AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಡೆವಿಲ್​​’ಗೆ ಅಸಲಿ ಚಾಲೆಂಜ್ ಈಗ ಶುರು; ಬಜೆಟ್ ಎಷ್ಟು? ಗಳಿಕೆ ಎಷ್ಟು?

Devil Budget And Collection: ದರ್ಶನ್ ನಟನೆಯ 'ಡೆವಿಲ್' ಸಿನಿಮಾ ಡಿಸೆಂಬರ್ 11ರಂದು ತೆರೆಕಂಡು 33.26 ಕೋಟಿ ರೂ. ಸಂಗ್ರಹಿಸಿದೆ. ಆದರೆ, 45 ಕೋಟಿ ಬಜೆಟ್ ಇರುವ ಚಿತ್ರದ ಗಳಿಕೆ ಕುಸಿತ ಕಂಡಿದೆ. ಇದೀಗ 'ಮಾರ್ಕ್' ಹಾಗೂ '45' ಚಿತ್ರಗಳ ಬಿಡುಗಡೆಯಿಂದ 'ಡೆವಿಲ್' ಬಾಕ್ಸ್ ಆಫೀಸ್ ಕಲೆಕ್ಷನ್‌ಗೆ ಮತ್ತಷ್ಟು ಹೊಡೆತ ಬೀಳುವ ಸಾಧ್ಯತೆಯಿದೆ. ದರ್ಶನ್ ಜೈಲಿನಲ್ಲಿರುವಾಗ ಅಭಿಮಾನಿಗಳು ಪ್ರಚಾರ ಮಾಡಿದ್ದರೂ, ಲಾಭದ ನಿರೀಕ್ಷೆ ಕಡಿಮೆಯಾಗಿದೆ.

‘ಡೆವಿಲ್​​’ಗೆ ಅಸಲಿ ಚಾಲೆಂಜ್ ಈಗ ಶುರು; ಬಜೆಟ್ ಎಷ್ಟು? ಗಳಿಕೆ ಎಷ್ಟು?
ದರ್ಶನ್
ರಾಜೇಶ್ ದುಗ್ಗುಮನೆ
|

Updated on: Dec 24, 2025 | 8:43 AM

Share

ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ಈ ವಾರ ಎರಡು ದೊಡ್ಡ ಚಾಲೆಂಜ್​​ಗಳು ಎದುರಾಗುತ್ತಾ ಇವೆ. ಅದುವೇ ಮಾರ್ಕ್ ಹಾಗೂ ‘45’ ಸಿನಿಮಾಗಳು. ಎರಡೂ ಭಿನ್ನ ಜಾನರ್​ ಚಿತ್ರಗಳು. ಎರಡೂ ಚಿತ್ರಕ್ಕೆ ಅದರದ್ದೇ ಆದ ಆಡಿಯನ್ಸ್ ಇದ್ದಾರೆ. ಈ ಎರಡೂ ಸಿನಿಮಾಗಳು ಡೆವಿಲ್ ಕಲೆಕ್ಷನ್​​ಗೆ ಸಾಕಷ್ಟು ಹೊಡೆತ ಕೊಡೋ ಎಲ್ಲಾ ಸಾಧ್ಯತೆ ಇದೆ. ಈಗೇ ತಗ್ಗಿರೋ ಕಲೆಕ್ಷನ್, ನಂತರ ಪಾತಾಳ ಕಾಣಲಿದೆ.

