AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇದ್ರೇ ನೆಮ್ದಿಯಾಗ್ ಇರ್ಬೇಕ್’ ಹಾಡು ರಿಲೀಸ್​ಗೂ ಮೊದಲೇ ನೆಮ್ಮದಿ ಕಳೆದುಕೊಂಡ ದರ್ಶನ್

ದರ್ಶನ್ ಅವರ 'ಡೆವಿಲ್' ಚಿತ್ರದ ಮೊದಲ ಹಾಡು ಆಗಸ್ಟ್ 15ಕ್ಕೆ ಬಿಡುಗಡೆಯಾಗಲಿದೆ. ಆದರೆ, ಸುಪ್ರೀಂ ಕೋರ್ಟ್ ಅವರ ಜಾಮೀನು ರದ್ದುಗೊಳಿಸಿದ್ದರಿಂದ ಅವರು ಮತ್ತೆ ಜೈಲು ಸೇರಬೇಕಾಗಿದೆ. ಹಾಡಿನ ಶೀರ್ಷಿಕೆ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಎಂಬುದು. ಈಗ ಹಾಡಿನ ಬಿಡುಗಡೆ ಸಮಯದಲ್ಲಿ ದರ್ಶನ್ ಜೈಲಿನಲ್ಲಿ ಇರಲಿದ್ದಾರೆ.

‘ಇದ್ರೇ ನೆಮ್ದಿಯಾಗ್ ಇರ್ಬೇಕ್’ ಹಾಡು ರಿಲೀಸ್​ಗೂ ಮೊದಲೇ ನೆಮ್ಮದಿ ಕಳೆದುಕೊಂಡ ದರ್ಶನ್
ದರ್ಶನ್
ರಾಜೇಶ್ ದುಗ್ಗುಮನೆ
|

Updated on:Aug 14, 2025 | 2:53 PM

Share

ನಟ ದರ್ಶನ್ ಅವರು ‘ಡೆವಿಲ್’ ಸಿನಿಮಾ (Devil Movie) ಶೂಟ್​​ ಪೂರ್ಣಗೊಳಿಸಿದ್ದಾರೆ. ಡಬ್ಬಿಂಗ್ ಕೂಡ ಪೂರ್ಣಗೊಂಡಿದೆ ಎನ್ನಲಾಗಿದೆ. ಆಗಸ್ಟ್ 15ರಂದು ಚಿತ್ರದ ಮೊದಲ ಹಾಡು ‘ಇದ್ರೇ ನೆಮ್ದಿಯಾಗ್ ಇರ್ಬೇಕ್..’ ರಿಲೀಸ್ ಆಗಲಿದೆ. ದುರಾದೃಷ್ಟ ಎಂದರೆ ಹಾಡು ರಿಲೀಸ್​ಗೂ ಮೊದಲೇ ದರ್ಶನ್ ನೆಮ್ಮದಿ ಕಳೆದು ಹೋಗಿದೆ. ಸುಪ್ರೀಂ ಕೋರ್ಟ್ ದರ್ಶನ್ ಜಾಮೀನು ರದ್ದು ಮಾಡಿದೆ. ಇದರಿಂದ ಅವರು ಮತ್ತೆ ಜೈಲು ಸೇರಬೇಕಿದೆ. ಇದು ಫ್ಯಾನ್ಸ್ ಬೇಸರಕ್ಕೆ ಕಾರಣ ಆಗಿದೆ.

ದರ್ಶನ್ ಅವರು ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಬಂಧನಕ್ಕೆ ಒಳಗಾಗಿದ್ದರು. ಕೆಲ ತಿಂಗಳು ಜೈಲಿನಲ್ಲಿ ಇದ್ದರು. ಅವರಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿತ್ತು. ಆದರೆ, ಸುಪ್ರೀಂಕೋರ್ಟ್ ಜಾಮೀನು ರದ್ದು ಮಾಡಿ ಆದೇಶ ಹೊರಡಿಸಿದೆ. ಈ ಆದೇಶದ ಬೆನ್ನಲ್ಲೇ ಇಂದೇ ಅವರ ಬಂಧನ ನಡೆಯಲಿದೆ. ಹೀಗಾಗಿ, ದರ್ಶನ್ ಹಾಡಿನ ರಿಲೀಸ್ ಸಂದರ್ಭದಲ್ಲಿ ಜೈಲಿನಲ್ಲಿ ಇರಲಿದ್ದಾರೆ.

