AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಂಗೊಳ್ಳಿ ರಾಯಣ್ಣ’ ಮರು ಬಿಡುಗಡೆ ಅವ್ಯವಸ್ಥೆ: ದರ್ಶನ್ ಅಭಿಮಾನಿಗಳ ಆಕ್ರೋಶ

Sangolli Rayanna Movie: ದರ್ಶನ್ ನಟನೆಯ ‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ಸಿನಿಮಾ ಇಂದು ಮರು ಬಿಡುಗಡೆ ಆಗಿದೆ. ಆದರೆ ದರ್ಶನ್ ಅಭಿಮಾನಿಗಳು ಸಿನಿಮಾದ ನಿರ್ಮಾಪಕ, ವಿತರಕ ಹಾಗೂ ಚಿತ್ರಮಂದಿರಗಳ ಮಾಲೀಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

‘ಸಂಗೊಳ್ಳಿ ರಾಯಣ್ಣ’ ಮರು ಬಿಡುಗಡೆ ಅವ್ಯವಸ್ಥೆ: ದರ್ಶನ್ ಅಭಿಮಾನಿಗಳ ಆಕ್ರೋಶ
ಮಂಜುನಾಥ ಸಿ.
|

Updated on:Nov 22, 2024 | 12:16 PM

Share

ದರ್ಶನ್ ನಟನೆಯ ‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ಸಿನಿಮಾ ಇಂದು (ನವೆಂಬರ್ 22) ಮರು ಬಿಡುಗಡೆ ಆಗಿದೆ. ಆದರೆ ದರ್ಶನ್ ಅಭಿಮಾನಿಗಳೇ ಈ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ‘ಸಂಗೊಳ್ಳಿ ರಾಯಣ್ಣ’ ಸಿನಿಮಾದ ಮರು ಬಿಡುಗಡೆಯನ್ನು ಸೂಕ್ತವಾಗಿ ಮಾಡಿಲ್ಲವೆಂದು, ಸಿನಿಮಾಕ್ಕೆ ಮೇನ್ ಥಿಯೇಟರ್ ನೀಡಿಲ್ಲ, ಸರಿಯಾದ ಪ್ರಚಾರ ಮಾಡಿಲ್ಲ, ಬುಕ್​ಮೈ ಶೋನಲ್ಲಿಯೂ ಸಹ ಸರಿಯಾಗಿ ಮಾಹಿತಿ ನೀಡುತ್ತಿಲ್ಲ ಎಂದು ಅಭಿಮಾನಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜೆಪಿ ನಗರದ ಸಿದ್ದಲಿಂಗೇಶ್ವರ ಚಿತ್ರಮಂದಿರದಲ್ಲಿ ಬೆಳ್ಳಂಬೆಳಿಗ್ಗೆ ‘ಸಂಗೊಳ್ಳಿ ರಾಯಣ್ಣ’ ಸಿನಿಮಾದ ಶೋ ಹಾಕಲಾಗಿತ್ತು, ಸಿನಿಮಾ ವೀಕ್ಷಿಸಲು ಬಂದ ಅಭಿಮಾನಿಗಳು ಮಾಧ್ಯಮದವರ ಮುಂದೆ ಅಸಮಾಧಾನ ತೋಡಿಕೊಂಡರು. ‘ಸಂಗೊಳ್ಳಿ ರಾಯಣ್ಣ’ ದೇಶಪ್ರೇಮ, ಕನ್ನಡ ಪ್ರೇಮ ಸಾರುವ ಸಿನಿಮಾ, ಈ ಸಿನಿಮಾಕ್ಕೆ ವೀರೇಶ್ ಮತ್ತಿತರೆ ಯಾವುದಾದರೂ ಮುಖ್ಯ ಚಿತ್ರಮಂದಿರಗಳನ್ನು ನೀಡಬೇಕಿತ್ತು, ಜೆಪಿ ನಗರದ ಸಿದ್ದಲಿಂಗೇಶ್ವರ ಚಿತ್ರಮಂದಿರ ನೀಡಿರುವುದು ಸರಿಯಲ್ಲ’ ಎಂದಿದ್ದಾರೆ.

