AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Darshan: ಮಹಿಳೆ ಮೇಲೆ ನಾಯಿ ದಾಳಿ ಪ್ರಕರಣ​; ಪೊಲೀಸ್​ ಠಾಣೆಗೆ ಬಂದು ವಿಚಾರಣೆಗೆ ಹಾಜರಾದ ದರ್ಶನ್​

ಅಮಿತಾ ಜಿಂದಾಲ್​ ಎಂಬ ಮಹಿಳೆಗೆ ನಟ ದರ್ಶನ್​ ಮನೆಯ ನಾಯಿ ಕಚ್ಚಿದ ಬಳಿಕ ಐಪಿಸಿ ಸೆಕ್ಷನ್​ 289ರ ಅಡಿಯಲ್ಲಿ ಕೇಸ್​ ದಾಖಲಾಗಿತ್ತು. ಎ2 ಆಗಿರುವ ದರ್ಶನ್​ ಅವರು ಇಂದು (ನವೆಂಬರ್​ 15) ರಾಜರಾಜೇಶ್ವರಿ ನಗರದ ಪೊಲೀಸ್​ ಠಾಣೆಗೆ ಬಂದು ವಿಚಾರಣೆಯಲ್ಲಿ ಭಾಗಿ ಆಗಿದ್ದಾರೆ. ಅವರ ಹೇಳಿಕೆಯನ್ನು ಪೊಲೀಸರು ದಾಖಲಿಸಿಕೊಳ್ಳುತ್ತಿದ್ದಾರೆ.

Darshan: ಮಹಿಳೆ ಮೇಲೆ ನಾಯಿ ದಾಳಿ ಪ್ರಕರಣ​; ಪೊಲೀಸ್​ ಠಾಣೆಗೆ ಬಂದು ವಿಚಾರಣೆಗೆ ಹಾಜರಾದ ದರ್ಶನ್​
ಪೊಲೀಸ್​ ಠಾಣೆಗೆ ಬಂದ ದರ್ಶನ್​
Jagadisha B
| Edited By: |

Updated on:Nov 15, 2023 | 1:47 PM

Share

ಖ್ಯಾತ ನಟ ದರ್ಶನ್​ ಅವರು ಆರ್​ಆರ್​ ನಗರ ಪೊಲೀಸ್ ಠಾಣೆಗೆ (RR Nagar Police Station) ಬಂದಿದ್ದಾರೆ. ಕೆಲವೇ ದಿನಗಳ ಹಿಂದೆ ಮಹಿಳೆ ಮೇಲೆ ನಾಯಿ ದಾಳಿ (Dog Attack Case) ಮಾಡಿದ ಪ್ರಕರಣದಲ್ಲಿ ದರ್ಶನ್​ ವಿರುದ್ಧವೂ ದೂರು ದಾಖಲಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ದರ್ಶನ್​ಗೆ ಪೊಲೀಸರು ನೋಟಿಸ್​ ನೀಡಿದ್ದರು. ಪ್ರಕರಣದಲ್ಲಿ ಎ2 ಆಗಿರುವ ಅವರು ಇಂದು (ನವೆಂಬರ್​ 15) ಪೊಲೀಸ್​ ಠಾಣೆಗೆ ಬಂದು ವಿಚಾರಣೆಯಲ್ಲಿ ಭಾಗಿ ಆಗಿದ್ದಾರೆ. ಅವರ ಹೇಳಿಕೆಯನ್ನು ಪೊಲೀಸರು ದಾಖಲಿಸಿಕೊಳ್ಳುತ್ತಿದ್ದಾರೆ. ಅಮಿತಾ ಜಿಂದಾಲ್​ ಎಂಬುವವರಿಗೆ ದರ್ಶನ್​ (Darshan) ಮನೆಯ ನಾಯಿ ಕಚ್ಚಿದ ಬಳಿಕ ಐಪಿಸಿ ಸೆಕ್ಷನ್​ 289ರ ಅಡಿಯಲ್ಲಿ ಕೇಸ್​ ದಾಖಲಾಗಿತ್ತು. ಆ ಪ್ರಕರಣದ ವಿಚಾರಣೆ ಚುರುಕುಗೊಂಡಿದೆ.

