AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಪ್ಪನ ಅಗ್ರಹಾರದಲ್ಲಿ ವಿಚಾರಣಾಧೀನ ಖೈದಿ ದರ್ಶನ್​ ಹೇಗೆ ಇರಬೇಕು? ಹೀಗಿದೆ ಜೈಲು ನಡಾವಳಿ..

ರೇಣುಕಾ ಸ್ವಾಮಿ ಕೊಲೆ ಕೇಸ್​ನ 2ನೇ ಪ್ರಮುಖ ಆರೋಪಿ ದರ್ಶನ್​ ಈಗ ಪರಪ್ಪನ ಅಗ್ರಹಾರದಲ್ಲಿ ಪಡೆಯುತ್ತಿರುವ ಸೌಲಭ್ಯಗಳ ಬಗ್ಗೆ ಚರ್ಚೆ ಶುರುವಾಗಿದೆ. ಅದಕ್ಕೆ ಕಾರಣ ಆಗಿರುವುದು ಅವರ ವೈರಲ್​ ಫೋಟೋ. ಜೈಲಿನಲ್ಲಿ ರೌಡಿಶೀಟರ್​ಗಳ ಸಹವಾಸ ಮಾಡಿರುವ ದರ್ಶನ್​ ಆರಾಮಾಗಿ ಸಿಗರೇಟ್​ ಸೇದುತ್ತಾ ದಿನ ಕಳೆಯುತ್ತಿರುವುದು ಈ ಫೋಟೋದಲ್ಲಿದೆ.

ಪರಪ್ಪನ ಅಗ್ರಹಾರದಲ್ಲಿ ವಿಚಾರಣಾಧೀನ ಖೈದಿ ದರ್ಶನ್​ ಹೇಗೆ ಇರಬೇಕು? ಹೀಗಿದೆ ಜೈಲು ನಡಾವಳಿ..
ರೇಣುಕಾ ಸ್ವಾಮಿ, ದರ್ಶನ್​ ವೈರಲ್​ ಫೋಟೋ
ಮದನ್​ ಕುಮಾರ್​
|

Updated on: Aug 25, 2024 | 7:33 PM

Share

ಸೆಲೆಬ್ರಿಟಿಗಳು ಜೈಲು ಸೇರಿದರೆ ರಾಜಾತಿಥ್ಯ ನೀಡಲಾಗುತ್ತಾ ಎಂಬ ಅನುಮಾನವನ್ನು ಬಲಗೊಳಿಸುವ ರೀತಿಯಲ್ಲಿ ಒಂದು ಫೋಟೋ ವೈರಲ್​ ಆಗುತ್ತಿದೆ. ಪರಪ್ಪನ ಅಗ್ರಹಾರದಲ್ಲಿ ಇರುವ ನಟ ದರ್ಶನ್​ ಓರ್ವ ವಿಚಾರಣಾಧೀನ ಖೈದಿ. ಅಲ್ಲಿ ಅವರು ಹೇಗೆ ನಡೆದುಕೊಳ್ಳಬೇಕು ಎಂಬ ಬಗ್ಗೆ ಜೈಲು ನಡಾವಳಿಯಲ್ಲಿ ಬರೆಯಲಾಗಿದೆ. ಆ ನಿಯಮಗಳಿಗೆ ವಿರುದ್ಧವಾಗಿ ದರ್ಶನ್​ಗೆ ಉಪಚಾರ ಮಾಡಲಾಗುತ್ತಿದೆಯಾ ಎಂಬ ಅನುಮಾನ ಮೂಡಿದೆ. ಜೈಲಿನ ಇತರೆ ಖೈದಿಗಳ ಜೊತೆ ದರ್ಶನ್​ ಟೀ ಕುಡಿದು, ಸಿಗರೇಟ್​ ಸೇದುತ್ತಾ ಕಾಲ ಕಳೆಯುತ್ತಿದ್ದಾರೆ ಎಂಬುದು ಈ ಫೋಟೋದಿಂದ ಸ್ಪಷ್ಟವಾಗುತ್ತಿದೆ.

ಜೈಲಿನಲ್ಲಿ ಖೈದಿಗಳಿಗೆ ಕೆಲವು ಹಕ್ಕುಗಳು ಮತ್ತು ಕರ್ತವ್ಯಗಳು ಇವೆ. ವಿಚಾರಣಾಧೀನ ಖೈದಿಗಳ ಉಸ್ತುವಾರಿಯಾಗಿ ಸಹಾಯಕ‌ ಜೈಲು ಅಧೀಕ್ಷಕರು ಇರುತ್ತಾರೆ. ಸಾಮಾನ್ಯ ಖೈದಿಗಳಿಗೆ ನೀಡುವಂತೆ ವಿಚಾರಣಾಧೀನ ಖೈದಿಗಳಿಗೂ ಶುದ್ಧ ನೀರು, ಆಹಾರ, ವೈದ್ಯಕೀಯ ಸೌಲಭ್ಯ ನೀಡಲಾಗುತ್ತದೆ. ಒಂದೇ ಪ್ರಕರಣದ ಆರೋಪಿಗಳು ಒಟ್ಟಿಗೆ ಇರಬಾರದು ಎಂಬ ನಿಯಮವಿದೆ. ಆದರೆ ಈ ಫೋಟೋದಲ್ಲಿ ಗಮನಿಸುವಂತೆ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳಾದ ದರ್ಶನ ಹಾಗೂ ಮ್ಯಾನೇಜರ್​ ನಾಗ ಒಟ್ಟಿಗೆ ಕಾಲ ಕಳೆಯುತ್ತಿದ್ದಾರೆ.

