AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಿಂದ ದರ್ಶನ್ ವಿಡಿಯೋ ಕಾಲ್ ಮಾಡಿದ್ದು ಕೂಡ ರೌಡಿಗಳಿಗೆ; ಸ್ವಲ್ಪವೂ ಬದಲಾಗಿಲ್ಲ ದಾಸ

ರೇಣುಕಾಸ್ವಾಮಿ ಮರ್ಡರ್​ ಪ್ರಕರಣದಲ್ಲಿ ಎ2 ಆಗಿ ಜೈಲು ಸೇರಿದ ಬಳಿಕ ದರ್ಶನ್​ ಸುಧಾರಿಸಿರಬಹುದು ಎಂಬುದು ಅನೇಕರ ಊಹೆ ಆಗಿತ್ತು. ಆದರೆ ಅದು ನಿಜವಾದಂತಿಲ್ಲ. ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್ ಅವರು ಹಲವು ರೌಡಿಶೀಟರ್​ಗಳ ಜೊತೆ ಆಪ್ತತೆ ಬೆಳೆಸಿರುವುದಕ್ಕೆ ವಿಡಿಯೋ, ಫೋಟೋಗಳ ಸಾಕ್ಷಿ ಸಿಕ್ಕಿದೆ. ದರ್ಶನ್ ಜತೆ ವಿಡಿಯೋ ಕಾಲ್​ ಮಾಡಿದ್ದು ಸಹ ರೌಡಿಶೀಟರ್​ಗಳು ಎಂಬುದು ತಿಳಿದುಬಂದಿದೆ.

ಜೈಲಿಂದ ದರ್ಶನ್ ವಿಡಿಯೋ ಕಾಲ್ ಮಾಡಿದ್ದು ಕೂಡ ರೌಡಿಗಳಿಗೆ; ಸ್ವಲ್ಪವೂ ಬದಲಾಗಿಲ್ಲ ದಾಸ
ವೈರಲ್​ ವಿಡಿಯೋ ಮತ್ತು ಫೋಟೋದಲ್ಲಿ ದರ್ಶನ್​ ಜೊತೆ ರೌಡಿಶೀಟರ್​ಗಳು
ಮದನ್​ ಕುಮಾರ್​
|

Updated on: Aug 25, 2024 | 11:14 PM

Share

ನಟ ದರ್ಶನ್​ ಅವರು ಪರಪ್ಪನ ಅಗ್ರಹಾರ ಜೈಲಿನಿಂದ ವಿಡಿಯೋ ಕಾಲ್​ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ. ಅವರ ವಿಡಿಯೋ ಕಾಲ್​ ಕ್ಲಿಪಿಂಗ್​ಗಳು ಸಖತ್ ವೈರಲ್​ ಆಗಿವೆ. ಕಾರಾಗೃಹದಲ್ಲಿ ಎಲ್ಲ ನಿಯಮಗಳನ್ನು ಗಾಳಿಗೆ ತೂರಲಾಗಿದೆ ಎಂಬುದಕ್ಕೆ ಇದು ಸಾಕ್ಷಿಯಾಗಿದೆ. ಮೊದಲು ಅವರು ರೌಡಿಶೀಟರ್​ಗಳ ಜೊತೆ ಕುಳಿತು ಚಹ ಹೀರುತ್ತಾ, ಸಿಗರೇಟು ಸೇದಿದ್ದ ಫೋಟೋ ವೈರಲ್​ ಆಯ್ತು. ಬಳಿಕ ವಿಡಿಯೋ ಕಾಲ್ ತುಣುಕು ಕೂಡ ಹೊರಬಂತು. ಶಾಕಿಂಗ್​ ಸಂಗತಿ ಏನೆಂದರೆ, ಈ ವಿಡಿಯೋ ಕಾಲ್​ನಲ್ಲಿ ದರ್ಶನ್​ ಜೊತೆ ಮಾತನಾಡಿರುವುದು ಕೂಡ ರೌಡಿಗಳು!

ದರ್ಶನ್​ ಅವರು ರೇಣುಕಾಸ್ವಾಮಿಯ ಕೊಲೆ ಕೇಸ್​ನಲ್ಲಿ ಪ್ರಮುಖ ಆರೋಪಿ ಆಗಲು ಸಹವಾಸ ದೋಷವೇ ಕಾರಣ ಎಂಬುದು ಅನೇಕರ ಅಭಿಪ್ರಾಯ. ಜೈಲು ಸೇರಿದ ಬಳಿಕವಾದರೂ ಅವರು ಬದಲಾಗಬಹುದು ಎಂಬುದು ಕೆಲವರ ಊಹೆ ಆಗಿತ್ತು. ಆದರೆ ಅದು ನಿಜವಾಗುವಂತೆ ಕಾಣುತ್ತಿಲ್ಲ. ಯಾಕೆಂದರೆ, ಜೈಲಿನಲ್ಲಿ ಕೂಡ ದರ್ಶನ್​ ಅವರು ರೌಡಿಗಳ ಸ್ನೇಹವನ್ನೇ ಹೆಚ್ಚಾಗಿ ಬೆಳೆಸಿಕೊಳ್ಳುತ್ತಿರುವಂತಿದೆ.

ವೈರಲ್​ ಆಗಿರುವ ದರ್ಶನ್​ ಅವರ ವಿಡಿಯೋ ಕಾಲ್​ನಲ್ಲಿ ಇರುವವನು ಬ್ಯಾಡರಹಳ್ಳಿ ರೌಡಿಶೀಟರ್ ಜಾನಿ ಅಲಿಯಾಸ್​ ಜನಾರ್ದನ್ ಪುತ್ರ ಸತ್ಯ. ವಿಡಿಯೋ ಕಾಲ್ ಮಾಡಿ ದರ್ಶನ್ ಅವರನ್ನು ತೋರಿಸಿರುವವನು ಕೂಡ ರೌಡಿಶೀಟರ್ ಮಾರ್ಕೆಟ್ ಧರ್ಮ. ಜಾನಿ ಮಗ ಸತ್ಯ ಕೂಡ ಇತ್ತೀಚೆಗೆ ಜೈಲಿಗೆ ಹೋಗಿ ಬಂದಿದ್ದ. ಕೆಎಲ್​ಇ‌ ಕಾಲೇಜ್ ವಿದ್ಯಾರ್ಥಿಗಳಿಗೆ ಉಲ್ಟಾ ಮಚ್ಚಲ್ಲಿ ಸತ್ಯ ಹೊಡೆದಿದ್ದ. ಅನ್ನಪೂರ್ಣೇಶ್ವರಿ ನಗರ ಠಾಣಾ ವ್ಯಾಪ್ತಿಯಲ್ಲಿ ಈ ಹಲ್ಲೆ ನಡೆದಿತ್ತು.

ಜೈಲಿಗೆ ಹೋಗಿದ್ದ ಸತ್ಯ ಸದ್ಯ ಜಾಮೀನನ ಮೇಲೆ ಹೊರಗೆ ಬಂದ. ಹೊರಗೆ ಬಂದವನು ಇತ್ತೀಚೆಗೆ ಮಾರ್ಕೆಟ್ ಧರ್ಮನಿಗೆ ವಿಡಿಯೋ ಕಾಲ್ ಮಾಡಿದ್ದ‌. ‘ದರ್ಶನ್ ನಮ್ ಸೆಲ್ ಪಕ್ಕದಲ್ಲೇ ಇರೋದು, ಇರು ತೋರಿಸ್ತಿನಿ’ ಎಂದು ಮಾರ್ಕೆಟ್​ ಧರ್ಮ, ದರ್ಶನ್ ಕೈಯಲ್ಲಿ ಹಾಯ್ ಹೇಳಿಸಿದ್ದ. ಅದನ್ನು ರೆಕಾರ್ಡ್ ಮಾಡಿಕೊಂಡ ಸತ್ಯ ತನ್ನ ಏರಿಯಾದಲ್ಲಿ ಬಿಲ್ಡಪ್ ಕೊಟ್ಟಿದ್ದ. ಕಲಾಸಿಪಾಳ್ಯದ ಕೆಲ ಹುಡುಗರಿಗೂ ವಿಡಿಯೋ ಕಳಿಸಿದ್ದ‌. ಹಾಗಾಗಿ ಈ ವಿಡಿಯೋ ವೈರಲ್​ ಆಗಿದೆ.

ಪರಪ್ಪನ ಅಗ್ರಹಾರದಲ್ಲಿ ವಿಚಾರಣಾಧೀನ ಖೈದಿ ದರ್ಶನ್​ ಹೇಗೆ ಇರಬೇಕು? ಹೀಗಿದೆ ಜೈಲು ನಡಾವಳಿ..

ಇನ್ನು, ವೈರಲ್​ ಫೋಟೋದಲ್ಲಿ ದರ್ಶನ್​ ಜೊತೆ ಇರುವುದು ಕೂಡ ರೌಡಿಶೀಟರ್​ಗಳು. ವಿಲ್ಸನ್​ ಗಾರ್ಡನ್​ ನಾಗ, ಕುಳ್ಳ ಸೀನಾ ಮುಂತಾದ ವ್ಯಕ್ತಿಗಳ ಸಂಪರ್ಕವನ್ನು ದರ್ಶನ್ ಪಡೆದುಕೊಂಡಿದ್ದಾರೆ. ಅವರ ಜೊತೆ ಜೈಲಿನ ಗಾರ್ಡನ್​ನಲ್ಲಿ ಟೀ ಕುಡಿದು, ಸಿಗರೇಟ್​ ಸೇದಿದ ಫೋಟೋ ಎಲ್ಲ ಕಡೆ ಹರಿದಾಡಿದೆ. ಜೈಲಿನ ನಿಯಮಗಳು ಉಲ್ಲಂಘನೆ ಆಗಿರುವ ಬಗ್ಗೆ ಸಿಕ್ಕಾಪಟ್ಟೆ ಚರ್ಚೆ ಆಗುತ್ತಿದೆ.

