ದರ್ಶನ್ ಜೈಲಿನಿಂದ ಹೊರ ಬರೋದು ಯಾವಾಗ?; ಕೌಡೇಪಿರ ಲಾಲಸಾಬ ಭವಿಷ್ಯ

ರೇಣುಕಾ ಸ್ವಾಮಿ ಕೊಲೆ ಕೇಸ್​​ನಲ್ಲಿ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ದರ್ಶನ್ ಅವರನ್ನು ಬಂಧಿಸಿ ಹಲವು ದಿನಗಳಕಾಲ ಪೊಲೀಸರು ವಿಚಾರಣೆ ನಡೆಸಿದ್ದಾರೆ. ದರ್ಶನ್ ಜೈಲಿನಿಂದ ಹೊರಕ್ಕೆ ಬರೋದು ಯಾವಾಗ ಎನ್ನುವ ಪ್ರಶ್ನೆ ಅಭಿಮಾನಿಗಳನ್ನು ಕಾಡಿದೆ. ಇದಕ್ಕೆ ಕೊನೆಗೂ ಉತ್ತರ ಸಿಕ್ಕಿದೆ.

ದರ್ಶನ್ ಜೈಲಿನಿಂದ ಹೊರ ಬರೋದು ಯಾವಾಗ?; ಕೌಡೇಪಿರ ಲಾಲಸಾಬ ಭವಿಷ್ಯ
ದರ್ಶನ್
Follow us
| Updated By: ರಾಜೇಶ್ ದುಗ್ಗುಮನೆ

Updated on: Jul 25, 2024 | 11:46 AM

ನಟ ದರ್ಶನ್ ಅವರು ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಜೈಲಿನಲ್ಲಿ ಇದ್ದಾರೆ. ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿ ಅವರನ್ನು ಇಡಲಾಗಿದೆ. ದರ್ಶನ್ ಅವರು ಎ2 ಆರೋಪಿ ಆದರೆ, ಪವಿತ್ರಾ ಗೌಡ ಅವರು ಎ1 ಆರೋಪಿ ಎನಿಸಿಕೊಂಡಿದ್ದಾರೆ. ದರ್ಶನ್ ಅವರು ಯಾವಾಗ ಹೊರ ಬರುತ್ತಾರೆ ಎನ್ನುವ ಪ್ರಶ್ನೆ ಅಭಿಮಾನಿಗಳನ್ನು ಬಹುವಾಗಿ ಕಾಡಿತ್ತು. ಇದಕ್ಕೆ ಕೌಡೇಪಿರ ಲಾಲಸಾಬ ದೇವರು ಭವಿಷ್ಯ ನುಡಿದಿದ್ದಾರೆ. ಮೂರೇ ತಿಂಗಳಲ್ಲಿ ದರ್ಶನ್ ಹೊರಗೆ ಬರಲಿದ್ದಾರೆ ಎಂದು ದೇವರಿಂದ ಭವಿಷ್ಯವಾಣಿ ಸಿಕ್ಕಿದೆ.

ದರ್ಶನ್ ಬಂಧನವಾಗಿ ಎರಡು ತಿಂಗಳು ಆಗುತ್ತಾ ಬಂದಿದೆ. ಅವರಿಗೆ ಜೈಲುವಾಸ ನರಕಯಾತನೆ ತಂದಿದೆ. ಜೈಲೂಟ ಹೊಂದುತ್ತಿಲ್ಲ. ಶತಾಯ ಗತಾಯ ಅವರು ಹೊರ ಬರಲು ಪ್ರಯತ್ನಿಸುತ್ತಿದ್ದಾರೆ. ಆದರೆ. ಅದು ಸಾಧ್ಯವಾಗುತ್ತಿಲ್ಲ. ಚಾರ್ಜ್​ಶೀಟ್ ಸಲ್ಲಿಕೆ ಮಾಡದೆ ಜಾಮೀನಿಗೆ ಅರ್ಜಿ ಹಾಕೋಕೆ ಸಾಧ್ಯವಿಲ್ಲ. ಹೀಗಾಗಿ, ದರ್ಶನ್ ಅವರಿಗೆ ಯಾವಾಗ ಹೊರಗೆ ಬರುತ್ತೇನೆ ಎಂದು ಅತಿಯಾಗಿ ಅನಿಸುತ್ತಿದೆ. ಅಭಿಮಾನಿಗಳಿಗೂ ತಮ್ಮ ನೆಚ್ಚಿನ ನಟ ಯಾವಾಗ ಹೊರಕ್ಕೆ ಬರೋದು ಎನ್ನುವ ಪ್ರಶ್ನೆ ಕಾಡಿದೆ. ಇದಕ್ಕೆ ದೇವರಿಂದ ಉತ್ತರ ಸಿಕ್ಕಿದೆ.

ಕೊಪ್ಪಳ ಜಿಲ್ಲೆಯ ಕನಕಗಿರಿ ಪಟ್ಟಣದ 10ನೇ ವಾರ್ಡಿನಲ್ಲಿ ಇರಿಸಲಾಗಿದ್ದ ಕೌಡೇಪಿರ ಲಾಲಸಾಬ ಅವರು ಈ ಭವಿಷ್ಯ ನುಡಿದಿದ್ದಾರೆ. ದರ್ಶನ್​ ಅಭಿಮಾನಿಗಳು ದೇವರ ಎದುರು ಪ್ರಶ್ನೆ ಇಟ್ಟಿದ್ದರು. ‘ದರ್ಶನ್ ಬಿಡುಗಡೆ ಯಾವಾಗ’ ಎನ್ನುವ ಪ್ರಶ್ನೆ ಕೇಳಿದ್ದರು. ಇದಕ್ಕೆ ಈ ದೇವರಿಂದ ಉತ್ತರ ಸಿಕ್ಕಿದೆ. ‘ಮೂರೇ ತಿಂಗಳಲ್ಲಿ ದರ್ಶನ್ ಹೊರಕ್ಕೆ ಬರುತ್ತಾರೆ’ ಎಂದು ದೇವರು ಭವಿಷ್ಯ ನುಡಿದಿದ್ದಾರೆ.

ಈ ಹಿಂದೆ  2019ರಲ್ಲಿ ಅಕ್ರಮ ಹಣವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್​ನ ಹಿರಿಯ ನಾಯಕ ಡಿಕೆ ಶಿವಕುಮಾರ್ ಅರೆಸ್ಟ್ ಆಗಿದ್ದರು. ಆ ಸಂದರ್ಭದಲ್ಲೂ ಕೌಡೇಪಿರ ಲಾಲಸಾಬ ದೇವರು ಭವಿಷ್ಯ ನುಡಿದಿತ್ತು.  ಅದು ನಿಜ ಆಗಿತ್ತು. ಹೀಗಾಗಿ, ದರ್ಶನ್ ಫ್ಯಾನ್ಸ್ ಈಗ ಖುಷಿಯಾಗಿದ್ದಾರೆ.

