AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Darshan: ಮಹಿಳೆ ಮೇಲೆ ನಾಯಿ ದಾಳಿ ಪ್ರಕರಣ​; ಪೊಲೀಸ್​ ಠಾಣೆಗೆ ಬಂದು ವಿಚಾರಣೆಗೆ ಹಾಜರಾದ ದರ್ಶನ್​

ಅಮಿತಾ ಜಿಂದಾಲ್​ ಎಂಬ ಮಹಿಳೆಗೆ ನಟ ದರ್ಶನ್​ ಮನೆಯ ನಾಯಿ ಕಚ್ಚಿದ ಬಳಿಕ ಐಪಿಸಿ ಸೆಕ್ಷನ್​ 289ರ ಅಡಿಯಲ್ಲಿ ಕೇಸ್​ ದಾಖಲಾಗಿತ್ತು. ಎ2 ಆಗಿರುವ ದರ್ಶನ್​ ಅವರು ಇಂದು (ನವೆಂಬರ್​ 15) ರಾಜರಾಜೇಶ್ವರಿ ನಗರದ ಪೊಲೀಸ್​ ಠಾಣೆಗೆ ಬಂದು ವಿಚಾರಣೆಯಲ್ಲಿ ಭಾಗಿ ಆಗಿದ್ದಾರೆ. ಅವರ ಹೇಳಿಕೆಯನ್ನು ಪೊಲೀಸರು ದಾಖಲಿಸಿಕೊಳ್ಳುತ್ತಿದ್ದಾರೆ.

Darshan: ಮಹಿಳೆ ಮೇಲೆ ನಾಯಿ ದಾಳಿ ಪ್ರಕರಣ​; ಪೊಲೀಸ್​ ಠಾಣೆಗೆ ಬಂದು ವಿಚಾರಣೆಗೆ ಹಾಜರಾದ ದರ್ಶನ್​
ಪೊಲೀಸ್​ ಠಾಣೆಗೆ ಬಂದ ದರ್ಶನ್​
Jagadisha B
| Edited By: |

Updated on:Nov 15, 2023 | 1:47 PM

Share

ಖ್ಯಾತ ನಟ ದರ್ಶನ್​ ಅವರು ಆರ್​ಆರ್​ ನಗರ ಪೊಲೀಸ್ ಠಾಣೆಗೆ (RR Nagar Police Station) ಬಂದಿದ್ದಾರೆ. ಕೆಲವೇ ದಿನಗಳ ಹಿಂದೆ ಮಹಿಳೆ ಮೇಲೆ ನಾಯಿ ದಾಳಿ (Dog Attack Case) ಮಾಡಿದ ಪ್ರಕರಣದಲ್ಲಿ ದರ್ಶನ್​ ವಿರುದ್ಧವೂ ದೂರು ದಾಖಲಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ದರ್ಶನ್​ಗೆ ಪೊಲೀಸರು ನೋಟಿಸ್​ ನೀಡಿದ್ದರು. ಪ್ರಕರಣದಲ್ಲಿ ಎ2 ಆಗಿರುವ ಅವರು ಇಂದು (ನವೆಂಬರ್​ 15) ಪೊಲೀಸ್​ ಠಾಣೆಗೆ ಬಂದು ವಿಚಾರಣೆಯಲ್ಲಿ ಭಾಗಿ ಆಗಿದ್ದಾರೆ. ಅವರ ಹೇಳಿಕೆಯನ್ನು ಪೊಲೀಸರು ದಾಖಲಿಸಿಕೊಳ್ಳುತ್ತಿದ್ದಾರೆ. ಅಮಿತಾ ಜಿಂದಾಲ್​ ಎಂಬುವವರಿಗೆ ದರ್ಶನ್​ (Darshan) ಮನೆಯ ನಾಯಿ ಕಚ್ಚಿದ ಬಳಿಕ ಐಪಿಸಿ ಸೆಕ್ಷನ್​ 289ರ ಅಡಿಯಲ್ಲಿ ಕೇಸ್​ ದಾಖಲಾಗಿತ್ತು. ಆ ಪ್ರಕರಣದ ವಿಚಾರಣೆ ಚುರುಕುಗೊಂಡಿದೆ.

