AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ಪತ್ನಿಗೆ ಅಸಭ್ಯ ಕಮೆಂಟ್ ಪ್ರಕರಣ: 2 ನೋಟಿಸ್​​ಗೂ ಉತ್ತರ ನೀಡದ ವಿಜಯಲಕ್ಷ್ಮಿ

ವಿಜಯಲಕ್ಷ್ಮಿ ದರ್ಶನ್ ಅವರಿಗೆ ಅಶ್ಲೀಲ, ಅಸಭ್ಯ ಕಮೆಂಟ್ ಬಂದಿದೆ ಎಂದು ದೂರು ನೀಡಲಾಗಿತ್ತು. ಆದರೆ ಅದಕ್ಕೆ ಸಂಬಂಧಿಸಿದ ನೋಟಿಸ್​​ಗಳಿಗೆ ವಿಜಯಲಕ್ಷ್ಮಿ ಅವರು ಯಾವುದೇ ಉತ್ತರ ನೀಡುತ್ತಿಲ್ಲ. ಈಗಾಗಲೇ ಎರಡು ನೋಟಿಸ್ ಕಳಿಸಿರುವ ಪೊಲೀಸರು ಮೂರನೇ ನೋಟಿಸ್ ಕಳಿಸಲು ಮುಂದಾಗಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ..

ದರ್ಶನ್ ಪತ್ನಿಗೆ ಅಸಭ್ಯ ಕಮೆಂಟ್ ಪ್ರಕರಣ: 2 ನೋಟಿಸ್​​ಗೂ ಉತ್ತರ ನೀಡದ ವಿಜಯಲಕ್ಷ್ಮಿ
Darshan, Vijayalakshmi
ಶಿವಪ್ರಸಾದ್​ ಬಿ.
| Edited By: |

Updated on: Sep 14, 2025 | 11:19 AM

Share

ನಟ ದರ್ಶನ್ (Darshan) ಅವರ ಪತ್ನಿ ವಿಜಯಲಕ್ಷ್ಮಿಗೆ ಕೆಡಿಗೇಡಿಗಳು ಅಸಭ್ಯ ಕಮೆಂಟ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಆರಂಭ ಆಗಿತ್ತು. ಅಶ್ಲೀಲ ಕಮೆಂಟ್​​ಗಳಿಗೆ ಸಂಬಂಧಿಸಿದಂತೆ ವಿವರಣೆ ನೀಡುವಂತೆ ವಿಜಯಲಕ್ಷ್ಮಿ ಅವರಿಗೆ ಪೊಲೀಸರು ಎರಡು ಬಾರಿ ನೋಟಿಸ್ ಕಳಿಸಿದ್ದಾರೆ. ಆದರೆ ಈ ಎರಡೂ ನೋಟಿಸ್​​ಗಳಿಗೆ ಅವರು ಉತ್ತರ ನೀಡಿಲ್ಲ! ಘಟನೆ ಬಗ್ಗೆ ಹೇಳಿಕೆ ದಾಖಲಿಸಿಕೊಳ್ಳಲು ಚೆನ್ನಮ್ಮನಕರೆ ಅಚ್ಚುಕಟ್ಟು ಪೊಲೀಸರಿಂದ ನೋಟಿಸ್ ಕಳಿಸಲಾಗಿದೆ. ಪೊಲೀಸರ ನೋಟಿಸ್​​ಗಳಿಗೆ ವಿಜಯಲಕ್ಷ್ಮಿ (Vijayalakshmi Darshan) ಅವರು ಕ್ಯಾರೇ ಎನ್ನುತ್ತಿಲ್ಲ.

ವಿಜಯಲಕ್ಷ್ಮಿ ದರ್ಶನ್ ಬಗ್ಗೆ ಕೆಟ್ಟ ಕಮೆಂಟ್​​ಗಳು ಬಂದಿವೆ ಎಂದು ಮಹಿಳಾ ಆಯೋಗಕ್ಕೆ ದೂರು ನೀಡಲಾಗಿತ್ತು. ಹಾಗಾಗಿ ಮಹಿಳಾ ಆಯೋಗದಿಂದ ಸುಮೋಟೊ ಪ್ರಕರಣ ದಾಖಲಿಸುವಂತೆ ಸೂಚನೆ ನೀಡಲಾಗಿತ್ತು. ಎರಡು ನೋಟಿಸ್​​ಗಳಿಗೂ ವಿಜಯಲಕ್ಷ್ಮಿ ಅವರಿಂದ ಯಾವುದೇ ಉತ್ತರ ಬಾರದ ಹಿನ್ನೆಲೆಯಲ್ಲಿ ಈಗ ಮೂರನೇ ನೋಟಿಸ್ ನೀಡಲು ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರ ಸಿದ್ಧತೆ ಮಾಡಿಕೊಂಡಿದ್ದಾರೆ.

