ಜೈಲಿನ ಕಠಿಣ ನಿಯಮದಿಂದ ಎರಡೇ ದಿನಕ್ಕೆ ಸುಸ್ತಾದ ದರ್ಶನ್

ದರ್ಶನ್ ಅವರ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಈ ಮೊದಲು ಅವರಿಗೆ ಒದಗಿಸಲಾಗಿದ್ದ ವಿಶೇಷ ಸವಲತ್ತುಗಳನ್ನು ನಿಲ್ಲಿಸಿ, ಕಟ್ಟುನಿಟ್ಟಿನ ಜೈಲು ನಿಯಮಗಳನ್ನು ಪಾಲಿಸಬೇಕೆಂದು ಆದೇಶಿಸಿದೆ. ಜೈಲಿನಲ್ಲಿ ಅವರಿಗೆ ಒಂದೇ ಬೆಡ್‌ಶೀಟ್ ಮತ್ತು ಜೈಲು ಮೆನುವಿನ ಆಹಾರ ಒದಗಿಸಲಾಗುತ್ತಿದೆ.

ಜೈಲಿನ ಕಠಿಣ ನಿಯಮದಿಂದ ಎರಡೇ ದಿನಕ್ಕೆ ಸುಸ್ತಾದ ದರ್ಶನ್
ದರ್ಶನ್

Updated on: Aug 16, 2025 | 12:58 PM

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಕೇಸ್​​ನಲ್ಲಿ ದರ್ಶನ್ ಕಳೆದ ವರ್ಷ ಜೂನ್​ನಲ್ಲಿ ಅರೆಸ್ಟ್ ಆಗಿದ್ದರು. ಕರ್ನಾಟಕ ಹೈಕೋರ್ಟ್​ನಿಂದ ಜಾಮೀನು ಪಡೆದು ಅವರು ಹಾಯಾಗಿ ಸುತ್ತಾಡಿಕೊಂಡಿದ್ದರು. ಸುಪ್ರೀಂಕೋರ್ಟ್ ಸದ್ಯ ದರ್ಶನ್ (Darshan) ಜಾಮೀನನ್ನು ರದ್ದು ಮಾಡಿದೆ. ಅಲ್ಲದೆ, ದರ್ಶನ್​ಗೆ ಯಾವುದೇ ಐಷಾರಾಮಿ ಸವಲತ್ತು ಸಿಗದಂತೆ ನೋಡಿಕೊಳ್ಳಬೇಕು ಎಂದು ತಾಕೀತು ಮಾಡಿದೆ. ಈ ಕಾರಣದಿಂದಲೇ ದರ್ಶನ್ ಜೈಲಿನಲ್ಲಿ ಸಾಕಷ್ಟು ತೊಂದರೆ ಎದುರಿಸಬೇಕಾದ ಪರಿಸ್ಥಿತಿ ಬಂದಿದೆ.

ದರ್ಶನ್ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾ ಜೈಲಿನಲ್ಲಿ ಇಡಲಾಗಿದೆ. ದರ್ಶನ್​ ಆರಂಭದಲ್ಲಿ ಇಲ್ಲೇ ಇದ್ದರು. ಅವರಿಗೆ ಐಷಾರಾಮಿ ಸವಲತ್ತು ಒದಗಿಸಲಾಯಿತು. ಇದರ ಫೋಟೋಗಳು ಕೂಡ ವೈರಲ್ ಆದವು. ಈ ಪ್ರಕರಣದಲ್ಲಿ ಕೇಸ್ ಕೂಡ ದಾಖಲಾಗಿದೆ. ಈ ವಿಚಾರಗಳನ್ನು ಗಮನಿಸಿದ್ದ ಸುಪ್ರೀಂಕೋರ್ಟ್ ದರ್ಶನ್​ಗೆ ಯಾವುದೇ ಸವಲತ್ತು ಸಿಗದಂತೆ ನೋಡಿಕೊಳ್ಳಿ ಎಂದು ಹೇಳಿದೆ.

ದರ್ಶನ್ ಜೈಲಿನಲ್ಲಿ ಹೀಗಿದ್ದಾರೆ

ಇದನ್ನೂ ಓದಿ
ಬಸ್ ಓಡಿಸಿದ ಬಾಲಯ್ಯ; ಮುಖದಲ್ಲಿರೋ ಭಯ ನೋಡಿದ್ರೆ ಯಾರೂ ಕೂರೋ ಧೈರ್ಯ ಮಾಡಲ್ಲ
ಸೈಫ್ ಅಲಿ ಖಾನ್ ಜನ್ಮದಿನ; ನಟನ ಒಟ್ಟೂ ಆಸ್ತಿ ಎಷ್ಟು ಕೋಟಿ ರೂಪಾಯಿ
ಸ್ವಾತಂತ್ರ್ಯ ದಿನಾಚರಣೆ ಸೆಲೆಬ್ರೇಷನ್​ಗೆ ಬಾರದೆ ಮಂಕಾಗಿ ಕುಳಿತ ದರ್ಶನ್
‘ಕೂಲಿ’, ‘ವಾರ್ 2’ 2ನೇ ದಿನದ ಗಳಿಕೆ ಇಷ್ಟೊಂದಾ? ಅಬ್ಬಬ್ಬಾ ಊಹಿಸಲೂ ಅಸಾಧ್ಯ

