AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗಳ ವಿಡಿಯೋಗೆ ಕನ್ನಡ ಹಾಡು ಹಾಕಿದ ಡೇವಿಡ್​ ವಾರ್ನರ್​; ಕನ್ನಡಿಗರು ಫುಲ್​ ಫಿದಾ

ವಾರ್ನರ್​ಗೆ​ ಟಿಕ್​ಟಾಕ್​ ಎಂದರೆ ಬಲು ಪ್ರೀತಿ. ಅವರು ಟಿಕ್​ಟಾಕ್​ಗೆ ಹಿಂದಿ ಹಾಗೂ ತೆಲುಗು ಸಾಂಗ್​ಗಳನ್ನು ಬಳಕೆ ಮಾಡುತ್ತಾರೆ. ಇನ್ನು, ಸ್ಟೇಡಿಯಮ್​ನಲ್ಲಿ ತೆಲುಗು ಹಾಡು ಬಂದಾಗ ಅವರು ಡಾನ್ಸ್​ ಮಾಡಿದ ಉದಾಹರಣೆ ಕೂಡ ಇದೆ.

ಮಗಳ ವಿಡಿಯೋಗೆ ಕನ್ನಡ ಹಾಡು ಹಾಕಿದ ಡೇವಿಡ್​ ವಾರ್ನರ್​; ಕನ್ನಡಿಗರು ಫುಲ್​ ಫಿದಾ
ಡೇವಿಡ್​ ವಾರ್ನರ್
TV9 Web
| Edited By: |

Updated on:Aug 19, 2021 | 7:39 PM

Share

ಕ್ರಿಕೆಟರ್​ ಡೇವಿಡ್​ ವಾರ್ನರ್​ ಆಸ್ಟ್ರೇಲಿಯಾದವರಾದರೂ ಅವರಿಗೆ ಭಾರತ ಹಾಗೂ ಇಲ್ಲಿನ ಸಂಸ್ಕೃತಿ ಬಗ್ಗೆ ಎಲ್ಲಿಲ್ಲದ ಪ್ರೀತಿ ಹಾಗೂ ಗೌರವ. ಇದಕ್ಕೆ ಪ್ರಮುಖ ಕಾರಣ ಐಪಿಎಲ್​. ಅವರು ಐಪಿಎಲ್​ನಲ್ಲಿ ಹೈದರಾಬಾದ್​ ಪರ ಆಡುತ್ತಿದ್ದಾರೆ. ಐಪಿಎಲ್​ಗಾಗಿ ಭಾರತಕ್ಕೆ ಬಂದ ನಂತರದಲ್ಲಿ ಒಂದಷ್ಟು ವಿಚಾರ ಕಲಿತುಕೊಂಡಿದ್ದಾರೆ. ಈ ಬಾರಿ ವಾರ್ನರ್​ ಕನ್ನಡಿಗರ ಮನ ಗೆದ್ದಿದ್ದಾರೆ.

ವಾರ್ನರ್​ಗೆ​ ಟಿಕ್​ಟಾಕ್​ ಎಂದರೆ ಬಲು ಪ್ರೀತಿ. ಅವರು ಟಿಕ್​ಟಾಕ್​ಗೆ ಹಿಂದಿ ಹಾಗೂ ತೆಲುಗು ಸಾಂಗ್​ಗಳನ್ನು ಬಳಕೆ ಮಾಡುತ್ತಾರೆ. ಇನ್ನು, ಸ್ಟೇಡಿಯಮ್​ನಲ್ಲಿ ತೆಲುಗು ಹಾಡು ಬಂದಾಗ ಅವರು ಡಾನ್ಸ್​ ಮಾಡಿದ ಉದಾಹರಣೆ ಕೂಡ ಇದೆ. ಈ ಕಾರಣಕ್ಕೆ ಅವರು ಭಾರತೀಯರಿಗೆ ಹೆಚ್ಚು ಕನೆಕ್ಟ್​ ಆಗುತ್ತಾರೆ. ಈಗ ಅವರು ಕನ್ನಡಿಗರೂ ಹೆಚ್ಚು ಇಷ್ಟ ಆಗುವಂತ ಕೆಲಸ ಮಾಡಿದ್ದಾರೆ.