ಇದನ್ನೂ ಓದಿ
Image
ಗೌತಮ್ ಕೈಯಲ್ಲಿ ತಾಯಿಯ ಹಿಸ್ಟರಿ; ದುರ್ಗಾಗೆ ಬಂತು ಅಕ್ಕನ ನೆನಪು
Image
20 ದಿನಕ್ಕೆ ‘ಕಾಟೇರ’ ಕಲೆಕ್ಷನ್ ದಾಖಲೆ ಮುರಿದ ‘ಸು ಫ್ರಮ್ ಸೋ’
Image
‘ಸತ್ಯ ಎಲ್ಲಕ್ಕಿಂತ ದೊಡ್ಡದು, ನ್ಯಾಯ ಸಿಗುತ್ತದೆ’; ಪವಿತ್ರಾ ಗೌಡ
Image
ಶ್ವಾನಗಳ ವಿಚಾರದಲ್ಲಿ ಸುಪ್ರೀಂಕೋರ್ಟ್ ಆದೇಶದ ಬೆನ್ನಲ್ಲೇ ರಾಜ್ ಹೇಳೋದೇನು?

ದರ್ಶನ್ ಪೋಸ್ಟ್

‘ಡೆವಿಲ್’ ಹಾಡಿಗೆ ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಎಂದು ಟೈಟಲ್ ಇಟ್ಟ ಬಗ್ಗೆ ಅನೇಕರು ಅಸಮಾಧಾನ ಹೊರಹಾಕಿದ್ದರು. ಈ ಮೊದಲು ದರ್ಶನ್ ಪತ್ನಿಗೆ ಬೈದ ಆಡಿಯೋ ವೈರಲ್ ಆಗಿತ್ತು. ಈ ಆಡಿಯೋದಲ್ಲಿ ‘ಇದ್ರೇ ನೆಮ್ದಿಯಾಗ್ ಇರ್ಬೇಕ್’ ಎಂಬ ಲೈನ್ ಇತ್ತು. ಈ ಲೈನ್ ಸಾಕಷ್ಟು ಟ್ರೆಂಡ್ ಆಗಿತ್ತು. ಇದೇ ಲೈನ್ ಬಳಕೆ ಮಾಡಿಕೊಂಡು ಹಾಡು ಮಾಡಿದರೇ ಎನ್ನುವ ಪ್ರಶ್ನೆ ಮೂಡಿದೆ. ಆದರೆ, ಈಗ ಈ ಹಾಡಿನ ರಿಲೀಸ್​ಗೂ ಮೊದಲೇ ದರ್ಶನ್​ಗೆ ನೆಮ್ಮದಿ ಇಲ್ಲದಂತೆ ಆಗಿದೆ.

ಇದನ್ನೂ ಓದಿ: ದರ್ಶನ್ ಕೈಯಲ್ಲಿದ್ದ ಸಿನಿಮಾಗಳು ಎಷ್ಟು? ‘ಡೆವಿಲ್’ ಗತಿ ಏನು?

ದರ್ಶನ್​ಗೆ ಜೈಲಿನಲ್ಲಿ ಯಾವುದೇ ಐಷಾರಾಮಿ ಸವಲತ್ತು ಸಿಗುವುದಿಲ್ಲ. ಸುಪ್ರೀಂಕೋರ್ಟ್ ಈ ಬಗ್ಗೆ ತನ್ನ ತೀರ್ಪಿನಲ್ಲಿ ಸ್ಪಷ್ಟವಾಗಿ ಹೇಳಿದೆ. ಯಾವುದೇ ಐಷಾರಾಮಿ ಸವಲತ್ತು ಸಿಗದಂತೆ ನೋಡಿಕೊಳ್ಳಬೇಕು ಎಂದಿದೆ. ಒಂದೊಮ್ಮೆ ಆ ರೀತಿ ಕಂಡು ಬಂದರೆ ಸೂಕ್ತ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ನೀಡಿದೆ. ಹೀಗಾಗಿ, ದರ್ಶನ್ ಜೈಲು ದಿನಗಳು ಮತ್ತಷ್ಟು ಕಷ್ಟ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 2:51 pm, Thu, 14 August 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