AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇದ್ರೇ ನೆಮ್ದಿಯಾಗ್ ಇರ್ಬೇಕ್’ ಹಾಡು ರಿಲೀಸ್​ಗೂ ಮೊದಲೇ ನೆಮ್ಮದಿ ಕಳೆದುಕೊಂಡ ದರ್ಶನ್

ದರ್ಶನ್ ಅವರ 'ಡೆವಿಲ್' ಚಿತ್ರದ ಮೊದಲ ಹಾಡು ಆಗಸ್ಟ್ 15ಕ್ಕೆ ಬಿಡುಗಡೆಯಾಗಲಿದೆ. ಆದರೆ, ಸುಪ್ರೀಂ ಕೋರ್ಟ್ ಅವರ ಜಾಮೀನು ರದ್ದುಗೊಳಿಸಿದ್ದರಿಂದ ಅವರು ಮತ್ತೆ ಜೈಲು ಸೇರಬೇಕಾಗಿದೆ. ಹಾಡಿನ ಶೀರ್ಷಿಕೆ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಎಂಬುದು. ಈಗ ಹಾಡಿನ ಬಿಡುಗಡೆ ಸಮಯದಲ್ಲಿ ದರ್ಶನ್ ಜೈಲಿನಲ್ಲಿ ಇರಲಿದ್ದಾರೆ.

‘ಇದ್ರೇ ನೆಮ್ದಿಯಾಗ್ ಇರ್ಬೇಕ್’ ಹಾಡು ರಿಲೀಸ್​ಗೂ ಮೊದಲೇ ನೆಮ್ಮದಿ ಕಳೆದುಕೊಂಡ ದರ್ಶನ್
ದರ್ಶನ್
ರಾಜೇಶ್ ದುಗ್ಗುಮನೆ
|

Updated on:Aug 14, 2025 | 2:53 PM

Share

ನಟ ದರ್ಶನ್ ಅವರು ‘ಡೆವಿಲ್’ ಸಿನಿಮಾ (Devil Movie) ಶೂಟ್​​ ಪೂರ್ಣಗೊಳಿಸಿದ್ದಾರೆ. ಡಬ್ಬಿಂಗ್ ಕೂಡ ಪೂರ್ಣಗೊಂಡಿದೆ ಎನ್ನಲಾಗಿದೆ. ಆಗಸ್ಟ್ 15ರಂದು ಚಿತ್ರದ ಮೊದಲ ಹಾಡು ‘ಇದ್ರೇ ನೆಮ್ದಿಯಾಗ್ ಇರ್ಬೇಕ್..’ ರಿಲೀಸ್ ಆಗಲಿದೆ. ದುರಾದೃಷ್ಟ ಎಂದರೆ ಹಾಡು ರಿಲೀಸ್​ಗೂ ಮೊದಲೇ ದರ್ಶನ್ ನೆಮ್ಮದಿ ಕಳೆದು ಹೋಗಿದೆ. ಸುಪ್ರೀಂ ಕೋರ್ಟ್ ದರ್ಶನ್ ಜಾಮೀನು ರದ್ದು ಮಾಡಿದೆ. ಇದರಿಂದ ಅವರು ಮತ್ತೆ ಜೈಲು ಸೇರಬೇಕಿದೆ. ಇದು ಫ್ಯಾನ್ಸ್ ಬೇಸರಕ್ಕೆ ಕಾರಣ ಆಗಿದೆ.

ದರ್ಶನ್ ಅವರು ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಬಂಧನಕ್ಕೆ ಒಳಗಾಗಿದ್ದರು. ಕೆಲ ತಿಂಗಳು ಜೈಲಿನಲ್ಲಿ ಇದ್ದರು. ಅವರಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿತ್ತು. ಆದರೆ, ಸುಪ್ರೀಂಕೋರ್ಟ್ ಜಾಮೀನು ರದ್ದು ಮಾಡಿ ಆದೇಶ ಹೊರಡಿಸಿದೆ. ಈ ಆದೇಶದ ಬೆನ್ನಲ್ಲೇ ಇಂದೇ ಅವರ ಬಂಧನ ನಡೆಯಲಿದೆ. ಹೀಗಾಗಿ, ದರ್ಶನ್ ಹಾಡಿನ ರಿಲೀಸ್ ಸಂದರ್ಭದಲ್ಲಿ ಜೈಲಿನಲ್ಲಿ ಇರಲಿದ್ದಾರೆ.

ಇದನ್ನೂ ಓದಿ
Image
ಗೌತಮ್ ಕೈಯಲ್ಲಿ ತಾಯಿಯ ಹಿಸ್ಟರಿ; ದುರ್ಗಾಗೆ ಬಂತು ಅಕ್ಕನ ನೆನಪು
Image
20 ದಿನಕ್ಕೆ ‘ಕಾಟೇರ’ ಕಲೆಕ್ಷನ್ ದಾಖಲೆ ಮುರಿದ ‘ಸು ಫ್ರಮ್ ಸೋ’
Image
‘ಸತ್ಯ ಎಲ್ಲಕ್ಕಿಂತ ದೊಡ್ಡದು, ನ್ಯಾಯ ಸಿಗುತ್ತದೆ’; ಪವಿತ್ರಾ ಗೌಡ
Image
ಶ್ವಾನಗಳ ವಿಚಾರದಲ್ಲಿ ಸುಪ್ರೀಂಕೋರ್ಟ್ ಆದೇಶದ ಬೆನ್ನಲ್ಲೇ ರಾಜ್ ಹೇಳೋದೇನು?

ದರ್ಶನ್ ಪೋಸ್ಟ್

‘ಡೆವಿಲ್’ ಹಾಡಿಗೆ ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಎಂದು ಟೈಟಲ್ ಇಟ್ಟ ಬಗ್ಗೆ ಅನೇಕರು ಅಸಮಾಧಾನ ಹೊರಹಾಕಿದ್ದರು. ಈ ಮೊದಲು ದರ್ಶನ್ ಪತ್ನಿಗೆ ಬೈದ ಆಡಿಯೋ ವೈರಲ್ ಆಗಿತ್ತು. ಈ ಆಡಿಯೋದಲ್ಲಿ ‘ಇದ್ರೇ ನೆಮ್ದಿಯಾಗ್ ಇರ್ಬೇಕ್’ ಎಂಬ ಲೈನ್ ಇತ್ತು. ಈ ಲೈನ್ ಸಾಕಷ್ಟು ಟ್ರೆಂಡ್ ಆಗಿತ್ತು. ಇದೇ ಲೈನ್ ಬಳಕೆ ಮಾಡಿಕೊಂಡು ಹಾಡು ಮಾಡಿದರೇ ಎನ್ನುವ ಪ್ರಶ್ನೆ ಮೂಡಿದೆ. ಆದರೆ, ಈಗ ಈ ಹಾಡಿನ ರಿಲೀಸ್​ಗೂ ಮೊದಲೇ ದರ್ಶನ್​ಗೆ ನೆಮ್ಮದಿ ಇಲ್ಲದಂತೆ ಆಗಿದೆ.

ಇದನ್ನೂ ಓದಿ: ದರ್ಶನ್ ಕೈಯಲ್ಲಿದ್ದ ಸಿನಿಮಾಗಳು ಎಷ್ಟು? ‘ಡೆವಿಲ್’ ಗತಿ ಏನು?

ದರ್ಶನ್​ಗೆ ಜೈಲಿನಲ್ಲಿ ಯಾವುದೇ ಐಷಾರಾಮಿ ಸವಲತ್ತು ಸಿಗುವುದಿಲ್ಲ. ಸುಪ್ರೀಂಕೋರ್ಟ್ ಈ ಬಗ್ಗೆ ತನ್ನ ತೀರ್ಪಿನಲ್ಲಿ ಸ್ಪಷ್ಟವಾಗಿ ಹೇಳಿದೆ. ಯಾವುದೇ ಐಷಾರಾಮಿ ಸವಲತ್ತು ಸಿಗದಂತೆ ನೋಡಿಕೊಳ್ಳಬೇಕು ಎಂದಿದೆ. ಒಂದೊಮ್ಮೆ ಆ ರೀತಿ ಕಂಡು ಬಂದರೆ ಸೂಕ್ತ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ನೀಡಿದೆ. ಹೀಗಾಗಿ, ದರ್ಶನ್ ಜೈಲು ದಿನಗಳು ಮತ್ತಷ್ಟು ಕಷ್ಟ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 2:51 pm, Thu, 14 August 25

Follow Us
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