AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಗರೇಟ್ ಮಾತ್ರವಲ್ಲ, ಜೈಲಿನಲ್ಲಿ ದರ್ಶನ್​ಗೆ ವಿಡಿಯೋ ಕಾಲ್ ವ್ಯವಸ್ಥೆ; ಬಿಂದಾಸ್ ಲೈಫ್

ಕೊಲೆ ಕೇಸ್​ನಲ್ಲಿ ಜೈಲು ಸೇರಿದ ದರ್ಶನ್​ ಅವರಿಗೆ ಪಶ್ಚಾತ್ತಾಪವೇ ಇಲ್ಲವಾ? ಜೈಲಿನಲ್ಲಿ ಬಿಂದಾಸ್​ ಆಗಿ ಅವರು ದಿನ ಕಳೆಯುತ್ತಿದ್ದಾರೆ. ವಿಡಿಯೋ ಕಾಲ್ ಮಾಡುತ್ತಾ, ಸಿಗರೇಟ್​ ಸೇದುತ್ತಾ, ಗಾರ್ಡನ್​ ಏರಿಯಾದಲ್ಲಿ ರೌಡಿ ಶೀಟರ್​ಗಳ ಜೊತೆ ಹರಟೆ ಹೊಡೆಯುತ್ತಾ ಇರುವ ದರ್ಶನ್​ ಅವರ ಫೋಟೋ, ವಿಡಿಯೋ ವೈರಲ್​ ಆಗಿರುವುದು ದೊಡ್ಡ ಚರ್ಚೆ ಹುಟ್ಟುಹಾಕಿದೆ.

ಸಿಗರೇಟ್ ಮಾತ್ರವಲ್ಲ, ಜೈಲಿನಲ್ಲಿ ದರ್ಶನ್​ಗೆ ವಿಡಿಯೋ ಕಾಲ್ ವ್ಯವಸ್ಥೆ; ಬಿಂದಾಸ್ ಲೈಫ್
ದರ್ಶನ್​ ವಿಡಿಯೋ ಕಾಲ್​
ಮದನ್​ ಕುಮಾರ್​
|

Updated on: Aug 25, 2024 | 9:19 PM

Share

ಸ್ಯಾಂಡಲ್​ವುಡ್​ ನಟ ದರ್ಶನ್​ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದಾರೆ. ಅವರ ಜೈಲು ವಾಸ ಕಷ್ಟಕರವಾಗಿದೆ ಎಂದು ಇಷ್ಟು ದಿನ ಊಹಿಸಲಾಗಿತ್ತು. ಆದರೆ ಈಗ ಕೆಲವು ಶಾಕಿಂಗ್​ ವಿಚಾರಗಳು ಹೊರಬರುತ್ತಿವೆ. ಕೊಲೆ ಆರೋಪ ಹೊತ್ತಿರುವ ದರ್ಶನ್​ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಕಲ ಸೌಕರ್ಯಗಳು ಸಿಗುತ್ತಿವೆ ಎಂಬುದಕ್ಕೆ ಒಂದಷ್ಟು ಸಾಕ್ಷಿಗಳು ಲಭ್ಯವಾಗುತ್ತಿವೆ. ಸ್ಪೆಷಲ್​ ಬ್ಯಾರಕ್​ನಲ್ಲಿ ಇರುವ ದರ್ಶನ್​ ಅವರಿಗೆ ವಿಡಿಯೋ ಕಾಲ್​ ಸೌಲಭ್ಯವನ್ನೂ ನೀಡಲಾಗಿದೆ. ಅದಕ್ಕೆ ಸಾಕ್ಷಿಯಾಗಿರುವ ವಿಡಿಯೋ ಈಗ ವೈರಲ್​ ಆಗಿದೆ.

ವ್ಯಕ್ತಿಯೊಬ್ಬರ ಜೊತೆ ದರ್ಶನ್​ ಅವರು ವಿಡಿಯೋ ಕಾಲ್​ನಲ್ಲಿ ಮಾತನಾಡಿದ್ದಾರೆ. ಜೈಲಿನಲ್ಲಿ ಇರುವ ಬೇರೊಬ್ಬ ಖೈದಿಯ ಮೊಬೈಲ್‌ ಬಳಸಿ ವಿಡಿಯೋ ಕಾಲ್ ಮಾಡಿರುವ ಸಾಧ್ಯತೆ ಇದೆ. ಆಪ್ತರೊಬ್ಬರ ಜೊತೆ ವಿಡಿಯೋ ಕಾಲ್​ನಲ್ಲಿ ದರ್ಶನ್​ ಅವರು ಮಾತನಾಡಿದ್ದಾರೆ. ‘ಊಟ ಆಯ್ತಾ? ನಾನು ಆರಾಮಾಗಿದ್ದೀನಿ’ ಎಂದು ಮಾತುಕತೆ ಮಾಡಲಾಗಿದೆ. ರೆಡ್ಡಿ ಎಂಬಾತ‌ನ ಸ್ಟೇಟಸ್​ನಲ್ಲಿ ವಿಡಿಯೋ ಹರಿದಾಡಿದೆ.