ದರ್ಶನ್​ರ ಸಿನಿಮಾಗಳನ್ನು ನೋಡುವ ಅಭಿಮಾನಿಗಳು ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಆದರೆ ಅವರಿಗೆ ಸೂಕ್ತವಾದ ಮಾಹಿತಿಯನ್ನೇ ನೀಡಲಾಗಿಲ್ಲ. ನಿನ್ನೆ ರಾತ್ರಿ ವರೆಗೂ ಬುಕ್​ಮೈಶೋ ನಲ್ಲಿ ಅಪ್​ಡೇಟ್ಸ್ ನೀಡಲಾಗಿರಲಿಲ್ಲ. ಸಿದ್ದಲಿಂಗೇಶ್ವರ ಚಿತ್ರಮಂದಿರದಲ್ಲಿ ಬೆಳಿಗ್ಗೆ ಶೋ ಇರುವ ಬಗ್ಗೆ ಸಹ ಅಭಿಮಾನಿಗಳಿಗೆ ಮಾಹಿತಿ ನೀಡಲಾಗಿಲ್ಲ. ‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ಅಂಥಹಾ ದೇಶ ಪ್ರೇಮ ಸಾರುವ ಸಿನಿಮಾವನ್ನು ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಬೇಕಿತ್ತು. ಆದರೆ ಅದಾಗಿಲ್ಲ’ ಎಂದು ಅಭಿಮಾನಿಯೊಬ್ಬರು ಅಸಮಾಧಾನ ವ್ಯಕ್ತಪಡಿಸಿದರು.

ಇದನ್ನೂ ಓದಿ:ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸ್ಮರಣೋತ್ಸವ ಕಾರ್ಯಕ್ರಮದ ವೇದಿಕೆಯಲ್ಲಿ ಸಿದ್ದರಾಮಯ್ಯ ಖಡ್ಗ ಝಳಪಳಿಸಿದರು!

ಬುಕ್​ ಮೈ ಶೋನಲ್ಲಿ ಸಹ ತಪ್ಪು ಮಾಹಿತಿಯನ್ನು ಹಂಚಿಕೊಳ್ಳಲಾಗುತ್ತಿದೆ. ಸಿದ್ದಲಿಂಗೇಶ್ವರ ಚಿತ್ರಮಂದಿರದ 10 ಗಂಟೆ ಶೋ ಈಗಾಗಲೇ ಫುಲ್ ಆಗಿದೆ ಎಂದು ಬುಕ್​ಮೈ ಶೋನಲ್ಲಿ ತೋರಿಸಲಾಗುತ್ತಿದೆ. ಆದರೆ ಅಷ್ಟು ಬುಕಿಂಗ್ ಆಗಿಯೇ ಇಲ್ಲ. ಇಲ್ಲೇ ಚಿತ್ರಮಂದಿರದವರಿದ್ದಾರೆ ಅವರನ್ನೇ ಕೇಳೋಣ, ಯಾಕೆ ಹೀಗೆ ಮಾಡುತ್ತಿದ್ದಾರೆ, ಅಭಿಮಾನಿಗಳಿಗೆ ಯಾಕೆ ಅನ್ಯಾಯ ಮಾಡುತ್ತಿದ್ದಾರೆ’ ಎಂದು ಕೆಲ ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದಾರೆ.

ಜನವರಿಯಲ್ಲಿ ಸಂಗೊಳ್ಳಿ ರಾಯಣ್ಣನವರ ಜಯಂತಿ ಇತ್ತು, ಅಂದು ‘ಸಂಗೊಳ್ಳಿ ರಾಯಣ್ಣ’ ಸಿನಿಮಾ ಬಿಡುಗಡೆ ಮಾಡಬಹುದಿತ್ತು. ಈಗ ಬಿಡುಗಡೆ ಮಾಡಿದ್ದರೂ ಸಹ ಯಾವುದೇ ಪ್ರಚಾರ ಮಾಡಿಲ್ಲ. ಪ್ರಚಾರ ಮಾಡದೇ ಇರುವ ಕಾರಣಕ್ಕೆ ಚಿತ್ರಮಂದಿರಗಳು ಖಾಲಿ ಇವೆ. ಮಾಧ್ಯಮದವರು, ಡಿಜಿಟಲ್ ಮೀಡಿಯಾದವರು ಬಂದು ಖಾಲಿ ಚಿತ್ರಮಂದಿರದ ವಿಡಿಯೋ ತೆಗೆದುಕೊಂಡು ಹೋಗಿದ್ದಾರೆ. ಮುಂದಿನ ಶೋಗೂ ಹಾಗೆ ಆಗಲಿದೆ. ದರ್ಶನ್​ಗೆ ಕೆಟ್ಟ ಹೆಸರು ತರಲೆಂದೇ ಹೀಗೆ ಮಾಡಲಾಗುತ್ತಿದೆ’ ಎಂದು ಆಕ್ರೋಶ ಹೊರಹಾಕಿದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:59 am, Fri, 22 November 24

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