ವಿಚಾರಣಾಧೀನ ಖೈದಿಗಳು ಹೇರ್ ಕಟಿಂಗ್, ಶೇವಿಂಗ್ ಮಾಡಬಾರದು. ಆದರೆ ದರ್ಶನ್ ತಲೆ ಬೋಳಿಸಿಕೊಂಡಿದ್ದಾರೆ. ಆ ವಿಚಾರ ಕೂಡ ಚರ್ಚೆ ಆಗುತ್ತಿದೆ. ಇತರೆ ಖೈದಿಗಳಂತೆ ವಿಚಾರಣಾಧೀನ ಖೈದಿಗಳಿಗೂ ಕೆಲವು ಹಕ್ಕುಗಳಿವೆ. ಕಾನೂನು ರಕ್ಷಣೆ ಮತ್ತು ನೆರವು, ವಕೀಲರು, ಕುಟುಂಬದೊಂದಿಗೆ ಮಾತನಾಡಲು ಅವಕಾಶ ಇದೆ. ಕ್ಯಾಂಟೀನ್ ವಸ್ತುಗಳನ್ನು ಖರೀದಿ ಮಾಡಬಹುದು. ಲೇಖನ ಸಾಮಾಗ್ರಿಗಳನ್ನು ಪಡೆಯಬಹುದು. ಜೈಲಿನ ಕಾನೂನುಗಳಿಗೆ ಬದ್ಧನಾಗಿರಬೇಕು. ಅಧಿಕಾರಿಗಳು ಆದೇಶ ಪಾಲಿಸಬೇಕು. ನಿಯಮಗಳಿಂದ ನಿಷೇಧಿಸಲ್ಪಟ್ಟ ಗಾಂಜಾ ಅಥವಾ ಇತರ ಮಾದಕ ವಸ್ತುಗಳನ್ನು, ಹಣ, ಆಭರಣ ಸ್ವೀಕರಿಸುವ ಆಗಿಲ್ಲ.

ಇದನ್ನೂ ಓದಿ: ಜೈಲಲ್ಲಿ ರೌಡಿಶೀಟರ್ ಸ್ನೇಹ ಬೆಳೆಸಿದ ದರ್ಶನ್: ವೈರಲ್ ಫೋಟೋದಲ್ಲಿ ಇರುವ ನಾಗ ಯಾರು?

ಈ ಎಲ್ಲ ನಿಯಮಗಳು ಇದ್ದರೂ ಕೂಡ ಹಣ ಇರುವ ಆರೋಪಿಗಳಿಗೆ ಸೆಂಟ್ರಲ್‌ ಜೈಲು ಎಂಬುದು ರೆಸಾರ್ಟ್‌ ಆಗಿದೆಯಾ ಎನ್ನುವ ಪ್ರಶ್ನೆ ಎದುರಾಗುತ್ತದೆ. ಈ ಹಿಂದೆ ಜಯಲಲಿತಾ, ಶಶಿಕಲಾಗೆ ರಾಜಾಥಿತ್ಯ ನೀಡಿದ ಆರೋಪ ಕೇಳಿಬಂದಿತ್ತು. ಅದು ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಅಲ್ಲದೆ ಜೈಲಿನಲ್ಲಿ ರೌಡಿಶೀಟರ್‌ ಕುಳ್ಳು ರಿಜ್ವಾನ್ ಬರ್ತ್‌ಡೇ ಆಚರಿಸಿಕೊಂಡಿದ್ದ. ಭರ್ಜರಿಯಾಗಿ ಬರ್ತ್‌ಡೇ ಮಾಡಿಕೊಂಡಿದ್ದ ವಿಡಿಯೋ ವೈರಲ್ ಆಗಿತ್ತು. ಈಗ ನಟ ದರ್ಶನ್ ಮತ್ತು ಇತರ ಆರೋಪಿಗಳಿಗೆ ರಾಜಾತಿಥ್ಯ ನೀಡಿದ ಆರೋಪ ಎದುರಾಗಿದೆ. ಜೈಲಿನ ಗಾರ್ಡನ್ ಏರಿಯಾದಲ್ಲಿ ನಾಲ್ವರ ಜೊತೆ ಕುಳಿತಿರುವ ದರ್ಶನ್‌, ಕಾಫಿ ಕುಡಿಯುತ್ತಾ ಸಿಗರೇಟ್‌ ಸೇದಿರುವ ಫೋಟೋದಿಂದ ಹಲವು ಅನುಮಾನ ಹುಟ್ಟಿಕೊಂಡಿದೆ.