ತನಿಖಾಧಿಕಾರಿ ಇನ್ಸ್​​ಪೆಕ್ಟರ್ ಶಿವಕುಮಾರ್ ಅವರ ಮುಂದೆ ದರ್ಶನ್​ ವಿಚಾರಣೆಗೆ ಹಾಜರಾಗಿದ್ದಾರೆ. ಕೇವಲ 15 ನಿಮಿಷ ಮಾತ್ರ ಅವರು ಪೊಲೀಸ್​ ಠಾಣೆಯಲ್ಲಿ ಇದ್ದರು. ಅಷ್ಟರಲ್ಲೇ ಹೇಳಿಕೆ ನೀಡಿ ಅವರು ವಾಪಸ್​ ತೆರಳಿದ್ದಾರೆ. ಮಹಿಳೆ ದೂರು ನೀಡಿದ ಬಳಿಕ ಪೊಲೀಸರು ಇತ್ತೀಚೆಗೆ ಸ್ಥಳಕ್ಕೆ ಬಂದು ಮಹಜರು ಮಾಡಿದ್ದರು. ಈ ಮೊದಲೇ ದರ್ಶನ್​ ಅವರಿಗೆ ನೋಟಿಸ್​ ನೀಡಲಾಗಿತ್ತು. ಕಡೆಗೂ ಅವರು ಇಂದು ವಿಚಾರಣೆಗೆ ಬಂದಿದ್ದಾರೆ.

ಇದನ್ನೂ ಓದಿ: ಮಹಿಳೆ ಮೇಲೆ ದರ್ಶನ್​ ಮನೆಯ ನಾಯಿ ದಾಳಿ ಮಾಡಿದ್ದು ಹೇಗೆ? ಸ್ಥಳ ಮಹಜರು ವಿಡಿಯೋ ಇಲ್ಲಿದೆ..

ಆರ್​ಆರ್​ ನಗರ ಪೊಲೀಸ್​ ಠಾಣೆಗೆ ಬಂದ ದರ್ಶನ್​ ಅವರನ್ನು ನೋಡಲು ಅಪಾರ ಸಂಖ್ಯೆ ಅಭಿಮಾನಿಗಳು ಜಮಾಯಿಸಿದ್ದರು. ಸ್ವತಃ ದರ್ಶನ್​ ಅವರೇ ಕಾರು ಚಲಾಯಿಸಿಕೊಂಡು ಬಂದಿದ್ದರು. ಅವರು ಕಾರು ಇಳಿಯುತ್ತಿದ್ದಂತಯೇ ಅಭಿಮಾನಿಗಳು ಜೈಕಾರ ಕೂಗಿದರು. ಪೊಲೀಸ್​ ಠಾಣೆಯಿಂದ ವಾಪಸ್​ ಹೊರಡುವಾಗ ದರ್ಶನ್​ ಅವರು ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಇತ್ತೀಚೆಗೆ ಹುಲಿ ಉಗುರು ಹೊಂದಿದ ಆರೋಪದಲ್ಲೂ ದರ್ಶನ್​ ಅವರಿಗೆ ಸಂಕಷ್ಟ ಎದುರಾಗಿತ್ತು. ಹುಲಿ ಉಗುರಿನ ಲಾಕೆಟ್​ ಧರಿಸಿ ಕಾಣಿಸಿಕೊಂಡಿದ್ದ ಅವರ ಹಳೆಯ ಫೋಟೋ ವೈರಲ್​ ಆಗಿತ್ತು. ಆ ಬಳಿಕ ಅವರ ವಿರುದ್ಧ ಕೇಸ್​ ದಾಖಲಿಸಲಾಗಿತ್ತು. ಅರಣ್ಯಾಧಿಕಾರಿಗಳು ದರ್ಶನ್​ ನಿವಾಸಕ್ಕೆ ತೆರಳಿ ತಪಾಸಣೆ ನಡೆಸಿದ್ದರು. ಆ ಪ್ರಕರಣ ತಣ್ಣಗಾಯಿತು ಎನ್ನುವಾಗಲೇ ನಾಯಿ ದಾಳಿ ಘಟನೆ ನಡೆಯಿತು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 1:28 pm, Wed, 15 November 23

Follow Us
Jagadisha B
Jagadisha B

ಜಗದೀಶ್​ ಬಸವರಾಜು ಟಿವಿ9 ಕನ್ನಡದ ವರದಿಗಾರರಲ್ಲಿ ಒಬ್ಬರು. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