‘ಡೆವಿಲ್’ ಸಿನಿಮಾ ಡಿಸೆಂಬರ್ 11ರಂದು ರಿಲೀಸ್ ಆಯಿತು. ಈ ಚಿತ್ರದ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಆ ನಿರೀಕ್ಷೆ ತಕ್ಕ ಮಟ್ಟಿಗೆ ರೀಚ್ ಆಗಲು ಸಿನಿಮಾ ಬಳಿ ಸಾಧ್ಯವಾಗಿದೆ. ಈ ಸಿನಿಮಾ ಮೊದಲ ದಿನ 10 ಕೋಟಿ ರೂಪಾಯಿ ಬಾಚಿಕೊಂಡಿತ್ತು. ಆ ಬಳಿಕ ನಿಧಾನವಾಗಿ ಸಿನಿಮಾ ಗಳಿಕೆಯಲ್ಲಿ ಕುಸಿತ ಕಂಡಿತು. ಈಗ ಸಿನಿಮಾದ ಒಟ್ಟಾರೆ ಕಲೆಕ್ಷನ್ 33.26 ಕೋಟಿ ರೂಪಾಯಿ (ಗ್ರಾಸ್ ಕಲೆಕ್ಷನ್) ಆಗಿದೆ.

ಚಿತ್ರದ ಬಜೆಟ್ ಸರಿ ಸುಮಾರು 45 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. ಟಿವಿ ಹಕ್ಕು, ಒಟಿಟಿ ಹಕ್ಕು ಮಾರಾಟ ಸೇರಿದರೂ ನಿರ್ಮಾಪಕರಿಗೆ ದೊಡ್ಡ ಮಟ್ಟದಲ್ಲಿ ಲಾಭ ಆಗೋದು ಅನುಮಾನವೇ. ಮುಂದಿನ ದಿನಗಳಲ್ಲಿ ಚಿತ್ರದ ಲೈಪ್​ಟೈಮ್ ಕಲೆಕ್ಷನ್ ಇನ್ನು ತೀವ್ರವಾಗಿ ಏರಿಕೆ ಕಾಣೊದು ಅನುಮಾನವೇ.

ಇದನ್ನೂ ಓದಿ: ‘ಈ ಹಿಂದೆ ದರ್ಶನ್ ಬಗ್ಗೆ ಕೆಟ್ಟದ್ದು ಮಾತನಾಡಿದ್ರೆ ತೋರಿಸಲಿ’; ಕಿಚ್ಚ ಸುದೀಪ್ ಸವಾಲು

