AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಡೆವಿಲ್’ಗೆ ಮಲ್ಟಿಪ್ಲೆಕ್ಸ್ ಬುಕಿಂಗ್ ಓಪನ್ ಯಾವಾಗ? ಸಿಂಗಲ್ ಸ್ಕ್ರೀನ್​ಗಳು ಸೋಲ್ಡ್​ಔಟ್

ನಟ ದರ್ಶನ್ ಅಭಿನಯದ 'ಡೆವಿಲ್' ಸಿನಿಮಾ ಡಿಸೆಂಬರ್ 11ರಂದು ಬಿಡುಗಡೆಯಾಗಲಿದೆ. ದರ್ಶನ್ ಜೈಲಿನಲ್ಲಿದ್ದರೂ, ಸಿನಿಮಾಗೆ ಭರ್ಜರಿ ಅಡ್ವಾನ್ಸ್ ಬುಕಿಂಗ್ ಸಿಕ್ಕಿದೆ. ಅಭಿಮಾನಿಗಳು ಸ್ವತಃ ಪ್ರಚಾರದ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಮಲ್ಟಿಪ್ಲೆಕ್ಸ್ ಬುಕಿಂಗ್ ಇಂದಷ್ಟೇ ಆರಂಭವಾಗುವ ಸಾಧ್ಯತೆ ಇದ್ದು, 'ಡೆವಿಲ್' ಮೊದಲ ದಿನದ ಗಳಿಕೆ ಬಗ್ಗೆ ಕುತೂಹಲ ಹೆಚ್ಚಿದೆ.

‘ಡೆವಿಲ್’ಗೆ ಮಲ್ಟಿಪ್ಲೆಕ್ಸ್ ಬುಕಿಂಗ್ ಓಪನ್ ಯಾವಾಗ? ಸಿಂಗಲ್ ಸ್ಕ್ರೀನ್​ಗಳು ಸೋಲ್ಡ್​ಔಟ್
ದರ್ಶನ್
ರಾಜೇಶ್ ದುಗ್ಗುಮನೆ
|

Updated on:Dec 09, 2025 | 11:53 AM

Share

ನಟ ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ಡಿಸೆಂಬರ್ 11ರಂದು ರಿಲೀಸ್ ಆಗುತ್ತಿದೆ. ಈ ಚಿತ್ರದ ರಿಲೀಸ್​ಗೆ ಇನ್ನು ಬಾಕಿ ಇರೋದು ಕೇವಲ ಎರಡು ದಿನ ಮಾತ್ರ. ಆದಾಗ್ಯೂ ಸಿನಿಮಾಗೆ ಮಲ್ಟಿಪ್ಲೆಕ್ಸ್ ಬುಕಿಂಗ್ ಓಪನ್ ಆಗಿಲ್ಲ. ಇಂದು ಅದು ಓಪನ್ ಆಗುವ ಸಾಧ್ಯತೆ ಇದೆ. ‘ಡೆವಿಲ್’ ಸಿನಿಮಾ ರಿಲೀಸ್ ಆಗುವ ಸಂದರ್ಭದಲ್ಲಿ ದರ್ಶನ್ ಅವರು ಜೈಲಿನಲ್ಲಿ ಇರೋದು ಫ್ಯಾನ್ಸ್​ಗೆ ಬೇಸರ ಮೂಡಿಸಿದೆ.

ಮಿಲನ ಪ್ರಕಾಶ್ ಅವರು ‘ಡೆವಿಲ್’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ನಿರೀಕ್ಷೆ ಮೂಡಿಸಿದೆ. ಈ ಚಿತ್ರದ ಟ್ರೇಲರ್ ಇತ್ತೀಚೆಗೆ ರಿಲೀಸ್ ಆಗಿದ್ದು, ಕೊಟ್ಯಾಂತರ ವೀಕ್ಷಣೆ ಕಂಡಿದೆ. ಅಡ್ವಾನ್ಸ್ ಬುಕಿಂಗ್​ಗೆ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದೆ. ಟಿಕೆಟ್ ದರ 400 ರೂಪಾಯಿ ಇದ್ದರೂ ಬುಕಿಂಗ್ ಮಾಡುತ್ತಿದ್ದಾರೆ. ಡಿಸೆಂಬರ್ 11ರ ಬೆಳಿಗ್ಗೆ 6.30ರ ಶೋ ಬಹುತೇಕ್ ಹೌಸ್​​ಫುಲ್ ಆಗಿದೆ.

ಇನ್ನು, ಮಲ್ಟಿಪ್ಲೆಕ್ಸ್​ನಲ್ಲಿ ಇನ್ನೂ ಬುಕಿಂಗ್ ಓಪನ್ ಆಗಿಲ್ಲ. ಇಂದು ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ಮಲ್ಟಿಪ್ಲೆಕ್ಸ್ ಬುಕಿಂಗ್ ಆರಂಭ ಆಗಬಹುದು. ಇದಾದ ಬಳಿಕ ಚಿತ್ರದ ಅಡ್ವಾನ್ಸ್ ಬುಕಿಂಗ್​ಗೆ ಮತ್ತಷ್ಟು ಮೆರಗು ಸಿಗಲಿದೆ. ಈ ಸಿನಿಮಾ ಮೊದಲ ದಿನ ಎಷ್ಟು ಕೋಟಿ ರೂಪಾಯಿ ಗಳಿಸಲಿದೆ ಎಂಬ ಕುತೂಹಲ ಮೂಡಿದೆ.

