AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನ್ನಿಂದ ತಪ್ಪಾಗಿದ್ರೆ ಕ್ಷಮಿಸಿ’; ದರ್ಶನ್ ಕ್ಷಮೆ ಕೇಳಿದ್ದು ಯಾರ ಬಳಿ?

ದರ್ಶನ್ ಅವರು ಆರೋಗ್ಯ ಸಮಸ್ಯೆಗಳಿಂದಾಗಿ ಬಳ್ಳಾರಿ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಎರಡು ತಿಂಗಳ ಕಾಲ ಈ ಜೈಲಿನಲ್ಲಿದ್ದ ಅವರು ಜೈಲು ಸಿಬ್ಬಂದಿಗೆ ತಮ್ಮ ವರ್ತನೆಗೆ ಕ್ಷಮೆ ಕೇಳಿದ್ದಾರೆ. ಬೆನ್ನು ನೋವಿನಿಂದ ಬಳಲುತ್ತಿದ್ದ ಅವರು ಚಿಕಿತ್ಸೆಗಾಗಿ ಬಿಡುಗಡೆಯಾಗಿದ್ದಾರೆ ಎಂದು ವರದಿಯಾಗಿದೆ.

‘ನನ್ನಿಂದ ತಪ್ಪಾಗಿದ್ರೆ ಕ್ಷಮಿಸಿ’; ದರ್ಶನ್ ಕ್ಷಮೆ ಕೇಳಿದ್ದು ಯಾರ ಬಳಿ?
ದರ್ಶನ್
ವಿನಾಯಕ ಬಡಿಗೇರ್​
| Edited By: |

Updated on: Oct 31, 2024 | 9:05 AM

Share

ದರ್ಶನ್ ಅವರು ಬಳ್ಳಾರಿ ಜೈಲಿನಿಂದ ಹೊರ ಬಂದಿದ್ದಾರೆ. ಎರಡು ತಿಂಗಳಿಗೂ ಅಧಿಕ ಕಾಲ ಅವರು ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ಇದ್ದರು. ಆರೋಗ್ಯದ ಕಾರಣ ನೀಡಿ ಅವರನ್ನು ಹೊರಕ್ಕೆ ಕರೆತರಲಾಗಿದೆ. ದರ್ಶನ್ ಅವರು ಈಗ ಕೆಲವರ ಬಳಿ ಕ್ಷಮೆ ಕೇಳಿದ್ದಾರೆ ಎಂಬ ಸುದ್ದಿ ಹರಿದಾಡಿದೆ. ಅವರು ಕ್ಷಮೆ ಕೇಳಿದ್ದು ಯಾರ ಬಳಿ? ಮಾಡಿದ ತಪ್ಪೇನು ಎಂಬ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ.

ದರ್ಶನ್ ಅವರು ರೇಣುಕಾ ಸ್ವಾನಿ ಕೊಲೆ ಕೇಸ್​ನಲ್ಲಿ ಜೂನ್ 11ರಂದು ಅರೆಸ್ಟ್ ಆದರು. ಈ ಅವಧಿಯಲ್ಲಿ ದರ್ಶನ್ ಅವರು ಸಾಕಷ್ಟು ಕುಗ್ಗಿದ್ದಾರೆ. ಬೆಂಗಳೂರು ಜೈಲಿನಲ್ಲಿ ಹಾಯಾಗಿ ಸಮಯ ಕಳೆಯುತ್ತಿದ್ದ ಅವರಿಗೆ ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ಸಾಕಷ್ಟು ಸಮಸ್ಯೆ ಆದವು. ಬೆನ್ನು ನೋವು ಬಿಟ್ಟು ಬಿಡದೆ ಕಾಡುತ್ತಿದೆ. ಇದರಿಂದ ಮುಕ್ತಿ ಪಡೆಯಲು ದರ್ಶನ್ ಎರಡು ವಾರ ಜಾಮೀನು ಪಡೆದು ಬಂದಿದ್ದಾರೆ.

ಬಳ್ಳಾರಿ ಜೈಲಿನಲ್ಲಿ ದರ್ಶನ್ ಎರಡು ತಿಂಗಳು ಇದ್ದರು. ಈಗ ದರ್ಶನ್ ಅವರು ಜೈಲಿನಲ್ಲಿದ್ದ ಸಿಬ್ಬಂದಿಗೆ ಕ್ಷಮೆ ಕೇಳಿದ್ದಾರೆ. ‘ನನ್ನಿಂದ  ಏನಾದರೂ ತಪ್ಪಾಗಿದ್ದರೆ ಕ್ಷಮಿಸಿ’ ಎಂದು ದರ್ಶನ್ ಕೇಳಿರುವುದಾಗಿ ವರದಿ ಆಗಿದೆ.