ವರದಿ: ಪ್ರದೀಪ್

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಬಿಡದಿ ಟೌನ್​ಶಿಪ್​​ ಯೋಜನೆ ಲೂಟಿ ಸ್ಕೀಮ್​​​ ಡೌಟೇ ಬೇಡ: ಕುಮಾರಸ್ವಾಮಿ
ಬಿಡದಿ ಟೌನ್​ಶಿಪ್​​ ಯೋಜನೆ ಲೂಟಿ ಸ್ಕೀಮ್​​​ ಡೌಟೇ ಬೇಡ: ಕುಮಾರಸ್ವಾಮಿ
ಕೊಲೆ ಆರೋಪಿಗಳಿಂದ ಜೈಲಿನಲ್ಲಿ ಪುಂಡಾಟ: ವಾರ್ಡನ್ ಮೇಲೆ ಹಲ್ಲೆ!
ಕೊಲೆ ಆರೋಪಿಗಳಿಂದ ಜೈಲಿನಲ್ಲಿ ಪುಂಡಾಟ: ವಾರ್ಡನ್ ಮೇಲೆ ಹಲ್ಲೆ!
‘ಯತ್ನಾಳ್ ಯಾವುದೋ ಒಂದು ಕೋತಿಯ ಬ್ರೀಡ್’: ಪ್ರದೀಪ್ ಈಶ್ವರ್ ವಾಗ್ದಾಳಿ
‘ಯತ್ನಾಳ್ ಯಾವುದೋ ಒಂದು ಕೋತಿಯ ಬ್ರೀಡ್’: ಪ್ರದೀಪ್ ಈಶ್ವರ್ ವಾಗ್ದಾಳಿ
ಕೆಆರ್​ಎಸ್​ನಲ್ಲಿ ಕುಸಿದ ನೀರಿನ ಮಟ್ಟ; ಸಂಪೂರ್ಣ ಗೋಚರಿಸುತ್ತಿರುವ ದೇಗುಲ!
ಕೆಆರ್​ಎಸ್​ನಲ್ಲಿ ಕುಸಿದ ನೀರಿನ ಮಟ್ಟ; ಸಂಪೂರ್ಣ ಗೋಚರಿಸುತ್ತಿರುವ ದೇಗುಲ!
ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ನಿರ್ಮಲಾ ಸೀತಾರಾಮನ್ ಭೇಟಿ
ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ನಿರ್ಮಲಾ ಸೀತಾರಾಮನ್ ಭೇಟಿ
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್
24 ಫೋರ್, 2 ಭರ್ಜರಿ ಸಿಕ್ಸ್​: ಸಿಡಿಲಬ್ಬರದ ಸೆಂಚುರಿ ಸಿಡಿಸಿದ ಕಾಕ್ಸ್​
24 ಫೋರ್, 2 ಭರ್ಜರಿ ಸಿಕ್ಸ್​: ಸಿಡಿಲಬ್ಬರದ ಸೆಂಚುರಿ ಸಿಡಿಸಿದ ಕಾಕ್ಸ್​
ರಾಮ್ ಚರಣ್ ಬಾಡಿಗಾರ್ಡ್ ಕೆವಿನ್ ಭರ್ಜರಿ ಕಸರತ್ತು; ವಿಡಿಯೋ ವೈರಲ್
ರಾಮ್ ಚರಣ್ ಬಾಡಿಗಾರ್ಡ್ ಕೆವಿನ್ ಭರ್ಜರಿ ಕಸರತ್ತು; ವಿಡಿಯೋ ವೈರಲ್
ಬಿಡದಿ ಟೌನ್‌ಶಿಪ್ ಯೋಜನೆ: ಜೂನ್ 20ಕ್ಕೆ ರೈತರ ಬೃಹತ್ ಪ್ರತಿಭಟನೆ
ಬಿಡದಿ ಟೌನ್‌ಶಿಪ್ ಯೋಜನೆ: ಜೂನ್ 20ಕ್ಕೆ ರೈತರ ಬೃಹತ್ ಪ್ರತಿಭಟನೆ
ಬೆಂಗಳೂರು: ಮುಂಗಾರು ಮಳೆಯ ಅಬ್ಬರಕ್ಕೆ ಕೆರೆಯಂತಾದ ರಸ್ತೆಗಳು
ಬೆಂಗಳೂರು: ಮುಂಗಾರು ಮಳೆಯ ಅಬ್ಬರಕ್ಕೆ ಕೆರೆಯಂತಾದ ರಸ್ತೆಗಳು