AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಡಬಿಡದೆ 28 ಗಂಟೆ ಶೂಟ್; ದರ್ಶನ್​ಗೆ ಮತ್ತೆ ಶುರುವಾಯ್ತು ಬೆನ್ನು ನೋವು

ದರ್ಶನ್ ಅವರು ‘ಡೆವಿಲ್’ ಸಿನಿಮಾದ 28 ಗಂಟೆಗಳ ನಿರಂತರ ಶೂಟಿಂಗ್ ನಂತರ ಬೆನ್ನು ನೋವಿನಿಂದ ಬಳಲುತ್ತಿದ್ದಾರೆ. ಈ ಮೊದಲು ಇದ್ದ ಬೆನ್ನು ನೋವು ಮತ್ತೆ ಹೆಚ್ಚಾಗಿದ್ದು, ಕೋರ್ಟ್ ಹಾಜರಾತಿಯಿಂದಲೂ ಅವರು ದೂರ ಉಳಿದಿದ್ದಾರೆ. ಚಿತ್ರೀಕರಣದ ವೇಳಾಪಟ್ಟಿಯನ್ನು ಪೂರ್ಣಗೊಳಿಸುವ ಒತ್ತಡದಿಂದಾಗಿ ಈ ಘಟನೆ ನಡೆದಿದೆ.

ಎಡಬಿಡದೆ 28 ಗಂಟೆ ಶೂಟ್; ದರ್ಶನ್​ಗೆ ಮತ್ತೆ ಶುರುವಾಯ್ತು ಬೆನ್ನು ನೋವು
ದರ್ಶನ್
Malatesh Jaggin
| Edited By: |

Updated on: Apr 08, 2025 | 1:02 PM

Share

ನಟ ದರ್ಶನ್ (Darshan) ಅವರು ‘ಡೆವಿಲ್’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಬೆನ್ನು ನೋವಿಗೆ ಫಿಸಿಯೋ ಥೆರೆಪಿ ಮಾಡಿಸಿಕೊಳ್ಳುತ್ತಾ, ಅಗತ್ಯ ಮೆಡಿಕೇಷನ್ ಮಾಡುತ್ತಾ ದರ್ಶನ್ ಸೆಟ್​ಗೆ ಮರಳಿದ್ದಾರೆ. ಈಗ 28 ಗಂಟೆ ನಿರಂತರ ಶೂಟ್​ನಿಂದಾಗಿ ದರ್ಶನ್ ಅವರಿಗೆ ಮತ್ತೆ ಬೆನ್ನು ನೋವು ಅತಿಯಾಗಿದೆ ಎಂಬ ವರದಿ ಹರಿದಾಡಿದೆ. ಅವರು ಇಂದು (ಏಪ್ರಿಲ್ 8) ಕೋರ್ಟ್​ಗೆ ಹಾಜರಾಗಬೇಕಿತ್ತು. ಆದರೆ, ಬೆನ್ನು ನೋವಿನ ಕಾರಣ ನೀಡಿ ಅವರು ಬಂದಿಲ್ಲ. ಶೂಟಿಂಗ್ ಎಫೆಕ್ಟ್​ನಿಂದಾಗಿ ದರ್ಶನ್ ಬೆನ್ನು ನೋವು ಹೆಚ್ಚಾಗಿದೆ ಎನ್ನಲಾಗಿದೆ.

ದರ್ಶನ್ ಅವರು ಮೈಸೂರಿನಲ್ಲಿ ಕೆಲವು ದಿನಗಳ ಕಾಲ ಶೂಟ್ ಮಾಡಿದರು. ಈ ವೇಳೆ ಕೇವಲ ಟಾಕಿ ಪೋರ್ಷನ್ ಮಾತ್ರ ಇತ್ತು ಎನ್ನಲಾಗಿದೆ. ದರ್ಶನ್ ಆರೋಗ್ಯವನ್ನು ಗಮನದಲ್ಲಿ ಇಟ್ಟುಕೊಂಡು ಆ್ಯಕ್ಷನ್ ದೃಶ್ಯಗಳನ್ನು ನಿರ್ದೇಶಕ ಪ್ರಕಾಶ್ ಮಾಡಿಸಿರಲಿಲ್ಲ. ರಾಜಸ್ಥಾನದಲ್ಲಿ ಯಾವ ದೃಶ್ಯಗಳ ಶೂಟ್ ನಡೆದಿದೆ ಎಂಬ ಮಾಹಿತಿ ಇನ್ನೂ ರಿವೀಲ್ ಆಗಿಲ್ಲ. ಆದರೆ, ಅವರು ಅಲ್ಲಿ ಬರೋಬ್ಬರಿ 28 ಗಂಟೆಗಳ ಕಾಲ ಶೂಟಿಂಗ್ ಮಾಡಿದ್ದರು ಎನ್ನಲಾಗುತ್ತಿದೆ.