ಇದನ್ನೂ ಓದಿ: Darshan Thoogudeepa: ಪಶ್ಚಾತ್ತಾಪದ ಬಳಿಕವೂ ಬದಲಾಗಿಲ್ಲ ದರ್ಶನ್: ಜೈಲಧಿಕಾರಿ

ಮೊಹರಂ ಸಂದರ್ಭದಲ್ಲಿ ದೇವರನ್ನು ಕೂರಿಸೋ ಪದ್ಧತಿ ಮುಸ್ಲಿಂ ಧರ್ಮದಲ್ಲಿ ಇದೆ. ಅದೇ ರೀತಿ ಕೊಪ್ಪಳದಲ್ಲಿ ಕೌಡೇಪಿರ ಲಾಲಸಾಬ ದೇವರು ದರ್ಶನ್ ಬಗ್ಗೆ ಉತ್ತರಿಸಿದ್ದಾರೆ. ಆದರೆ, ಅಲಾಹಿ ದೇವರು ದರ್ಶನ್ ಅಭಿಮಾನಿಗಳ ಪ್ರಶ್ನೆಗೆ ಉತ್ತರಿಸಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಹುಬ್ಬಳ್ಳಿ ಈದ್ಗಾ ಮೈದಾನ ರಾಮಾವತಾರ ಗಣೇಶ ಮೆರವಣಿಗೆಯ ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಮೈದಾನ ರಾಮಾವತಾರ ಗಣೇಶ ಮೆರವಣಿಗೆಯ ವಿಡಿಯೋ ನೋಡಿ
ಕೋಲಾರ: ಸಂಕಷ್ಟಹರ ಗಣಪತಿ ದೇವಾಲಯದಲ್ಲಿ 10001 ಕರಿಗಡುಬಿನಲ್ಲಿ ಅರಳಿದ ಗಣಪತಿ
ಕೋಲಾರ: ಸಂಕಷ್ಟಹರ ಗಣಪತಿ ದೇವಾಲಯದಲ್ಲಿ 10001 ಕರಿಗಡುಬಿನಲ್ಲಿ ಅರಳಿದ ಗಣಪತಿ
ಗೂಳಿ ದಾಳಿಗೆ ವೃದ್ಧನ ಹೊಟ್ಟೆಯಿಂದ ಹೊರಬಂದ ಕರುಳು; ಸಿಸಿಟಿವಿ ದೃಶ್ಯ
ಗೂಳಿ ದಾಳಿಗೆ ವೃದ್ಧನ ಹೊಟ್ಟೆಯಿಂದ ಹೊರಬಂದ ಕರುಳು; ಸಿಸಿಟಿವಿ ದೃಶ್ಯ
ಮೈಸೂರಿನಲ್ಲಿ ಗಮನ ಸೆಳೆಯುತ್ತಿವೆ ವಿಶೇಷ ಗಣಪತಿ ವಿಗ್ರಹಗಳು, ವಿಡಿಯೋ ನೋಡಿ
ಮೈಸೂರಿನಲ್ಲಿ ಗಮನ ಸೆಳೆಯುತ್ತಿವೆ ವಿಶೇಷ ಗಣಪತಿ ವಿಗ್ರಹಗಳು, ವಿಡಿಯೋ ನೋಡಿ
ಗಣೇಶ ಚತುರ್ಥಿಯ ಮಹತ್ವ, ಪೂಜೆಗಳನ್ನು ಹೇಗೆ ಮಾಡಬೇಕು? ಈ ವಿಡಿಯೋ ನೋಡಿ
ಗಣೇಶ ಚತುರ್ಥಿಯ ಮಹತ್ವ, ಪೂಜೆಗಳನ್ನು ಹೇಗೆ ಮಾಡಬೇಕು? ಈ ವಿಡಿಯೋ ನೋಡಿ
Nithya Bhavishya: ಗಣೇಶ ಚತುರ್ಥಿ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಗಣೇಶ ಚತುರ್ಥಿ ದಿನದ ರಾಶಿ ಭವಿಷ್ಯ ತಿಳಿಯಿರಿ
ರೇಣುಕಾಸ್ವಾಮಿ ಶವ ಎಸೆದ ಕಿಡಿಗೇಡಿಗಳ ಚಲನವಲನ ಸಿಸಿಟಿವಿಯಲ್ಲಿ ಸೆರೆ
ರೇಣುಕಾಸ್ವಾಮಿ ಶವ ಎಸೆದ ಕಿಡಿಗೇಡಿಗಳ ಚಲನವಲನ ಸಿಸಿಟಿವಿಯಲ್ಲಿ ಸೆರೆ
ರುದ್ರಾಕ್ಷಿ ಮಣಿಗಳಿಂದಲೇ ಸಿದ್ಧವಾಯ್ತು 20 ಅಡಿ ಎತ್ತರದ ಗಣೇಶನ ವಿಗ್ರಹ
ರುದ್ರಾಕ್ಷಿ ಮಣಿಗಳಿಂದಲೇ ಸಿದ್ಧವಾಯ್ತು 20 ಅಡಿ ಎತ್ತರದ ಗಣೇಶನ ವಿಗ್ರಹ
ಸಿನಿಮಾ ನಿರ್ದೇಶಕ ನಾಗಶೇಖರ್ ಕಾರು ಅಪಘಾತ: ಇಲ್ಲಿದೆ ವಿಡಿಯೋ
ಸಿನಿಮಾ ನಿರ್ದೇಶಕ ನಾಗಶೇಖರ್ ಕಾರು ಅಪಘಾತ: ಇಲ್ಲಿದೆ ವಿಡಿಯೋ
ಫುಟ್ಬಾಲ್​ ಲೋಕದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಕ್ರಿಸ್ಟಿಯಾನೊ ರೊನಾಲ್ಡೊ
ಫುಟ್ಬಾಲ್​ ಲೋಕದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಕ್ರಿಸ್ಟಿಯಾನೊ ರೊನಾಲ್ಡೊ