AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಿನ ಕಠಿಣ ನಿಯಮದಿಂದ ಎರಡೇ ದಿನಕ್ಕೆ ಸುಸ್ತಾದ ದರ್ಶನ್

ದರ್ಶನ್ ಅವರ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಈ ಮೊದಲು ಅವರಿಗೆ ಒದಗಿಸಲಾಗಿದ್ದ ವಿಶೇಷ ಸವಲತ್ತುಗಳನ್ನು ನಿಲ್ಲಿಸಿ, ಕಟ್ಟುನಿಟ್ಟಿನ ಜೈಲು ನಿಯಮಗಳನ್ನು ಪಾಲಿಸಬೇಕೆಂದು ಆದೇಶಿಸಿದೆ. ಜೈಲಿನಲ್ಲಿ ಅವರಿಗೆ ಒಂದೇ ಬೆಡ್‌ಶೀಟ್ ಮತ್ತು ಜೈಲು ಮೆನುವಿನ ಆಹಾರ ಒದಗಿಸಲಾಗುತ್ತಿದೆ.

ಜೈಲಿನ ಕಠಿಣ ನಿಯಮದಿಂದ ಎರಡೇ ದಿನಕ್ಕೆ ಸುಸ್ತಾದ ದರ್ಶನ್
ದರ್ಶನ್
ರಾಜೇಶ್ ದುಗ್ಗುಮನೆ
|

Updated on:Aug 16, 2025 | 12:58 PM

Share

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಕೇಸ್​​ನಲ್ಲಿ ದರ್ಶನ್ ಕಳೆದ ವರ್ಷ ಜೂನ್​ನಲ್ಲಿ ಅರೆಸ್ಟ್ ಆಗಿದ್ದರು. ಕರ್ನಾಟಕ ಹೈಕೋರ್ಟ್​ನಿಂದ ಜಾಮೀನು ಪಡೆದು ಅವರು ಹಾಯಾಗಿ ಸುತ್ತಾಡಿಕೊಂಡಿದ್ದರು. ಸುಪ್ರೀಂಕೋರ್ಟ್ ಸದ್ಯ ದರ್ಶನ್ (Darshan) ಜಾಮೀನನ್ನು ರದ್ದು ಮಾಡಿದೆ. ಅಲ್ಲದೆ, ದರ್ಶನ್​ಗೆ ಯಾವುದೇ ಐಷಾರಾಮಿ ಸವಲತ್ತು ಸಿಗದಂತೆ ನೋಡಿಕೊಳ್ಳಬೇಕು ಎಂದು ತಾಕೀತು ಮಾಡಿದೆ. ಈ ಕಾರಣದಿಂದಲೇ ದರ್ಶನ್ ಜೈಲಿನಲ್ಲಿ ಸಾಕಷ್ಟು ತೊಂದರೆ ಎದುರಿಸಬೇಕಾದ ಪರಿಸ್ಥಿತಿ ಬಂದಿದೆ.

ದರ್ಶನ್ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾ ಜೈಲಿನಲ್ಲಿ ಇಡಲಾಗಿದೆ. ದರ್ಶನ್​ ಆರಂಭದಲ್ಲಿ ಇಲ್ಲೇ ಇದ್ದರು. ಅವರಿಗೆ ಐಷಾರಾಮಿ ಸವಲತ್ತು ಒದಗಿಸಲಾಯಿತು. ಇದರ ಫೋಟೋಗಳು ಕೂಡ ವೈರಲ್ ಆದವು. ಈ ಪ್ರಕರಣದಲ್ಲಿ ಕೇಸ್ ಕೂಡ ದಾಖಲಾಗಿದೆ. ಈ ವಿಚಾರಗಳನ್ನು ಗಮನಿಸಿದ್ದ ಸುಪ್ರೀಂಕೋರ್ಟ್ ದರ್ಶನ್​ಗೆ ಯಾವುದೇ ಸವಲತ್ತು ಸಿಗದಂತೆ ನೋಡಿಕೊಳ್ಳಿ ಎಂದು ಹೇಳಿದೆ.

ದರ್ಶನ್ ಜೈಲಿನಲ್ಲಿ ಹೀಗಿದ್ದಾರೆ

ಇದನ್ನೂ ಓದಿ
Image
ಬಸ್ ಓಡಿಸಿದ ಬಾಲಯ್ಯ; ಮುಖದಲ್ಲಿರೋ ಭಯ ನೋಡಿದ್ರೆ ಯಾರೂ ಕೂರೋ ಧೈರ್ಯ ಮಾಡಲ್ಲ
Image
ಸೈಫ್ ಅಲಿ ಖಾನ್ ಜನ್ಮದಿನ; ನಟನ ಒಟ್ಟೂ ಆಸ್ತಿ ಎಷ್ಟು ಕೋಟಿ ರೂಪಾಯಿ
Image
ಸ್ವಾತಂತ್ರ್ಯ ದಿನಾಚರಣೆ ಸೆಲೆಬ್ರೇಷನ್​ಗೆ ಬಾರದೆ ಮಂಕಾಗಿ ಕುಳಿತ ದರ್ಶನ್
Image
‘ಕೂಲಿ’, ‘ವಾರ್ 2’ 2ನೇ ದಿನದ ಗಳಿಕೆ ಇಷ್ಟೊಂದಾ? ಅಬ್ಬಬ್ಬಾ ಊಹಿಸಲೂ ಅಸಾಧ್ಯ

