್ನಾಳ್​ರನ್ನು ದೇಶದ್ರೋಹಿ ಎಂದು ಜರಿದ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್
ಯತ್ನಾಳ್​ರನ್ನು ದೇಶದ್ರೋಹಿ ಎಂದು ಜರಿದ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್
ಹನಿಟ್ರ್ಯಾಪ್​ ಕೇಸ್: ಡಿಕೆಶಿ ವಿರುದ್ಧ ಹೊಸ ಬಾಂಬ್ ಸಿಡಿಸಿದ ಬಿಜೆಪಿ ಶಾಸಕ
ಹನಿಟ್ರ್ಯಾಪ್​ ಕೇಸ್: ಡಿಕೆಶಿ ವಿರುದ್ಧ ಹೊಸ ಬಾಂಬ್ ಸಿಡಿಸಿದ ಬಿಜೆಪಿ ಶಾಸಕ
ಸದನದಲ್ಲಿ ರೋಷಾವೇಶದಿಂದ ಕೂಗಾಡಿದ ಶಾಸಕ ಮುನಿರತ್ನ ನಾಯ್ಡು
ಸದನದಲ್ಲಿ ರೋಷಾವೇಶದಿಂದ ಕೂಗಾಡಿದ ಶಾಸಕ ಮುನಿರತ್ನ ನಾಯ್ಡು
ರಾಜಣ್ಣಗೆ ಮಾತ್ರವಲ್ಲ ಪುತ್ರನಿಗೂ ಹನಿಟ್ರ್ಯಾಪ್​​​​​ ಬಲೆಗೆ ಬೀಳಿಸುವ ಸಂಚು!
ರಾಜಣ್ಣಗೆ ಮಾತ್ರವಲ್ಲ ಪುತ್ರನಿಗೂ ಹನಿಟ್ರ್ಯಾಪ್​​​​​ ಬಲೆಗೆ ಬೀಳಿಸುವ ಸಂಚು!
ಹನಿಟ್ರ್ಯಾಪ್ ಕೇಸ್ ಉನ್ನತ ಮಟ್ಟದ ತನಿಖೆಗೆ: ಸದನದಲ್ಲೇ ಘೋಷಿಸಿದ ಗೃಹ ಸಚಿವ
ಹನಿಟ್ರ್ಯಾಪ್ ಕೇಸ್ ಉನ್ನತ ಮಟ್ಟದ ತನಿಖೆಗೆ: ಸದನದಲ್ಲೇ ಘೋಷಿಸಿದ ಗೃಹ ಸಚಿವ
ಯಾರು ಮಾಡಿಸುತ್ತಿದ್ದಾರೆ ಅಂತ ಹೇಳಿದರೆ ರಾಜಕೀಯ ಆರೋಪವಾಗುತ್ತದೆ: ಸಚಿವ
ಯಾರು ಮಾಡಿಸುತ್ತಿದ್ದಾರೆ ಅಂತ ಹೇಳಿದರೆ ರಾಜಕೀಯ ಆರೋಪವಾಗುತ್ತದೆ: ಸಚಿವ
ರಾಯರೆಡ್ಡಿ ಇಂಗ್ಲಿಷಲ್ಲಿ ಮಾತು; ಯತ್ನಾಳ್ ಸಹ ಇಂಗ್ಲಿಷ್ ಭಾಷೆಯಲ್ಲೇ ಉತ್ತರ!
ರಾಯರೆಡ್ಡಿ ಇಂಗ್ಲಿಷಲ್ಲಿ ಮಾತು; ಯತ್ನಾಳ್ ಸಹ ಇಂಗ್ಲಿಷ್ ಭಾಷೆಯಲ್ಲೇ ಉತ್ತರ!