ಮಗಳ ವಿಡಿಯೋಗೆ ಕನ್ನಡ ಹಾಡು ಹಾಕಿದ ಡೇವಿಡ್​ ವಾರ್ನರ್​; ಕನ್ನಡಿಗರು ಫುಲ್​ ಫಿದಾ

ವಾರ್ನರ್​ಗೆ​ ಟಿಕ್​ಟಾಕ್​ ಎಂದರೆ ಬಲು ಪ್ರೀತಿ. ಅವರು ಟಿಕ್​ಟಾಕ್​ಗೆ ಹಿಂದಿ ಹಾಗೂ ತೆಲುಗು ಸಾಂಗ್​ಗಳನ್ನು ಬಳಕೆ ಮಾಡುತ್ತಾರೆ. ಇನ್ನು, ಸ್ಟೇಡಿಯಮ್​ನಲ್ಲಿ ತೆಲುಗು ಹಾಡು ಬಂದಾಗ ಅವರು ಡಾನ್ಸ್​ ಮಾಡಿದ ಉದಾಹರಣೆ ಕೂಡ ಇದೆ.

ಮಗಳ ವಿಡಿಯೋಗೆ ಕನ್ನಡ ಹಾಡು ಹಾಕಿದ ಡೇವಿಡ್​ ವಾರ್ನರ್​; ಕನ್ನಡಿಗರು ಫುಲ್​ ಫಿದಾ
ಡೇವಿಡ್​ ವಾರ್ನರ್
Follow us
| Updated By: ರಾಜೇಶ್ ದುಗ್ಗುಮನೆ

Updated on:Aug 19, 2021 | 7:39 PM

ಕ್ರಿಕೆಟರ್​ ಡೇವಿಡ್​ ವಾರ್ನರ್​ ಆಸ್ಟ್ರೇಲಿಯಾದವರಾದರೂ ಅವರಿಗೆ ಭಾರತ ಹಾಗೂ ಇಲ್ಲಿನ ಸಂಸ್ಕೃತಿ ಬಗ್ಗೆ ಎಲ್ಲಿಲ್ಲದ ಪ್ರೀತಿ ಹಾಗೂ ಗೌರವ. ಇದಕ್ಕೆ ಪ್ರಮುಖ ಕಾರಣ ಐಪಿಎಲ್​. ಅವರು ಐಪಿಎಲ್​ನಲ್ಲಿ ಹೈದರಾಬಾದ್​ ಪರ ಆಡುತ್ತಿದ್ದಾರೆ. ಐಪಿಎಲ್​ಗಾಗಿ ಭಾರತಕ್ಕೆ ಬಂದ ನಂತರದಲ್ಲಿ ಒಂದಷ್ಟು ವಿಚಾರ ಕಲಿತುಕೊಂಡಿದ್ದಾರೆ. ಈ ಬಾರಿ ವಾರ್ನರ್​ ಕನ್ನಡಿಗರ ಮನ ಗೆದ್ದಿದ್ದಾರೆ.

ವಾರ್ನರ್​ಗೆ​ ಟಿಕ್​ಟಾಕ್​ ಎಂದರೆ ಬಲು ಪ್ರೀತಿ. ಅವರು ಟಿಕ್​ಟಾಕ್​ಗೆ ಹಿಂದಿ ಹಾಗೂ ತೆಲುಗು ಸಾಂಗ್​ಗಳನ್ನು ಬಳಕೆ ಮಾಡುತ್ತಾರೆ. ಇನ್ನು, ಸ್ಟೇಡಿಯಮ್​ನಲ್ಲಿ ತೆಲುಗು ಹಾಡು ಬಂದಾಗ ಅವರು ಡಾನ್ಸ್​ ಮಾಡಿದ ಉದಾಹರಣೆ ಕೂಡ ಇದೆ. ಈ ಕಾರಣಕ್ಕೆ ಅವರು ಭಾರತೀಯರಿಗೆ ಹೆಚ್ಚು ಕನೆಕ್ಟ್​ ಆಗುತ್ತಾರೆ. ಈಗ ಅವರು ಕನ್ನಡಿಗರೂ ಹೆಚ್ಚು ಇಷ್ಟ ಆಗುವಂತ ಕೆಲಸ ಮಾಡಿದ್ದಾರೆ.

