AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Darshan: ಮಹಿಳೆ ಮೇಲೆ ನಾಯಿ ದಾಳಿ ಪ್ರಕರಣ​; ಪೊಲೀಸ್​ ಠಾಣೆಗೆ ಬಂದು ವಿಚಾರಣೆಗೆ ಹಾಜರಾದ ದರ್ಶನ್​

ಅಮಿತಾ ಜಿಂದಾಲ್​ ಎಂಬ ಮಹಿಳೆಗೆ ನಟ ದರ್ಶನ್​ ಮನೆಯ ನಾಯಿ ಕಚ್ಚಿದ ಬಳಿಕ ಐಪಿಸಿ ಸೆಕ್ಷನ್​ 289ರ ಅಡಿಯಲ್ಲಿ ಕೇಸ್​ ದಾಖಲಾಗಿತ್ತು. ಎ2 ಆಗಿರುವ ದರ್ಶನ್​ ಅವರು ಇಂದು (ನವೆಂಬರ್​ 15) ರಾಜರಾಜೇಶ್ವರಿ ನಗರದ ಪೊಲೀಸ್​ ಠಾಣೆಗೆ ಬಂದು ವಿಚಾರಣೆಯಲ್ಲಿ ಭಾಗಿ ಆಗಿದ್ದಾರೆ. ಅವರ ಹೇಳಿಕೆಯನ್ನು ಪೊಲೀಸರು ದಾಖಲಿಸಿಕೊಳ್ಳುತ್ತಿದ್ದಾರೆ.

Darshan: ಮಹಿಳೆ ಮೇಲೆ ನಾಯಿ ದಾಳಿ ಪ್ರಕರಣ​; ಪೊಲೀಸ್​ ಠಾಣೆಗೆ ಬಂದು ವಿಚಾರಣೆಗೆ ಹಾಜರಾದ ದರ್ಶನ್​
ಪೊಲೀಸ್​ ಠಾಣೆಗೆ ಬಂದ ದರ್ಶನ್​
ಜಗದೀಶ ಬಿ.
| Edited By: |

Updated on:Nov 15, 2023 | 1:47 PM

Share

ಖ್ಯಾತ ನಟ ದರ್ಶನ್​ ಅವರು ಆರ್​ಆರ್​ ನಗರ ಪೊಲೀಸ್ ಠಾಣೆಗೆ (RR Nagar Police Station) ಬಂದಿದ್ದಾರೆ. ಕೆಲವೇ ದಿನಗಳ ಹಿಂದೆ ಮಹಿಳೆ ಮೇಲೆ ನಾಯಿ ದಾಳಿ (Dog Attack Case) ಮಾಡಿದ ಪ್ರಕರಣದಲ್ಲಿ ದರ್ಶನ್​ ವಿರುದ್ಧವೂ ದೂರು ದಾಖಲಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ದರ್ಶನ್​ಗೆ ಪೊಲೀಸರು ನೋಟಿಸ್​ ನೀಡಿದ್ದರು. ಪ್ರಕರಣದಲ್ಲಿ ಎ2 ಆಗಿರುವ ಅವರು ಇಂದು (ನವೆಂಬರ್​ 15) ಪೊಲೀಸ್​ ಠಾಣೆಗೆ ಬಂದು ವಿಚಾರಣೆಯಲ್ಲಿ ಭಾಗಿ ಆಗಿದ್ದಾರೆ. ಅವರ ಹೇಳಿಕೆಯನ್ನು ಪೊಲೀಸರು ದಾಖಲಿಸಿಕೊಳ್ಳುತ್ತಿದ್ದಾರೆ. ಅಮಿತಾ ಜಿಂದಾಲ್​ ಎಂಬುವವರಿಗೆ ದರ್ಶನ್​ (Darshan) ಮನೆಯ ನಾಯಿ ಕಚ್ಚಿದ ಬಳಿಕ ಐಪಿಸಿ ಸೆಕ್ಷನ್​ 289ರ ಅಡಿಯಲ್ಲಿ ಕೇಸ್​ ದಾಖಲಾಗಿತ್ತು. ಆ ಪ್ರಕರಣದ ವಿಚಾರಣೆ ಚುರುಕುಗೊಂಡಿದೆ.