ವರದಿ: ಪ್ರದೀಪ್

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಪುರುಷರ ಹಕ್ಕುಗಳ ರಕ್ಷಣೆಗೆ ಹೊಸ ವೇದಿಕೆ
ಪುರುಷರ ಹಕ್ಕುಗಳ ರಕ್ಷಣೆಗೆ ಹೊಸ ವೇದಿಕೆ
ಬೆಳಗಾವಿ: ಧಾರಾಕಾರ ಮಳೆಗೆ ಕುಸಿದ ಮನೆ ಗೋಡೆ; 7 ಜನರು ಜಸ್ಟ್ ಮಿಸ್​!
ಬೆಳಗಾವಿ: ಧಾರಾಕಾರ ಮಳೆಗೆ ಕುಸಿದ ಮನೆ ಗೋಡೆ; 7 ಜನರು ಜಸ್ಟ್ ಮಿಸ್​!
ಮಳೆಯಿಂದಾಗಿ ಭೂಕುಸಿತದ ಭೀತಿ: ಆಗುಂಬೆ ಘಾಟಿಯಲ್ಲಿ ಘನ ವಾಹನಗಳ ಸಂಚಾರ ಬಂದ್!
ಮಳೆಯಿಂದಾಗಿ ಭೂಕುಸಿತದ ಭೀತಿ: ಆಗುಂಬೆ ಘಾಟಿಯಲ್ಲಿ ಘನ ವಾಹನಗಳ ಸಂಚಾರ ಬಂದ್!
ದಾವಣಗೆರೆ: ಹಳ್ಳ ಹಿಡಿದ 'ಎಸ್ಐಆರ್' ಪ್ರಕ್ರಿಯೆ
ದಾವಣಗೆರೆ: ಹಳ್ಳ ಹಿಡಿದ 'ಎಸ್ಐಆರ್' ಪ್ರಕ್ರಿಯೆ
ರಾಮಮಂದಿರ ದೇಣಿಗೆ ಕಳ್ಳತನ; RSS ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
ರಾಮಮಂದಿರ ದೇಣಿಗೆ ಕಳ್ಳತನ; RSS ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
ಪ್ರಧಾನಿ ಮೋದಿಯಿಂದ ಜೋಧ್‌ಪುರ ವಿಮಾನ ನಿಲ್ದಾಣದ ನೂತನ ಟರ್ಮಿನಲ್ ಉದ್ಘಾಟನೆ
ಪ್ರಧಾನಿ ಮೋದಿಯಿಂದ ಜೋಧ್‌ಪುರ ವಿಮಾನ ನಿಲ್ದಾಣದ ನೂತನ ಟರ್ಮಿನಲ್ ಉದ್ಘಾಟನೆ
ರಾಜ್ಯದಲ್ಲಿ SIR ಪ್ರಕ್ರಿಯೆ ಸರಿಯಾಗಿ ನಡೆಯುತ್ತಿಲ್ಲ: ಪ್ರಹ್ಲಾದ್​ ಜೋಶಿ
ರಾಜ್ಯದಲ್ಲಿ SIR ಪ್ರಕ್ರಿಯೆ ಸರಿಯಾಗಿ ನಡೆಯುತ್ತಿಲ್ಲ: ಪ್ರಹ್ಲಾದ್​ ಜೋಶಿ
ನೆಲಮಂಗಲ: ಮನೆ ಮನೆಗೆ ಹೋಗುವ ಬದಲು ಮಸೀದಿಯಲ್ಲೇ ಕುಳಿತು SIR ಪತ್ರ ವಿತರಣೆ
ನೆಲಮಂಗಲ: ಮನೆ ಮನೆಗೆ ಹೋಗುವ ಬದಲು ಮಸೀದಿಯಲ್ಲೇ ಕುಳಿತು SIR ಪತ್ರ ವಿತರಣೆ
ಬತ್ತಿದ್ದ ಕೃಷ್ಣಾ ನದಿಗೆ ಜೀವ ಕಳೆ, 15 ಸಾವಿರ ಕ್ಯೂಸೆಕ್ ಒಳ ಹರಿವು
ಬತ್ತಿದ್ದ ಕೃಷ್ಣಾ ನದಿಗೆ ಜೀವ ಕಳೆ, 15 ಸಾವಿರ ಕ್ಯೂಸೆಕ್ ಒಳ ಹರಿವು
SIR ವಿವಾದ: ಸರ್ಕಾರದ ವಿರುದ್ಧ ಜಂಟಿ ಸಮರಕ್ಕೆ ಬಿಜೆಪಿ, ಜೆಡಿಎಸ್‌ ಸಿದ್ಧತೆ
SIR ವಿವಾದ: ಸರ್ಕಾರದ ವಿರುದ್ಧ ಜಂಟಿ ಸಮರಕ್ಕೆ ಬಿಜೆಪಿ, ಜೆಡಿಎಸ್‌ ಸಿದ್ಧತೆ