Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರುತ್ತಿದೆ ಡಾರ್ಕ್​ವೆಬ್ ಹಿನ್ನೆಲೆಯ ಥ್ರಿಲ್ಲರ್ ಕಥಾನಕ ‘ಕಪಟಿ‘

ನಟನಾಗಿ, ನಿರ್ದೇಶಕರಾಗಿ ಪರಿಚಿತರಾಗಿರುವ ದಯಾಳ್ ಪದ್ಮನಾಭ್, ಇದೀಗ ತಾವು ನಿರ್ಮಾಪಕರಾಗಿ ನಿರ್ದೇಶಕರ ಸ್ಥಾನವನ್ನು ಬೇರೊಬ್ಬರಿಗೆ ಬಿಟ್ಟುಕೊಟ್ಟಿದ್ದಾರೆ. ತಮ್ಮ ನಿರ್ಮಾಣದ ‘ಕಪಟಿ’ ಸಿನಿಮಾ ಬಗ್ಗೆ ದಯಾಳ್ ಮಾತನಾಡಿದ್ದಾರೆ.

ಬರುತ್ತಿದೆ ಡಾರ್ಕ್​ವೆಬ್ ಹಿನ್ನೆಲೆಯ ಥ್ರಿಲ್ಲರ್ ಕಥಾನಕ ‘ಕಪಟಿ‘
Follow us
ಮಂಜುನಾಥ ಸಿ.
|

Updated on:Aug 01, 2024 | 8:07 PM

ನಟ, ನಿರ್ದೇಶಕನಾಗಿ ಗಮನ ಸೆಳೆದಿರುವ ದಯಾಳ್ ಪದ್ಮನಾಭ್ ನಿರ್ಮಾಪಕರಾಗಿಯೂ ಪರಿಚಿತರೇ. ‘ಸರ್ಕಸ್’, ‘ಆ ಕರಾಳ ರಾತ್ರಿ’, ‘ಹಗ್ಗದ ಕೊನೆ’ ಇನ್ನೂ ಹಲವು ಉತ್ತಮ ಸಿನಿಮಾಗಳನ್ನು ನಿರ್ದೇಶಕರಾಗಿ ದಯಾಳ್ ಪದ್ಮನಾಭ್ ಕನ್ನಡಕ್ಕೆ ನೀಡಿದ್ದಾರೆ. ಕೆಲವು ಸಿನಿಮಾಗಳ ನಿರ್ಮಾಣವನ್ನೂ ಸಹ ಮಾಡಿದ್ದಾರೆ. ಆದರೆ ಇದೇ ಮೊದಲ ಬಾರಿಗೆ ನಿರ್ದೇಶನದ ಜವಾಬ್ದಾರಿಯನ್ನು ಮತ್ತೊಬ್ಬರಿಗೆ ವಹಿಸಿ ತಾವು ಕೇವಲ ನಿರ್ಮಾಣಕ್ಕಷ್ಟೆ ಸೀಮಿತ ಮಾಡಿಕೊಂಡು ‘ಕಪಟಿ’ ಹೆಸರಿನ ಸಿನಿಮಾ ನಿರ್ಮಾಣ ಮಾಡಿದ್ದಾರೆ.

ಸಿನಿಮಾದಲ್ಲಿ ಸುಕೃತಾ ವಾಗ್ಲೆ, ಕಿರುತೆರೆ ನಟ ದೇವ್, ಕೃಷ್ಣ ಅವರುಗಳು ಪ್ರಮುಖ ಪಾತ್ರದಲ್ಲಿ ನಟಿಸಿದ್ದು, ಸಿನಿಮಾವನ್ನು ಸಾಫ್ಟ್​ವೇರ್ ಎಂಜಿನಿಯರ್​ಗಳಾದ ರವಿ ಮತ್ತು ಚೇತನ್ ಎಂಬುವರು ನಿರ್ದೇಶನ ಮಾಡಿದ್ದಾರೆ. ಇದು ಥ್ರಿಲ್ಲರ್ ಜಾನರ್ ಸಿನಿಮಾ ಆಗಿದ್ದು, ಕಡಿಮೆ ಪಾತ್ರಗಳನ್ನು ಇರಿಸಿಕೊಂಡು ಒಂದೇ ಲೊಕೇಶನ್​ನಲ್ಲಿ ಕೆಲವೇ ದಿನಗಳಲ್ಲಿ ನಡೆಯುವ ಕತೆಯನ್ನು ಸಿನಿಮಾದಲ್ಲಿ ತೋರಿಸಲಾಗುತ್ತಿದೆ.