ತನಿಖಾಧಿಕಾರಿ ಇನ್ಸ್​​ಪೆಕ್ಟರ್ ಶಿವಕುಮಾರ್ ಅವರ ಮುಂದೆ ದರ್ಶನ್​ ವಿಚಾರಣೆಗೆ ಹಾಜರಾಗಿದ್ದಾರೆ. ಕೇವಲ 15 ನಿಮಿಷ ಮಾತ್ರ ಅವರು ಪೊಲೀಸ್​ ಠಾಣೆಯಲ್ಲಿ ಇದ್ದರು. ಅಷ್ಟರಲ್ಲೇ ಹೇಳಿಕೆ ನೀಡಿ ಅವರು ವಾಪಸ್​ ತೆರಳಿದ್ದಾರೆ. ಮಹಿಳೆ ದೂರು ನೀಡಿದ ಬಳಿಕ ಪೊಲೀಸರು ಇತ್ತೀಚೆಗೆ ಸ್ಥಳಕ್ಕೆ ಬಂದು ಮಹಜರು ಮಾಡಿದ್ದರು. ಈ ಮೊದಲೇ ದರ್ಶನ್​ ಅವರಿಗೆ ನೋಟಿಸ್​ ನೀಡಲಾಗಿತ್ತು. ಕಡೆಗೂ ಅವರು ಇಂದು ವಿಚಾರಣೆಗೆ ಬಂದಿದ್ದಾರೆ.

ಇದನ್ನೂ ಓದಿ: ಮಹಿಳೆ ಮೇಲೆ ದರ್ಶನ್​ ಮನೆಯ ನಾಯಿ ದಾಳಿ ಮಾಡಿದ್ದು ಹೇಗೆ? ಸ್ಥಳ ಮಹಜರು ವಿಡಿಯೋ ಇಲ್ಲಿದೆ..

ಆರ್​ಆರ್​ ನಗರ ಪೊಲೀಸ್​ ಠಾಣೆಗೆ ಬಂದ ದರ್ಶನ್​ ಅವರನ್ನು ನೋಡಲು ಅಪಾರ ಸಂಖ್ಯೆ ಅಭಿಮಾನಿಗಳು ಜಮಾಯಿಸಿದ್ದರು. ಸ್ವತಃ ದರ್ಶನ್​ ಅವರೇ ಕಾರು ಚಲಾಯಿಸಿಕೊಂಡು ಬಂದಿದ್ದರು. ಅವರು ಕಾರು ಇಳಿಯುತ್ತಿದ್ದಂತಯೇ ಅಭಿಮಾನಿಗಳು ಜೈಕಾರ ಕೂಗಿದರು. ಪೊಲೀಸ್​ ಠಾಣೆಯಿಂದ ವಾಪಸ್​ ಹೊರಡುವಾಗ ದರ್ಶನ್​ ಅವರು ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಇತ್ತೀಚೆಗೆ ಹುಲಿ ಉಗುರು ಹೊಂದಿದ ಆರೋಪದಲ್ಲೂ ದರ್ಶನ್​ ಅವರಿಗೆ ಸಂಕಷ್ಟ ಎದುರಾಗಿತ್ತು. ಹುಲಿ ಉಗುರಿನ ಲಾಕೆಟ್​ ಧರಿಸಿ ಕಾಣಿಸಿಕೊಂಡಿದ್ದ ಅವರ ಹಳೆಯ ಫೋಟೋ ವೈರಲ್​ ಆಗಿತ್ತು. ಆ ಬಳಿಕ ಅವರ ವಿರುದ್ಧ ಕೇಸ್​ ದಾಖಲಿಸಲಾಗಿತ್ತು. ಅರಣ್ಯಾಧಿಕಾರಿಗಳು ದರ್ಶನ್​ ನಿವಾಸಕ್ಕೆ ತೆರಳಿ ತಪಾಸಣೆ ನಡೆಸಿದ್ದರು. ಆ ಪ್ರಕರಣ ತಣ್ಣಗಾಯಿತು ಎನ್ನುವಾಗಲೇ ನಾಯಿ ದಾಳಿ ಘಟನೆ ನಡೆಯಿತು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 1:28 pm, Wed, 15 November 23

ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