AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನೆಮ್ಮದಿಯಾಗಿ ಊಟ ಮಾಡಿ’ ಹೋಟೆಲ್ ಆರಂಭಿಸಿದ ದರ್ಶನ್ ಅಳಿಯ ಚಂದು; ಎಲ್ಲಿ?

ದರ್ಶನ್ ಅವರ ಸೋದರಳಿಯಾದ ಚಂದನ್ ಕುಮಾರ್ ಮೈಸೂರಿನ ದಸರಾ ಆಹಾರ ಮೇಳದಲ್ಲಿ "ನೆಮ್ಮದಿಯಾಗಿ ಊಟ ಮಾಡಿ" ಎಂಬ ನಾನ್ ವೆಜ್ ಹೋಟೆಲ್ ಆರಂಭಿಸಿದ್ದಾರೆ. ಇದು ತಾತ್ಕಾಲಿಕ ಸ್ಟಾಲ್. ಅವರ ಈ ಹೋಟೆಲ್ ದರ್ಶನ್ ಅವರ 'ಡೆವಿಲ್' ಸಿನಿಮಾ ಹಾಡಿನ ಸಾಲಿನಿಂದ ಪ್ರೇರಿತವಾಗಿದೆ ಎನ್ನಲಾಗುತ್ತಿದೆ.

‘ನೆಮ್ಮದಿಯಾಗಿ ಊಟ ಮಾಡಿ’ ಹೋಟೆಲ್ ಆರಂಭಿಸಿದ ದರ್ಶನ್ ಅಳಿಯ ಚಂದು; ಎಲ್ಲಿ?
ದರ್ಶನ್-ಚಂದನ್
ರಾಜೇಶ್ ದುಗ್ಗುಮನೆ
|

Updated on:Sep 24, 2025 | 8:55 AM

Share

ನಟ ದರ್ಶನ್ (Darshan) ಅವರಿಗೆ ಸೋದರಳಿಯ ಚಂದನ್​ ಕುಮಾರ್ ಎಂದರೆ ಅಚ್ಚುಮೆಚ್ಚು. ಇವರು ಸದಾ ಜೊತೆಯಲ್ಲೇ ಇರುತ್ತಿದ್ದರು. ಈಗ ಚಂದು ಅವರು ಮೈಸೂರಿನಲ್ಲಿ ನಾನ್​ವೆಜ್ ಹೋಟೆಲ್ ಆರಂಭಿಸಿದ್ದಾರೆ. ಈ ಹೋಟೆಲ್ ಹೆಸರು ‘ನೆಮ್ಮದಿಯಾಗಿ ಊಟ ಮಾಡಿ’ ಎಂದು. ಹಾಗಂತ ಇದು ಪರ್ಮನೆಂಟ್ ಹೋಟೆಲ್ ಅಲ್ಲ. ಮೈಸೂರಿನ ದಸರಾ ಅಂಗವಾಗಿ ನಡೆಯುತ್ತಿರುವ ಆಹಾರ ಮೇಳದಲ್ಲಿ ಚಂದು ಈ ಸ್ಟಾಲ್ ಹಾಕಿದ್ದಾರೆ. ಇದು ಪಕ್ಕಾ ನಾನ್​ವೆಜ್ ಹೋಟೆಲ್.

ದರ್ಶನ್ ಮೈಸೂರಿನವರು. ಅವರಿಗೆ ಆ ಊರಿನ ಮೇಲೆ ಸಾಕಷ್ಟು ಪ್ರೀತಿ ಇದೆ. ದಸರಾ ಸಮಯದಲ್ಲಿ ಮಿಸ್ ಮಾಡದೇ ದರ್ಶನ್ ಅವರು ಮೈಸೂರಿಗೆ ಹೋಗುತ್ತಿದ್ದರು. ಆದರೆ, ಈಗ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಜೈಲಿನಲ್ಲಿ ಇದ್ದಾರೆ. ಈ ವಿಚಾರ ಫ್ಯಾನ್ಸ್​ಗೆ ಬೇಸರ ಮೂಡಿಸಿದೆ. ಹಿಗಿರುವಾಗಲೇ ಚಂದು ಫುಡ್​ಸ್ಟಾಲ್ ಆರಂಭಿಸಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ದರ್ಶನ್ ಫ್ಯಾನ್ಸ್ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಸ್ವತಃ ಚಂದು ಅವರೇ ಫುಡ್​ ಸ್ಟಾಲ್​ನಲ್ಲಿ ನಿಂತು ಗ್ರಾಹಕರನ್ನು ಕರೆಯುತ್ತಿರುವುದು ಇದೆ. ಚಂದು ಅವರನ್ನು ಗುರುತಿಸಿ ಅನೇಕ ದರ್ಶನ್ ಫ್ಯಾನ್ಸ್ ಅವರನ್ನು ಮಾತನಾಡಿಸಿ ಮುಂದೆ ತೆರಳಿದ್ದಾರೆ. ಇನ್ನೂ ಕೆಲವರು ನೆಮ್ಮದಿಯಾಗಿ ಊಟ ಮಾಡಿ ಹೋಗಿದ್ದಾರೆ.