ಈ ಬಾರಿ ಜೈಲಿನ ಮ್ಯಾನ್ಯುಯಲ್ ಪ್ರಕಾರವೇ ಅಧಿಕಾರಿಗಳು ದರ್ಶನ್​ನ ನಡೆಸಿಕೊಳ್ಳುತ್ತಿದ್ದಾರೆ. ಕಟ್ಟುನಿಟ್ಟಾಗಿ ಅವರಿಗೆ ಜೈಲು ಊಟವನ್ನೇ ನೀಡಬೇಕಿದೆ. ಮನೆಯಿಂದ ಯಾವುದೇ ಊಟವನ್ನು ತರುವಂತಿಲ್ಲ. ಜೈಲಿನ  ಮೆನುವಿನಂತೆ ಊಟ-ತಿಂಡಿ ನೀಡಲಾಗುತ್ತಿದೆ. ಕಳೆದ ಬಾರಿ ಮನೆ ಊಟದ ವ್ಯವಸ್ಥೆ ಇತ್ತು. ಆದರೆ, ಈ ಬಾರಿ ಅದಕ್ಕೆ ಬ್ರೇಕ್ ಬಿದ್ದಿದೆ.

ಎರಡು ಬೆಡ್​ಶೀಟ್ ಕೊಡಿ

ಸದ್ಯ ಬೆಂಗಳೂರಿನಲ್ಲಿ ಮಳೆಯ ವಾತಾವರಣ ಇದೆ. ಹೀಗಾಗಿ ಹವಾಮಾನ ತಂಪಾಗಿದೆ. ಈ ವೇಳೆ ಹೊದ್ದುಕೊಳ್ಳಲು ಒಂದು ಬೆಡ್​ಶೀಟ್ ಸಾಕಾಗೋದಿಲ್ಲ. ಹೀಗಾಗಿ, ದರ್ಶನ್ ಎರಡು ಬೆಡ್​ಶೀಟ್ ಕೇಳಿದ್ದಾರೆ. ಆದರೆ,  ಜೈಲಿನ ಮ್ಯಾನ್ಯುಯಲ್ ಪ್ರಕಾರ ಒಂದೇ ಬೆಡ್​ ಶೀಟ್ ನೀಡಲಾಗಿದೆ. ನಂತರ ಮರು ಮಾತಾಡದೇ ಅವರು ಒಂದೇ ಬೆಡ್​ಶೀಟ್ ಪಡೆದು ಹೋಗಿದ್ದಾರೆ.

ಮುಡಿಕೊಟ್ಟಾಗಿದೆ..

ಜೈಲಿಗೆ ಬರುವ ಮೊದಲೇ ದರ್ಶನ್ ಮುಡಿಕೊಟ್ಟಿದ್ದಾರೆ. ಕಳೆದ ಬಾರಿ ಅವರಿಗೆ ಕೂದಲು ಉದುರುವ ಸಮಸ್ಯೆ ಕಾಡಿತ್ತು. ಸದ್ಯ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಗಳು ಕ್ವಾರಂಟೈನ್ ಸೆಲ್​ನಲ್ಲಿ ಇದ್ದಾರೆ. ಆ ಬಳಿಕ ಅವರನ್ನು ಮುಖ್ಯ ಸೆಲ್​ಗೆ ವರ್ಗಾವಣೆ ಮಾಡಲಾಗುತ್ತದೆ.

ಇದನ್ನೂ ಓದಿ: ಸ್ವಾತಂತ್ರ್ಯ ದಿನಾಚರಣೆ ಸೆಲೆಬ್ರೇಷನ್​ಗೆ ಬಾರದೆ ಮಂಕಾಗಿ ಕುಳಿತ ದರ್ಶನ್; ಹೇಳಿದ್ದೇನು?

ದರ್ಶನ್ ಅವರ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಈ ಮೊದಲು ಅವರಿಗೆ ಒದಗಿಸಲಾಗಿದ್ದ ವಿಶೇಷ ಸವಲತ್ತುಗಳನ್ನು ನಿಲ್ಲಿಸಿ, ಕಟ್ಟುನಿಟ್ಟಿನ ಜೈಲು ನಿಯಮಗಳನ್ನು ಪಾಲಿಸಬೇಕೆಂದು ಆದೇಶಿಸಿದೆ. ಜೈಲಿನಲ್ಲಿ ಅವರಿಗೆ ಒಂದೇ ಬೆಡ್‌ಶೀಟ್ ಮತ್ತು ಜೈಲು ಮೆನುವಿನ ಆಹಾರ ಒದಗಿಸಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:54 am, Sat, 16 August 25

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