AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ಯಾಟೂ ಹಾಕಿಸಿಕೊಳ್ಳುವವರ ಗಮನಕ್ಕೆ; ದರ್ಶನ್ ವಿಚಾರಣಾಧೀನ ಕೈದಿ ಸಂಖ್ಯೆ…

Darshan Number: ನಟ ದರ್ಶನ್ ಅವರನ್ನು ಪರಪ್ಪನ ಅಗ್ರಹಾರ ಜೈಲಿನಲ್ಲಿ ಇಡಲಾಗಿದೆ. ಅವರಿಗೆ ಕೈದಿ ಸಂಖ್ಯೆ ನೀಡಲಾಗಿದೆ. ಇತರ ಆರೋಪಿಗಳಿಗೂ ಸಂಖ್ಯೆ ನೀಡಲಾಗಿದೆ. ದರ್ಶನ್ ಅವರು ಒಂದೇ ಬ್ಯಾರಕ್‌ನಲ್ಲಿ ಇತರ ಆರೋಪಿಗಳ ಜೊತೆ ಇದ್ದಾರೆ. ಕುಟುಂಬದವರು ಶನಿವಾರ ಭೇಟಿ ನೀಡುವ ಸಾಧ್ಯತೆ ಇದೆ.

ಟ್ಯಾಟೂ ಹಾಕಿಸಿಕೊಳ್ಳುವವರ ಗಮನಕ್ಕೆ; ದರ್ಶನ್ ವಿಚಾರಣಾಧೀನ ಕೈದಿ ಸಂಖ್ಯೆ...
ದರ್ಶನ್
ರಾಜೇಶ್ ದುಗ್ಗುಮನೆ
|

Updated on:Aug 15, 2025 | 11:24 AM

Share

ನಟ ದರ್ಶನ್ (Darshan) ಹಾಗೂ ಗ್ಯಾಂಗ್ ಸದ್ಯ ಜೈಲು ವಾಸ ಅನುಭವಿಸುತ್ತಿದ್ದಾರೆ. ಜಾಮೀನು ರದ್ದಾದ ಬಳಿಕ ಅವರನ್ನು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇಡಲಾಗಿದೆ. ಬಂಧನ ಆದ ಒಂದು ದಿನದ ಒಳಗೆ ಇವರಿಗೆ ವಿಚಾರಣಾಧೀನ ಕೈದಿ ಸಂಖ್ಯೆ ನೀಡಲಾಗಿದೆ. ಯಾರಿಗೆ ಯಾವ ಸಂಖ್ಯೆ ನೀಡಲಾಗಿದೆ, ಅವರ ದಿನಚರಿ ಹೇಗಿತ್ತು ಎನ್ನುವುದರ ಬಗ್ಗೆ ಇಲ್ಲಿದೆ ಮಾಹಿತಿ.

ದರ್ಶನ್ ಹಾಗೂ ಏಳು ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್ ಆಗಸ್ಟ್ 14ರಂದು ರದ್ದು ಮಾಡಿದೆ. ಈ ವೇಳೆ ದರ್ಶನ್ ಬೆಂಗಳೂರಿನಲ್ಲಿ ಇರಲಿಲ್ಲ. ಮಧ್ಯಾಹ್ನದ ಬಳಿಕ ಅವರು ಬೆಂಗಳೂರಿನ ಹೊಸಕೆರೆಹಳ್ಳಿಗೆ ಬರುತ್ತಿದ್ದಂತೆ ಪೊಲೀಸರು ಬಂಧಿಸಿ, ಕೋರ್ಟ್​ಗೆ ಹಾಜುರಪಡಿಸಿದರು. ನಂತರ ಪರಪ್ಪನ ಅಗ್ರಹಾರಕ್ಕೆ ಅವರನ್ನು ಕಳುಹಿಸಲಾಯಿತು. ಸದ್ಯ ದರ್ಶನ್ ಅವರನ್ನು ನ್ಯಾಯಾಂಗ ಬಂಧನದಲ್ಲಿ ಇಡಲಾಗಿದೆ.

ದರ್ಶನ್ ಸೇರಿ ಐವರು ಆರೋಪಿಗಳಿಗೆ ವಿಚಾರಣಾಧೀನ ಕೈದಿ ನಂಬರ್ ನೀಡಲಾಗಿದೆ. ದರ್ಶನ್ ಕೈದಿ ಸಂಖ್ಯೆ 7314, ಪ್ರದೋಷ್ 7317, ನಾಗರಾಜ್ 7315, ಲಕ್ಷ್ಮಣ 7316, ಪವಿತ್ರ ಗೌಡ,7313 ನಂಬರ್ ನೀಡಲಾಗಿದೆ. ಪವಿತ್ರಾ ಗೌಡ ಪ್ರಕರಣದ ಎ1 ಆರೋಪಿ. ಈ ಕಾರಣದಿಂದಲೇ ಪವಿತ್ರಾಗೆ ಮೊದಲ ಸಂಖ್ಯೆ ನೀಡಲಾಗಿದೆ. ನಂತರದ ಸಂಖ್ಯೆಯನ್ನು ದರ್ಶನ್​ಗೆ ಕೊಡಲಾಗಿದೆ.