ಇದನ್ನೂ ಓದಿ: ಪರಪ್ಪನ ಅಗ್ರಹಾರದಲ್ಲಿ ವಿಚಾರಣಾಧೀನ ಖೈದಿ ದರ್ಶನ್​ ಹೇಗೆ ಇರಬೇಕು? ಹೀಗಿದೆ ಜೈಲು ನಡಾವಳಿ..

ವಿಡಿಯೋ ಕಾಲ್​ ತುಣುಕು ವೈರಲ್​ ಆಗುವುದಕ್ಕೂ ಮುನ್ನ ದರ್ಶನ್​ ಅವರ ಒಂದು ಶಾಕಿಂಗ್​ ಫೋಟೋ ಕೂಡ ವೈರಲ್​ ಆಯಿತು. ಈ ಫೋಟೋದಲ್ಲಿ ಅವರು ಜೈಲಿನೊಳಗೆ ನಟೋರಿಯಸ್​ ರೌಡಿಗಳ ಜೊತೆ ಹಾಯಾಗಿ ಕುಳಿತು ಮಾತುಕಥೆ ಮಾಡುತ್ತಿರುವ ಕ್ಷಣ ಸೆರೆಯಾಗಿದೆ. ವಿಲ್ಸನ್​ ಗಾರ್ಡನ್​ ನಾಗ, ಕುಳ್ಳ ಸೀನಾ ಮುಂತಾದ ರೌಡಿಶೀಟರ್​ಗಳ ಜೊತೆ ದರ್ಶನ್​ ಸಿಗರೇಟು ಸೇದಿದ ಫೋಟೋ ಇದಾಗಿದೆ.

