AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ದರ್ಶನ್ ಬಳಿಯೂ ಇತ್ತು ಹಮ್ಮರ್; ಮಾರಿದ್ದು ಏಕೆ?

ರಣವೀರ್ ಸಿಂಗ್ ಇತ್ತೀಚೆಗೆ ಹೊಸ ಹಮ್ಮರ್ ಎಲೆಕ್ಟ್ರಿಕ್ ಇವಿ ಖರೀದಿಸಿದ್ದಾರೆ. ಇದನ್ನು ಫ್ಯಾನ್ಸ್ ಸಂಭ್ರಮಿಸುತ್ತಿದ್ದಾರೆ. ಈ ಮೊದಲು ರ್ಶನ್ ಬಳಿ ಹಮ್ಮರ್ ಇತ್ತು. ಆದರೆ, ಅವರು ಇದನ್ನು ಮಾರಾಟ ಮಾಡಿದ್ದರು. ಇದಕ್ಕೆ ಕಾರಣ ಏನು ಎಂಬುದನ್ನು ಅವರು ಈ ಮೊದಲು ಸಂದರ್ಶನ ಒಂದರಲ್ಲಿ ವಿವರಿಸಿದ್ದರು. ಆ ಬಗ್ಗೆ ಇಲ್ಲಿದೆ ವಿವರ.

ನಟ ದರ್ಶನ್ ಬಳಿಯೂ ಇತ್ತು ಹಮ್ಮರ್; ಮಾರಿದ್ದು ಏಕೆ?
ದರ್ಶನ್
 ಶ್ರೀಲಕ್ಷ್ಮೀ ಎಚ್
| Edited By: |

Updated on:Jul 11, 2025 | 12:04 PM

Share

ಬಾಲಿವುಡ್ ನಟ ರಣವೀರ್ ಸಿಂಗ್ (Ranveer Singh) ಅವರು ಇತ್ತೀಚೆಗೆ ಹೊಸ ಕಾರು ಖರೀದಿ ಮಾಡಿದ್ದಾರೆ. ಆ ಕಾರು ಬೇರೆ ಯಾವುದೂ ಅಲ್ಲ ಹಮ್ಮರ್ ಎಲೆಕ್ಟ್ರಿಕಲ್ ಇವಿ. ಇದು ಎಲೆಕ್ಟ್ರಿಕ್ ಕಾರಾದರೂ ಸಾಕಷ್ಟು ಐಷಾರಾಮಿ ಫೀಚರ್​ಗಳನ್ನು ಹೊಂದಿದೆ ಎನ್ನಬಹುದು. ದರ್ಶನ್ ಬಳಿಯೂ ಈ ಮೊದಲು ಹಮ್ಮರ್ ಇತ್ತು ಎಂಬ ವಿಚಾರ ನಿಮಗೆ ಗೊತ್ತೇ? ಅವರು ತೆಗೆದುಕೊಂಡಿದ್ದು ಪೆಟ್ರೋಲ್ ವಾಹನ ಆಗಿತ್ತು. ಆದರೆ, ಅದನ್ನು ಅವರು ಮಾರುವ ನಿರ್ಧಾರ ತೆಗೆದುಕೊಂಡು ಮಾರಿಯೇ ಬಿಟ್ಟರು. ಇದಕ್ಕೆ ಕಾರಣವನ್ನು ಅವರು ಈ ಮೊದಲು ವಿವರಿಸಿದ್ದರು.

ದರ್ಶನ್ ಅವರು ಕಾರಿನ ಬಗ್ಗೆ ವಿಶೇಷ ಪ್ರೀತಿ ಹೊಂದಿದ್ದಾರೆ. ಈ ಕಾರಣಕ್ಕೆ ಅವರು ಆಗಾಗ ವಿವಿಧ ಕಾರುಗಳನ್ನು ಡ್ರೈವ್ ಮಾಡೋದನ್ನು ನೀವು ಕಾಣಬಹುದು. ಲ್ಯಾಂಬೋರ್ಗಿನಿ, ರೇಂಜ್ ರೋವರ್ ಕಾರುಗಳನ್ನು ಚಾಲನೆ ಮಾಡಿಕೊಂಡು ಹೋಗಿದ್ದರು. ಅವರ ಬಳಿ ಹಮ್ಮರ್ ಕೂಡ ಇತ್ತು.

