AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

7 ತಿಂಗಳ ಬಳಿಕ ಮೌನ ಮುರಿದ ನಟ ದರ್ಶನ್; ಅಭಿಮಾನಿಗಳಿಗೆ ಸಂಕ್ರಾಂತಿ ಸಂದೇಶ

ನಟ ದರ್ಶನ್ ಅವರು ಕಳೆದ ಹಲವು ತಿಂಗಳಿಂದ ಸೋಶಿಯಲ್ ಮೀಡಿಯಾದಲ್ಲಿ ಏನನ್ನೂ ಪೋಸ್ಟ್​ ಮಾಡಿರಲಿಲ್ಲ. ಇಂದು (ಜನವರಿ 14) ಸಂಕ್ರಾಂತಿ ಪ್ರಯುಕ್ತ ಅವರು ಎಲ್ಲರಿಗೂ ಶುಭಾಶಯ ತಿಳಿಸಿದ್ದಾರೆ. ಅಲ್ಲದೇ, ಹೊಸ ಫೋಟೋವನ್ನು ಹಂಚಿಕೊಂಡಿದ್ದಾರೆ. ದರ್ಶನ್ ಅವರ ಈ ಪೋಸ್ಟ್ ವೈರಲ್ ಆಗುತ್ತಿದೆ. ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್ ಮಾಡಿದ್ದಾರೆ.

7 ತಿಂಗಳ ಬಳಿಕ ಮೌನ ಮುರಿದ ನಟ ದರ್ಶನ್; ಅಭಿಮಾನಿಗಳಿಗೆ ಸಂಕ್ರಾಂತಿ ಸಂದೇಶ
Darshan
ಮದನ್​ ಕುಮಾರ್​
|

Updated on: Jan 14, 2025 | 8:45 PM

Share

ದೇಶದೆಲ್ಲೆಡೆ ಸಂಕ್ರಾಂತಿ ಹಬ್ಬವನ್ನು ಸಡಗರದಿಂದ ಆಚರಿಸಲಾಗಿದೆ. ನಟ ದರ್ಶನ್ ಕೂಡ ಹಬ್ಬದಲ್ಲಿ ಭಾಗಿ ಆಗಿದ್ದಾರೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದು ಹೊರಗೆ ಬಂದಿರುವ ದರ್ಶನ್ ಅವರು ಫಾರ್ಮ್​ ಹೌಸ್​ನಲ್ಲಿ ಸಂಕ್ರಾಂತಿ ಆಚರಿಸಿದ್ದಾರೆ. ಪತ್ನಿ ಮತ್ತು ಮಗನ ಜೊತೆ ಅವರು ಕಾಲ ಕಳೆದಿದ್ದಾರೆ. ಫಾರ್ಮ್​ ಹೌಸ್​ನಲ್ಲಿ ಇರುವ ಪ್ರಾಣಿಗಳ ಜೊತೆಗೆ ಹಬ್ಬ ಆಚರಿಸಿದ್ದಾರೆ. ಕುದುರೆಯ ಜೊತೆಗಿರುವ ಫೋಟೋವನ್ನು ದರ್ಶನ್ ಹಂಚಿಕೊಂಡಿದ್ದು, ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಯಾಕೆಂದರೆ, ದರ್ಶನ್ ಅವರು ಪೋಸ್ಟ್ ಮಾಡಿರುವುದು ಬರೋಬ್ಬರಿ 7 ತಿಂಗಳ ಬಳಿಕ!

