AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪ್ರತಿ ದಿನ ನಿನ್ನ ಮಿಸ್ ಮಾಡಿಕೊಳ್ತೀನಿ’; ದರ್ಶನ್ ಬರ್ತ್​​ಡೇಗೆ ರಕ್ಷಿತಾ ಭಾವುಕ ಪೋಸ್ಟ್

ನಟ ದರ್ಶನ್ ಈ ಬಾರಿ ಜೈಲಿನಲ್ಲೇ ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸ್‌ನ ಆರೋಪಿಯಾಗಿರುವ ದರ್ಶನ್‌ಗೆ ಸುಪ್ರೀಂಕೋರ್ಟ್ ಜಾಮೀನು ನಿರಾಕರಿಸಿದೆ. ಕುಟುಂಬ ಮತ್ತು ಅಭಿಮಾನಿಗಳಿಗೆ ಈ ಸನ್ನಿವೇಶ ಬೇಸರ ಮೂಡಿಸಿದೆ. ಗೆಳೆಯನನ್ನು ನೆನೆದು ನಟಿ ರಕ್ಷಿತಾ ಭಾವುಕ ಪೋಸ್ಟ್ ಹಾಕಿದ್ದು, 'ನಿನ್ನನ್ನು ಪ್ರತಿ ದಿನ ಮಿಸ್ ಮಾಡಿಕೊಳ್ಳುತ್ತೇನೆ' ಎಂದಿದ್ದಾರೆ.

‘ಪ್ರತಿ ದಿನ ನಿನ್ನ ಮಿಸ್ ಮಾಡಿಕೊಳ್ತೀನಿ’; ದರ್ಶನ್ ಬರ್ತ್​​ಡೇಗೆ ರಕ್ಷಿತಾ ಭಾವುಕ ಪೋಸ್ಟ್
ರಕ್ಷಿತಾ-ದರ್ಶನ್
ರಾಜೇಶ್ ದುಗ್ಗುಮನೆ
|

Updated on: Feb 16, 2026 | 10:06 AM

Share

ನಟ ದರ್ಶನ್ (Darshan) ಅವರು ಇದೇ ಮೊದಲ ಬಾರಿಗೆ ಜೈಲಿನಲ್ಲಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಕಳೆದ ವರ್ಷ ಅವರು ರೇಣುಕಾಸ್ವಾಮಿ ಕೊಲೆ ಕೇಸ್​​ನ ಆರೋಪಿ ಆಗಿದ್ದರೂ, ಜೈಲಿನಿಂದ ಹೊರಗೇ ಇದ್ದರು. ಕುಟುಂಬದ ಜೊತೆ ಅವರು ಈ ದಿನವನ್ನು ಸಂಭ್ರಮಿಸಿದ್ದರು. ಆದರೆ, ಈ ಬಾರಿ ಅವರು ಜೈಲಿನಲ್ಲಿರುವುದರಿಂದ ಅವರ ಕುಟುಂಬ ಹಾಗೂ ಅಭಿಮಾನಿ ವರ್ಗಕ್ಕೆ ಈ ಬಗ್ಗೆ ಬೇಸರ ಇದೆ. ಅವರಿಲ್ಲದೆ ಆಚರಿಸುತ್ತಿರುವ ಮೊದಲ ಬರ್ತ್​​​ಡೇ ಇದಾಗಿದೆ. ಈ ಸಂದರ್ಭದಲ್ಲಿ ನಟಿ ರಕ್ಷಿತಾ ಅವರು ಭಾವುಕರಾಗಿ ಪೋಸ್ಟ್ ಒಂದನ್ನು ಹಾಕಿದ್ದಾರೆ.

ರಕ್ಷಿತಾ ಹಾಗೂ ದರ್ಶನ್ ಸಿನಿಮಾಗಳಲ್ಲಿ ಒಟ್ಟಾಗಿ ಕೆಲಸ ಮಾಡಿದರು. ರಕ್ಷಿತಾ ಹಾಗೂ ದರ್ಶನ್ ಮಧ್ಯೆ ಗಾಢವಾದ ಗೆಳೆತನ ಇದೆ. ಒಬ್ಬರನ್ನೊಬ್ಬರು ಬಿಟ್ಟುಕೊಟ್ಟಿಲ್ಲ. ಸದಾ ಪರಸ್ಪರ ಬೆಂಬಲವಾಗಿ ನಿಲ್ಲುತ್ತಾ ಬರುತ್ತಿದ್ದಾರೆ. ಈಗ ರಕ್ಷಿತಾ ಅವರು ಗೆಳೆಯನನ್ನು ನೆನಪಿಸಿಕೊಂಡಿದ್ದಾರೆ. ಪ್ರತಿ ದಿನವೂ ದರ್ಶನ್ ಅವರನ್ನು ಮಿಸ್ ಮಾಡಿಕೊಳ್ಳೋದಾಗಿ ಹೇಳಿದ್ದಾರೆ.

ದರ್ಶನ್, ರಕ್ಷಿತಾ ಹಾಗೂ ಪ್ರೇಮ್ ಒಟ್ಟಾಗಿ ಇರೋ ಪೋಸ್ಟ್​​ನ ರಕ್ಷಿತಾ ಹಂಚಿಕೊಂಡಿದ್ದಾರೆ. ‘ಕಳೆದ ವರ್ಷ ಇದೇ ಸಮಯದಲ್ಲಿ ತೆಗೆದ ಫೋಟೋ. ನನ್ನ ಪ್ರೀತಿ ಪಾತ್ರನಿಗೆ ಜನ್ಮದಿನದ ಶುಭಾಶಯ’ ಎಂದು ರಕ್ಷಿತಾ ವಿಶ್ ಮಾಡಿದ್ದಾರೆ. ಮತ್ತೊಂದು ಇನ್​​ಸ್ಟಾ ಸ್ಟೋರಿಯಲ್ಲಿ, ‘ನಾನು ನಿನ್ನನ್ನು ದಿನವೂ ಮಿಸ್ ಮಾಡಿಕೊಳ್ಳುತ್ತೇನೆ. ನೀನು ಮತ್ತೆ ಖುಷಿಯಾಗಿ ಇರೋದನ್ನು ನೋಡುವಂತಾಗಲಿ ಎಂದು ಹಾರೈಸುತ್ತೇನೆ’ ಎಂದು ಅವರು ಬರೆದಿದ್ದಾರೆ.

ಇದನ್ನೂ ಓದಿ: ದರ್ಶನ್ ಪ್ರಾಣಿ ಪ್ರಿಯನಾಗಲು ಕಾರಣವಾದ ಅಂಶವೇನು ಗೊತ್ತೇ?

ದರ್ಶನ್ ಅವರು ಜೈಲಿನಿಂದ ಹೊರ ಬರಲಿ ಎಂಬುದು ಅಭಿಮಾನಿಗಳ ಕೋರಿಕೆ ಆಗಿದೆ. ಆದರೆ, ಸುಪ್ರೀಂಕೋರ್ಟ್​ ಜಾಮೀನು ವಜಾ ಮಾಡಿರುವುದರಿಂದ ದರ್ಶನ್ ಬೇರೆ ಆಯ್ಕೆ ಇಲ್ಲದೆ, ಜೈಲಿನಲ್ಲೇ ಕುಳಿತಿದ್ದಾರೆ. ಪ್ರಕರಣದ ವಿಚಾರಣೆ ಕೂಡ ನಡೆಯುತ್ತಿದೆ. ಸಾಕ್ಷಿಗಳನ್ನು ಕರೆಸಿ ವಿಚಾರಣೆ ಮಾಡಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.