ಸಿನಿಮಾದ ಕುರಿತ ಸಮಾರಂಭದಲ್ಲಿ ತಮ್ಮ ಸಿನಿಮಾದ ಬಗ್ಗೆ ಮಾತನಾಡಿರುವ ದಯಾಳ್ ಪದ್ಮನಾಭ್, ‘ಒಂದು ಬಂಗಲೆಯಲ್ಲಿ ಕೆಲವೇ ದಿನಗಳಲ್ಲಿ ನಡೆಯುವ ಥ್ರಿಲ್ಲರ್ ಕತೆಯನ್ನು ಸಿನಿಮಾ ಒಳಗೊಂಡಿದೆ. ಡಾರ್ಕ್ ವೆಬ್ ಹಿನ್ನೆಲೆಯಲ್ಲಿ ಈ ಸಿನಿಮಾ ಮಾಡಿದ್ದೇವೆ. ಈವರೆಗೆ ಈ ರೀತಿಯ ಕತೆಯನ್ನು ಯಾರೂ ಟಚ್ ಮಾಡಿರಲಿಲ್ಲ. ಮಹಾ ಅದ್ಭುತ ಸಿನಿಮಾ ಎಂದೆಲ್ಲ ಇಲ್ಲದ ಜಂಭ ಕೊಚ್ಚಿಕೊಳ್ಳೂವುದಿಲ್ಲ ಆದರೆ ಜನರನ್ನು ಎಂಗೇಜ್ ಮಾಡುವ ಸಿನಿಮಾ, ಕುತೂಹಲದಿಂದ ಕಾಯುವಂತೆ ಮಾಡುವ ಸಿನಿಮಾ ನಮ್ಮದು ಎಂದಿದ್ದಾರೆ.

ಇದನ್ನೂ ಓದಿ:ಕನ್ನಡ ಸಿನಿಮಾರಂಗದ ರೂಪಾಂತರದ ಕಾಲದಲ್ಲಿ ಬರುತ್ತಿರುವ ‘ರೂಪಾಂತರ’

ಸಿನಿಮಾ ನಿರ್ಮಾಣದ ಬಗ್ಗೆ ಮಾತನಾಡುತ್ತಾ, ‘ಹಿಂದೆಲ್ಲ ಕೆಲವು ವ್ಯಕ್ತಿಗಳಿಂದ ನಷ್ಟವನ್ನು ಅನುಭವಿಸಿದ್ದೇನೆ. ಆದರೆ ಇನ್ನು ಮುಂದೆ ಹಾಗಿಲ್ಲ. ಲಾಭದ ಲೆಕ್ಕಾಚಾರ ಹಾಕಿಕೊಂಡೇ ಸಿನಿಮಾ ನಿರ್ಮಾಣಕ್ಕೆ ಇಳಿಯುತ್ತೇನೆ. ನಾನು‌ ನನ್ನ ಸಿನಿಮಾ ಲಾಭ ಎಲ್ಲಾ‌ ಕ್ಯಾಲಿಕುಲೇಷನ್ ಮಾಡಿಯೇ ಸಿನಿಮಾ ಮಾಡೋದು, ಯಾವುದೇ ಸಿನಿಮಾ‌ ಮಾಡಿದ್ರು 50% ಲಾಭ ಲೆಕ್ಕಚಾರ ಹಾಕಿಕೊಳ್ತಿನಿ, ಇದನ್ನ ಪ್ರತಿ ಒಬ್ರು ಮಾಡಬೇಕು ಯಾವ ರೀತಿ ಪ್ಲ್ಯಾನ್ಡ್ ಮಾಡಿದ್ರೆ ವರ್ಕ್ ಔಟ್ ಆಗುತ್ತೆ ಅಂತ ಯೋಚನೆ ಮಾಡಿರ್ತೀನಿ, ಕಪಟತನ ಇರೋವ್ರು ತುಂಬಾ ಜನ ಬಂದು ಹೋಗಿದಾರೆ ಅವ್ರಿಂದ ಬುದ್ಧಿ ಕಲಿತಿವಿ ಎಂದಿದ್ದಾರೆ ದಯಾಳ್.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:53 pm, Thu, 1 August 24

ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ
ವಿಕಾಸ್ ಮೇಲೆ ನಡೆದ ಹಲ್ಲೆ ನೋಡಿದರೆ ರಕ್ತ ಕುದಿಯುತ್ತದೆ: ಅಶ್ವಿನಿ
ವಿಕಾಸ್ ಮೇಲೆ ನಡೆದ ಹಲ್ಲೆ ನೋಡಿದರೆ ರಕ್ತ ಕುದಿಯುತ್ತದೆ: ಅಶ್ವಿನಿ
ಬಿಜೆಪಿ ಸೇರಿದಂತೆ ಯಾರೂ ಜಾತಿ ಗಣತಿ ವರದಿಯನ್ನು ವಿರೋಧಿಸುತ್ತಿಲ್ಲ: ಸುರೇಶ್
ಬಿಜೆಪಿ ಸೇರಿದಂತೆ ಯಾರೂ ಜಾತಿ ಗಣತಿ ವರದಿಯನ್ನು ವಿರೋಧಿಸುತ್ತಿಲ್ಲ: ಸುರೇಶ್
ಭರ್ಜರಿ ಪ್ರದರ್ಶನ... ಶಾಹೀನ್ ಅಫ್ರಿದಿಗೆ ಚಿನ್ನದ ಐಫೋನ್ ಉಡುಗೊರೆ
ಭರ್ಜರಿ ಪ್ರದರ್ಶನ... ಶಾಹೀನ್ ಅಫ್ರಿದಿಗೆ ಚಿನ್ನದ ಐಫೋನ್ ಉಡುಗೊರೆ
ವಿಂಗ್ ಕಮಾಂಡರ್ ವಿರುದ್ಧ ಎಫ್​ಐಅರ್ ದಾಖಲಾಗಿದೆ: ಪರಮೇಶ್ವರ್
ವಿಂಗ್ ಕಮಾಂಡರ್ ವಿರುದ್ಧ ಎಫ್​ಐಅರ್ ದಾಖಲಾಗಿದೆ: ಪರಮೇಶ್ವರ್
ಆರಡಿ ಎತ್ತರದ ದೈತ್ಯನ ಮೇಲೆ ಹುಡುಗ ಹೇಗೆ ಹಲ್ಲೆ ಮಾಡಿಯಾನು? ರಾಜಣ್ಣ
ಆರಡಿ ಎತ್ತರದ ದೈತ್ಯನ ಮೇಲೆ ಹುಡುಗ ಹೇಗೆ ಹಲ್ಲೆ ಮಾಡಿಯಾನು? ರಾಜಣ್ಣ
IPL 2025: ಮುಂಬೈ ಇಂಡಿಯನ್ಸ್ ಆಟಗಾರರಿಗೆ ಹೀಗೊಂದು ಶಿಕ್ಷೆ
IPL 2025: ಮುಂಬೈ ಇಂಡಿಯನ್ಸ್ ಆಟಗಾರರಿಗೆ ಹೀಗೊಂದು ಶಿಕ್ಷೆ