ಇನ್​ಸ್ಟಾಗ್ರಾಮ್​ನಲ್ಲಿ ವಾರ್ನರ್​ ಪೋಸ್ಟ್​ ಒಂದನ್ನು ಮಾಡಿದ್ದಾರೆ. ಈ ಪೋಸ್ಟ್​ನಲ್ಲಿ ವಾರ್ನರ್​ ಮಗಳು ಸ್ಟೇಡಿಯಮ್​ ಪೆವಿಲಿಯನ್​ನಲ್ಲಿ ಕೂತು ಅಪ್ಪನನ್ನು ಸಪೋರ್ಟ್​ ಮಾಡುತ್ತಿದ್ದಾಳೆ. ಈ ವಿಡಿಯೋಗೆ ವಾರ್ನರ್​ ಬಳಕೆ ಮಾಡಿದ್ದು ‘ಅಪ್ಪ ಐ ಲವ್​ ಯೂ ಪಾ..’ ಹಾಡನ್ನು. ಈ ವಿಡಿಯೋ ನೋಡಿ ಅನೇಕರಿಗೆ ಅಚ್ಚರಿ ಆಗಿದೆ.

‘ನೀವು ಮನಸ್ಸು ಗೆದ್ದು ಬಿಟ್ರಿ’ ಎಂದು ಕೆಲವರು ಕಮೆಂಟ್​ ಮಾಡಿದರೆ, ಇನ್ನೂ ಕೆಲವರು ಕನ್ನಡ ಎಂದು ಹಾರ್ಟ್​ ಎಮೋಜಿ ಹಾಕಿದ್ದಾರೆ. ಈ ವಿಡಿಯೋಗೆ ಕನ್ನಡಿಗರಿಂದ ಕಮೆಂಟ್​ಗಳ ಮಳೆ ಹರಿದು ಬರುತ್ತಿದೆ.

2017ರಲ್ಲಿ ತೆರೆಗೆ ಬಂದ  ಚೌಕ ಸಿನಿಮಾ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ತರುಣ್​ ಸುಧೀರ್​ ನಿರ್ದೇಶನದ ಈ ಸಿನಿಮಾದಲ್ಲಿ ತಂದೆ ಸೆಂಟಿಮೆಂಟ್​ಗೂ ಆದ್ಯತೆ ನೀಡಲಾಗಿತ್ತು. ಈ ಸಿನಿಮಾದಲ್ಲಿ ಬರುವ ‘ಅಪ್ಪ ಐ ಲವ್​ ಯೂ ಪಾ..’ ಹಾಡು ಕೂಡ ಹಿಟ್​ ಆಗಿತ್ತು. ಈಗ ಈ ಹಾಡನ್ನು ಅವರು ಕೂಡ ಬಳಕೆ ಮಾಡಿದ್ದು ವಿಶೇಷ.

ಇದನ್ನೂ ಓದಿ:  ಕೊಹ್ಲಿ ದಾಖಲೆಯನ್ನು ಮುರಿಯುವುದಿರಲಿ.. ನಮ್ಮಿಂದ ಟಚ್​ ಕೂಡ ಮಾಡಲಾಗುವುದಿಲ್ಲ; ಆಸೀಸ್ ಕ್ರಿಕೆಟಿಗ ಡೇವಿಡ್ ವಾರ್ನರ್

Sai Pallavi: ಸಾಯಿ ಪಲ್ಲವಿಗೆ ಜೋಡಿಯಾದ ಕ್ರಿಕೆಟಿಗ ಡೇವಿಡ್​ ವಾರ್ನರ್​; ಫ್ಯಾನ್ಸ್​ ಮೆಚ್ಚಿದ ವಿಡಿಯೋ ವೈರಲ್​

Published On - 6:15 pm, Thu, 19 August 21

ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