ದರ್ಶನ್​ಗೆ ಮತ್ತೆ ಕಾಡ್ತಿದೆ ಬೆನ್ನು ನೋವು; ಚಿಕಿತ್ಸೆಗೆ ಮನವಿ ಮಾಡಿದ ನಟ

Darshan Backpain: ದರ್ಶನ್‌ಗೆ ಜೈಲಿನಲ್ಲಿ ಮತ್ತೆ ತೀವ್ರ ಬೆನ್ನು ನೋವು ಕಾಡಿದೆ. ಹಿಂದೆ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳದ ಕಾರಣ ಈಗ ಆರೋಗ್ಯ ಹದಗೆಟ್ಟಿದೆ. ಅವರು ಜೈಲಾಧಿಕಾರಿಗಳಿಗೆ ಚಿಕಿತ್ಸೆಗೆ ಮನವಿ ಮಾಡಿದ್ದಾರೆ. ಬೆನ್ನು ನೋವಿಗೆ ಫಿಸಿಯೋಥೆರಪಿ ಹಾಗೂ ಮೊಣಕೈ ನೋವಿಗೂ ಚಿಕಿತ್ಸೆ ನೀಡಲು ಚಿಂತಿಸಲಾಗಿದೆ.

ದರ್ಶನ್​ಗೆ ಮತ್ತೆ ಕಾಡ್ತಿದೆ ಬೆನ್ನು ನೋವು; ಚಿಕಿತ್ಸೆಗೆ ಮನವಿ ಮಾಡಿದ ನಟ
ದರ್ಶನ್

Updated on: Oct 15, 2025 | 8:51 AM

ಬೆನ್ನು ನೋವು ಅತೀವವಾಗಿ ಕಾಡಿದ್ದಾಗಿ ದರ್ಶನ್ (Darshan) ಈ ಮೊದಲು ಅಳಲು ತೋಡಿಕೊಂಡಿದ್ದರು. ಆಪರೇಷನ್ ಮಾಡಿಸಿಕೊಳ್ಳಬೇಕು ಎಂಬ ಕಾರಣದಿಂದ ಅವರು ಮಧ್ಯಂತರ ಜಾಮೀನು ಕೂಡ ಪಡೆದರು. ಸಿನಿಮಾ ಶೂಟ್​ನಲ್ಲಿ ಬ್ಯುಸಿ ಆದ ಅವರು ಸರ್ಜರಿ ಮಾಡಿಸಿಕೊಳ್ಳಲೇ ಇಲ್ಲ. ಈಗ ಅವರು ಮತ್ತೆ ಜೈಲು ಸೇರಿದ್ದಾರೆ. ಈಗ ಅವರಿಗೆ ಮತ್ತೆ ಬೆನ್ನು ನೋವು ಕಾಣಿಸಿಕೊಂಡಿದೆಯಂತೆ. ಜೈಲಾಧಿಕಾರಿಗಳಿಗೆ ಪತ್ರ ಬರೆದು ಚಿಕಿತ್ಸೆಗೆ ಮನವಿ ಮಾಡಿದ್ದಾರೆ ಎಂದು ವರದಿ ಆಗಿದೆ.

ದರ್ಶನ್ ಅವರು ಕಳೆದ ಒಂದು ವಾರದಿಂದ ಬೆನ್ನು ನೋವು ಹೆಚ್ಚಾಗಿದ್ದು, ಕುಂಟುತ್ತಲೇ ನಡೆಯುತ್ತಿದ್ದಾರೆ ಎನ್ನಲಾಗಿದೆ.  ಹೀಗಾಗಿ, ಚಿಕಿತ್ಸೆ ಕೊಡಿಸಿ ಎಂದು ದರ್ಶನ್ ಮನವಿ ಮಾಡಿದ್ದಾರೆ. ಅವರ ಮನವಿ ಮೇರೆಗೆ ಸಿವಿ ರಾಮನ್ ಆಸ್ಪತ್ರೆಗೆ ಆರೋಗ್ಯ ತಪಾಸಣೆಗೆ ಜೈಲಧಿಕಾರಿಗಳು ಪತ್ರ ಬರೆದಿದ್ದರು. ತಪಾಸಣೆ ವೇಳೆ ಫಿಜಿಯೋಥೆರಫಿ ಅವಶ್ಯಕತೆ ಇದೆ ಎಂದು ವೈದ್ಯರು ಸೂಚಿಸಿದ್ದಾರೆ. ಸದ್ಯ ವಾರಕ್ಕೆ ಎರಡು ಬಾರಿ ಮಾತ್ರ ಫಿಸಿಯೋ ಥೆರಪಿ ಮಾಡಲು ವೈದ್ಯರು ಮುಂದಾಗಿದ್ದಾರೆ.

ಇದೆ ಇನ್ನೂ ಹಲವು ಸಮಸ್ಯೆ

ಬೆನ್ನುನೋವಿನ ಜೊತೆಗೆ ದರ್ಶನ್ ಮೊಣಕೈ ನೋವು ಎಂದು ದೂರಿದ್ದಾರೆ. ಅವರಿಗೆ ಕಾರು ಅಪಘಾತ ಆದಾಗ ಮೊಣಕೈಗೆ ಪೆಟ್ಟು ಬಿದ್ದು ಶಸ್ತ್ರಚಿಕಿತ್ಸೆ ಆಗಿತ್ತು. ಈ ವೇಳೆ ಕೈಗೆ ರಾಡ್ ಹಾಕಲಾಗಿದೆ. ಈಗ ನೋವು ಹೆಚ್ಚಿದ್ದು, ಎರಡು ಬೆರಳು ಮರಗಟ್ಟಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ
ಗಿಲ್ಲಿ ಜೊತೆಗಿನ ಗೆಳೆತನಕ್ಕಾಗಿ ಫಿನಾಲೆ ಚಾನ್ಸ್ ತ್ಯಾಗ ಮಾಡಿದ ಚಂದ್ರಪ್ರಭ?
ಮಂಗಳವಾರವೂ ‘ಕಾಂತಾರ: ಚಾಪ್ಟರ್ 1’ ಅಧಿಕ ಕಲೆಕ್ಷನ್; 500 ಕೋಟಿ ಇನ್ನೂ ಸನಿಹ
ಸ್ಪರ್ಧಿಗಳಿಗೆ ಕೊನೆಯ ಅವಕಾಶ ಕೊಟ್ಟ ‘ಬಿಗ್ ಬಾಸ್​’; ಮಾಡು ಇಲ್ಲವೇ ಮಡಿ
‘ಕಾಂತಾರ: ಚಾಪ್ಟರ್ 2’ ಯಾವಾಗ? ಕೊನೆಗೂ ಉತ್ತರಿಸಿದ ರಿಷಬ್ ಶೆಟ್ಟಿ

ದರ್ಶನ್ ಹಾಸಿಗೆ-ದಿಂಬು ನೀಡಿ ಎಂದು ಅಲವತ್ತು ಕೊಳ್ಳುತ್ತಿದ್ದಾರೆ. ಈಗ ಅವರು ನೆಲದ ಮೇಲೆ ಮಲಗುತ್ತಿದ್ದು, ಶೀತಾಂಶಕ್ಕೆ ಬೆನ್ನು ನೋವು ಮತ್ತೆ ನೋವು ಜಾಸ್ತಿಯಾಗಿದೆ. ಹೀಗಾಗಿ ಮೊಣಕೈ ನೋವಿಗೂ ಚಿಕಿತ್ಸೆ ನೀಡಲು ಚಿಂತಿಸಲಾಗಿದೆ.

ಇದನ್ನೂ ಓದಿ: ದರ್ಶನ್ ಅಂಥಹಾ ವ್ಯಕ್ತಿಯ ನೋಡಿಯೇ ಇಲ್ಲ ಎಂದ ರಚನಾ: ಚಿತ್ರಗಳಲ್ಲಿ ನೋಡಿ ನಟಿಯ ಅಂದ

ಡೆವಿಲ್ ಸಿನಿಮಾ

ಸದ್ಯ ದರ್ಶನ್ ಅವರು ‘ಡೆವಿಲ್’ ಸಿನಿಮಾ ಕೆಲಸ ಪೂರ್ಣಗೊಳಿಸಿದ್ದಾರೆ. ಈ ಚಿತ್ರ ಡಿಸೆಂಬರ್ 12ರಂದು ರಿಲೀಸ್ ಆಗಲಿದೆ. ಈ ಚಿತ್ರದ ಬಗ್ಗೆ ಫ್ಯಾನ್ಸ್ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈಗಾಗಲೇ ಸಿನಿಮಾದ ಕೆಲವು ಹಾಡುಗಳು ರಿಲೀಸ್ ಆಗಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:51 am, Wed, 15 October 25

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us