‘ನಾಡಿನ ಸಮಸ್ತ ಜನತೆಗೆ ಮಕರ ಸಂಕ್ರಾಂತಿಯ ಹಾರ್ದಿಕ ಶುಭಾಶಯಗಳು. ನಿಮ್ಮ ಜೀವನದಲ್ಲಿ ಸಂತೋಷವೆಂಬ ಗಾಳಿಪಟಗಳು ಎತ್ತರಕ್ಕೆ ಹಾರಲಿ. ಸಮೃದ್ಧಿ ಮತ್ತು ಸಂತೋಷವನ್ನು ತರಲಿ. ಎಳ್ಳು ಬೆಲ್ಲ ಹಂಚಿ ಹೊಸ ಭರವಸೆಯೊಂದಿಗೆ ಮಕರ ಸಂಕ್ರಾಂತಿಯನ್ನು ಬರಮಾಡಿಕೊಳ್ಳೋಣ’ ಎಂದು ದರ್ಶನ್ ಅವರು ಅಭಿಮಾನಿಗಳಿಗೆ ಸಂಕ್ರಾಂತಿಯ ಶುಭಾಶಯ ತಿಳಿಸಿದ್ದಾರೆ.

ಕಳೆದ ವರ್ಷ ದರ್ಶನ್ ಅವರ ಪಾಲಿಗೆ ತುಂಬ ಕಷ್ಟಕರ ಆಗಿತ್ತು. ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್ ಜೈಲು ಸೇರುವಂತಾಯಿತು. ಪರಪ್ಪನ ಅಗ್ರಹಾರ ಮತ್ತು ಬಳ್ಳಾರಿ ಜೈಲಿನಲ್ಲಿ ಅವರು ದಿನ ಕಳೆದಿದ್ದರು. ಆಗಲೇ ಅವರಿಗೆ ಬೆನ್ನು ನೋವು ಕೂಡ ಹೆಚ್ಚಾಗಿತ್ತು. ನಡೆಯಲು ಕೂಡ ದರ್ಶನ್ ಕಷ್ಟಪಡುತ್ತಿದ್ದರು. ಆದ್ದರಿಂದ ಮಧ್ಯಂತರ ಜಾಮೀನು ಸಿಕ್ಕಿತ್ತು. ಆನಂತರ ರೆಗ್ಯುಲರ್​ ಬೇಲ್ ಸಿಕ್ಕ ಬಳಿಕ ದರ್ಶನ್ ನಿಟ್ಟುಸಿರು ಬಿಟ್ಟರು.

ಇದನ್ನೂ ಓದಿ: ದರ್ಶನ್​ಗೆ ಪೊಲೀಸರಿಂದ ಮತ್ತೊಂದು ನೋಟಿಸ್​; ಈ ಬಾರಿ ದಾಸ ಮಾಡಿದ ಕಿರಿಕ್ ಏನು?

ಕಹಿ ಘಟನೆಯಿಂದಾಗಿ ದರ್ಶನ್ ಅವರ ಜೀವನದಲ್ಲಿ ಏರುಪೇರು ಉಂಟಾಯಿತು. ಕೊಲೆ ಆರೋಪ ಎದುರಾಗಿದ್ದರಿಂದ ಸಿನಿಮಾ ಕೆಲಸಗಳನ್ನು ಬಿಟ್ಟು ಪೊಲೀಸ್ ಸ್ಟೇಷನ್, ಕೋರ್ಟು, ಜೈಲು, ಆಸ್ಪತ್ರೆ ಸುತ್ತುವಂತಾಯಿತು. ಆದರೆ 2025ರ ವರ್ಷದಲ್ಲಿ ಎಲ್ಲ ವಿಘ್ನಗಳು ನಿವಾರಣೆ ಆಗಲಿ ಎಂದು ಅವರ ಅಭಿಮಾನಿಗಳು ಪ್ರಾರ್ಥಿಸಿದ್ದಾರೆ. ಅದರ ಮೊದಲ ಹಂತ ಎಂಬಂತೆ ದರ್ಶನ್ ಅವರು ಕುಟುಂಬದ ಜೊತೆ ಸೇರಿಕೊಂಡು ಸಂಕ್ರಾಂತಿ ಹಬ್ಬವನ್ನು ಸೆಲೆಬ್ರೇಟ್ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು