AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿಮ್ಮ ನೆಟ್ಟು, ಬೋಲ್ಟ್ ಟೈಟ್ ಮಾಡುವೆ’: ನಟರಿಗೆ ನೇರ ಎಚ್ಚರಿಕೆ ಕೊಟ್ಟ ಡಿಕೆ ಶಿವಕುಮಾರ್

DCM DK Shivakumar: ಬೆಂಗಳೂರು ಅಂತರಾಷ್ಟ್ರೀಯ ಸಿನಿಮಾ ಉತ್ಸವದಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, ಯಾರಿಗೆ ಎಲ್ಲಿ ನೆಟ್ಟು ಬೋಲ್ಟ್ ಟೈಟ್ ಮಾಡಬೇಕು ಎಂಬುದು ನನಗೆ ಚೆನ್ನಾಗಿ ಗೊತ್ತಿದೆ ಎಂದು ಕೆಲ ನಟರಿಗೆ ನೇರವಾಗಿ ಎಚ್ಚರಿಕೆ ನೀಡಿದರು. ನನ್ನನ್ನು ಬಳಸಿ ಬಿಸಾಡುತ್ತಾರೆ, ಆದರೆ ಎಲ್ಲವನ್ನೂ ನಾನು ಗಮನಿಸುತ್ತಾ ಇರುತ್ತೇನೆ ಎಂದಿದ್ದಾರೆ ಡಿಕೆಶಿ.

‘ನಿಮ್ಮ ನೆಟ್ಟು, ಬೋಲ್ಟ್ ಟೈಟ್ ಮಾಡುವೆ’: ನಟರಿಗೆ ನೇರ ಎಚ್ಚರಿಕೆ ಕೊಟ್ಟ ಡಿಕೆ ಶಿವಕುಮಾರ್
Dk Shivakumar
ಮಂಜುನಾಥ ಸಿ.
|

Updated on:Mar 01, 2025 | 9:24 PM

Share

ಬೆಂಗಳೂರು ಚಲನಚಿತ್ರೋತ್ಸವ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಭಾಷಣದ ವೇಳೆ ಸಿನಿಮಾ ನಟ, ನಟಿಯರಿಗೆ ಪರೋಕ್ಷವಾಗಿ ಎಚ್ಚರಿಕೆ ನೀಡಿದರು. ಅಲ್ಲದೆ, ನಿಮ್ಮ ಚಲನ ವಲನ, ಹಾವ ಭಾವ ಎಲ್ಲವೂ ನಮಗೆ ಅರ್ಥವಾಗುತ್ತದೆ, ಎಲ್ಲವನ್ನು ಗಮನಿಸುತ್ತಿರುತ್ತೇನೆ’ ಎಂದು ಹೇಳಿದರು. ಅಷ್ಟು ಮಾತ್ರವೇ ಅಲ್ಲದೆ ಸಿನಿಮಾ ರಂಗದವರ ಮೇಲೆ ವಿಶೇಷವಾಗಿ ನಮ್ಮ ನಟ, ನಟಿಯರ ಮೇಲೆ ನನಗೆ ಬಹಳ ಸಿಟ್ಟಿದೆ ಎಂದು ನೇರವಾಗಿಯೇ ಸಿಟ್ಟು ಹೊರಹಾಕಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, ‘ನನಗೆ ಚಲನಚಿತ್ರ ವಾಣಿಜ್ಯ ಮಂಡಳಿ, ಈ ಸಿನಿಮಾ ನಟರ ಬಗ್ಗೆ ನನಗೆ ಬಹಳ ಸಿಟ್ಟು ಬಂದುಬಿಟ್ಟಿದೆ. ಅದಕ್ಕೆ ಕಾರಣವೂ ಇದೆ. ನಾವು ಕೋವಿಡ್ ಮುಗಿದ ಸಮಯದಲ್ಲಿ ಒಂದು ಕಾರ್ಯಕ್ರಮ ಮಾಡಿದ್ದೆವು, ನಮ್ಮ ಜಲ ನಮ್ಮ ಹಕ್ಕು ಎಂಬ ಜಾಥಾ ಮಾಡಿದ್ದೆವು, ನಮ್ಮ ಜನರಿಗೆ ನೀರು ಕೊಡುವ ಉದ್ದೇಶದಿಂದಾಗಿ ನಾವು, ಸಿದ್ದರಾಮಯ್ಯನವರು ಪಾದಯಾತ್ರೆ ಮಾಡಿದ್ದೆವು. ಆದರೆ ಆಗ ಯಾವ ನಟರೂ ಸಹ ನಮಗೆ ಬೆಂಬಲ ಕೊಡಲಿಲ್ಲ, ಸಾಧು ಕೋಕಿಲ ಮತ್ತು ದುನಿಯಾ ವಿಜಿ ಬಿಟ್ಟರೆ ಇನ್ಯಾರೂ ಸಹ ನಮಗೆ ಬೆಂಬಲ ಕೊಡಲಿಲ್ಲ’ ಎಂದು ನೇರವಾಗಿಯೇ ಹೇಳಿದರು ಡಿಕೆ ಶಿವಕುಮಾರ್.

‘ಅದಕ್ಕೆ ನಮ್ಮ ಸರ್ಕಾರ ಬಂದ ಕೂಡಲೇ ಸಾಧು ಕೋಕಿಲ ಅವರಿಗೆ ಏನಾದರೂ ಮಾಡಬೇಕು, ಅವರಿಗೆ ಗೌರವ ಕೊಡಬೇಕು ಎಂದು ಅಕಾಡೆಮಿ ಅಧ್ಯಕ್ಷ ಸ್ಥಾನ ಕೊಟ್ಟೆವು. ನಮ್ಮ ಕಷ್ಟಕಾಲದಲ್ಲಿ ಜೊತೆಗೆ ನಿಂತವರನ್ನು ಗುರುತಿಸಬೇಕು ಎಂದು ಹೇಳಿ ಅವರಿಗೆ ಸ್ಥಾನ ಕೊಟ್ಟೆವು. ನನ್ನನ್ನು ಕೆಲವು ನಟರೆಲ್ಲ ಬಳಸಿಕೊಳ್ಳುತ್ತಾರೆ. ಆ ಮೇಲೆ ಬಿಸಾಡುತ್ತಾರೆ. ಆದರೆ ಹಾಗೆ ಆಗುವುದಿಲ್ಲ. ನಾನು ಇದನ್ನೆಲ್ಲ ಗಮನಿಸುವುದಿಲ್ಲ ಎಂದು ಯಾರೂ ಸಹ ತಿಳಿದುಕೊಳ್ಳಲು ಹೋಗಬೇಡಿ. ನಮಗೆ ಎಲ್ಲರ ನಾಡಿ ಮಿಡಿತ, ಯಾರು ಹೇಗೆ, ಯಾರ ಚಲನೆ ಹೇಗೆ ಎಲ್ಲವೂ ನಮಗೆ ಅರಿವಿದೆ’ ಎಂದು ಪರೋಕ್ಷವಾಗಿ ಎಚ್ಚರಿಕೆ ನೀಡಿದರು ಡಿಕೆ ಶಿವಕುಮಾರ್.

