AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

7 ತಿಂಗಳ ಬಳಿಕ ಮೌನ ಮುರಿದ ನಟ ದರ್ಶನ್; ಅಭಿಮಾನಿಗಳಿಗೆ ಸಂಕ್ರಾಂತಿ ಸಂದೇಶ

ನಟ ದರ್ಶನ್ ಅವರು ಕಳೆದ ಹಲವು ತಿಂಗಳಿಂದ ಸೋಶಿಯಲ್ ಮೀಡಿಯಾದಲ್ಲಿ ಏನನ್ನೂ ಪೋಸ್ಟ್​ ಮಾಡಿರಲಿಲ್ಲ. ಇಂದು (ಜನವರಿ 14) ಸಂಕ್ರಾಂತಿ ಪ್ರಯುಕ್ತ ಅವರು ಎಲ್ಲರಿಗೂ ಶುಭಾಶಯ ತಿಳಿಸಿದ್ದಾರೆ. ಅಲ್ಲದೇ, ಹೊಸ ಫೋಟೋವನ್ನು ಹಂಚಿಕೊಂಡಿದ್ದಾರೆ. ದರ್ಶನ್ ಅವರ ಈ ಪೋಸ್ಟ್ ವೈರಲ್ ಆಗುತ್ತಿದೆ. ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್ ಮಾಡಿದ್ದಾರೆ.

7 ತಿಂಗಳ ಬಳಿಕ ಮೌನ ಮುರಿದ ನಟ ದರ್ಶನ್; ಅಭಿಮಾನಿಗಳಿಗೆ ಸಂಕ್ರಾಂತಿ ಸಂದೇಶ
Darshan
Follow us
ಮದನ್​ ಕುಮಾರ್​
|

Updated on: Jan 14, 2025 | 8:45 PM

ದೇಶದೆಲ್ಲೆಡೆ ಸಂಕ್ರಾಂತಿ ಹಬ್ಬವನ್ನು ಸಡಗರದಿಂದ ಆಚರಿಸಲಾಗಿದೆ. ನಟ ದರ್ಶನ್ ಕೂಡ ಹಬ್ಬದಲ್ಲಿ ಭಾಗಿ ಆಗಿದ್ದಾರೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದು ಹೊರಗೆ ಬಂದಿರುವ ದರ್ಶನ್ ಅವರು ಫಾರ್ಮ್​ ಹೌಸ್​ನಲ್ಲಿ ಸಂಕ್ರಾಂತಿ ಆಚರಿಸಿದ್ದಾರೆ. ಪತ್ನಿ ಮತ್ತು ಮಗನ ಜೊತೆ ಅವರು ಕಾಲ ಕಳೆದಿದ್ದಾರೆ. ಫಾರ್ಮ್​ ಹೌಸ್​ನಲ್ಲಿ ಇರುವ ಪ್ರಾಣಿಗಳ ಜೊತೆಗೆ ಹಬ್ಬ ಆಚರಿಸಿದ್ದಾರೆ. ಕುದುರೆಯ ಜೊತೆಗಿರುವ ಫೋಟೋವನ್ನು ದರ್ಶನ್ ಹಂಚಿಕೊಂಡಿದ್ದು, ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಯಾಕೆಂದರೆ, ದರ್ಶನ್ ಅವರು ಪೋಸ್ಟ್ ಮಾಡಿರುವುದು ಬರೋಬ್ಬರಿ 7 ತಿಂಗಳ ಬಳಿಕ!

‘ನಾಡಿನ ಸಮಸ್ತ ಜನತೆಗೆ ಮಕರ ಸಂಕ್ರಾಂತಿಯ ಹಾರ್ದಿಕ ಶುಭಾಶಯಗಳು. ನಿಮ್ಮ ಜೀವನದಲ್ಲಿ ಸಂತೋಷವೆಂಬ ಗಾಳಿಪಟಗಳು ಎತ್ತರಕ್ಕೆ ಹಾರಲಿ. ಸಮೃದ್ಧಿ ಮತ್ತು ಸಂತೋಷವನ್ನು ತರಲಿ. ಎಳ್ಳು ಬೆಲ್ಲ ಹಂಚಿ ಹೊಸ ಭರವಸೆಯೊಂದಿಗೆ ಮಕರ ಸಂಕ್ರಾಂತಿಯನ್ನು ಬರಮಾಡಿಕೊಳ್ಳೋಣ’ ಎಂದು ದರ್ಶನ್ ಅವರು ಅಭಿಮಾನಿಗಳಿಗೆ ಸಂಕ್ರಾಂತಿಯ ಶುಭಾಶಯ ತಿಳಿಸಿದ್ದಾರೆ.

ಕಳೆದ ವರ್ಷ ದರ್ಶನ್ ಅವರ ಪಾಲಿಗೆ ತುಂಬ ಕಷ್ಟಕರ ಆಗಿತ್ತು. ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್ ಜೈಲು ಸೇರುವಂತಾಯಿತು. ಪರಪ್ಪನ ಅಗ್ರಹಾರ ಮತ್ತು ಬಳ್ಳಾರಿ ಜೈಲಿನಲ್ಲಿ ಅವರು ದಿನ ಕಳೆದಿದ್ದರು. ಆಗಲೇ ಅವರಿಗೆ ಬೆನ್ನು ನೋವು ಕೂಡ ಹೆಚ್ಚಾಗಿತ್ತು. ನಡೆಯಲು ಕೂಡ ದರ್ಶನ್ ಕಷ್ಟಪಡುತ್ತಿದ್ದರು. ಆದ್ದರಿಂದ ಮಧ್ಯಂತರ ಜಾಮೀನು ಸಿಕ್ಕಿತ್ತು. ಆನಂತರ ರೆಗ್ಯುಲರ್​ ಬೇಲ್ ಸಿಕ್ಕ ಬಳಿಕ ದರ್ಶನ್ ನಿಟ್ಟುಸಿರು ಬಿಟ್ಟರು.

ಇದನ್ನೂ ಓದಿ: ದರ್ಶನ್​ಗೆ ಪೊಲೀಸರಿಂದ ಮತ್ತೊಂದು ನೋಟಿಸ್​; ಈ ಬಾರಿ ದಾಸ ಮಾಡಿದ ಕಿರಿಕ್ ಏನು?

ಕಹಿ ಘಟನೆಯಿಂದಾಗಿ ದರ್ಶನ್ ಅವರ ಜೀವನದಲ್ಲಿ ಏರುಪೇರು ಉಂಟಾಯಿತು. ಕೊಲೆ ಆರೋಪ ಎದುರಾಗಿದ್ದರಿಂದ ಸಿನಿಮಾ ಕೆಲಸಗಳನ್ನು ಬಿಟ್ಟು ಪೊಲೀಸ್ ಸ್ಟೇಷನ್, ಕೋರ್ಟು, ಜೈಲು, ಆಸ್ಪತ್ರೆ ಸುತ್ತುವಂತಾಯಿತು. ಆದರೆ 2025ರ ವರ್ಷದಲ್ಲಿ ಎಲ್ಲ ವಿಘ್ನಗಳು ನಿವಾರಣೆ ಆಗಲಿ ಎಂದು ಅವರ ಅಭಿಮಾನಿಗಳು ಪ್ರಾರ್ಥಿಸಿದ್ದಾರೆ. ಅದರ ಮೊದಲ ಹಂತ ಎಂಬಂತೆ ದರ್ಶನ್ ಅವರು ಕುಟುಂಬದ ಜೊತೆ ಸೇರಿಕೊಂಡು ಸಂಕ್ರಾಂತಿ ಹಬ್ಬವನ್ನು ಸೆಲೆಬ್ರೇಟ್ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಮಗಳ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣ ದೋಚಿದ ಖದೀಮರು, ಕಣ್ಣೀರಿಟ್ಟ ತಾಯಿ
ಮಗಳ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣ ದೋಚಿದ ಖದೀಮರು, ಕಣ್ಣೀರಿಟ್ಟ ತಾಯಿ
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
ಇಂಥ ಘಟನೆಗಳು ಜರುಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು: ಜಗದೀಶ್ ಶೆಟ್ಟರ್
ಇಂಥ ಘಟನೆಗಳು ಜರುಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು: ಜಗದೀಶ್ ಶೆಟ್ಟರ್
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ಇದು ರಾಜಕೀಯ ಮಾಡುವ ಸಂದರ್ಭ ಅಲ್ಲ, ರೂಪಾನಿ ಅತ್ಮಕ್ಕೆ ಶಾಂತಿ ಸಿಗಲಿ: ಈಶ್ವರ್
ಇದು ರಾಜಕೀಯ ಮಾಡುವ ಸಂದರ್ಭ ಅಲ್ಲ, ರೂಪಾನಿ ಅತ್ಮಕ್ಕೆ ಶಾಂತಿ ಸಿಗಲಿ: ಈಶ್ವರ್
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್
ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್