ಬಾಲಿವುಡ್ ನಟ, ನಿರ್ದೇಶಕ ಮಹೇಶ್ ಮಂಜ್ರೇಕರ್ ‘ಡೆವಿಲ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಸಿನಿಮಾ ಕೆಲಸ ವಿಳಂಬ ಆಗಿದ್ದು, ಅವರ ಕಾಲ್​ಶೀಟ್ ಮುಗಿಯೋ ಹಂತದಲ್ಲಿ ಇತ್ತು. ಈ ಕಾರಣಕ್ಕೆ ದರ್ಶನ್ ಅವರು ನಿರಂತರವಾಗಿ ಶೂಟ್​ನಲ್ಲಿ ಭಾಗಿ ಆಗಿ, ಅವರ ಕಾಂಬಿನೇಷನ್​ನಲ್ಲಿ ಬರುವ ಶೂಟ್​ನ ಪೂರ್ಣಗೊಳಿಸಿಕೊಟ್ಟಿದ್ದಾರಂತೆ. ಇದಕ್ಕೆ ಅವರು ತೆಗೆದುಕೊಂಡಿದ್ದು ಬರೋಬ್ಬರಿ 28 ಗಂಟೆ.

ಇದನ್ನೂ ಓದಿ
Image
ಕೋರ್ಟ್​ಗೆ ಬರಲೇ ಬೇಕು, ದರ್ಶನ್​ಗೆ ನ್ಯಾಯಾಲಯದ ಎಚ್ಚರಿಕೆ
Image
ಬೆನ್ನು ನೋವಿನ ಕಾರಣ ಹೇಳಿ ಕೋರ್ಟ್​ಗೆ ಗೈರಾದ ದರ್ಶನ್
Image
ಸಾಯಿ ಪಲ್ಲವಿ ಧ್ವನಿ ಅದೆಷ್ಟು ಕ್ಯೂಟ್; ಅವರ ಹಾಡು ಕೇಳಿ
Image
ಐಪಿಎಲ್ ಬೆಟ್ಟಿಂಗ್ ಪ್ರಮೋಷನ್ ಮಾಡೋ ಇನ್​ಫ್ಲ್ಯುಯೆನ್ಸ್​ರಗಳಿಗೆ ನೋಟಿಸ್

ಬೆನ್ನು ನೋವಿನ ಸಮಸ್ಯೆ ಇದ್ದು 28 ಗಂಟೆಗಳ ಕಾಲ ಶೂಟ್ ಮಾಡುವುದು ಎಂದರೆ ಅದು ಸಣ್ಣ ಮಾತಲ್ಲ. ಅದನ್ನು ದರ್ಶನ್ ಮಾಡಿ ತೋರಿಸಿದ್ದಾರೆ. ಆದರೆ, ಅದು ಈಗ ಅವರಿಗೆ ಬ್ಯಾಕ್ ಫೈಯರ್ ಆಗಿದೆ. ಮತ್ತೆ ಬೆನ್ನು ನೋವು ಹೆಚ್ಚಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ‘ನನಗೆ ಬರೋಕಾಗಲ್ಲ, ವಿನಾಯಿತಿ ಕೊಡಿ’; ಬೆನ್ನು ನೋವಿನ ಕಾರಣ ಹೇಳಿ ಕೋರ್ಟ್​ಗೆ ಗೈರಾದ ದರ್ಶನ್