ಇನ್​ಸ್ಟಾಗ್ರಾಮ್​ನಲ್ಲಿ ವಾರ್ನರ್​ ಪೋಸ್ಟ್​ ಒಂದನ್ನು ಮಾಡಿದ್ದಾರೆ. ಈ ಪೋಸ್ಟ್​ನಲ್ಲಿ ವಾರ್ನರ್​ ಮಗಳು ಸ್ಟೇಡಿಯಮ್​ ಪೆವಿಲಿಯನ್​ನಲ್ಲಿ ಕೂತು ಅಪ್ಪನನ್ನು ಸಪೋರ್ಟ್​ ಮಾಡುತ್ತಿದ್ದಾಳೆ. ಈ ವಿಡಿಯೋಗೆ ವಾರ್ನರ್​ ಬಳಕೆ ಮಾಡಿದ್ದು ‘ಅಪ್ಪ ಐ ಲವ್​ ಯೂ ಪಾ..’ ಹಾಡನ್ನು. ಈ ವಿಡಿಯೋ ನೋಡಿ ಅನೇಕರಿಗೆ ಅಚ್ಚರಿ ಆಗಿದೆ.

‘ನೀವು ಮನಸ್ಸು ಗೆದ್ದು ಬಿಟ್ರಿ’ ಎಂದು ಕೆಲವರು ಕಮೆಂಟ್​ ಮಾಡಿದರೆ, ಇನ್ನೂ ಕೆಲವರು ಕನ್ನಡ ಎಂದು ಹಾರ್ಟ್​ ಎಮೋಜಿ ಹಾಕಿದ್ದಾರೆ. ಈ ವಿಡಿಯೋಗೆ ಕನ್ನಡಿಗರಿಂದ ಕಮೆಂಟ್​ಗಳ ಮಳೆ ಹರಿದು ಬರುತ್ತಿದೆ.

2017ರಲ್ಲಿ ತೆರೆಗೆ ಬಂದ  ಚೌಕ ಸಿನಿಮಾ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ತರುಣ್​ ಸುಧೀರ್​ ನಿರ್ದೇಶನದ ಈ ಸಿನಿಮಾದಲ್ಲಿ ತಂದೆ ಸೆಂಟಿಮೆಂಟ್​ಗೂ ಆದ್ಯತೆ ನೀಡಲಾಗಿತ್ತು. ಈ ಸಿನಿಮಾದಲ್ಲಿ ಬರುವ ‘ಅಪ್ಪ ಐ ಲವ್​ ಯೂ ಪಾ..’ ಹಾಡು ಕೂಡ ಹಿಟ್​ ಆಗಿತ್ತು. ಈಗ ಈ ಹಾಡನ್ನು ಅವರು ಕೂಡ ಬಳಕೆ ಮಾಡಿದ್ದು ವಿಶೇಷ.

ಇದನ್ನೂ ಓದಿ:  ಕೊಹ್ಲಿ ದಾಖಲೆಯನ್ನು ಮುರಿಯುವುದಿರಲಿ.. ನಮ್ಮಿಂದ ಟಚ್​ ಕೂಡ ಮಾಡಲಾಗುವುದಿಲ್ಲ; ಆಸೀಸ್ ಕ್ರಿಕೆಟಿಗ ಡೇವಿಡ್ ವಾರ್ನರ್

Sai Pallavi: ಸಾಯಿ ಪಲ್ಲವಿಗೆ ಜೋಡಿಯಾದ ಕ್ರಿಕೆಟಿಗ ಡೇವಿಡ್​ ವಾರ್ನರ್​; ಫ್ಯಾನ್ಸ್​ ಮೆಚ್ಚಿದ ವಿಡಿಯೋ ವೈರಲ್​

Published On - 6:15 pm, Thu, 19 August 21

Follow Us
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!