ಇದನ್ನೂ ಓದಿ
Image
ಒಬ್ಬರದ್ದು ಕಣ್ಣೀರು, ಇನ್ನೊಬ್ಬರದ್ದು ಹರಟೆ; ಒಂದೇ ಬ್ಯಾರಕ್​ನಲ್ಲಿ ಗ್ಯಾಂಗ
Image
ಫ್ಲಾಪ್ ಆದರೂ ಭಾರೀ ಗಳಿಕೆ ಮಾಡಿದ ‘ವಾರ್ 2’; ಕೈ ಕೊಟ್ಟ ಹಿಂದಿ ಮಂದಿ
Image
ರಜನಿ ಅಬ್ಬರಕ್ಕೆ ಬಾಕ್ಸ್ ಆಫೀಸ್ ಉಡೀಸ್; ‘ಕೂಲಿ’ ಮೊದಲ ದಿನದ ಗಳಿಕೆ ಎಷ್ಟು?
Image
ಗೌತಮ್ ಕೈಯಲ್ಲಿ ತಾಯಿಯ ಹಿಸ್ಟರಿ; ದುರ್ಗಾಗೆ ಬಂತು ಅಕ್ಕನ ನೆನಪು

ಕಳೆದ ಬಾರಿ ದರ್ಶನ್ ಅವರು ಬಂಧನಕ್ಕೆ ಒಳಗಾಗಾದ ವಿಚಾರಣಾಧೀನ ಕೈದಿ ಸಂಖ್ಯೆ ನೀಡಲಾಗಿತ್ತು. ಅನೇಕ ಅಭಿಮಾನಿಗಳು ಆಗ ಈ ಸಂಖ್ಯೆಯನ್ನು ಹಚ್ಚೆ ಹಾಕಿಸಿಕೊಂಡಿದ್ದರು. ಈಗ ದರ್ಶನ್​ಗೆ ಬೇರೆ ಸಂಖ್ಯೆ ಸಿಕ್ಕಿದೆ. ಈ ಬಾರಿಯೂ ಫ್ಯಾನ್ಸ್ ಕೈದಿ ನಂಬರ್​ನ ಹಚ್ಚೆ ಹಾಕಿಸಿಕೊಳ್ಳುತ್ತಾರಾ ಎನ್ನುವ ಕುತೂಹಲ ಮೂಡಿದೆ.

ಶನಿವಾರ ಕುಟುಂಬದವರ ಭೇಟಿ

ಶನಿವಾರ ಆರೋಪಿಗಳಾದ ದರ್ಶನ್ ಮತ್ತು ‌ಪವಿತ್ರ ಕುಟುಂಬದವರು ಜೈಲಿಗೆ ಭೇಟಿ ನೀಡುವ ಸಾಧ್ಯತೆ ಇದೆ. ಸದ್ಯ ದರ್ಶನ್ ಹಾಗೂ ಇತರ ಮೂವರನ್ನು ಒಂದೇ ಬ್ಯಾರಕ್​ನಲ್ಲಿ ಇಡಲಾಗಿದೆ. ಅವರು ಕ್ವಾರಂಟೈನ್​ನಲ್ಲಿ ಇದ್ದಾರೆ. ನಂತರ ಅವರನ್ನು ಮುಖ್ಯ ಬ್ಯಾರಕ್​ಗೆ ವರ್ಗಾವಣೆ ಮಾಡುವ ಸಾಧ್ಯತೆ ಇದೆ.

ಇದನ್ನೂ ಓದಿ: ಒಬ್ಬರದ್ದು ಕಣ್ಣೀರು, ಇನ್ನೊಬ್ಬರದ್ದು ಹರಟೆ; ಒಂದೇ ಬ್ಯಾರಕ್​ನಲ್ಲಿ ದರ್ಶನ್​ ಆ್ಯಂಡ್ ಗ್ಯಾಂಗ್

ಪ್ರದೋಷ್ ಕಣ್ಣೀರು

ಜೈಲಿನಲ್ಲಿರುವ ಪ್ರದೋಷ್ ಸದ್ಯ ಕಣ್ಣೀರು ಹಾಕುತ್ತಿದ್ದಾರೆ. ಅವರಿಗೆ ತಾವು ಮಾಡಿದ ತಪ್ಪು ಎಷ್ಟು ದೊಡ್ಡದು ಎಂಬುದು ಅರಿವಾಗಿ ಕಣ್ಣೀರು ಹಾಕುವ ಪರಿಸ್ಥಿತಿ ಬಂದಿದೆ. ಇನ್ನು, ದರ್ಶನ್ ರಾತ್ರಿ ಇಡೀ ನಿದ್ದೆ ಮಾಡಿಲ್ಲ ಎನ್ನಲಾಗಿದೆ. ಸಹ ಆರೋಪಿಗಳ ಜೊತೆ ಅವರು ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:22 am, Fri, 15 August 25