AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜೈಲು ನರಕಯಾತನೆ, ಡಿಪ್ರೆಶನ್​ ಕಾಡುತ್ತೆ’; ದರ್ಶನ್ ಬಗ್ಗೆ ಕಳವಳ ವ್ಯಕ್ತಪಡಿಸಿದ ಮಡೆನೂರು ಮನು

ಮಡೆನೂರು ಮನು ಅವರು ಜೈಲು ವಾಸದ ಕಷ್ಟಗಳನ್ನು ವಿವರಿಸಿದ್ದಾರೆ. ದರ್ಶನ್ ಅವರ ಜೈಲು ವಾಸದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಅವರು, ಜೈಲು ಜೀವನ ನರಕಯಾತನೆ ಎಂದಿದ್ದಾರೆ. ಕುಟುಂಬದಿಂದ ದೂರ ಇರೋದಕ್ಕೆ ಮಾನಸಿಕ ಒತ್ತಡ ಎದುರಾಗುತ್ತವೆ ಎಂದು ಅವರು ಹೇಳಿದ್ದಾರೆ. ದರ್ಶನ್ ಅವರು ಶೀಘ್ರ ಬಿಡುಗಡೆ ಆಗಲಿ ಎಂದು ಅವರು ಪ್ರಾರ್ಥಿಸಿದ್ದಾರೆ.

‘ಜೈಲು ನರಕಯಾತನೆ, ಡಿಪ್ರೆಶನ್​ ಕಾಡುತ್ತೆ’; ದರ್ಶನ್ ಬಗ್ಗೆ ಕಳವಳ ವ್ಯಕ್ತಪಡಿಸಿದ ಮಡೆನೂರು ಮನು
ಮನು-ದರ್ಶನ್
ರಾಜೇಶ್ ದುಗ್ಗುಮನೆ
|

Updated on:Sep 12, 2025 | 11:55 AM

Share

ನಟ ದರ್ಶನ್ (Darshan) ಅವರು ಜೈಲಿನಲ್ಲಿ ಸಂಕಷ್ಟ ಅನುಭವಿಸುತ್ತಿದ್ದಾರೆ. ಅವರು ಇತ್ತೀಚೆಗೆ ಕೋರ್ಟ್​ನಲ್ಲಿ ‘ನನಗೆ ವಿಷ ಕೊಡಿ’ ಎಂದು ಕೇಳಿದ್ದು ಸಾಕಷ್ಟು ಚರ್ಚೆಯನ್ನು ಹುಟ್ಟುಹಾಕಿತ್ತು. ಈಗ ಮಡೆನೂರು ಮನು ಅವರು ಜೈಲು ವಾಸದ ಅನುಭವ ಹಂಚಿಕೊಂಡಿದ್ದಾರೆ. ಅವರು ಅತ್ಯಾಚಾರ ಆರೋಪ ಪ್ರಕರಣದಲ್ಲಿ ಕೆಲ ಕಾಲ ಜೈಲಿನಲ್ಲಿ ಇದ್ದರು. ಜೈಲು ವಾಸ ಬಲುಕಷ್ಟ ಎಂದು ಅವರು ಹೇಳಿದ್ದಾರೆ.

