AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೇಣುಕಾ ಸ್ವಾಮಿ ಕುಟುಂಬಕ್ಕೆ ಸಂತಾಪ ಸೂಚಿಸಿದ ದರ್ಶನ್​ ಪತ್ನಿ ವಿಜಯಲಕ್ಷ್ಮಿ

ಭೀಕರವಾಗಿ ಹತ್ಯೆಗೆ ಒಳಗಾದ ಚಿತ್ರದುರ್ಗದ ರೇಣುಕಾ ಸ್ವಾಮಿ ಕುರಿತು ಇದೇ ಮೊದಲ ಬಾರಿಗೆ ವಿಜಯಲಕ್ಷ್ಮಿ ಅವರು ಪ್ರತಿಕ್ರಿಯಿಸಿದ್ದಾರೆ. ಮೃತನ ಕುಟುಂಬದವರಿಗೆ ಅವರು ಸಂತಾಪ ಸೂಚಿಸಿದ್ದಾರೆ, ಅಲ್ಲದೇ, ದರ್ಶನ್​ ಹಾಗೂ ಈ ಕೇಸ್​ಗೆ ಸಂಬಂಧಿಸಿದಂತೆ ತಪ್ಪು ಮಾಹಿತಿಗಳನ್ನು ಹರಡದಂತೆ ಅವರು ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ. ಆ ಕುರಿತು ಇಲ್ಲಿದೆ ಹೆಚ್ಚಿನ ಮಾಹಿತಿ..

ರೇಣುಕಾ ಸ್ವಾಮಿ ಕುಟುಂಬಕ್ಕೆ ಸಂತಾಪ ಸೂಚಿಸಿದ ದರ್ಶನ್​ ಪತ್ನಿ ವಿಜಯಲಕ್ಷ್ಮಿ
ದರ್ಶನ್​, ವಿಜಯಲಕ್ಷ್ಮಿ, ರೇಣುಕಾ ಸ್ವಾಮಿ
ಮದನ್​ ಕುಮಾರ್​
|

Updated on: Jun 19, 2024 | 7:41 PM

Share

ನಟ ದರ್ಶನ್​ (Darshan) ಈಗ ಕಾನೂನಿನ ಸಂಕಷ್ಟಕ್ಕೆ ಸಿಲುಕಿದ್ದಾರೆ. ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದಲ್ಲಿ ಎ2 ಆರೋಪಿಗಾಗಿ ಅವರು ಕಳೆದ ಕೆಲವು ದಿನಗಳಿಂದ ಪೊಲೀಸರ ವಿಚಾರಣೆ ಎದುರಿಸುತ್ತಿದ್ದಾರೆ. ಈ ಪ್ರಕರಣದ ಬಗ್ಗೆ ಇದೇ ಮೊದಲ ಬಾರಿಗೆ ದರ್ಶನ್​ ಪತ್ನಿ ವಿಜಯಲಕ್ಷ್ಮಿ ಅವರು ಮೌನ ಮುರಿದಿದ್ದಾರೆ. ಅಲ್ಲದೇ, ಹತ್ಯೆ ಆಗಿರುವ ಚಿತ್ರದುರ್ಗದ ರೇಣುಕಾ ಸ್ವಾಮಿ ಕುಟುಂಬಕ್ಕೆ ವಿಜಯಲಕ್ಷ್ಮಿ (Vijayalakshmi Darshan) ಅವರು ಸಂತಾಪ ಸೂಚಿಸಿದ್ದಾರೆ. ಈ ಕುರಿತು ಅವರು ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಮಾಡಿದ್ದಾರೆ.

