AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೇಣುಕಾ ಸ್ವಾಮಿ ಪ್ರಕರಣ: ದರ್ಶನ್ ಪರ ವಕೀಲ ಬದಲು

Darshan Thoogudeepa: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್​​ಗೆ ಹಿನ್ನಡೆಯೊಂದು ಎದುರಾಗಿದೆ. ದರ್ಶನ್ ಅನ್ನು ನ್ಯಾಯಾಲಯದಲ್ಲಿ ಪ್ರತಿನಿಧಿಸುತ್ತಿದ್ದ ವಕೀಲರು ಪ್ರಕರಣದಿಂದ ಹಿಂದೆ ಸರಿದಿದ್ದಾರೆ. ದರ್ಶನ್ ಪರ ವಕಾಲತ್ತು ನಡೆಸುತ್ತಿದ್ದ ವಕೀಲ ಸುನಿಲ್ ಅವರು ಪ್ರಕರಣದಿಂದ ಹಿಂದೆ ಸರಿದಿದ್ದು, ಬೇರೊಬ್ಬ ವಕೀಲರು ದರ್ಶನ್ ಪರವಾಗಿ ನ್ಯಾಯಾಲಯದ ಮುಂದೆ ಹಾಜರಾಗಿದ್ದಾರೆ.

ರೇಣುಕಾ ಸ್ವಾಮಿ ಪ್ರಕರಣ: ದರ್ಶನ್ ಪರ ವಕೀಲ ಬದಲು
Darshan Thoogudeepa
ಮಂಜುನಾಥ ಸಿ.
|

Updated on: Jun 23, 2026 | 5:56 PM

Share

ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದಲ್ಲಿ ನಟ ದರ್ಶನ್ ನ್ಯಾಯಾಂಗ ಬಂಧನದಲ್ಲಿದ್ದಾರೆ. ಪ್ರಕರಣದಲ್ಲಿ ಕನಿಷ್ಟ ಇನ್ನು ಒಂದು ವರ್ಷ ದರ್ಶನ್ ಅವರಿಗೆ ಜಾಮೀನು ಸಿಗುವುದಿಲ್ಲ ಎಂಬುದು ಖಾತ್ರಿ ಆಗಿದೆ. ಪ್ರಕರಣದ ವಿಚಾರಣೆ ಚಾಲ್ತಿಯಲ್ಲಿದ್ದು, ಇನ್ನೊಂದು ವರ್ಷದಲ್ಲಿ ನಿಗದಿತ ಸಂಖ್ಯೆಯ ಸಾಕ್ಷಿಗಳ ವಿಚಾರಣೆ ನಡೆಯದಿದ್ದಲ್ಲಿ ದರ್ಶನ್ ಜಾಮೀನಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಆದರೆ ಇದೀಗ ದರ್ಶನ್​​ಗೆ ಹಿನ್ನಡೆಯೊಂದು ಎದುರಾಗಿದೆ. ದರ್ಶನ್ ಅನ್ನು ನ್ಯಾಯಾಲಯದಲ್ಲಿ ಪ್ರತಿನಿಧಿಸುತ್ತಿದ್ದ ವಕೀಲರು ಪ್ರಕರಣದಿಂದ ಹಿಂದೆ ಸರಿದಿದ್ದಾರೆ. ದರ್ಶನ್ ಪರ ವಕಾಲತ್ತು ನಡೆಸುತ್ತಿದ್ದ ವಕೀಲ ಸುನಿಲ್ ಅವರು ಪ್ರಕರಣದಿಂದ ಹಿಂದೆ ಸರಿದಿದ್ದು, ಬೇರೊಬ್ಬ ವಕೀಲರು ದರ್ಶನ್ ಪರವಾಗಿ ನ್ಯಾಯಾಲಯದ ಮುಂದೆ ಹಾಜರಾಗಿದ್ದಾರೆ.