ಈ ಬಾರಿ ಜೈಲಿನ ಮ್ಯಾನ್ಯುಯಲ್ ಪ್ರಕಾರವೇ ಅಧಿಕಾರಿಗಳು ದರ್ಶನ್​ನ ನಡೆಸಿಕೊಳ್ಳುತ್ತಿದ್ದಾರೆ. ಕಟ್ಟುನಿಟ್ಟಾಗಿ ಅವರಿಗೆ ಜೈಲು ಊಟವನ್ನೇ ನೀಡಬೇಕಿದೆ. ಮನೆಯಿಂದ ಯಾವುದೇ ಊಟವನ್ನು ತರುವಂತಿಲ್ಲ. ಜೈಲಿನ  ಮೆನುವಿನಂತೆ ಊಟ-ತಿಂಡಿ ನೀಡಲಾಗುತ್ತಿದೆ. ಕಳೆದ ಬಾರಿ ಮನೆ ಊಟದ ವ್ಯವಸ್ಥೆ ಇತ್ತು. ಆದರೆ, ಈ ಬಾರಿ ಅದಕ್ಕೆ ಬ್ರೇಕ್ ಬಿದ್ದಿದೆ.

ಎರಡು ಬೆಡ್​ಶೀಟ್ ಕೊಡಿ

ಸದ್ಯ ಬೆಂಗಳೂರಿನಲ್ಲಿ ಮಳೆಯ ವಾತಾವರಣ ಇದೆ. ಹೀಗಾಗಿ ಹವಾಮಾನ ತಂಪಾಗಿದೆ. ಈ ವೇಳೆ ಹೊದ್ದುಕೊಳ್ಳಲು ಒಂದು ಬೆಡ್​ಶೀಟ್ ಸಾಕಾಗೋದಿಲ್ಲ. ಹೀಗಾಗಿ, ದರ್ಶನ್ ಎರಡು ಬೆಡ್​ಶೀಟ್ ಕೇಳಿದ್ದಾರೆ. ಆದರೆ,  ಜೈಲಿನ ಮ್ಯಾನ್ಯುಯಲ್ ಪ್ರಕಾರ ಒಂದೇ ಬೆಡ್​ ಶೀಟ್ ನೀಡಲಾಗಿದೆ. ನಂತರ ಮರು ಮಾತಾಡದೇ ಅವರು ಒಂದೇ ಬೆಡ್​ಶೀಟ್ ಪಡೆದು ಹೋಗಿದ್ದಾರೆ.

ಮುಡಿಕೊಟ್ಟಾಗಿದೆ..

ಜೈಲಿಗೆ ಬರುವ ಮೊದಲೇ ದರ್ಶನ್ ಮುಡಿಕೊಟ್ಟಿದ್ದಾರೆ. ಕಳೆದ ಬಾರಿ ಅವರಿಗೆ ಕೂದಲು ಉದುರುವ ಸಮಸ್ಯೆ ಕಾಡಿತ್ತು. ಸದ್ಯ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಗಳು ಕ್ವಾರಂಟೈನ್ ಸೆಲ್​ನಲ್ಲಿ ಇದ್ದಾರೆ. ಆ ಬಳಿಕ ಅವರನ್ನು ಮುಖ್ಯ ಸೆಲ್​ಗೆ ವರ್ಗಾವಣೆ ಮಾಡಲಾಗುತ್ತದೆ.

ಇದನ್ನೂ ಓದಿ: ಸ್ವಾತಂತ್ರ್ಯ ದಿನಾಚರಣೆ ಸೆಲೆಬ್ರೇಷನ್​ಗೆ ಬಾರದೆ ಮಂಕಾಗಿ ಕುಳಿತ ದರ್ಶನ್; ಹೇಳಿದ್ದೇನು?

ದರ್ಶನ್ ಅವರ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಈ ಮೊದಲು ಅವರಿಗೆ ಒದಗಿಸಲಾಗಿದ್ದ ವಿಶೇಷ ಸವಲತ್ತುಗಳನ್ನು ನಿಲ್ಲಿಸಿ, ಕಟ್ಟುನಿಟ್ಟಿನ ಜೈಲು ನಿಯಮಗಳನ್ನು ಪಾಲಿಸಬೇಕೆಂದು ಆದೇಶಿಸಿದೆ. ಜೈಲಿನಲ್ಲಿ ಅವರಿಗೆ ಒಂದೇ ಬೆಡ್‌ಶೀಟ್ ಮತ್ತು ಜೈಲು ಮೆನುವಿನ ಆಹಾರ ಒದಗಿಸಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Published On - 11:54 am, Sat, 16 August 25