AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನ್ನಿಂದ ತಪ್ಪಾಗಿದ್ರೆ ಕ್ಷಮಿಸಿ’; ದರ್ಶನ್ ಕ್ಷಮೆ ಕೇಳಿದ್ದು ಯಾರ ಬಳಿ?

ದರ್ಶನ್ ಅವರು ಆರೋಗ್ಯ ಸಮಸ್ಯೆಗಳಿಂದಾಗಿ ಬಳ್ಳಾರಿ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಎರಡು ತಿಂಗಳ ಕಾಲ ಈ ಜೈಲಿನಲ್ಲಿದ್ದ ಅವರು ಜೈಲು ಸಿಬ್ಬಂದಿಗೆ ತಮ್ಮ ವರ್ತನೆಗೆ ಕ್ಷಮೆ ಕೇಳಿದ್ದಾರೆ. ಬೆನ್ನು ನೋವಿನಿಂದ ಬಳಲುತ್ತಿದ್ದ ಅವರು ಚಿಕಿತ್ಸೆಗಾಗಿ ಬಿಡುಗಡೆಯಾಗಿದ್ದಾರೆ ಎಂದು ವರದಿಯಾಗಿದೆ.

‘ನನ್ನಿಂದ ತಪ್ಪಾಗಿದ್ರೆ ಕ್ಷಮಿಸಿ’; ದರ್ಶನ್ ಕ್ಷಮೆ ಕೇಳಿದ್ದು ಯಾರ ಬಳಿ?
ದರ್ಶನ್
ವಿನಾಯಕ ಬಡಿಗೇರ್​
| Edited By: |

Updated on: Oct 31, 2024 | 9:05 AM

Share

ದರ್ಶನ್ ಅವರು ಬಳ್ಳಾರಿ ಜೈಲಿನಿಂದ ಹೊರ ಬಂದಿದ್ದಾರೆ. ಎರಡು ತಿಂಗಳಿಗೂ ಅಧಿಕ ಕಾಲ ಅವರು ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ಇದ್ದರು. ಆರೋಗ್ಯದ ಕಾರಣ ನೀಡಿ ಅವರನ್ನು ಹೊರಕ್ಕೆ ಕರೆತರಲಾಗಿದೆ. ದರ್ಶನ್ ಅವರು ಈಗ ಕೆಲವರ ಬಳಿ ಕ್ಷಮೆ ಕೇಳಿದ್ದಾರೆ ಎಂಬ ಸುದ್ದಿ ಹರಿದಾಡಿದೆ. ಅವರು ಕ್ಷಮೆ ಕೇಳಿದ್ದು ಯಾರ ಬಳಿ? ಮಾಡಿದ ತಪ್ಪೇನು ಎಂಬ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ.

ದರ್ಶನ್ ಅವರು ರೇಣುಕಾ ಸ್ವಾನಿ ಕೊಲೆ ಕೇಸ್​ನಲ್ಲಿ ಜೂನ್ 11ರಂದು ಅರೆಸ್ಟ್ ಆದರು. ಈ ಅವಧಿಯಲ್ಲಿ ದರ್ಶನ್ ಅವರು ಸಾಕಷ್ಟು ಕುಗ್ಗಿದ್ದಾರೆ. ಬೆಂಗಳೂರು ಜೈಲಿನಲ್ಲಿ ಹಾಯಾಗಿ ಸಮಯ ಕಳೆಯುತ್ತಿದ್ದ ಅವರಿಗೆ ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ಸಾಕಷ್ಟು ಸಮಸ್ಯೆ ಆದವು. ಬೆನ್ನು ನೋವು ಬಿಟ್ಟು ಬಿಡದೆ ಕಾಡುತ್ತಿದೆ. ಇದರಿಂದ ಮುಕ್ತಿ ಪಡೆಯಲು ದರ್ಶನ್ ಎರಡು ವಾರ ಜಾಮೀನು ಪಡೆದು ಬಂದಿದ್ದಾರೆ.

ಬಳ್ಳಾರಿ ಜೈಲಿನಲ್ಲಿ ದರ್ಶನ್ ಎರಡು ತಿಂಗಳು ಇದ್ದರು. ಈಗ ದರ್ಶನ್ ಅವರು ಜೈಲಿನಲ್ಲಿದ್ದ ಸಿಬ್ಬಂದಿಗೆ ಕ್ಷಮೆ ಕೇಳಿದ್ದಾರೆ. ‘ನನ್ನಿಂದ  ಏನಾದರೂ ತಪ್ಪಾಗಿದ್ದರೆ ಕ್ಷಮಿಸಿ’ ಎಂದು ದರ್ಶನ್ ಕೇಳಿರುವುದಾಗಿ ವರದಿ ಆಗಿದೆ.

‘ಪದೇ ಪದೇ ಅದು ಬೇಕು, ಇದು ಬೇಕು ಎಂದು ಕೇಳುತ್ತಿದ್ದೆ. ನಿಮಗೆ ತೊಂದರೆ ಕೊಟ್ಟಿದ್ದೇನೆ ಕ್ಷಮಿಸಿ’ ದರ್ಶನ್ ಕೇಳಿದ್ದಾರೆ ಎನ್ನಲಾಗಿದೆ. ಅಲ್ಲದೆ, ಹೈ ಸೆಕ್ಯುರಿಟಿ ಸೆಲ್‌ನ ಸಿಬ್ಬಂದಿಗೆ ಅವರು ಧನ್ಯವಾದ ತಿಳಿಸಿದ್ದಾರೆ. ಇನ್ನು ಸಿಬ್ಬಂದಿಗಳೂ ದರ್ಶನ್​ಗೆ ಒಳ್ಳೆಯದಾಗಲಿ ಎಂದು ಹಾರೈಸಿದ್ದಾರೆ. ‘ಉತ್ತಮ ಚಿಕಿತ್ಸೆ ಪಡೆದುಕೊಳ್ಳಿ, ಆರೋಗ್ಯದ ಬಗ್ಗೆ ಗಮನ ಕೊಡಿ’ ಎಂದು ಜೈಲು ಸಿಬ್ಬಂದಿ ಕೇಳಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ‘ಅಕ್ಟೋಬರ್​ಗೆ ಬಂದೇ ಬರ್ತೀನಿ’; ದರ್ಶನ್​ ಹಳೆಯ ವಿಡಿಯೋ ವೈರಲ್

ದರ್ಶನ್ ಅವರು ಬಳ್ಳಾರಿ ಜೈಲು ಸೇರಿದಾಗಿನಿಂದ ಒಂದರ ಮೇಲೆ ಒಂದರಂತೆ ಬೇಡಿಕೆ ಇಡುತ್ತಲೇ ಬರುತ್ತಿದ್ದರು. ಮೊದಲು ಜೈಲಿನಲ್ಲಿ ಟಿವಿ ಬೇಕು ಎಂದರು. ಆ ಬಳಿಕ ಕುರ್ಚಿಗೆ ಬೇಡಿಕೆ ಇಟ್ಟರು. ಹೀಗೆ ಹಲವು ಬೇಡಿಕೆಗಳನ್ನು ದರ್ಶನ್ ಮನವಿ ಮಾಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!