ದರ್ಶನ್ ಪರವಾಗಿ ಆರಂಭದಿಂದಲೂ ವಕಾಲತ್ತು ಮಾಡುತ್ತಿದ್ದ ವಕೀಲ ಸುನಿಲ್ ಅವರು ನ್ಯಾಯಾಲಯಕ್ಕೆ ಮೆಮೊ ಸಲ್ಲಿಸಿ ಪ್ರಕರಣದಿಂದ ನಿವೃತ್ತರಾಗಿದ್ದಾರೆ. 59ನೇ ಸಿಸಿಎಚ್ ನ್ಯಾಯಾಲಯಕ್ಕೆ ಮೆಮೊ ಸಲ್ಲಿಕೆ ಮಾಡುವ ಮೂಲಕ ತಾವು ಇನ್ನು ಮುಂದೆ ಈ ಪ್ರಕರಣದಲ್ಲಿ ವಕಾಲತ್ತು ವಹಿಸುವುದಿಲ್ಲ ಎಂದಿದ್ದಾರೆ. ದರ್ಶನ್ ಮಾತ್ರವೇ ಅಲ್ಲದೆ ಇದೇ ಪ್ರಕರಣದಲ್ಲಿ ಆರೋಪಿಗಳಾದ ನಾಗರಾಜ್ ಮತ್ತು ಲಕ್ಷ್ಮಣ್ ಪರವಾಗಿಯೂ ಸುನಿಲ್ ವಕಾಲತ್ತು ವಹಿಸಿದ್ದರು.

ಇದನ್ನೂ ಓದಿ:ರೇಣುಕಾ ಸ್ವಾಮಿ ಪ್ರಕರಣ: ಸುಳ್ಳು ಸಾಕ್ಷ್ಯ ಆರೋಪಕ್ಕೆ ಎಸ್​​ಪಿಪಿ ಪ್ರಸನ್ನ ತಿರುಗೇಟು

ಇದೀಗ ಸುನಿಲ್ ಅವರ ಹಠಾತ್ ನಿವೃತ್ತಿಯ ಬಳಿಕ ದರ್ಶನ್ ಪರವಾಗಿ ವಕೀಲ ಹಷ್ಮತ್ ಪಾಷಾ ಅವರು ದರ್ಶನ್ ಪರ ವಕೀಲರಾಗಿ ನ್ಯಾಯಾಲಯದಲ್ಲಿ ಹಾಜರಾಗಿದ್ದಾರೆ. ಇನ್ನು ಮುಂದೆ ದರ್ಶನ್ ಪರವಾಗಿ ಹಷ್ಮತ್ ಪಾಷಾ ಅವರು ವಾದಗಳನ್ನು ಮಾಡಲಿದ್ದಾರೆ. ದರ್ಶನ್​​ಗೆ ಸಹ ಈ ಮಾಹಿತಿಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನೀಡಲಾಗಿದೆ. ‘ನಾನು ಕುಟುಂಬದವರ ಬಳಿ ಚರ್ಚಿಸಿ ಈ ಬಗ್ಗೆ ನಿರ್ಧಾರ ತಿಳಿಸುವೆ’ ಎಂದು ದರ್ಶನ್, ನ್ಯಾಯಾಲಯಕ್ಕೆ ತಿಳಿಸಿದ್ದಾರೆ ಎನ್ನಲಾಗಿದೆ.

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಚಾಲ್ತಿಯಲ್ಲಿದ್ದು, ಸಾಕ್ಷ್ಯಗಳ ವಿಚಾರಣೆ ನಡೆಯುತ್ತಿದೆ. ವರ್ಷದಲ್ಲಿ 60 ಸಾಕ್ಷ್ಯಗಳ ವಿಚಾರಣೆ ನಡೆಸದಿದ್ದಲ್ಲಿ ದರ್ಶನ್ ಮತ್ತೆ ಜಾಮೀನಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಆದರೆ ನ್ಯಾಯಾಲಯವು ತ್ವರಿತವಾಗಿ ಸಾಕ್ಷ್ಯಗಳ ವಿಚಾರಣೆ ನಡೆಸುವಂತೆ ಈಗಾಗಲೇ ಸೂಚಿಸಿದೆ. ಈಗ ವಕೀಲರ ಬದಲಾವಣೆಯಿಂದ ವಿಚಾರಣೆ ತುಸು ನಿಧಾನ ಆದಂತಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