AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾಸನಿಗೆ ಜೈಲೂಟವೇ ಗತಿ: ರೇಣುಕಾಸ್ವಾಮಿ ಕೇಸ್​ನಲ್ಲಿ ದರ್ಶನ್​ಗೆ ಬಿಗ್ ಶಾಕ್ ಕೊಟ್ಟ ಕೋರ್ಟ್​

ಜೈಲಿನಲ್ಲಿರುವ ದರ್ಶನ್​ ಅವರಿಗೆ ಮನೆ ಊಟ ತರಿಸಲು ಕೋರ್ಟ್​ ಅನುಮತಿ ನೀಡಿಲ್ಲ. ಅನಾರೋಗ್ಯದ ಕಾರಣದಿಂದ ಮನೆಯ ಊಟ ಬೇಕು ಎಂದು ದರ್ಶನ್​ ಕೇಳಿದ್ದರು. ಅಲ್ಲದೇ, ಬಟ್ಟೆ ಮತ್ತು ಹಾಸಿಗೆಯನ್ನೂ ಮನೆಯಿಂದ ತರಿಸಿಕೊಳ್ಳಲು ಅನುಮತಿ ನೀಡಬೇಕು ಎಂದು ಅವರು ಅರ್ಜಿ ಸಲ್ಲಿಸಿದ್ದರು. ಜುಲೈ 22ರಂದು ಅರ್ಜಿ ವಿಚಾರಣೆ ಮಾಡಲಾಗಿತ್ತು. ಇಂದು (ಜುಲೈ 25) ಇದರ ಆದೇಶ ಪ್ರಕಟ ಆಗಿದೆ.

ದಾಸನಿಗೆ ಜೈಲೂಟವೇ ಗತಿ: ರೇಣುಕಾಸ್ವಾಮಿ ಕೇಸ್​ನಲ್ಲಿ ದರ್ಶನ್​ಗೆ ಬಿಗ್ ಶಾಕ್ ಕೊಟ್ಟ ಕೋರ್ಟ್​
ದರ್ಶನ್​
Ramesha M
| Edited By: |

Updated on:Jul 25, 2024 | 3:48 PM

Share

ನಟ ದರ್ಶನ್​ ಅವರಿಗೆ ಜೈಲಿನ ಊಟವೇ ಗತಿ ಆಗಿದೆ. ಮನೆ ಊಟ, ಹಾಸಿಗೆ, ಬಟ್ಟೆ ಬೇಕು ಎಂದು ದರ್ಶನ್​ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್​ ವಜಾ ಮಾಡಿದೆ. ಈ ಕುರಿತಂತೆ 24ನೇ ಎಸಿಎಂಎಂ ಕೋರ್ಟ್ ಇಂದು (ಜು.25) ಆದೇಶ ನೀಡಿದೆ. ಜೈಲೂಟದಿಂದ ಅಜೀರ್ಣ, ಅತಿಸಾರ ಆಗಿದೆ ಎಂದು ಕಾರಣ ನೀಡಿ ದರ್ಶನ್ ಅವರು ಮನೆಯ ಊಟ ತರಿಸಲು ಅನುಮತಿ ಕೇಳಿದ್ದರು. ಜೈಲು ಅಧಿನಿಯಮ ಉಲ್ಲೇಖಿಸಿ ದರ್ಶನ್ ಪರ ವಕೀಲರು ವಾದ ಮಂಡಿಸಿದ್ದರು. ಇದಕ್ಕೆ ಪೊಲೀಸರ ಪರ ವಿಶೇಷ ಅಭಿಯೋಜಕರು ಆಕ್ಷೇಪಣೆ ಸಲ್ಲಿಸಿದ್ದರು. ಇನ್ನೂ ಹಲವು ದಿನಗಳ ಕಾಲ ದರ್ಶನ್​ ಜೈಲೂಟ ಮಾಡುವುದು ಅನಿವಾರ್ಯ ಆಗಿದೆ.

ಜೈಲೂಟದಿಂದ ದರ್ಶನ್​ಗೆ ಯಾವುದೇ ಸಮಸ್ಯೆ ಆಗಿಲ್ಲ. ಶೂಟಿಂಗ್ ವೇಳೆ ಆದ ಗಾಯದ ನೋವಿನ ಬಗ್ಗೆ ಮಾತ್ರ ವೈದ್ಯರು ಸಲಹೆ ನೀಡಿದ್ದಾರೆ. ಜೈಲಿನ ನಿಯಮಾವಳಿಯಲ್ಲಿ ಮನೆಯೂಟಕ್ಕೆ ಅವಕಾಶವಿಲ್ಲವೆಂದು ಆಕ್ಷೇಪಣೆ ಸಲ್ಲಿಸಲಾಗಿತ್ತು. ಎರಡೂ ಕಡೆ ವಾದ ಆಲಿಸಿರುವ ಜಡ್ಜ್ ವಿಶ್ವನಾಥ್ ಸಿ ಗೌಡರ್ ಈಗ ಆದೇಶ ನೀಡಿದ್ದಾರೆ.

ಕೊಲೆ ಆರೋಪಿಗಳಿಗೆ ಮನೆಯ ಊಟ, ಬಟ್ಟೆ, ಹಾಸಿಗೆ ಪಡೆಯಲು ಅವಕಾಶವಿಲ್ಲ. ಜೈಲು ನಿಯಮಾವಳಿ 728ರಲ್ಲಿ ಮನೆಯ ಊಟ, ಬಟ್ಟೆ, ಹಾಸಿಗೆ ಪಡೆಯಲು ಅವಕಾಶವಿಲ್ಲ. ಹೀಗಾಗಿ ದರ್ಶನ್ ಕೊಲೆ ಆರೋಪಿ ಆಗಿರುವುದರಿಂದ ಈ ಸೌಲಭ್ಯ ಕೊಡಲಾಗುವುದಿಲ್ಲ. ದರ್ಶನ್​ಗೆ ಈಗ ಉಳಿದಿರುವ ಮಾರ್ಗ ಹೈಕೋರ್ಟ್ ಮೊರೆ ಹೋಗುವುದು. ಈಗಾಗಲೇ ದರ್ಶನ್ ಸಲ್ಲಿಸಿರುವ ಅರ್ಜಿ ವಿಚಾರಣೆ ಜುಲೈ 29 ಕ್ಕೆ ನಿಗದಿಯಾಗಿದೆ.

ಇದನ್ನೂ ಓದಿ: ದರ್ಶನ್​ ಇರುವ ಜೈಲು ಕೊಠಡಿ ಹೇಗಿದೆ? ಟಿವಿ ಇದೆಯೇ? ಖೈದಿಯೇ ಹೇಳಿದ ವಿವರ ಕೇಳಿ..

ರೇಣುಕಾ ಸ್ವಾಮಿಯ ಹತ್ಯೆ ಪ್ರಕರಣದಲ್ಲಿ ಜೈಲು ಸೇರುವುದಕ್ಕೂ ಮೊದಲು ದರ್ಶನ್​ ಅವರ ಜೀವನ ಐಷಾರಾಮಿ ಆಗಿತ್ತು. ಪ್ರೊಟೀನ್​ಯುಕ್ತ ಆಹಾರವನ್ನು ಅವರು ಸೇವಿಸುತ್ತಿದ್ದರು. ಆದರೆ ಜೈಲಿನಲ್ಲಿ ಇದಕ್ಕೆ ಅವಕಾಶ ಸಿಕ್ಕಿಲ್ಲ. ಜೈಲಿನ ಊಟದಿಂದ ಅವರಿಗೆ ಕೆಲವು ಆರೋಗ್ಯ ಸಮಸ್ಯೆಗಳು ಎದುರಾಗಿವೆ. ಅಲ್ಲದೇ, ಅವರ ದೇಹದ ತೂಕ ಕೂಡ ಕಡಿಮೆ ಆಗಿದೆ ಎನ್ನಲಾಗಿದೆ. ದರ್ಶನ್​ ಮೇಲೆ ಗಂಭೀರ ಆರೋಪ ಇರುವುದರಿಂದ ಮನೆಯೂಟ ಪಡೆಯಲು ಅವಕಾಶ ಸಿಕ್ಕಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 3:37 pm, Thu, 25 July 24

Follow Us
Ramesha M
Ramesha M
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್