AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹದಿಹರೆಯದ ಮೋಜು ಮಸ್ತಿಯ ‘ಪದವಿಪೂರ್ವ’ ನಟಿಯೇ.. ಈ ‘ಫ್ರೆಶ್​ ಫೇಸ್’ ಬ್ಯೂಟಿ!

ಹರಿಪ್ರಸಾದ್ ಜಯಣ್ಣ ನಿರ್ದೇಶನದಲ್ಲಿ ಹಾಗೂ ಯೋಗರಾಜ್ ಭಟ್, ರವಿ ಶಾಮನೂರ್ ಜಂಟಿಯಾಗಿ ನಿರ್ಮಿಸುತ್ತಿರುವ ‘ಪದವಿಪೂರ್ವ’ ಚಿತ್ರಕ್ಕೆ ನಾಯಕಿಯಾಗಿ ‘ಅಂಜಲಿ ಅನೀಶ್’ ಆಯ್ಕೆಯಾಗಿದ್ದಾರೆ. ಅಂಜಲಿ ‘ಬೆಂಗಳೂರು ಟೈಮ್ಸ್ ಫ್ರೆಶ್ ಫೇಸ್ ಆಫ್ ದಿ ಇಯರ್ 2020′ ಸ್ಪರ್ಧೆಯಲ್ಲಿ ಗೆದ್ದು ಬೀಗಿರುವ ಜೊತೆಗೆ, ‘ನ್ಯಾಷನಲ್ ಟೈಮ್ಸ್ ಫ್ರೆಶ್ ಫೇಸ್ ಆಫ್ ದಿ ಇಯರ್ 2020’ರ ರನ್ನರ್ ಅಪ್ ಕಿರೀಟವನ್ನು ಸಹ ಮುಡಿಗೇರಿಸಿಕೊಂಡಿದ್ದಾರೆ. ಇದೆಲ್ಲದರ ಜೊತೆಗೆ, ಅಂಜಿಲಿ ಶಿಕಾಗೋದ ಸೆಕೆಂಡ್ ಸಿಟಿ ಌಕ್ಟಿಂಗ್ ಸ್ಕೂಲ್ ಹಾಗೂ ಅನುಪಮ್ ಖೇರ್ ಌಕ್ಟಿಂಗ್ ಸ್ಕೂಲ್‌ನಲ್ಲಿ […]

ಹದಿಹರೆಯದ ಮೋಜು ಮಸ್ತಿಯ ‘ಪದವಿಪೂರ್ವ’ ನಟಿಯೇ.. ಈ ‘ಫ್ರೆಶ್​ ಫೇಸ್’ ಬ್ಯೂಟಿ!
KUSHAL V
| Edited By: |

Updated on: Oct 05, 2020 | 3:41 PM

Share

ಹರಿಪ್ರಸಾದ್ ಜಯಣ್ಣ ನಿರ್ದೇಶನದಲ್ಲಿ ಹಾಗೂ ಯೋಗರಾಜ್ ಭಟ್, ರವಿ ಶಾಮನೂರ್ ಜಂಟಿಯಾಗಿ ನಿರ್ಮಿಸುತ್ತಿರುವ ‘ಪದವಿಪೂರ್ವ’ ಚಿತ್ರಕ್ಕೆ ನಾಯಕಿಯಾಗಿ ‘ಅಂಜಲಿ ಅನೀಶ್’ ಆಯ್ಕೆಯಾಗಿದ್ದಾರೆ. ಅಂಜಲಿ ‘ಬೆಂಗಳೂರು ಟೈಮ್ಸ್ ಫ್ರೆಶ್ ಫೇಸ್ ಆಫ್ ದಿ ಇಯರ್ 2020′ ಸ್ಪರ್ಧೆಯಲ್ಲಿ ಗೆದ್ದು ಬೀಗಿರುವ ಜೊತೆಗೆ, ‘ನ್ಯಾಷನಲ್ ಟೈಮ್ಸ್ ಫ್ರೆಶ್ ಫೇಸ್ ಆಫ್ ದಿ ಇಯರ್ 2020’ರ ರನ್ನರ್ ಅಪ್ ಕಿರೀಟವನ್ನು ಸಹ ಮುಡಿಗೇರಿಸಿಕೊಂಡಿದ್ದಾರೆ.

ಇದೆಲ್ಲದರ ಜೊತೆಗೆ, ಅಂಜಿಲಿ ಶಿಕಾಗೋದ ಸೆಕೆಂಡ್ ಸಿಟಿ ಌಕ್ಟಿಂಗ್ ಸ್ಕೂಲ್ ಹಾಗೂ ಅನುಪಮ್ ಖೇರ್ ಌಕ್ಟಿಂಗ್ ಸ್ಕೂಲ್‌ನಲ್ಲಿ ನಟನೆಯ ತರಬೇತಿಯನ್ನು ಪಡೆದುಕೊಂಡಿದ್ದಾರೆ. ಅಷ್ಟೇ ಅಲ್ಲ, ಕೆಲ ಬಾಲಿವುಡ್ ಮತ್ತು ಕನ್ನಡ ಸಿನಿಮಾಗಳಿಗೆ ಸಹಾಯಕ ನಿರ್ದೇಶಕಿಯಾಗಿಯೂ ಸಹ ಕೆಲಸ ಮಾಡಿದ್ದಾರೆ.

ಇನ್ನು, ಸಿನಿಮಾದ ನಾಯಕ ಪೃಥ್ವಿ ಶಾಮನೂರ್​ಗೂ ಕೂಡ ಇದು ಚೊಚ್ಚಲ ಸಿನಿಮಾ. ಚಿತ್ರಕ್ಕೆ ಅರ್ಜುನ್ ಜನ್ಯಾ ಸಂಗೀತ ಹಾಗೂ ಸಂತೋಷ್ ರೈ ಪತಾಜೆರ ಕ್ಯಾಮರಾ ವರ್ಕ್​ ಇರಲಿದೆ. ಹದಿಹರೆಯದ ಮೋಜು, ಮಸ್ತಿ, ಮೋಹ ಮತ್ತು ಸ್ನೇಹ ಕುರಿತಾದ ಕಥೆ ಇದಾಗಿದ್ದು ಚಿತ್ರವನ್ನು ಮಲೆನಾಡಿನ ಅತ್ಯಂತ ಸುಂದರ ತಾಣಗಳಲ್ಲಿ ಚಿತ್ರೀಕರಿಸುವ ಯೋಜನೆಯಿದೆ. ಉಳಿದಂತೆ ಬೇರೆ ಪಾತ್ರಗಳಿಗೆ ಕಲಾವಿದರನ್ನು ಆಡಿಷನ್ ಮೂಲಕ ಆಯ್ಕೆ ಮಾಡಲಾಗಿದ್ದು, ಮತ್ತಷ್ಪು ಹೊಸ ಪ್ರತಿಭೆಗಳನ್ನು ಕನ್ನಡ ಚಿತ್ರರಂಗಕ್ಕೆ ಪರಿಚಯಿಸುವ ಹಾದಿಯಲ್ಲಿ ತಂಡ ಕೆಲಸ ಮಾಡುತ್ತಿದೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?