ಹೈದರಾಬಾದ್​ನಲ್ಲಿ ಮುಂದಿನ ಹಂತದ ಶೂಟ್

ಹೈದರಾಬಾದ್​ನಲ್ಲಿ ಮುಂದಿನ ಹಂತದ ಶೂಟ್ ನಡೆಯಲಿದೆಯಂತೆ. ಅದು ಯಾವಾಗ ಎನ್ನುವ ಬಗ್ಗೆ ತಂಡದ ಕಡೆಯಿಂದ ಅಪ್​​ಡೇಟ್ ಬಂದಿಲ್ಲ. ಸಿನಿಮಾ ಈ ವರ್ಷವೇ ರಿಲೀಸ್ ಆಗುವ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಚನ್ನಪಟ್ಟಣ ನಗರಕ್ಕೇ ನುಗ್ಗಿದ ಒಂಟಿ ಸಲಗ: ಎದುರಿಗೆ ಸಿಕ್ಕಿದ್ದೆಲ್ಲ ಉಡೀಸ್​​
ಚನ್ನಪಟ್ಟಣ ನಗರಕ್ಕೇ ನುಗ್ಗಿದ ಒಂಟಿ ಸಲಗ: ಎದುರಿಗೆ ಸಿಕ್ಕಿದ್ದೆಲ್ಲ ಉಡೀಸ್​​
ಮೇ 4ಕ್ಕೆ ಪ್ರಮಾಣವಚನಕ್ಕೆ ಬರುವೆ, ಬಂಗಾಳದಲ್ಲಿ ಮೋದಿ ವಿಜಯಘೋಷ
ಮೇ 4ಕ್ಕೆ ಪ್ರಮಾಣವಚನಕ್ಕೆ ಬರುವೆ, ಬಂಗಾಳದಲ್ಲಿ ಮೋದಿ ವಿಜಯಘೋಷ
ರಾಜಕುಮಾರ್ ಸ್ಮಾರಕದ ಬಳಿ ಫ್ಲೆಕ್ಸ್ ಗೋಡೌನ್‌ನಲ್ಲಿ ಭೀಕರ ಅಗ್ನಿ ಅವಘಡ
ರಾಜಕುಮಾರ್ ಸ್ಮಾರಕದ ಬಳಿ ಫ್ಲೆಕ್ಸ್ ಗೋಡೌನ್‌ನಲ್ಲಿ ಭೀಕರ ಅಗ್ನಿ ಅವಘಡ
ಅಕ್ರಮದ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದ ಮಹಿಳೆಗೇ ಬಿಗ್ ಶಾಕ್!
ಅಕ್ರಮದ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದ ಮಹಿಳೆಗೇ ಬಿಗ್ ಶಾಕ್!
SSLC ಫಲಿತಾಂಶದ ವೇಳೆ ಯಡವಟ್ಟು: 92ರ ಬದಲು ವಿದ್ಯಾರ್ಥಿಗೆ ಬಂದಿದ್ದು 48 ಅಂಕ
SSLC ಫಲಿತಾಂಶದ ವೇಳೆ ಯಡವಟ್ಟು: 92ರ ಬದಲು ವಿದ್ಯಾರ್ಥಿಗೆ ಬಂದಿದ್ದು 48 ಅಂಕ
ಬ್ಲಡ್ ಬ್ಯಾಂಕ್​ಗಳಿಗೂ ತಟ್ಟಿದ ಬಿಸಿಲಿನ ಬೇಗೆ: ರಕ್ತ ಸಿಗದೇ ರೋಗಿಗಳ ಪರದಾಟ
ಬ್ಲಡ್ ಬ್ಯಾಂಕ್​ಗಳಿಗೂ ತಟ್ಟಿದ ಬಿಸಿಲಿನ ಬೇಗೆ: ರಕ್ತ ಸಿಗದೇ ರೋಗಿಗಳ ಪರದಾಟ
ಕೊಪ್ಪಳದಲ್ಲಿ ನಿಲ್ಲದ ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಾಟ ದಂಧೆ
ಕೊಪ್ಪಳದಲ್ಲಿ ನಿಲ್ಲದ ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಾಟ ದಂಧೆ
ಬೆಳ್ಳಂಬೆಳಗ್ಗೆ ಸಫಾರಿ ತೆರಳಿದವರಿಗೆ ದರ್ಶನ ಕೊಟ್ಟ ಅಪರೂಪದ ಕರಿಚಿರತೆ!
ಬೆಳ್ಳಂಬೆಳಗ್ಗೆ ಸಫಾರಿ ತೆರಳಿದವರಿಗೆ ದರ್ಶನ ಕೊಟ್ಟ ಅಪರೂಪದ ಕರಿಚಿರತೆ!
ಡೋಲು ಬಾರಿಸುತ್ತಾ ಭರ್ಜರಿ ಡ್ಯಾನ್ಸ್ ಮಾಡಿದ ಶಾಸಕ ಶಿವಲಿಂಗೇಗೌಡ
ಡೋಲು ಬಾರಿಸುತ್ತಾ ಭರ್ಜರಿ ಡ್ಯಾನ್ಸ್ ಮಾಡಿದ ಶಾಸಕ ಶಿವಲಿಂಗೇಗೌಡ
ರೈಲಿನಿಂದ ಮಗು ಬಿದ್ದೇಬಿಡ್ತು, ಚೈನ್ ಎಳೆದರೂ ನಿಲ್ಲದ ರೈಲು
ರೈಲಿನಿಂದ ಮಗು ಬಿದ್ದೇಬಿಡ್ತು, ಚೈನ್ ಎಳೆದರೂ ನಿಲ್ಲದ ರೈಲು