ದರ್ಶನ್ ಅವರು ಸದ್ಯ ಜೈಲಿನಲ್ಲಿ ಇದ್ದಾರೆ. ಹೀಗಿರುವಾಗಲೇ ಅವರ ಚಿತ್ರ ತೆರೆಗೆ ಬಂದಿದೆ. ಈ ಸಿನಿಮಾ ಪ್ರಚಾರ ಜವಾಬ್ದಾರಿಯನ್ನು ಅಭಿಮಾನಿಗಳು ವಹಿಸಿಕೊಂಡಿದ್ದರು. ಅವರು ಒಂದು ಹಂತಕ್ಕೆ ಸಿನಿಮಾನ ಮೇಲಕ್ಕೆ ತೆಗೆದುಕೊಂಡು ಹೋದರು. ಈಗ ‘ಮಾರ್ಕ್’ ಹಾಗೂ ‘45’ ಚಿತ್ರದಿಂದ ಸಿನಿಮಾ ಸಾಕಷ್ಟು ಸ್ಪರ್ಧೆ ಎದುರಿಸಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಲಾಲ್‌ಬಾಗ್​​ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಚಾಲನೆ
ಲಾಲ್‌ಬಾಗ್​​ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಚಾಲನೆ
ಅನಧಿಕೃತ ಬೈಕ್ ಟ್ಯಾಕ್ಸಿಗಳ ವಿರುದ್ಧ RTO ಕಾರ್ಯಾಚರಣೆ ಮುಂದುವರಿಕೆ
ಅನಧಿಕೃತ ಬೈಕ್ ಟ್ಯಾಕ್ಸಿಗಳ ವಿರುದ್ಧ RTO ಕಾರ್ಯಾಚರಣೆ ಮುಂದುವರಿಕೆ
ರಾಯಚೂರು: ಕೊಳೆತ ತರಕಾರಿ ಅಡುಗೆ, ಸ್ಯಾನಿಟರಿ ಪ್ಯಾಡ್ ಕೊರತೆ
ರಾಯಚೂರು: ಕೊಳೆತ ತರಕಾರಿ ಅಡುಗೆ, ಸ್ಯಾನಿಟರಿ ಪ್ಯಾಡ್ ಕೊರತೆ
ಸಿದ್ದರಾಮಯ್ಯ ಪಟ್ಟಿಯಲ್ಲಿ ಮಹದೇವಪ್ಪ ಹೆಸರಿದ್ದರೂ ಸ್ಥಾನ ತಪ್ಪಿದೆ: ಯತೀಂದ್ರ
ಸಿದ್ದರಾಮಯ್ಯ ಪಟ್ಟಿಯಲ್ಲಿ ಮಹದೇವಪ್ಪ ಹೆಸರಿದ್ದರೂ ಸ್ಥಾನ ತಪ್ಪಿದೆ: ಯತೀಂದ್ರ
ಮಕ್ಕಳಲ್ಲಿ ಹೃದಯಾಘಾತದ ಅಪಾಯ ಹೆಚ್ಚಳ: ಶಾಕಿಂಗ್​​ ಮಾಹಿತಿ ಬಹಿರಂಗ
ಮಕ್ಕಳಲ್ಲಿ ಹೃದಯಾಘಾತದ ಅಪಾಯ ಹೆಚ್ಚಳ: ಶಾಕಿಂಗ್​​ ಮಾಹಿತಿ ಬಹಿರಂಗ
‘ನಮ್ಮ ಕೈಲಾದ ಸಹಾಯ ಮಾಡೋಣ ಅಂತ ದರ್ಶನ್ ಹೇಳಿದ್ರು’; ತನುಷ್ ಶಿವಣ್ಣ
‘ನಮ್ಮ ಕೈಲಾದ ಸಹಾಯ ಮಾಡೋಣ ಅಂತ ದರ್ಶನ್ ಹೇಳಿದ್ರು’; ತನುಷ್ ಶಿವಣ್ಣ
ಬ್ಯಾಂಕ್ ಸಿಬ್ಬಂದಿಯಿಂದಲೇ ನಕಲಿ ಚಿನ್ನ ಅಡವಿಟ್ಟು 1.5 ಕೋಟಿ ರೂ. ವಂಚನೆ!
ಬ್ಯಾಂಕ್ ಸಿಬ್ಬಂದಿಯಿಂದಲೇ ನಕಲಿ ಚಿನ್ನ ಅಡವಿಟ್ಟು 1.5 ಕೋಟಿ ರೂ. ವಂಚನೆ!
ಸಿದ್ದರಾಮಯ್ಯ ಮೇಲೆ ಮುನಿಸುಕೊಂಡ ಅಹಿಂದ ಶಾಸಕರು
ಸಿದ್ದರಾಮಯ್ಯ ಮೇಲೆ ಮುನಿಸುಕೊಂಡ ಅಹಿಂದ ಶಾಸಕರು
ತೋಟದ ಮನೆಗೆ ನುಗ್ಗಿದ ವಿಷಕಾರಿ ಕೊಳಕು ಮಂಡಲ ಹಾವು
ತೋಟದ ಮನೆಗೆ ನುಗ್ಗಿದ ವಿಷಕಾರಿ ಕೊಳಕು ಮಂಡಲ ಹಾವು
ಕಲಬುರಗಿ ಕೇಂದ್ರಿಯ ವಿವಿ ಕ್ವಾರ್ಟರ್ಸ್‌ಗೆ ಚಾಕು ಹಿಡಿದು ನುಗ್ಗಿದ ಆಗಂತುಕರು
ಕಲಬುರಗಿ ಕೇಂದ್ರಿಯ ವಿವಿ ಕ್ವಾರ್ಟರ್ಸ್‌ಗೆ ಚಾಕು ಹಿಡಿದು ನುಗ್ಗಿದ ಆಗಂತುಕರು