ಒಂದು ವೇಳೆ, ಮೂರನೇ ನೋಟಿಸ್​ಗೂ ಯಾವುದೇ ಪ್ರತಿಕ್ರಿಯೆ ಬರಲಿಲ್ಲ ಎಂದಾದರೆ ಪೊಲೀಸರು ಈ ಪ್ರಕರಣವನ್ನು ಮುಕ್ತಾಯ ಮಾಡಲಿದ್ದಾರೆ. ನ್ಯಾಯಾಲಯಕ್ಕೆ ಸಿ ರಿಪೋರ್ಟ್ ಸಲ್ಲಿಕೆ ಮಾಡಲಿದ್ದಾರೆ. ಮುಂದಿನ ತನಿಖೆಗೆ ಯಾವುದೇ ಮಾಹಿತಿ ಅಥವಾ ಲೀಡ್ ಸಿಗುತ್ತಿಲ್ಲ ಎಂದು ಸಿ ರಿಪೋರ್ಟ್ ಸಲ್ಲಿಕೆ ಮಾಡಲಾಗುತ್ತದೆ. ಈಗಲಾದರೂ ವಿಜಯಲಕ್ಷ್ಮಿ ಅವರು ನೋಟಿಸ್​​ಗೆ ಪ್ರತಿಕ್ರಿಯಿಸುತ್ತಾರೋ ಇಲ್ಲವೋ ಎಂಬುದನ್ನು ಕಾದು ನೋಡಬೇಕು.

ಕಳೆದ ಎರಡು ವರ್ಷಗಳ ಹಿಂದಿನ ಕಾಮೆಂಟ್​​ಗೆ ಇತ್ತೀಚೆಗೆ ದೂರು ನೀಡಲಾಯಿತು. 6 ಟ್ವಿಟರ್ ಖಾತೆಗಳು ಕೂಡ ಎರಡು ವರ್ಷಗಳ ಹಿಂದೆಯೇ ಡಿಲೀಟ್ ಆಗಿವೆ. ಕಳೆದ ಎರಡು ವರ್ಷಗಳಿಂದ ಆರು ಟ್ಟಿಟರ್ ಅಕೌಂಟ್​​ಗಳಿಂದ ಯಾವುದೇ ಮೆಸೇಜ್​​ಗಳು ವಿನಿಮಯ ಆಗಿಲ್ಲ. ಈ ಎಲ್ಲ ಮಾಹಿತಿಯನ್ನು ಕಲೆ ಹಾಕಿರುವ ಸಿಕೆ ಅಚ್ಚುಕಟ್ಟು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ: ಜೈಲು ಚೆಕ್ ಪೋಸ್ಟ್ ಬಳಿ ವಿಜಯಲಕ್ಷ್ಮಿ ದರ್ಶನ್​ ಕಾರು ತಡೆದ ಜೈಲು ಸಿಬ್ಬಂದಿ

ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬರಾಗಿದ್ದಾರೆ. ಅವರು ಅರೆಸ್ಟ್ ಆದಾಗಿನಿಂದ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆ ಆಗುತ್ತಿದೆ. ದರ್ಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ನೆಟ್ಟಿಗರು ಪರ-ವಿರೋಧ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಈ ಭರದಲ್ಲಿ ಕೆಲವರು ಅಸಭ್ಯ, ಅಶ್ಲೀಲ ಪದ ಬಳಕೆ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮೇಕೆದಾಟು ಯೋಜನೆ ವಿರುದ್ಧ ರಾಜ್ಯಸಭೆಯಲ್ಲಿ ಡಿಎಂಕೆ ನಿಲುವಳಿ ಮಂಡನೆ
ಮೇಕೆದಾಟು ಯೋಜನೆ ವಿರುದ್ಧ ರಾಜ್ಯಸಭೆಯಲ್ಲಿ ಡಿಎಂಕೆ ನಿಲುವಳಿ ಮಂಡನೆ
ಮಳೆ ಅಬ್ಬರಕ್ಕೆ ಭೋರ್ಗರೆಯುತ್ತಿರುವ ಹೊಗೇನಕಲ್ ಜಲಪಾತ
ಮಳೆ ಅಬ್ಬರಕ್ಕೆ ಭೋರ್ಗರೆಯುತ್ತಿರುವ ಹೊಗೇನಕಲ್ ಜಲಪಾತ
ಯಾದಗಿರಿ: ರಾಸಾಯನಿಕ ಸೋರಿಕೆ ದುರಂತ, ಮೂವರು ಕಾರ್ಮಿಕರ ದುರ್ಮರಣ
ಯಾದಗಿರಿ: ರಾಸಾಯನಿಕ ಸೋರಿಕೆ ದುರಂತ, ಮೂವರು ಕಾರ್ಮಿಕರ ದುರ್ಮರಣ
ಉದಯನಿಧಿ ಬಿಡುಗಡೆ; ವಿಜಯ್​​ನ ಡಮ್ಮಿ ಸಿಎಂ ಎಂದ ಸ್ಟಾಲಿನ್ ಪುತ್ರ
ಉದಯನಿಧಿ ಬಿಡುಗಡೆ; ವಿಜಯ್​​ನ ಡಮ್ಮಿ ಸಿಎಂ ಎಂದ ಸ್ಟಾಲಿನ್ ಪುತ್ರ
ಕೆಎಸ್​ಆರ್​ಟಿಸಿ ಬಸ್​ ತಡೆದು ಸುಬ್ಬಾರೆಡ್ಡಿ ಬೆಂಬಲಿಗರ ಆಕ್ರೋಶ!
ಕೆಎಸ್​ಆರ್​ಟಿಸಿ ಬಸ್​ ತಡೆದು ಸುಬ್ಬಾರೆಡ್ಡಿ ಬೆಂಬಲಿಗರ ಆಕ್ರೋಶ!
ಸುಬ್ಬಾರೆಡ್ಡಿ ಬೆಂಬಲಿಸಿ ಬಾಗೇಪಲ್ಲಿ, ಗುಡಿಬಂಡೆ, ಚೇಳೂರು ಸ್ತಬ್ಧ
ಸುಬ್ಬಾರೆಡ್ಡಿ ಬೆಂಬಲಿಸಿ ಬಾಗೇಪಲ್ಲಿ, ಗುಡಿಬಂಡೆ, ಚೇಳೂರು ಸ್ತಬ್ಧ
ಕೊಪ್ಪಳ ಜಿಲ್ಲಾ ಮಹಿಳಾ ಅಧ್ಯಕ್ಷೆ ಜ್ಯೋತಿ ಗೊಂಡಬಾಳ್ ರಾಜೀನಾಮೆ!
ಕೊಪ್ಪಳ ಜಿಲ್ಲಾ ಮಹಿಳಾ ಅಧ್ಯಕ್ಷೆ ಜ್ಯೋತಿ ಗೊಂಡಬಾಳ್ ರಾಜೀನಾಮೆ!
ಮೇಷ ರಾಶಿಯ ಅಶ್ವಿನಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಮೇಷ ರಾಶಿಯ ಅಶ್ವಿನಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಯಾರಿಗೂ ಅನುಮಾನ ಬಾರದಂತೆ ಐಫೋನ್ ಕದ್ದ ಯುವತಿ! ಕಳ್ಳತನದ ವಿಡಿಯೋ ವೈರಲ್
ಯಾರಿಗೂ ಅನುಮಾನ ಬಾರದಂತೆ ಐಫೋನ್ ಕದ್ದ ಯುವತಿ! ಕಳ್ಳತನದ ವಿಡಿಯೋ ವೈರಲ್
ಮಳೆಯಾರ್ಭಟಕ್ಕೆ ಕುಸಿದ ಖಾಸಗಿ ಶಾಲೆಯ ಗೋಡೆ: ತಪ್ಪಿದ ಭಾರೀ ಅನಾಹುತ
ಮಳೆಯಾರ್ಭಟಕ್ಕೆ ಕುಸಿದ ಖಾಸಗಿ ಶಾಲೆಯ ಗೋಡೆ: ತಪ್ಪಿದ ಭಾರೀ ಅನಾಹುತ