AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರುತ್ತಿದೆ ಡಾರ್ಕ್​ವೆಬ್ ಹಿನ್ನೆಲೆಯ ಥ್ರಿಲ್ಲರ್ ಕಥಾನಕ ‘ಕಪಟಿ‘

ನಟನಾಗಿ, ನಿರ್ದೇಶಕರಾಗಿ ಪರಿಚಿತರಾಗಿರುವ ದಯಾಳ್ ಪದ್ಮನಾಭ್, ಇದೀಗ ತಾವು ನಿರ್ಮಾಪಕರಾಗಿ ನಿರ್ದೇಶಕರ ಸ್ಥಾನವನ್ನು ಬೇರೊಬ್ಬರಿಗೆ ಬಿಟ್ಟುಕೊಟ್ಟಿದ್ದಾರೆ. ತಮ್ಮ ನಿರ್ಮಾಣದ ‘ಕಪಟಿ’ ಸಿನಿಮಾ ಬಗ್ಗೆ ದಯಾಳ್ ಮಾತನಾಡಿದ್ದಾರೆ.

ಬರುತ್ತಿದೆ ಡಾರ್ಕ್​ವೆಬ್ ಹಿನ್ನೆಲೆಯ ಥ್ರಿಲ್ಲರ್ ಕಥಾನಕ ‘ಕಪಟಿ‘
ಮಂಜುನಾಥ ಸಿ.
|

Updated on:Aug 01, 2024 | 8:07 PM

Share

ನಟ, ನಿರ್ದೇಶಕನಾಗಿ ಗಮನ ಸೆಳೆದಿರುವ ದಯಾಳ್ ಪದ್ಮನಾಭ್ ನಿರ್ಮಾಪಕರಾಗಿಯೂ ಪರಿಚಿತರೇ. ‘ಸರ್ಕಸ್’, ‘ಆ ಕರಾಳ ರಾತ್ರಿ’, ‘ಹಗ್ಗದ ಕೊನೆ’ ಇನ್ನೂ ಹಲವು ಉತ್ತಮ ಸಿನಿಮಾಗಳನ್ನು ನಿರ್ದೇಶಕರಾಗಿ ದಯಾಳ್ ಪದ್ಮನಾಭ್ ಕನ್ನಡಕ್ಕೆ ನೀಡಿದ್ದಾರೆ. ಕೆಲವು ಸಿನಿಮಾಗಳ ನಿರ್ಮಾಣವನ್ನೂ ಸಹ ಮಾಡಿದ್ದಾರೆ. ಆದರೆ ಇದೇ ಮೊದಲ ಬಾರಿಗೆ ನಿರ್ದೇಶನದ ಜವಾಬ್ದಾರಿಯನ್ನು ಮತ್ತೊಬ್ಬರಿಗೆ ವಹಿಸಿ ತಾವು ಕೇವಲ ನಿರ್ಮಾಣಕ್ಕಷ್ಟೆ ಸೀಮಿತ ಮಾಡಿಕೊಂಡು ‘ಕಪಟಿ’ ಹೆಸರಿನ ಸಿನಿಮಾ ನಿರ್ಮಾಣ ಮಾಡಿದ್ದಾರೆ.

ಸಿನಿಮಾದಲ್ಲಿ ಸುಕೃತಾ ವಾಗ್ಲೆ, ಕಿರುತೆರೆ ನಟ ದೇವ್, ಕೃಷ್ಣ ಅವರುಗಳು ಪ್ರಮುಖ ಪಾತ್ರದಲ್ಲಿ ನಟಿಸಿದ್ದು, ಸಿನಿಮಾವನ್ನು ಸಾಫ್ಟ್​ವೇರ್ ಎಂಜಿನಿಯರ್​ಗಳಾದ ರವಿ ಮತ್ತು ಚೇತನ್ ಎಂಬುವರು ನಿರ್ದೇಶನ ಮಾಡಿದ್ದಾರೆ. ಇದು ಥ್ರಿಲ್ಲರ್ ಜಾನರ್ ಸಿನಿಮಾ ಆಗಿದ್ದು, ಕಡಿಮೆ ಪಾತ್ರಗಳನ್ನು ಇರಿಸಿಕೊಂಡು ಒಂದೇ ಲೊಕೇಶನ್​ನಲ್ಲಿ ಕೆಲವೇ ದಿನಗಳಲ್ಲಿ ನಡೆಯುವ ಕತೆಯನ್ನು ಸಿನಿಮಾದಲ್ಲಿ ತೋರಿಸಲಾಗುತ್ತಿದೆ.