‘ಜೈಲು ಯಾವಾಗಲೂ ಜೈಲೇ. ನೀವು ಹೈಟೆಕ್ ಆಸ್ಪತ್ರೆಗೆ ಹೋದಿರಿ ಎಂದಿಟ್ಟುಕೊಳ್ಳಿ, ಅಲ್ಲಿ ಸೂಜಿ ಸುಚ್ಚಿಸಿಕೊಳ್ಳಲೇಬೇಕು. ಅದೇ ರೀತಿ ಜೈಲು ಕೂಡ. ಅಲ್ಲಿ ಹೋದಮೇಲೆ ನರಕಯಾತನೆ ಅನುಭವಿಸಲೇಬೇಕು. ಜೈಲಿಗೆ ಹೋದ ಬಳಿಕ ನಾವು ಕುಟುಂಬದವರನ್ನು ಕಳೆದುಕೊಳ್ಳುತ್ತೇವೆ. ಕನಸು ಇರುವವರು ಒಳಗೆ ಹೋದರೆ ಸಾಕಷ್ಟು ತೊಂದರೆ ಆಗುತ್ತದೆ’ ಎಂದು ಮಡೆನೂರು ಮನು ‘ಫಸ್ಟ್ ಡೇ ಫಸ್ಟ್ ಶೋ’ ಯೂಟ್ಯೂಬ್ ಚಾನೆಲ್​ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ
Image
ಅಕ್ಷಯ್ ಹೇಗೆ ಅಷ್ಟು ಬೇಗ ಸಿನಿಮಾ ಮಾಡ್ತಾರೆ? ಅಜಯ್ ದೇವಗನ್ ಫನ್ನಿ ವಿವರಣೆ
Image
ಟಾಪ್​ನಲ್ಲಿ ಯಾರೂ ಊಹಿಸದ ಸೀರಿಯಲ್; ‘ಅಮೃತಧಾರೆ’ಗೆ ಎಷ್ಟನೇ ಸ್ಥಾನ?
Image
ಮದುವೆ ಬಳಿಕ ಕೆಲಸಕ್ಕೆ ಮರಳಿದ ಅನುಶ್ರೀ ಈ ವಿಚಾರದಲ್ಲಿ ತಪ್ಪು ಮಾಡಲಿಲ್ಲ
Image
ಹಠ ಮಾಡಿ ವಿಷ್ಣುವರ್ಧನ್ ಸಿನಿಮಾದಲ್ಲಿ ನಟಿಸಿದ್ದ ನಟ ಅಕ್ಷಯ್ ಕುಮಾರ್

ಆಗಾಗ ಜೈಲಿಗೆ ಯಾರಾದರೂ ಬಂದು ನೋಡಿಕೊಂಡು ಹೋಗಲು ಅವಕಾಶ ಇರುತ್ತದೆ. ಆ ದಿನ ಮಾತ್ರ ಖುಷಿಯಿಂದ ಕಳೆಯಬಹುದು ಎಂಬುದು ಮನು ಮಾತು. ‘ನಮ್ಮ ಕಡೆಯವರು ಯಾರಾದರೂ ಬಂದಿದಾದರಾ ಎಂದು ಜೈಲಿನಲ್ಲಿ ದಿನಾ ಕೇಳುತ್ತಾ ಇದ್ದೆ. ಯಾದರೂ ಬಂದು ಹೋದ ಎರಡು ಗಂಟೆ ಚೆನ್ನಾಗಿರುತ್ತದೆ. ಆ ಬಳಿಕ ಮತ್ತೆ ಬೇಸರ’ ಎನ್ನುತ್ತಾರೆ ಅವರು.

ಇದನ್ನೂ ಓದಿ: ಪ್ರಥಮ್​​ಗೆ ಧಮ್ಕಿ ಹಾಕಿದ ಕೇಸ್: ದರ್ಶನ್ ಇರುವ ಜೈಲಿಗೆ ಬೇಕರಿ ರಘು, ಯಶಸ್ವಿನಿ ಗೌಡ ಶಿಫ್ಟ್

‘ಯಾವ ಶತ್ರುಗಳಿಗೂ ಈ ಜೈಲು ಶಿಕ್ಷೆ ಬೇಡ. ಅಲ್ಲಿ ವಿವಿಧ ಕೇಸ್​ನಲ್ಲಿ ಒಳಗೆ ಬಂದವರು ಇರ್ತಾರೆ. ಅವರ ಮಧ್ಯೆ ನಾವು ಇರಬೇಕು. ನಾನು ಮೂಲೆಯಲ್ಲಿ ಕುಳಿತಿದ್ದೆ. ಆ ಜೀವನ ಯಾರಿಗೂ ಬೇಡ. ಸೊಳ್ಳೆ ಕಚ್ಚುತ್ತೆ. ಬೆಳಿಗ್ಗೆ 7 ಗಂಟೆಗೆ ತಿಂಡಿ, ಮಧ್ಯಾಹ್ನ 11ಕ್ಕೆ ಹಾಗೂ ಸಂಜೆ 5ಕ್ಕೆ ಊಟ. ಒಂದೊಂದು ದಿನವೂ ಕಳೆಯೋಕೆ ಆಗಲ್ಲ. ಡಿಪ್ರೆಶನ್​ಗೆ ಹೋಗುವ ಸಾಧ್ಯತೆ ಇರುತ್ತದೆ. ದರ್ಶನ್ ಬೇಗ ರಿಲೀಸ್ ಆಗಲಿ ಎಂಬುದು ನನ್ನ ಕೋರಿಕೆ’ ಎಂದಿದ್ದಾರೆ ಅವರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:51 am, Fri, 12 September 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