‘ನನಗೆ ಬೆಂಟ್ಲಿ ತೆಗೆದುಕೊಳ್ಳಬೇಕು ಎಂಬ ಆಸೆ ಇದೆ. ಆದರೆ, ಇಲ್ಲಿ ಶೋ ರೂಂ ಇಲ್ಲ. ಮುಂಬೈನಲ್ಲಿ ಇದೆ. ನಾನು ಈ ಮೊದಲು ಹಮ್ಮರ್ ತೆಗೆದುಕೊಂಡಿದ್ದೆ. ನಾವು ಜೋಶ್​ನಲ್ಲಿ ಇದ್ದೆವು. ಆದರೆ, ಒಳಗಡೆ 800 ಗಿಂತಾ ಖಚಡ ಆಗಿತ್ತು ಗಾಡಿ. ಎಸಿ ಬರಲ್ಲ, ಸೀಟ್ ಅಡ್ಜಸ್ಟ್​ಮೆಂಟ್ ಬರೋದಿಲ್ಲ. ಪೆಟ್ರೋಲ್ ಮಾತ್ರ ಕುಡಿಯುತ್ತಿತ್ತು’ ಎಂದು ದರ್ಶನ್ ಅವರು ಈ ಮೊದಲು ಹೇಳಿದ್ದರು.

ಇದನ್ನೂ ಓದಿ
Image
‘ಅಮೃತಧಾರೆ’ ಧಾರಾವಾಹಿಯಲ್ಲಿ ದೊಡ್ಡ ತಿರುವು; ಭೂಮಿಕಾಗೆ ಅವಳಿ ಮಕ್ಕಳು
Image
‘ಕೆಡಿ’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಬಾಲಿವುಡ್ ಬಗ್ಗೆ ಸಂಜಯ್ ದತ್ ಬೇಸರ
Image
TRPಯಲ್ಲಿ ಇತಿಹಾಸ; ಮೊದಲ ವಾರ ಎರಡಂಕಿ ರೇಟಿಂಗ್ ಪಡೆದು ನಂಬರ್ 1 ಆದ ‘ಕರ್ಣ’
Image
ದರ್ಶನ್​ಗೆ ದೇವರ ಮೇಲೆ ಎಷ್ಟು ಭಕ್ತಿ ನೋಡಿ; ಇಲ್ಲಿದೆ ವಿಡಿಯೋ ಸಾಕ್ಷಿ

ದರ್ಶನ್ ವಿಡಿಯೋ

‘ಇಲ್ಲಿ ಶೋ ರೂಂ ಇರಲಿಲ್ಲ. ಮೆಕ್ಯಾನಿಕ್ ದುಬೈನಿಂದ ಬರಬೇಕಿತ್ತು. ನಾವು ಹಮ್ಮರ್ ಗ್ರೂಪ್ ಮಾಡಿಕೊಂಡಿದ್ದೆವು. ಆ ಗ್ರೂಪ್​ನಲ್ಲಿ ಸಮಸ್ಯೆಗಳನ್ನು ಹಾಕುತ್ತಿದ್ದೆವು. ಇಂಥ ಸಮಸ್ಯೆ ಇದೆ ಎಂದು ಹೇಳುತ್ತಿದ್ದೆವು. ಅವನು ಬಂದು ವಿಲ್ಸನ್ ಮ್ಯಾನರ್​ನಲ್ಲಿ ಉಳಿಯುತ್ತಿದ್ದ. ನಾನು ಈ ಕಷ್ಟ ನೋಡೇ ಗಾಡಿ ಕೊಟ್ಟೆ’ ಎಂದಿದ್ದರು ದರ್ಶನ್.

ಇದನ್ನೂ ಓದಿ: 20 ವರ್ಷ ಕಿರಿಯ ನಟಿಯ ಜೊತೆ ರಣವೀರ್ ಸಿಂಗ್ ರೊಮ್ಯಾನ್ಸ್; ಕೇಳಿಬಂತು ಟೀಕೆ

‘ಯಾವುದೇ ಕಾರು ಖರೀದಿಸಿದರೂ ಇಲ್ಲಿ ಶೋ ರೂಂ ಇರೋ ಖಾರನ್ನು ಖರೀದಿಸಬೇಕು ಎಂಬ ನಿರ್ಧಾರಕ್ಕೆ ಬಂದೆ. ಶೋ ರೂಂ ಇಲ್ಲಿಲ್ಲ. ಈ ಕಾರಣಕ್ಕೆ ಬೆಂಟ್ಲಿ ಖರೀದಿಸದೇ ಸುಮ್ಮನೆ ಇದ್ದೇನೆ’ ಎಂದು ದರ್ಶನ್ ಹಲವು ವರ್ಷಗಳ ಹಿಂದೆ ಹೇಳಿಕೊಂಡಿದ್ದರು. ದರ್ಶನ್ ಅವರು ಸದ್ಯ ‘ಡೆವಿಲ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಇದರ ಶೂಟ್​ಗೆ ಅವರು ವಿದೇಶಕ್ಕೆ ತೆರಳಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:16 am, Fri, 11 July 25

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು