AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಗರೇಟ್ ಮಾತ್ರವಲ್ಲ, ಜೈಲಿನಲ್ಲಿ ದರ್ಶನ್​ಗೆ ವಿಡಿಯೋ ಕಾಲ್ ವ್ಯವಸ್ಥೆ; ಬಿಂದಾಸ್ ಲೈಫ್

ಕೊಲೆ ಕೇಸ್​ನಲ್ಲಿ ಜೈಲು ಸೇರಿದ ದರ್ಶನ್​ ಅವರಿಗೆ ಪಶ್ಚಾತ್ತಾಪವೇ ಇಲ್ಲವಾ? ಜೈಲಿನಲ್ಲಿ ಬಿಂದಾಸ್​ ಆಗಿ ಅವರು ದಿನ ಕಳೆಯುತ್ತಿದ್ದಾರೆ. ವಿಡಿಯೋ ಕಾಲ್ ಮಾಡುತ್ತಾ, ಸಿಗರೇಟ್​ ಸೇದುತ್ತಾ, ಗಾರ್ಡನ್​ ಏರಿಯಾದಲ್ಲಿ ರೌಡಿ ಶೀಟರ್​ಗಳ ಜೊತೆ ಹರಟೆ ಹೊಡೆಯುತ್ತಾ ಇರುವ ದರ್ಶನ್​ ಅವರ ಫೋಟೋ, ವಿಡಿಯೋ ವೈರಲ್​ ಆಗಿರುವುದು ದೊಡ್ಡ ಚರ್ಚೆ ಹುಟ್ಟುಹಾಕಿದೆ.

ಸಿಗರೇಟ್ ಮಾತ್ರವಲ್ಲ, ಜೈಲಿನಲ್ಲಿ ದರ್ಶನ್​ಗೆ ವಿಡಿಯೋ ಕಾಲ್ ವ್ಯವಸ್ಥೆ; ಬಿಂದಾಸ್ ಲೈಫ್
ದರ್ಶನ್​ ವಿಡಿಯೋ ಕಾಲ್​
ಮದನ್​ ಕುಮಾರ್​
|

Updated on: Aug 25, 2024 | 9:19 PM

Share

ಸ್ಯಾಂಡಲ್​ವುಡ್​ ನಟ ದರ್ಶನ್​ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದಾರೆ. ಅವರ ಜೈಲು ವಾಸ ಕಷ್ಟಕರವಾಗಿದೆ ಎಂದು ಇಷ್ಟು ದಿನ ಊಹಿಸಲಾಗಿತ್ತು. ಆದರೆ ಈಗ ಕೆಲವು ಶಾಕಿಂಗ್​ ವಿಚಾರಗಳು ಹೊರಬರುತ್ತಿವೆ. ಕೊಲೆ ಆರೋಪ ಹೊತ್ತಿರುವ ದರ್ಶನ್​ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಕಲ ಸೌಕರ್ಯಗಳು ಸಿಗುತ್ತಿವೆ ಎಂಬುದಕ್ಕೆ ಒಂದಷ್ಟು ಸಾಕ್ಷಿಗಳು ಲಭ್ಯವಾಗುತ್ತಿವೆ. ಸ್ಪೆಷಲ್​ ಬ್ಯಾರಕ್​ನಲ್ಲಿ ಇರುವ ದರ್ಶನ್​ ಅವರಿಗೆ ವಿಡಿಯೋ ಕಾಲ್​ ಸೌಲಭ್ಯವನ್ನೂ ನೀಡಲಾಗಿದೆ. ಅದಕ್ಕೆ ಸಾಕ್ಷಿಯಾಗಿರುವ ವಿಡಿಯೋ ಈಗ ವೈರಲ್​ ಆಗಿದೆ.

ವ್ಯಕ್ತಿಯೊಬ್ಬರ ಜೊತೆ ದರ್ಶನ್​ ಅವರು ವಿಡಿಯೋ ಕಾಲ್​ನಲ್ಲಿ ಮಾತನಾಡಿದ್ದಾರೆ. ಜೈಲಿನಲ್ಲಿ ಇರುವ ಬೇರೊಬ್ಬ ಖೈದಿಯ ಮೊಬೈಲ್‌ ಬಳಸಿ ವಿಡಿಯೋ ಕಾಲ್ ಮಾಡಿರುವ ಸಾಧ್ಯತೆ ಇದೆ. ಆಪ್ತರೊಬ್ಬರ ಜೊತೆ ವಿಡಿಯೋ ಕಾಲ್​ನಲ್ಲಿ ದರ್ಶನ್​ ಅವರು ಮಾತನಾಡಿದ್ದಾರೆ. ‘ಊಟ ಆಯ್ತಾ? ನಾನು ಆರಾಮಾಗಿದ್ದೀನಿ’ ಎಂದು ಮಾತುಕತೆ ಮಾಡಲಾಗಿದೆ. ರೆಡ್ಡಿ ಎಂಬಾತ‌ನ ಸ್ಟೇಟಸ್​ನಲ್ಲಿ ವಿಡಿಯೋ ಹರಿದಾಡಿದೆ.

ಇದನ್ನೂ ಓದಿ: ಪರಪ್ಪನ ಅಗ್ರಹಾರದಲ್ಲಿ ವಿಚಾರಣಾಧೀನ ಖೈದಿ ದರ್ಶನ್​ ಹೇಗೆ ಇರಬೇಕು? ಹೀಗಿದೆ ಜೈಲು ನಡಾವಳಿ..

ವಿಡಿಯೋ ಕಾಲ್​ ತುಣುಕು ವೈರಲ್​ ಆಗುವುದಕ್ಕೂ ಮುನ್ನ ದರ್ಶನ್​ ಅವರ ಒಂದು ಶಾಕಿಂಗ್​ ಫೋಟೋ ಕೂಡ ವೈರಲ್​ ಆಯಿತು. ಈ ಫೋಟೋದಲ್ಲಿ ಅವರು ಜೈಲಿನೊಳಗೆ ನಟೋರಿಯಸ್​ ರೌಡಿಗಳ ಜೊತೆ ಹಾಯಾಗಿ ಕುಳಿತು ಮಾತುಕಥೆ ಮಾಡುತ್ತಿರುವ ಕ್ಷಣ ಸೆರೆಯಾಗಿದೆ. ವಿಲ್ಸನ್​ ಗಾರ್ಡನ್​ ನಾಗ, ಕುಳ್ಳ ಸೀನಾ ಮುಂತಾದ ರೌಡಿಶೀಟರ್​ಗಳ ಜೊತೆ ದರ್ಶನ್​ ಸಿಗರೇಟು ಸೇದಿದ ಫೋಟೋ ಇದಾಗಿದೆ.