‘ಎಲ್ಲಕ್ಕಿಂತ ಮೊದಲು, ಮೃತ ಶ್ರೀ ರೇಣುಕಾ ಸ್ವಾಮಿ ಕುಟುಂಬದವರಿಗೆ ನನ್ನ ಸಂತಾಪಗಳು’ ಎಂದು ವಿಜಯಲಕ್ಷ್ಮಿ ಅವರು ಬರೆದುಕೊಂಡಿದ್ದಾರೆ. ಅಲ್ಲದೇ, ಕೆಲವು ಪ್ರಮುಖ ವಿಚಾರಗಳನ್ನು ಅವರು ತಿಳಿಸಿದ್ದಾರೆ. ದರ್ಶನ್​ ಹಾಗೂ ಅವರ ಕುಟುಂಬದವರಿಗೆ ಸಂಬಂಧಿಸಿದಂತೆ ಯಾವುದೇ ರೀತಿಯ ಸುಳ್ಳು ಸುದ್ದಿ ಹರಡದಂತೆ ಅವರು ಕೋರ್ಟ್​ನಿಂದ ತಡೆಯಾಜ್ಞೆ ತಂದಿದ್ದಾರೆ. ಆ ಬಗ್ಗೆಯೂ ವಿಜಯಲಕ್ಷ್ಮಿ ಅವರು ಸೋಶಿಯಲ್​ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಎಸ್​ಪಿಪಿ ಬದಲಾವಣೆ ಇಲ್ಲ: ದರ್ಶನ್​ ಪ್ರಕರಣದ ಬಗ್ಗೆ ಸಿಎಂ ಸಿದ್ದರಾಮಯ್ಯ ಖಡಕ್ ಮಾತು

‘ಅಧಿಕಾರಿಗಳು ನೀಡುವ ಅಧಿಕೃತ ಮಾಹಿತಿಯನ್ನು ಮಾತ್ರ ಪ್ರಸಾರ ಮಾಡಬೇಕು ಎಂದು ನಾನು ಎಲ್ಲರನ್ನೂ ಒತ್ತಾಯಿಸುತ್ತೇನೆ. ಚಾಮುಂಡೇಶ್ವರಿ ತಾಯಿ ಬಗ್ಗೆ ಮತ್ತು ನಮ್ಮ ಕಾನೂನಿನ ಬಗ್ಗೆ ನನಗೆ ಸಂಪೂರ್ಣ ನಂಬಿಕೆ ಇದೆ. ನ್ಯಾಯಕ್ಕೆ ಜಯ ಸಿಗಲಿ. ಸತ್ಯಮೇವ ಜಯತೆ’ ಎಂದು ವಿಜಯಲಕ್ಷ್ಮಿ ಅವರು ಪೋಸ್ಟ್​ ಮಾಡಿದ್ದಾರೆ. ಇದರ ಜೊತೆಗೆ ನ್ಯಾಯಾಲಯದ ಆದೇಶಪ್ರತಿಯನ್ನು ಅವರು ಶೇರ್​ ಮಾಡಿಕೊಂಡಿದ್ದಾರೆ.

ಇತ್ತೀಚೆಗೆ ದರ್ಶನ್​ ಪುತ್ರ ವಿನೀಶ್​ ಕೂಡ ಇನ್​ಸ್ಟಾಗ್ರಾಮ್​ ಸ್ಟೋರಿ ಮೂಲಕ ಮೌನ ಮುರಿದಿದ್ದರು. ಈ ಕಷ್ಟದ ಸಂದರ್ಭದಲ್ಲಿ ಟ್ರೋಲ್​ ಮಾಡುವವರನ್ನು ಅವರು ಖಂಡಿಸಿದ್ದರು. ಇಂದು (ಜೂನ್​ 19) ವಿಜಯಲಕ್ಷ್ಮಿ ಅವರು ಅನ್ನಪೂರ್ಣೇಶ್ವರಿ ನಗರ ಪೊಲೀಸ್​ ಠಾಣೆಗೆ ಭೇಟಿ ನೀಡಿದ್ದಾರೆ. ಪ್ರಕರಣಕ್ಕೆ ಕುರಿತಂತೆ ಪೊಲೀಸರು ಕೇಳಿದ ಪ್ರಶ್ನೆಗಳಿಗೆ ಅವರು ಉತ್ತರಿಸಿದ್ದಾರೆ. ಪೊಲೀಸರು ಈಗಾಗಲೇ ಅನೇಕ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. ದರ್ಶನ್​, ಪವಿತ್ರಾ ಗೌಡ ಸೇರಿ ಹಲವು ಆರೋಪಿಗಳು ಪೊಲೀಸ್​ ಕಸ್ಟಡಿಯಲ್ಲಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