Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್​ಗೆ ಜಾಮೀನು; ಪತ್ನಿ ವಿಜಯಲಕ್ಷ್ಮೀ ಪ್ರತಿಕ್ರಿಯೆ ಏನು?

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ನಟ ದರ್ಶನ್ ಅವರಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿದೆ. ಈ ಬಗ್ಗೆ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರು ತಮ್ಮ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ. ಅನೇಕ ದೇವಾಲಯಗಳಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದ ವಿಜಯಲಕ್ಷ್ಮಿ ಅವರ ಪ್ರಾರ್ಥನೆಗೆ ಈಗ ಫಲ ದೊರೆತಿದೆ. ದರ್ಶನ್ ಅವರ ಮಗ ವಿನಿಶ್ ಕೂಡ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಸಂತೋಷವನ್ನು ಹಂಚಿಕೊಂಡಿದ್ದಾರೆ.

ದರ್ಶನ್​ಗೆ ಜಾಮೀನು; ಪತ್ನಿ ವಿಜಯಲಕ್ಷ್ಮೀ ಪ್ರತಿಕ್ರಿಯೆ ಏನು?
ವಿಜಯಲಕ್ಷ್ಮಿ-ದರ್ಶನ್
Follow us
ರಾಜೇಶ್ ದುಗ್ಗುಮನೆ
|

Updated on: Dec 13, 2024 | 5:37 PM

ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಜೈಲು ಸೇರಿ ಸಾಕಷ್ಟು ತೊಂದರೆ ಅನುಭವಿಸಿದ್ದರು. ಈಗ  ಕೊನೆಗೂ ಅವರು ಸಂಪೂರ್ಣ ರಿಲೀಫ್ ಪಡೆದಿದ್ದಾರೆ. ಕರ್ನಾಟಕ ಹೈಕೋರ್ಟ್ ಅವರಿಗೆ ಜಾಮೀನು ಕೊಟ್ಟು ಆದೇಶ ಹೊರಡಿಸಿದೆ. ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರು ದರ್ಶನ್ ಬಿಡುಗಡೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಅವರು ಹಾಕಿದ ಪೋಸ್ಟ್ ಏನು? ಆ ಬಗ್ಗೆ ಇಲ್ಲಿದೆ ವಿವರ.

ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಜೂನ್​ 11ರಂದು ಬಂಧನಕ್ಕೆ ಒಳಗಾದರು. ಅವರನ್ನು ಪೊಲೀಸರು ಮೈಸೂರಿನಲ್ಲಿ ಅರೆಸ್ಟ್ ಮಾಡಿದರು. ಆ ಬಳಿಕ ವಿಜಯಲಕ್ಷ್ಮೀ ಅವರು ಮಾಡದ ಪ್ರಾರ್ಥನೆಗಳಿಲ್ಲ, ಭೇಟಿ ನೀಡದ ದೇವಸ್ಥಾನಗಳಿಲ್ಲ. ಅನೇಕ ದೇವಾಲಯಗಳಿಗೆ ತೆರಳಿ ವಿಜಯಲಕ್ಷ್ಮೀ  ದರ್ಶನ್ ಬಿಡುಗಡೆಗೆ ಪ್ರಾರ್ಥನೆ ಸಲ್ಲಿಸಿದರು. ಈ ಪ್ರಾರ್ಥನೆ ಈಗ ಫಲ ಕೊಟ್ಟಿದೆ.

ದೇವಾಲಯದಲ್ಲಿ ಹೂವುಗಳನ್ನು ಹಿಡಿದಿರುವ ಫೋಟೋನ ವಿಜಯಲಕ್ಷ್ಮೀ ಹಂಚಿಕೊಂಡಿದ್ದಾರೆ. ತಮ್ಮ ಪ್ರಾರ್ಥನೆ ಫಲ ಕೊಟ್ಟ ಖುಷಿ ಅವರಿಗೆ ಇದೆ. ಅವರು ಮಾಧ್ಯಮಗಳ ಎದುರು ಬಂದು ಪ್ರತಿಕ್ರಿಯೆ ನೀಡುತ್ತಾರಾ ಎನ್ನುವ ಪ್ರಶ್ನೆ ಅಭಿಮಾನಿಗಳಿಗೆ ಇದೆ.

ಹಲವು ದೇವಾಲಯಗಳಿಗೆ ಭೇಟಿ

ದರ್ಶನ್​ಗೆ ಜಾಮೀನು ಸಿಗಲಿ ಬಳ್ಳಾರಿ ಕನಕ ದುರ್ಗಮ್ಮನ ಮೊರೆ ಹೋಗಿದ್ದರು. ಮಧ್ಯಂತರ ಜಾಮೀನಿಗೂ ಮುನ್ನ ಹಾಗೂ ಸಿಕ್ಕ ನಂತರ ದೇವಸ್ಥಾನಕ್ಕೆ ಭೇಟಿ ನೀಡಿದ್ದ ವಿಜಯಲಕ್ಷ್ಮೀ ವಿಶೇಷ ಪೂಜೆ ಸಲ್ಲಿಸಿದ್ದರು. ನಿರಂತರವಾಗಿ ಪೂಜೆ ಮಾಡುತ್ತಿದ್ದ ಅವರು ದರ್ಶನ್​ಗೆ ಪ್ರಸಾದ ತಂದುಕೊಡುತ್ತಿದ್ದರು. ಪೂರ್ಣಾವಧಿ ಜಾಮೀನು ಸಿಕ್ಕ ಬಳಿಕ ಪತಿಯೊಂದಿಗೆ ಮತ್ತೊಮ್ಮೆ ದೇವಸ್ಥಾನಕ್ಕೆ ಬರುವುದಾಗಿ ಅವರು ಹರಕೆ ಕಟ್ಟಿದ್ದಾರೆ ಎನ್ನಲಾಗಿದೆ.

ಮಗನ ಪೋಸ್ಟ್

ದರ್ಶನ್ ಮಗ ವಿನಿಶ್ ಕೂಡ ಈ ಬಗ್ಗೆ ಪೋಸ್ಟ್ ಮಾಡಿದ್ದಾರೆ. ದರ್ಶನ್ ಜೊತೆ ಇರೋ ಪೋಟೋನ ಅವರು ಪೋಸ್ಟ್ ಮಾಡಿದ್ದಾರೆ. ತಂದೆಗೆ ಜಾಮೀನು ಸಿಕ್ಕ ವಿಚಾರದ ಬಗ್ಗೆ ಅವರಿಗೆ ಖುಷಿ ಇದೆ.

ಇದನ್ನೂ ಓದಿ: ದರ್ಶನ್ ಜೊತೆ ಸಹಚರರಿಗೂ ಬಿಗ್ ರಿಲೀಫ್; ಹೈಕೋರ್ಟ್​ನಲ್ಲಿ ಸಿಕ್ತು ಜಾಮೀನು

ಸೆಲೆಬ್ರಿಟಿಗಳ ಪೋಸ್ಟ್

ದರ್ಶನ್ ಜಾಮೀನು ಪಡೆದು ಹೊರ ಬರುತ್ತಿದ್ದಂತೆ ದರ್ಶನ್ ಆಪ್ತರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಲು ಆರಂಭಿಸಿದ್ದಾರೆ. ನೆಚ್ಚಿನ ನಟ ಹೊರ ಬರುತ್ತಿರುವುದಕ್ಕೆ ಸಂತಸ ಹೊರಹಾಕಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