AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಿನಲ್ಲಿರುವ ದರ್ಶನ್ ಜತೆ ವಿಡಿಯೋ ಕಾಲ್ ಮಾಡಿದ ರೌಡಿಶೀಟರ್ ಸತ್ಯ ಪೊಲೀಸ್ ವಶಕ್ಕೆ

ರೇಣುಕಾಸ್ವಾಮಿಯ ಕೊಲೆ ಆರೋಪಿ ನಟ ದರ್ಶನ್​ಗೆ ರೌಡಿಶೀಟರ್​ ಸತ್ಯ ವಿಡಿಯೋ ಕಾಲ್ ಮಾಡಿದ್ದ. ಆ ವಿಡಿಯೋ ವೈರಲ್​ ಆಗಿ ಸಂಚಲನ ಸೃಷ್ಟಿಸಿದೆ. ಜೈಲಿನಲ್ಲಿ ನಿಯಮ ಉಲ್ಲಂಘಿಸಿದ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ವಿಡಿಯೋ ಕಾಲ್ ಮಾಡಿದ ಸತ್ಯನನ್ನು ಬೆಂಗಳೂರು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸುತ್ತಿದ್ದಾರೆ.

ಜೈಲಿನಲ್ಲಿರುವ ದರ್ಶನ್ ಜತೆ ವಿಡಿಯೋ ಕಾಲ್ ಮಾಡಿದ ರೌಡಿಶೀಟರ್ ಸತ್ಯ ಪೊಲೀಸ್ ವಶಕ್ಕೆ
ದರ್ಶನ್​, ಸತ್ಯ
Jagadisha B
| Edited By: |

Updated on: Aug 26, 2024 | 5:50 PM

Share

ಪರಪ್ಪನ ಅಗ್ರಹಾರದಲ್ಲಿ ಇರುವ ದರ್ಶನ್​ ಅನೇಕ ನಿಯಮಗಳನ್ನು ಉಲ್ಲಂಘನೆ ಮಾಡಿರುವ ವಿಷಯ ಬೆಳಕಿಗೆ ಬಂದಿದೆ. ಜಾಮೀನು ಪಡೆದು ಹೊರಗಿರುವ ರೌಡಿಶೀಟರ್​ ಸತ್ಯ ಜೊತೆ ದರ್ಶನ್​ ವಿಡಿಯೋ ಕಾಲ್​ನಲ್ಲಿ ಮಾತನಾಡಿದ್ದರು. ಆ ವಿಡಿಯೋ ಎಲ್ಲ ಕಡೆಗಳಲ್ಲಿ ವೈರಲ್​ ಆಗಿತ್ತು. ವಿಡಿಯೋ ಕಾಲ್ ವಿಚಾರ ಬಹಿರಂಗ ಆದ ಕೂಡಲೇ ಪೊಲೀಸರು ಕ್ರಮ ಕೈಕೊಂಡಿದ್ದಾರೆ. ದರ್ಶನ್ ಜತೆ ವಿಡಿಯೋ ಕಾಲ್​ ಮೂಲಕ ಮಾತನಾಡಿದ ಸತ್ಯನನ್ನು ಬೆಂಗಳೂರಿನ ಬ್ಯಾಡರಹಳ್ಳಿ ಠಾಣೆ ಪೊಲೀಸರು ಮಂಡ್ಯದಲ್ಲಿ ವಶಕ್ಕೆ ಪಡೆದು ಬೆಂಗಳೂರಿಗೆ ಕರೆತಂದಿದ್ದಾರೆ.

ವಿಚಾರಣಾಧೀನ ಖೈದಿ ಆಗಿರುವ ದರ್ಶನ್​ಗೆ ಪರಪ್ಪನ ಅಗ್ರಹಾರ ಜೈಲಿನೊಳಗೆ ಅಕ್ರಮವಾಗಿ ಅನೇಕ ಸೌಕರ್ಯಗಳನ್ನು ಒದಗಿಸಲಾಗಿದೆ. ರೌಡಿಗಳ ಜೊತೆ ಸಂಪರ್ಕ, ಗಾರ್ಡನ್​ ಏರಿಯಾದಲ್ಲಿ ಹರಟೆ ಹೊಡೆಯುವ ಅವಕಾಶ, ಸೀಗರೇಟ್​, ಕುರ್ಚಿ ಸೇರಿದಂತೆ ವಿಐಪಿ ಟ್ರೀಟ್​ಮೆಂಟ್​ ಸಿಕ್ಕಿದೆ. ಅದರ ಜೊತೆಗೆ ವಿಡಿಯೋ ಕಾಲ್​ ಕೂಡ ಮಾಡಿರುವುದು ಬಹಿರಂಗ ಆಗಿದ್ದು, ದೊಡ್ಡ ಸಂಚಲನ ಸೃಷ್ಟಿ ಮಾಡಿದೆ.

ವಿಡಿಯೋ ಕಾಲ್ ಮಾಡಿದ್ದು ಹೇಗೆ?

ವೈರಲ್​ ಆದ ದರ್ಶನ್​ ವಿಡಿಯೋ ಕಾಲ್​ ತುಣುಕಿನಲ್ಲಿ ಇರುವವನು ಬ್ಯಾಡರಹಳ್ಳಿ ರೌಡಿಶೀಟರ್ ಜಾನಿ ಅಲಿಯಾಸ್​ ಜನಾರ್ದನ್​ನ ಮಗ ಸತ್ಯ. ಆತನಿಗೆ ಜೈಲಿನಿಂದ ವಿಡಿಯೋ ಕಾಲ್ ಮಾಡಿ ದರ್ಶನ್​ರನ್ನು ತೋರಿಸಿದವನು ಕೂಡ ಇನ್ನೋರ್ವ ರೌಡಿಶೀಟರ್ ಮಾರ್ಕೆಟ್ ಧರ್ಮ. ಇತ್ತೀಚೆಗೆ ಸತ್ಯ ಕೂಡ ಜೈಲಿಗೆ ಹೋಗಿಬಂದಿದ್ದ. ಕೆಎಲ್​ಇ‌ ಕಾಲೇಜು ವಿದ್ಯಾರ್ಥಿಗಳಿಗೆ ಉಲ್ಟಾ ಮಚ್ಚಿನಲ್ಲಿ ಆತ ಹೊಡೆದಿದ್ದ. ಅನ್ನಪೂರ್ಣೇಶ್ವರಿ ನಗರ ಠಾಣಾ ವ್ಯಾಪ್ತಿಯಲ್ಲಿ ಈ ಕೇಸ್​ ದಾಖಲಾಗಿತ್ತು. ಜೈಲಿಗೆ ಹೋಗಿದ್ದ ಸತ್ಯ ಜಾಮೀನನ ಮೇಲೆ ಹೊರಗೆ ಬಂದಿದ್ದ. ಹೊರಗೆ ಬಂದವನು ಮಾರ್ಕೆಟ್ ಧರ್ಮನಿಗೆ ವಿಡಿಯೋ ಕಾಲ್ ಮಾಡಿದ್ದ‌. ‘ದರ್ಶನ್ ಇರುವುದು ನಮ್ಮ ಪಕ್ಕದ ಸೆಲ್​ನಲ್ಲಿ. ನಿನಗೂ ತೋರಿಸ್ತಿನಿ’ ಎಂದು ಸತ್ಯನಿಗೆ ಹೇಳಿದ್ದ ಮಾರ್ಕೆಟ್​ ಧರ್ಮ, ದರ್ಶನ್ ಕೈಯಲ್ಲಿ ಹಾಯ್ ಹೇಳಿಸಿದ್ದ. ಅದೇ ವಿಡಿಯೋ ಎಲ್ಲ ಕಡೆ ವೈರಲ್​ ಆಗಿದೆ.