ತನಿಖಾಧಿಕಾರಿ ಇನ್ಸ್​​ಪೆಕ್ಟರ್ ಶಿವಕುಮಾರ್ ಅವರ ಮುಂದೆ ದರ್ಶನ್​ ವಿಚಾರಣೆಗೆ ಹಾಜರಾಗಿದ್ದಾರೆ. ಕೇವಲ 15 ನಿಮಿಷ ಮಾತ್ರ ಅವರು ಪೊಲೀಸ್​ ಠಾಣೆಯಲ್ಲಿ ಇದ್ದರು. ಅಷ್ಟರಲ್ಲೇ ಹೇಳಿಕೆ ನೀಡಿ ಅವರು ವಾಪಸ್​ ತೆರಳಿದ್ದಾರೆ. ಮಹಿಳೆ ದೂರು ನೀಡಿದ ಬಳಿಕ ಪೊಲೀಸರು ಇತ್ತೀಚೆಗೆ ಸ್ಥಳಕ್ಕೆ ಬಂದು ಮಹಜರು ಮಾಡಿದ್ದರು. ಈ ಮೊದಲೇ ದರ್ಶನ್​ ಅವರಿಗೆ ನೋಟಿಸ್​ ನೀಡಲಾಗಿತ್ತು. ಕಡೆಗೂ ಅವರು ಇಂದು ವಿಚಾರಣೆಗೆ ಬಂದಿದ್ದಾರೆ.

ಇದನ್ನೂ ಓದಿ: ಮಹಿಳೆ ಮೇಲೆ ದರ್ಶನ್​ ಮನೆಯ ನಾಯಿ ದಾಳಿ ಮಾಡಿದ್ದು ಹೇಗೆ? ಸ್ಥಳ ಮಹಜರು ವಿಡಿಯೋ ಇಲ್ಲಿದೆ..

ಆರ್​ಆರ್​ ನಗರ ಪೊಲೀಸ್​ ಠಾಣೆಗೆ ಬಂದ ದರ್ಶನ್​ ಅವರನ್ನು ನೋಡಲು ಅಪಾರ ಸಂಖ್ಯೆ ಅಭಿಮಾನಿಗಳು ಜಮಾಯಿಸಿದ್ದರು. ಸ್ವತಃ ದರ್ಶನ್​ ಅವರೇ ಕಾರು ಚಲಾಯಿಸಿಕೊಂಡು ಬಂದಿದ್ದರು. ಅವರು ಕಾರು ಇಳಿಯುತ್ತಿದ್ದಂತಯೇ ಅಭಿಮಾನಿಗಳು ಜೈಕಾರ ಕೂಗಿದರು. ಪೊಲೀಸ್​ ಠಾಣೆಯಿಂದ ವಾಪಸ್​ ಹೊರಡುವಾಗ ದರ್ಶನ್​ ಅವರು ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಇತ್ತೀಚೆಗೆ ಹುಲಿ ಉಗುರು ಹೊಂದಿದ ಆರೋಪದಲ್ಲೂ ದರ್ಶನ್​ ಅವರಿಗೆ ಸಂಕಷ್ಟ ಎದುರಾಗಿತ್ತು. ಹುಲಿ ಉಗುರಿನ ಲಾಕೆಟ್​ ಧರಿಸಿ ಕಾಣಿಸಿಕೊಂಡಿದ್ದ ಅವರ ಹಳೆಯ ಫೋಟೋ ವೈರಲ್​ ಆಗಿತ್ತು. ಆ ಬಳಿಕ ಅವರ ವಿರುದ್ಧ ಕೇಸ್​ ದಾಖಲಿಸಲಾಗಿತ್ತು. ಅರಣ್ಯಾಧಿಕಾರಿಗಳು ದರ್ಶನ್​ ನಿವಾಸಕ್ಕೆ ತೆರಳಿ ತಪಾಸಣೆ ನಡೆಸಿದ್ದರು. ಆ ಪ್ರಕರಣ ತಣ್ಣಗಾಯಿತು ಎನ್ನುವಾಗಲೇ ನಾಯಿ ದಾಳಿ ಘಟನೆ ನಡೆಯಿತು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 1:28 pm, Wed, 15 November 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