ಸಿನಿಮಾದ ಕುರಿತ ಸಮಾರಂಭದಲ್ಲಿ ತಮ್ಮ ಸಿನಿಮಾದ ಬಗ್ಗೆ ಮಾತನಾಡಿರುವ ದಯಾಳ್ ಪದ್ಮನಾಭ್, ‘ಒಂದು ಬಂಗಲೆಯಲ್ಲಿ ಕೆಲವೇ ದಿನಗಳಲ್ಲಿ ನಡೆಯುವ ಥ್ರಿಲ್ಲರ್ ಕತೆಯನ್ನು ಸಿನಿಮಾ ಒಳಗೊಂಡಿದೆ. ಡಾರ್ಕ್ ವೆಬ್ ಹಿನ್ನೆಲೆಯಲ್ಲಿ ಈ ಸಿನಿಮಾ ಮಾಡಿದ್ದೇವೆ. ಈವರೆಗೆ ಈ ರೀತಿಯ ಕತೆಯನ್ನು ಯಾರೂ ಟಚ್ ಮಾಡಿರಲಿಲ್ಲ. ಮಹಾ ಅದ್ಭುತ ಸಿನಿಮಾ ಎಂದೆಲ್ಲ ಇಲ್ಲದ ಜಂಭ ಕೊಚ್ಚಿಕೊಳ್ಳೂವುದಿಲ್ಲ ಆದರೆ ಜನರನ್ನು ಎಂಗೇಜ್ ಮಾಡುವ ಸಿನಿಮಾ, ಕುತೂಹಲದಿಂದ ಕಾಯುವಂತೆ ಮಾಡುವ ಸಿನಿಮಾ ನಮ್ಮದು ಎಂದಿದ್ದಾರೆ.

ಇದನ್ನೂ ಓದಿ:ಕನ್ನಡ ಸಿನಿಮಾರಂಗದ ರೂಪಾಂತರದ ಕಾಲದಲ್ಲಿ ಬರುತ್ತಿರುವ ‘ರೂಪಾಂತರ’

ಸಿನಿಮಾ ನಿರ್ಮಾಣದ ಬಗ್ಗೆ ಮಾತನಾಡುತ್ತಾ, ‘ಹಿಂದೆಲ್ಲ ಕೆಲವು ವ್ಯಕ್ತಿಗಳಿಂದ ನಷ್ಟವನ್ನು ಅನುಭವಿಸಿದ್ದೇನೆ. ಆದರೆ ಇನ್ನು ಮುಂದೆ ಹಾಗಿಲ್ಲ. ಲಾಭದ ಲೆಕ್ಕಾಚಾರ ಹಾಕಿಕೊಂಡೇ ಸಿನಿಮಾ ನಿರ್ಮಾಣಕ್ಕೆ ಇಳಿಯುತ್ತೇನೆ. ನಾನು‌ ನನ್ನ ಸಿನಿಮಾ ಲಾಭ ಎಲ್ಲಾ‌ ಕ್ಯಾಲಿಕುಲೇಷನ್ ಮಾಡಿಯೇ ಸಿನಿಮಾ ಮಾಡೋದು, ಯಾವುದೇ ಸಿನಿಮಾ‌ ಮಾಡಿದ್ರು 50% ಲಾಭ ಲೆಕ್ಕಚಾರ ಹಾಕಿಕೊಳ್ತಿನಿ, ಇದನ್ನ ಪ್ರತಿ ಒಬ್ರು ಮಾಡಬೇಕು ಯಾವ ರೀತಿ ಪ್ಲ್ಯಾನ್ಡ್ ಮಾಡಿದ್ರೆ ವರ್ಕ್ ಔಟ್ ಆಗುತ್ತೆ ಅಂತ ಯೋಚನೆ ಮಾಡಿರ್ತೀನಿ, ಕಪಟತನ ಇರೋವ್ರು ತುಂಬಾ ಜನ ಬಂದು ಹೋಗಿದಾರೆ ಅವ್ರಿಂದ ಬುದ್ಧಿ ಕಲಿತಿವಿ ಎಂದಿದ್ದಾರೆ ದಯಾಳ್.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:53 pm, Thu, 1 August 24

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