‘ಪದೇ ಪದೇ ಅದು ಬೇಕು, ಇದು ಬೇಕು ಎಂದು ಕೇಳುತ್ತಿದ್ದೆ. ನಿಮಗೆ ತೊಂದರೆ ಕೊಟ್ಟಿದ್ದೇನೆ ಕ್ಷಮಿಸಿ’ ದರ್ಶನ್ ಕೇಳಿದ್ದಾರೆ ಎನ್ನಲಾಗಿದೆ. ಅಲ್ಲದೆ, ಹೈ ಸೆಕ್ಯುರಿಟಿ ಸೆಲ್‌ನ ಸಿಬ್ಬಂದಿಗೆ ಅವರು ಧನ್ಯವಾದ ತಿಳಿಸಿದ್ದಾರೆ. ಇನ್ನು ಸಿಬ್ಬಂದಿಗಳೂ ದರ್ಶನ್​ಗೆ ಒಳ್ಳೆಯದಾಗಲಿ ಎಂದು ಹಾರೈಸಿದ್ದಾರೆ. ‘ಉತ್ತಮ ಚಿಕಿತ್ಸೆ ಪಡೆದುಕೊಳ್ಳಿ, ಆರೋಗ್ಯದ ಬಗ್ಗೆ ಗಮನ ಕೊಡಿ’ ಎಂದು ಜೈಲು ಸಿಬ್ಬಂದಿ ಕೇಳಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ‘ಅಕ್ಟೋಬರ್​ಗೆ ಬಂದೇ ಬರ್ತೀನಿ’; ದರ್ಶನ್​ ಹಳೆಯ ವಿಡಿಯೋ ವೈರಲ್

ದರ್ಶನ್ ಅವರು ಬಳ್ಳಾರಿ ಜೈಲು ಸೇರಿದಾಗಿನಿಂದ ಒಂದರ ಮೇಲೆ ಒಂದರಂತೆ ಬೇಡಿಕೆ ಇಡುತ್ತಲೇ ಬರುತ್ತಿದ್ದರು. ಮೊದಲು ಜೈಲಿನಲ್ಲಿ ಟಿವಿ ಬೇಕು ಎಂದರು. ಆ ಬಳಿಕ ಕುರ್ಚಿಗೆ ಬೇಡಿಕೆ ಇಟ್ಟರು. ಹೀಗೆ ಹಲವು ಬೇಡಿಕೆಗಳನ್ನು ದರ್ಶನ್ ಮನವಿ ಮಾಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್!
ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್!
ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಎಫ್ಐಆರ್ ದಾಖಲು
ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಎಫ್ಐಆರ್ ದಾಖಲು
ಪೊಲೀಸರ ಕಣ್ಣಿಗೆ ಬಿದ್ದ ಚಿರತೆ, ಗ್ರಾಮಸ್ಥರಲ್ಲಿ ಆತಂಕ
ಪೊಲೀಸರ ಕಣ್ಣಿಗೆ ಬಿದ್ದ ಚಿರತೆ, ಗ್ರಾಮಸ್ಥರಲ್ಲಿ ಆತಂಕ
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!
ಅಬ್ಬರಿಸಿದ ಸಾಲ್ಟ್ ಅ್ಯಂಡ್ ಪೆಪ್ಪರ್: ಪ್ಲೇಆಫ್​ಗೆ ನೈಟ್ ರೈಡರ್ಸ್​
ಅಬ್ಬರಿಸಿದ ಸಾಲ್ಟ್ ಅ್ಯಂಡ್ ಪೆಪ್ಪರ್: ಪ್ಲೇಆಫ್​ಗೆ ನೈಟ್ ರೈಡರ್ಸ್​
ಡಿಕೆಶಿ​ಗೆ 16 ಲಕ್ಷ ರೂ ಮೌಲ್ಯದ ಗಿಫ್ಟ್: ಅಂಥದ್ದೇನಿದೆ? ಇಲ್ಲಿದೆ ನೋಡಿ
ಡಿಕೆಶಿ​ಗೆ 16 ಲಕ್ಷ ರೂ ಮೌಲ್ಯದ ಗಿಫ್ಟ್: ಅಂಥದ್ದೇನಿದೆ? ಇಲ್ಲಿದೆ ನೋಡಿ
ಅಮೆರಿಕದಲ್ಲಿ ಎರಡು ಹೆಲಿಕಾಪ್ಟರ್​ಗಳ ನಡುವೆ ಡಿಕ್ಕಿ, ಪೈಲಟ್ ಸಾವು
ಅಮೆರಿಕದಲ್ಲಿ ಎರಡು ಹೆಲಿಕಾಪ್ಟರ್​ಗಳ ನಡುವೆ ಡಿಕ್ಕಿ, ಪೈಲಟ್ ಸಾವು
ಆಂಧ್ರಪ್ರದೇಶದಲ್ಲಿ 158 ಪ್ರಯಾಣಿಕರಿದ್ದ 2 ರೈಲು ಬೋಗಿಗಳಿಗೆ ಬೆಂಕಿ
ಆಂಧ್ರಪ್ರದೇಶದಲ್ಲಿ 158 ಪ್ರಯಾಣಿಕರಿದ್ದ 2 ರೈಲು ಬೋಗಿಗಳಿಗೆ ಬೆಂಕಿ
104 ಮೀಟರ್​ ಸಿಕ್ಸರ್​ನೊಂದಿಗೆ ಹೊಸ ಮೈಲುಗಲ್ಲು ದಾಟಿದ ಮ್ಯಾಕ್ಸ್​ವೆಲ್
104 ಮೀಟರ್​ ಸಿಕ್ಸರ್​ನೊಂದಿಗೆ ಹೊಸ ಮೈಲುಗಲ್ಲು ದಾಟಿದ ಮ್ಯಾಕ್ಸ್​ವೆಲ್