ಇದನ್ನೂ ಓದಿ:ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲು ಕಾಲ ಕೂಡಿಬರಬೇಕು, ಅವರು ಸಿಎಂ ಆಗುವಾಸೆ ನಂಗಿದೆ: ಡಿಕೆ ಸುರೇಶ್

ಮಾತು ಮುಂದುವರೆಸಿ, ‘ಇಂದಿನ ಕಾರ್ಯಕ್ರಮವನ್ನೇ ನೋಡಿ, ಒಂದು ಹತ್ತು ಜನರ ಹೊರತಾಗಿ ಇನ್ಯಾರೂ ಸಹ ಇಲ್ಲ. ಇದು ನಮ್ಮ ಅಥವಾ ಸಿದ್ದರಾಮಯ್ಯ ಅವರ ಮನೆ ಕಾರ್ಯಕ್ರಮವಲ್ಲ. ಇದು ಚಿತ್ರರಂಗದ ಕಾರ್ಯಕ್ರಮ, ಈ ಕಾರ್ಯಕ್ರಮಕ್ಕೆ ಚಿತ್ರರಂಗದವರೇ ಬರಲಿಲ್ಲ ಎಂದರೆ ಇನ್ಯಾರು ಬರುತ್ತಾರೆ? ಜನ ಸೇರಿಸುವುದು ನಮಗೆ ದೊಡ್ಡ ಸಮಸ್ಯೆ ಏನಲ್ಲ. ಆದರೆ ಇದು ನಮ್ಮ ಮನೆಯ ಕಾರ್ಯಕ್ರಮ ಎಂಬುದು ಪ್ರತಿ ನಟ, ನಟಿಯರಿಗೆ, ತಂತ್ರಜ್ಞರಿಗೆ ಬರಬೇಕು, ಇಲ್ಲವಾದರೆ ನಾವು ಈ ಕಾರ್ಯಕ್ರಮ ಏಕೆ ಮಾಡಬೇಕು’ ಎಂದು ಪ್ರಶ್ನೆ ಮಾಡಿದರು ಡಿಕೆಶಿ.

‘ಕನ್ನಡ ಚಿತ್ರರಂಗವನ್ನು ದೊಡ್ಡ ಎತ್ತರಕ್ಕೆ ನೀವು ಕೊಂಡೊಯ್ದಿದ್ದೀರಿ, ಅದರ ಬಗ್ಗೆ ನಮಗೆ ಗೌರವ ಇದೆ. ಆದರೆ ಸರ್ಕಾರದ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವ ಜವಾಬ್ದಾರಿಯೂ ನಿಮ್ಮ ಮೇಲೆ ಇದೆ. ಈಗ ನಾವು ಐದು ಗ್ಯಾರೆಂಟಿಗಳನ್ನು ತಂದೆವು. ನಾವೇನು ನಮ್ಮ ಊಟಕ್ಕೆ ತಂದೆವಾ? ಇನ್ನು ಮುಂದೆಯಾದರೂ ಸರಿಯಾಗಿ ನಡೆದುಕೊಳ್ಳಿ, ಕೇವಲ 20 ಜನಕ್ಕಾ ಸಿನಿಮಾ ಎಂಬುದು ಬೇಕಾಗಿರೋದು? ಯಾವುದೋ ಸಿನಿಮಾ ತೆಗೆಯುತ್ತಿದ್ದಾರೆ ಎಂದು ಸರ್ಕಾರವನ್ನು ಕೇಳುತ್ತೀರಿ, ಅದೇ ನಾವು ಅಲ್ಲಿ ಪರ್ಮೀಶನ್ ಕೊಡಬೇಡ ಎಂದರೆ ಶೂಟಿಂಗ್ ನಡೆಯೋದೆ ಇಲ್ಲ, ಆಗ ಏನು ಮಾಡ್ತೀರಿ? ಯಾರು ಯಾರಿಗೆ ಎಲ್ಲೆಲ್ಲಿ ನೆಟ್ಟು ಬೋಲ್ಟು ಟೈಟ್ ಮಾಡಬೇಕು ಎಂಬುದು ನನಗೂ ಗೊತ್ತಿದೆ. ಇದನ್ನು ಎಚ್ಚರಿಕೆ ಎಂದಾದರೂ ತೆಗೆದುಕೊಳ್ಳಿ, ಮನವಿ ಎಂದಾದರೂ ತೆಗೆದುಕೊಳ್ಳಿ ಎಂದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:46 pm, Sat, 1 March 25

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?