ಹಣ ಇರುವ ಖೈದಿಗಳಿಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡಲಾಗುತ್ತಾ ಎಂಬ ಅನುಮಾನಕ್ಕೆ ಈ ಫೋಟೋ ಮತ್ತು ವಿಡಿಯೋ ಪುಷ್ಟಿ ನೀಡುತ್ತಿದೆ. ಜೈಲಿನಲ್ಲಿ ಅಧಿಕಾರಿಗಳಿಂದ ಕಾನೂನು ಉಲ್ಲಂಘನೆ ಆಗಿರುವುದು ಸ್ಪಷ್ಟವಾಗಿದೆ. ಇಷ್ಟು ದಿನಗಳ ಕಾಲ ದರ್ಶನ್​ ಅವರು ಕೊಲೆ ಕೇಸ್​ನಲ್ಲಿ ಪಶ್ಚಾತ್ತಾಪ ಪಡುತ್ತಿದ್ದಾರೆ ಎಂದು ಕೆಲವರು ಹೇಳಿದ್ದರು. ಆದರೆ ಈಗ ವೈರಲ್​ ಆದ ವಿಡಿಯೋ ಮತ್ತು ಫೋಟೋ ನೋಡಿದರೆ ಅವರಿಗೆ ಯಾವುದೇ ಪಶ್ಚಾತ್ತಾಪ ಕಾಡುತ್ತಿಲ್ಲ ಎಂಬುದು ಖಚಿತವಾಗುವಂತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಇರಾನ್ ಮೇಲಿನ ದಾಳಿಯ ಮೊದಲ ವಿಡಿಯೋ ರಿಲೀಸ್ ಮಾಡಿದ ಇಸ್ರೇಲ್
ಇರಾನ್ ಮೇಲಿನ ದಾಳಿಯ ಮೊದಲ ವಿಡಿಯೋ ರಿಲೀಸ್ ಮಾಡಿದ ಇಸ್ರೇಲ್
ಯುದ್ಧ: ದುಬೈ ಏರ್​ಪೋರ್ಟ್​​​ನಲ್ಲಿ ಕುಟುಂಬ ಸಮೇತ ಸಿಲುಕಿದ ​​ಭೋಜೇಗೌಡ
ಯುದ್ಧ: ದುಬೈ ಏರ್​ಪೋರ್ಟ್​​​ನಲ್ಲಿ ಕುಟುಂಬ ಸಮೇತ ಸಿಲುಕಿದ ​​ಭೋಜೇಗೌಡ
ಮಾ.3 ಸಂಪೂರ್ಣ ಚಂದ್ರಗ್ರಹಣ;ಕರ್ನಾಟಕದಲ್ಲಿ ಎಷ್ಟು ನಿಮಿಷ ಗೋಚರಿಸಲಿದೆ?
ಮಾ.3 ಸಂಪೂರ್ಣ ಚಂದ್ರಗ್ರಹಣ;ಕರ್ನಾಟಕದಲ್ಲಿ ಎಷ್ಟು ನಿಮಿಷ ಗೋಚರಿಸಲಿದೆ?
ಪ್ರಯಾಣಿಕರ ಮುಂದೆಯೇ ಧಗಧಗನೆ ಹೊತ್ತಿ ಉರಿದ ದುರ್ಗಾಂಬಾ ಬಸ್
ಪ್ರಯಾಣಿಕರ ಮುಂದೆಯೇ ಧಗಧಗನೆ ಹೊತ್ತಿ ಉರಿದ ದುರ್ಗಾಂಬಾ ಬಸ್
ಇರಾನ್​​​-ಇಸ್ರೇಲ್​​​ ಯುದ್ಧ: ಯುದ್ಧಭೂಮಿಯಿಂದ ಕನ್ನಡಿಗ ಹೇಳಿದ್ದಿಷ್ಟು
ಇರಾನ್​​​-ಇಸ್ರೇಲ್​​​ ಯುದ್ಧ: ಯುದ್ಧಭೂಮಿಯಿಂದ ಕನ್ನಡಿಗ ಹೇಳಿದ್ದಿಷ್ಟು
ಮೀನ ರಾಶಿಯ ಮೇಲೆ ಕೇತುಗ್ರಸ್ತ ಚಂದ್ರಗ್ರಹಣದ ಪ್ರಭಾವ ಹೇಗಿರಲಿದೆ?
ಮೀನ ರಾಶಿಯ ಮೇಲೆ ಕೇತುಗ್ರಸ್ತ ಚಂದ್ರಗ್ರಹಣದ ಪ್ರಭಾವ ಹೇಗಿರಲಿದೆ?
ಡಿಕೆ ಶಿವಕುಮಾರ್ ಸಿಎಂ ಆಗುವ ಬಗ್ಗೆ ಮತ್ತೊಮ್ಮೆ ಭವಿಷ್ಯ ನುಡಿದ ಶಾಸಕ
ಡಿಕೆ ಶಿವಕುಮಾರ್ ಸಿಎಂ ಆಗುವ ಬಗ್ಗೆ ಮತ್ತೊಮ್ಮೆ ಭವಿಷ್ಯ ನುಡಿದ ಶಾಸಕ
ಕತಾರ್, ಬಹ್ರೇನ್, ಸೌದಿಯ ಯುಎಸ್​ ವಾಯುನೆಲೆಗಳ ಮೇಲೆ ಇರಾನ್ ದಾಳಿ
ಕತಾರ್, ಬಹ್ರೇನ್, ಸೌದಿಯ ಯುಎಸ್​ ವಾಯುನೆಲೆಗಳ ಮೇಲೆ ಇರಾನ್ ದಾಳಿ
ವಿದ್ಯಾರ್ಥಿನಿಗಳ ಜತೆ ಪಾರ್ಟಿ ಮಾಡಿದ ಎಕ್ಸ್ಕ್ಲೂಸಿವ್ ದೃಶ್ಯ
ವಿದ್ಯಾರ್ಥಿನಿಗಳ ಜತೆ ಪಾರ್ಟಿ ಮಾಡಿದ ಎಕ್ಸ್ಕ್ಲೂಸಿವ್ ದೃಶ್ಯ
ಮಾ.03 ಕೇತುಗ್ರಸ್ತ ಚಂದ್ರಗ್ರಹಣ; ಕುಂಭ ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?
ಮಾ.03 ಕೇತುಗ್ರಸ್ತ ಚಂದ್ರಗ್ರಹಣ; ಕುಂಭ ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?