ಹಣ ಇರುವ ಖೈದಿಗಳಿಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡಲಾಗುತ್ತಾ ಎಂಬ ಅನುಮಾನಕ್ಕೆ ಈ ಫೋಟೋ ಮತ್ತು ವಿಡಿಯೋ ಪುಷ್ಟಿ ನೀಡುತ್ತಿದೆ. ಜೈಲಿನಲ್ಲಿ ಅಧಿಕಾರಿಗಳಿಂದ ಕಾನೂನು ಉಲ್ಲಂಘನೆ ಆಗಿರುವುದು ಸ್ಪಷ್ಟವಾಗಿದೆ. ಇಷ್ಟು ದಿನಗಳ ಕಾಲ ದರ್ಶನ್​ ಅವರು ಕೊಲೆ ಕೇಸ್​ನಲ್ಲಿ ಪಶ್ಚಾತ್ತಾಪ ಪಡುತ್ತಿದ್ದಾರೆ ಎಂದು ಕೆಲವರು ಹೇಳಿದ್ದರು. ಆದರೆ ಈಗ ವೈರಲ್​ ಆದ ವಿಡಿಯೋ ಮತ್ತು ಫೋಟೋ ನೋಡಿದರೆ ಅವರಿಗೆ ಯಾವುದೇ ಪಶ್ಚಾತ್ತಾಪ ಕಾಡುತ್ತಿಲ್ಲ ಎಂಬುದು ಖಚಿತವಾಗುವಂತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಕೊಲೆ ಆರೋಪಿಗಳಿಂದ ಜೈಲಿನಲ್ಲಿ ಪುಂಡಾಟ: ವಾರ್ಡನ್ ಮೇಲೆ ಹಲ್ಲೆ!
ಕೊಲೆ ಆರೋಪಿಗಳಿಂದ ಜೈಲಿನಲ್ಲಿ ಪುಂಡಾಟ: ವಾರ್ಡನ್ ಮೇಲೆ ಹಲ್ಲೆ!
‘ಯತ್ನಾಳ್ ಯಾವುದೋ ಒಂದು ಕೋತಿಯ ಬ್ರೀಡ್’: ಪ್ರದೀಪ್ ಈಶ್ವರ್ ವಾಗ್ದಾಳಿ
‘ಯತ್ನಾಳ್ ಯಾವುದೋ ಒಂದು ಕೋತಿಯ ಬ್ರೀಡ್’: ಪ್ರದೀಪ್ ಈಶ್ವರ್ ವಾಗ್ದಾಳಿ
ಕೆಆರ್​ಎಸ್​ನಲ್ಲಿ ಕುಸಿದ ನೀರಿನ ಮಟ್ಟ; ಸಂಪೂರ್ಣ ಗೋಚರಿಸುತ್ತಿರುವ ದೇಗುಲ!
ಕೆಆರ್​ಎಸ್​ನಲ್ಲಿ ಕುಸಿದ ನೀರಿನ ಮಟ್ಟ; ಸಂಪೂರ್ಣ ಗೋಚರಿಸುತ್ತಿರುವ ದೇಗುಲ!
ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ನಿರ್ಮಲಾ ಸೀತಾರಾಮನ್ ಭೇಟಿ
ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ನಿರ್ಮಲಾ ಸೀತಾರಾಮನ್ ಭೇಟಿ
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್
24 ಫೋರ್, 2 ಭರ್ಜರಿ ಸಿಕ್ಸ್​: ಸಿಡಿಲಬ್ಬರದ ಸೆಂಚುರಿ ಸಿಡಿಸಿದ ಕಾಕ್ಸ್​
24 ಫೋರ್, 2 ಭರ್ಜರಿ ಸಿಕ್ಸ್​: ಸಿಡಿಲಬ್ಬರದ ಸೆಂಚುರಿ ಸಿಡಿಸಿದ ಕಾಕ್ಸ್​
ರಾಮ್ ಚರಣ್ ಬಾಡಿಗಾರ್ಡ್ ಕೆವಿನ್ ಭರ್ಜರಿ ಕಸರತ್ತು; ವಿಡಿಯೋ ವೈರಲ್
ರಾಮ್ ಚರಣ್ ಬಾಡಿಗಾರ್ಡ್ ಕೆವಿನ್ ಭರ್ಜರಿ ಕಸರತ್ತು; ವಿಡಿಯೋ ವೈರಲ್
ಬಿಡದಿ ಟೌನ್‌ಶಿಪ್ ಯೋಜನೆ: ಜೂನ್ 20ಕ್ಕೆ ರೈತರ ಬೃಹತ್ ಪ್ರತಿಭಟನೆ
ಬಿಡದಿ ಟೌನ್‌ಶಿಪ್ ಯೋಜನೆ: ಜೂನ್ 20ಕ್ಕೆ ರೈತರ ಬೃಹತ್ ಪ್ರತಿಭಟನೆ
ಬೆಂಗಳೂರು: ಮುಂಗಾರು ಮಳೆಯ ಅಬ್ಬರಕ್ಕೆ ಕೆರೆಯಂತಾದ ರಸ್ತೆಗಳು
ಬೆಂಗಳೂರು: ಮುಂಗಾರು ಮಳೆಯ ಅಬ್ಬರಕ್ಕೆ ಕೆರೆಯಂತಾದ ರಸ್ತೆಗಳು
ಸಂಜೆ ವೇಳೆ ಮುಖ್ಯ ಬಾಗಿಲಲ್ಲಿ ಕುಳಿತುಕೊಳ್ಳುವುದು ಅಶುಭವೇ?
ಸಂಜೆ ವೇಳೆ ಮುಖ್ಯ ಬಾಗಿಲಲ್ಲಿ ಕುಳಿತುಕೊಳ್ಳುವುದು ಅಶುಭವೇ?