ಇದನ್ನೂ ಓದಿ: ಜೈಲಿನಲ್ಲಿ ಇರುವಾಗಲೇ ನಟ ದರ್ಶನ್​ ಮೇಲೆ ಮೂರು ಹೊಸ ಎಫ್​ಐಆರ್​ ದಾಖಲು

ರೌಡಿಶೀಟರ್​ ಬಿಲ್ಡಪ್​:

ದರ್ಶನ್​ಗೆ ಇರುವ ಅಭಿಮಾನಿ ಬಳಗ ದೊಡ್ಡದು. ದರ್ಶನ್​ ಜೊತೆ ವಿಡಿಯೋ ಕಾಲ್​ನಲ್ಲಿ ಮಾತನಾಡಿದ ಕ್ಲಿಪಿಂಗ್​ ಇಟ್ಟುಕೊಂಡ ಸತ್ಯ ಕಲಾಸಿಪಾಳ್ಯದ ಒಂದಷ್ಟು ಹುಡುಗರಿಗೆ ಕಳಿಸಿದ್ದ. ಅಲ್ಲದೇ ತನ್ನ ಏರಿಯಾದಲ್ಲಿ ಬಿಲ್ಡಪ್​ ಕೊಡಲು ಈ ವಿಡಿಯೋ ತುಣುಕನ್ನು ಬಳಸಿಕೊಂಡಿದ್ದ. ಸಹಚರರ ವಾಟ್ಸಪ್​ ಸ್ಟೇಟಸ್​ನಲ್ಲೂ ಅದನ್ನು ಅಪ್​ಲೋಡ್​ ಮಾಡಲಾಗಿತ್ತು. ಆದ್ದರಿಂದ ದರ್ಶನ್​ ಜೊತೆಗಿನ ಆತನ ವಿಡಿಯೋ ಕಾಲ್ ಎಲ್ಲ ಕಡೆಗಳಲ್ಲಿ ವೈರಲ್​ ಆಯಿತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಮಹಿಳೆ; ಸಿಸಿಟಿವಿ ದೃಶ್ಯ ವೈರಲ್
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಮಹಿಳೆ; ಸಿಸಿಟಿವಿ ದೃಶ್ಯ ವೈರಲ್
ಕೇದಾರನಾಥ ವಿಐಪಿ ದರ್ಶನ; ಬಿಕೆಟಿಸಿ ಮುಖ್ಯಸ್ಥರ ವಿರುದ್ಧ ಅರ್ಚಕರ ಪ್ರತಿಭಟನೆ
ಕೇದಾರನಾಥ ವಿಐಪಿ ದರ್ಶನ; ಬಿಕೆಟಿಸಿ ಮುಖ್ಯಸ್ಥರ ವಿರುದ್ಧ ಅರ್ಚಕರ ಪ್ರತಿಭಟನೆ
ನಿಧಿ ಆಸೆಗೆ ತಾಯಿಯನ್ನೇ ಬಲಿ ಕೊಡಲು ಯತ್ನ!: ಚಾಮರಾಜನಗರದಲ್ಲಿ ಶಾಕಿಂಗ್ ಘಟನೆ
ನಿಧಿ ಆಸೆಗೆ ತಾಯಿಯನ್ನೇ ಬಲಿ ಕೊಡಲು ಯತ್ನ!: ಚಾಮರಾಜನಗರದಲ್ಲಿ ಶಾಕಿಂಗ್ ಘಟನೆ
ಎಕ್ಸಿಟ್ ಪೋಲ್ ಬೆನ್ನಲ್ಲೇ ಬಾಂಗ್ಲಾದೇಶಕ್ಕೆ ನಡುಕ
ಎಕ್ಸಿಟ್ ಪೋಲ್ ಬೆನ್ನಲ್ಲೇ ಬಾಂಗ್ಲಾದೇಶಕ್ಕೆ ನಡುಕ