ಇದನ್ನೂ ಓದಿ
Image
ಪುನೀತ್ ರಾಜ್​ಕುಮಾರ್ ಯಾವಾಗಲೂ ಸರಳ ಉಡುಗೆ ಧರಿಸುತ್ತಿದ್ದಿದ್ದೇಕೆ?
Image
ಸಾಯಿ ಪಲ್ಲವಿ ಪಡಿಯಚ್ಚು ಪೂಜಾ ಕಣ್ಣನ್;  ಕನ್​ಫ್ಯೂಸ್ ಆಗೋದು ಗ್ಯಾರಂಟಿ
Image
‘ಓಜಿ’ ಟ್ರೇಲರ್ ಈವೆಂಟ್​ನಲ್ಲಿ ಮಳೆಯಲ್ಲಿ ನೆನೆದು ಹಾಸಿಗೆ ಹಿಡಿದ ಪವನ್
Image
‘BBK 12’ ಆರಂಭಕ್ಕೆ ಕೆಲವೇ ದಿನ ಬಾಕಿ ಇರುವಾಗ ಬಂತು ಸ್ಪರ್ಧಿಗಳ ಹೊಸ ಪಟ್ಟಿ

ದರ್ಶನ್ ಅವರು ಪತ್ನಿಗೆ ಬೈದ ಆಡಿಯೋ ವೈರಲ್ ಆಗಿತ್ತು. ಇದರಲ್ಲಿ ‘ಇದ್ರೆ ನೆಮ್ಮದಿಯಾಗ್ ಇರ್ಬೇಕು’ ಎಂದು ಡೈಲಾಗ್ ಹೇಳಿದ್ದರು. ಇದೇ ಸಾಲುಗಳು ‘ಡೆವಿಲ್’ ಸಿನಿಮಾ ಹಾಡಿನ ಟೈಟಲ್ ಆಗಿತ್ತು. ಹೀಗಾಗಿ, ಫುಡ್ ಸ್ಟಾಲ್​ಗೆ ಚಂದು ಅವರು ‘ನೆಮ್ಮದಿಯಾಗಿ ಊಟ ಮಾಡಿ’ ಎಂದಿಟ್ಟಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ:  ದರ್ಶನ್​ಗೆ ನಿಜಕ್ಕೂ ಬೆನ್ನು ನೋವು ಇದೆಯಾ? ವೈರಲ್ ಆದ ವಿಡಿಯೋದಲ್ಲಿದೆ ಅಸಲಿಯತ್ತು

ಚಂದು ಅವರು ಇಂಡಸ್ಟ್ರಿಗೆ ಕಾಲಿಡಲು ರೆಡಿ ಆಗುತ್ತಿದ್ದಾರೆ. ಈ ಸಿನಿಮಾಗೆ ದಿನಕರ್​ ತುಗದೀಪ್ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ದರ್ಶನ್ ವಿಲನ್ ಎನ್ನಲಾಗಿತ್ತು. ಆದರೆ, ದರ್ಶನ್ ಜೈಲು ಸೇರಿರುವುದರಿಂದ ಸಿನಿಮಾ ಮುಂದಕ್ಕೆ ಹೋಯಿತೇ ಎನ್ನುವ ಪ್ರಶ್ನೆ ಮೂಡಿದೆ. ಇನ್ನು, ‘ಡೆವಿಲ್’ ಸಿನಿಮಾದಲ್ಲಿ ಚಂದು ನಟಿಸುತ್ತಿದ್ದರು. ಆದರೆ, ದರ್ಶನ್ ಅವರೇ ಚಂದುನ ಹೊರಕ್ಕೆ ಇಟ್ಟರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:43 am, Wed, 24 September 25

ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ
ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ
ಅಪಘಾತವಾಗುವುದ ತಡೆದು ಒಂದು ಕುಟುಂಬವನ್ನು ರಕ್ಷಿಸಿದ ಯುವತಿ
ಅಪಘಾತವಾಗುವುದ ತಡೆದು ಒಂದು ಕುಟುಂಬವನ್ನು ರಕ್ಷಿಸಿದ ಯುವತಿ
ನಮ್ಮ ಮೆಟ್ರೋ ಯೆಲ್ಲೋ ಲೈನ್‌ನಲ್ಲಿ 7ನೇ ರೈಲಿನ ಸಂಚಾರ ಶುರು
ನಮ್ಮ ಮೆಟ್ರೋ ಯೆಲ್ಲೋ ಲೈನ್‌ನಲ್ಲಿ 7ನೇ ರೈಲಿನ ಸಂಚಾರ ಶುರು
ಲೈಟ್​ನಲ್ಲಿ ಕಾಣಿಸಿಕೊಂಡ ಹೊಗೆ, ಪತ್ರಿಕಾಗೋಷ್ಠಿ ಮೊಟಕುಗೊಳಿಸಿದ ಮಾಯಾವತಿ
ಲೈಟ್​ನಲ್ಲಿ ಕಾಣಿಸಿಕೊಂಡ ಹೊಗೆ, ಪತ್ರಿಕಾಗೋಷ್ಠಿ ಮೊಟಕುಗೊಳಿಸಿದ ಮಾಯಾವತಿ
ನಗರಸಭೆ ಪೌರಾಯುಕ್ತೆಗೆ ನಿಂದನೆ​​: ರಾಜೀವ್​ ಗೌಡ ಪರ ಮುನಿಯಪ್ಪ ಬ್ಯಾಟಿಂಗ್​​
ನಗರಸಭೆ ಪೌರಾಯುಕ್ತೆಗೆ ನಿಂದನೆ​​: ರಾಜೀವ್​ ಗೌಡ ಪರ ಮುನಿಯಪ್ಪ ಬ್ಯಾಟಿಂಗ್​​