ಇದನ್ನೂ ಓದಿ: 10 ಗಂಟೆಯಲ್ಲಿ ‘ಡೆವಿಲ್’ ದಾಖಲೆ ಮುರಿದ ‘ಮಾರ್ಕ್​’ ಟ್ರೇಲರ್

‘ಡೆವಿಲ್’ ಸಿನಿಮಾದ ನಟ ದರ್ಶನ್ ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಜೈಲಿನಲ್ಲಿ ಇದ್ದಾರೆ. ಹೀಗಾಗಿ, ಸಿನಿಮಾ ಪ್ರಚಾರದ ಜವಾಬ್ದಾರಿಯನ್ನು ಅಭಿಮಾನಿಗಳೇ ವಹಿಸಿಕೊಂಡಿದ್ದಾರೆ. ಅವರು ವಿವಿಧ ಕಡೆಗಳಲ್ಲಿ ಪ್ರಚಾರ ಆರಂಭಿಸಿದ್ದಾರೆ. ಸಿನಿಮಾಗೆ ಪ್ರೀ ರಿಲೀಸ್ ಈವೆಂಟ್ ಮಾಬೇಕಿತ್ತು ಎಂಬುದು ಫ್ಯಾನ್ಸ್ ಕೋರಿಕೆ ಆಗಿತ್ತು.

ದರ್ಶನ್ ಬಗ್ಗೆ ಹರಿದಾಡಿದೆ ಸುದ್ದಿ

ನಟ ದರ್ಶನ್ ಅವರು ಜೈಲಿನಲ್ಲಿ ಇದ್ದಾರೆ. ಅವರು ಅಲ್ಲಿ ಸಹ ಕೈದಿಗಳ ಜೊತೆ ಕಿರಿಕ್ ಮಾಡಿಕೊಂಡ ಆರೋಪ ಕೇಳಿ ಬಂದಿದೆ. ಅವರು ಸಹ ಕೈದಿಗಳಿಗೆ ಕಿರುಕುಳ ನೀಡುತ್ತಿದ್ದಾರಂತೆ. ಇತ್ತೀಚೆಗೆ ಜೈಲಿನಲ್ಲಿ ದೊಡ್ಡ ಜಗಳ ಕೂಡ ನಡೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:57 am, Tue, 9 December 25

Follow Us
ಇಂಡೋನೇಷ್ಯಾದ 1,000 ವರ್ಷದ ಶಿವನ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಭಾರತ ಬೆಂಬಲ
ಇಂಡೋನೇಷ್ಯಾದ 1,000 ವರ್ಷದ ಶಿವನ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಭಾರತ ಬೆಂಬಲ
ಶಿರಾಡಿ ಘಾಟ್‌ನಲ್ಲಿ ನಿಯಂತ್ರಣ ತಪ್ಪಿ ಡಾಂಬರ್ ಟ್ಯಾಂಕರ್ ಪಲ್ಟಿ
ಶಿರಾಡಿ ಘಾಟ್‌ನಲ್ಲಿ ನಿಯಂತ್ರಣ ತಪ್ಪಿ ಡಾಂಬರ್ ಟ್ಯಾಂಕರ್ ಪಲ್ಟಿ
ರಾಮಾಯಣ, ಮಹಾಭಾರತ ಇಂಡೋನೇಷ್ಯಾ- ಭಾರತದ ಬಾಂಧವ್ಯದ ಸ್ತಂಭಗಳು; ಪ್ರಧಾನಿ ಮೋದಿ
ರಾಮಾಯಣ, ಮಹಾಭಾರತ ಇಂಡೋನೇಷ್ಯಾ- ಭಾರತದ ಬಾಂಧವ್ಯದ ಸ್ತಂಭಗಳು; ಪ್ರಧಾನಿ ಮೋದಿ
ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ; ಭೂಕುಸಿತದಿಂದ ಮೂವರು ಸಾವು
ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ; ಭೂಕುಸಿತದಿಂದ ಮೂವರು ಸಾವು
ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ
ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ
ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ:ಆಗುಂಬೆಯ ಸೊಬಗು
ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ:ಆಗುಂಬೆಯ ಸೊಬಗು
ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು
ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ
SIR ಪ್ರಕ್ರಿಯಲ್ಲಿ ಸಾಲುಸಾಲು ಎಡವಟ್ಟು: ಫಾರ್ಮ್​ ತುಂಬಲು ಶಾಲಾ ಮಕ್ಕಳ ಬಳಕೆ
SIR ಪ್ರಕ್ರಿಯಲ್ಲಿ ಸಾಲುಸಾಲು ಎಡವಟ್ಟು: ಫಾರ್ಮ್​ ತುಂಬಲು ಶಾಲಾ ಮಕ್ಕಳ ಬಳಕೆ