AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದೀಪ್​ ಬಾಡಿಗಾರ್ಡ್​ಗೆ ವಿಡಿಯೋ ಕಾಲ್​ ಮಾಡಿ ಕನ್ನಡದಲ್ಲಿ ಮಾತಾಡಿದ ದೀಪಿಕಾ; ಇದಕ್ಕಿದೆ ವಿಶೇಷ ಕಾರಣ

Kiccha Kiran: ಸುದೀಪ್​ ಬಾಡಿಗಾರ್ಡ್​ ಕಿರಣ್​ ಅವರನ್ನು ಎಲ್ಲರೂ ಕಿಚ್ಚ ಕಿರಣ್​ ಎಂದು ಕರೆಯುತ್ತಾರೆ. ಅವರ ಜತೆ ದೀಪಿಕಾ ಪಡುಕೋಣೆ ಕನ್ನಡದಲ್ಲೇ ಮಾತನಾಡಿದರು.

ಸುದೀಪ್​ ಬಾಡಿಗಾರ್ಡ್​ಗೆ ವಿಡಿಯೋ ಕಾಲ್​ ಮಾಡಿ ಕನ್ನಡದಲ್ಲಿ ಮಾತಾಡಿದ ದೀಪಿಕಾ; ಇದಕ್ಕಿದೆ ವಿಶೇಷ ಕಾರಣ
ಕಿಚ್ಚ ಕಿರಣ್, ರಣವೀರ್ ಸಿಂಗ್, ದೀಪಿಕಾ ಪಡುಕೋಣೆ
TV9 Web
| Updated By: ಮದನ್​ ಕುಮಾರ್​|

Updated on: Dec 20, 2021 | 9:37 AM

Share

ಕನ್ನಡತಿ ದೀಪಿಕಾ ಪಡುಕೋಣೆ (Deepika Padukone) ಅವರು ಬಾಲಿವುಡ್​ನಲ್ಲಿ ಮಿಂಚುತ್ತಿದ್ದಾರೆ. ಅವರ ಪತಿ ರಣವೀರ್​ ಸಿಂಗ್​ ಕೂಡ ಯಶಸ್ಸಿನ ಉತ್ತುಂಗಕ್ಕೆ ಏರಿದ್ದಾರೆ. ದೀಪಿಕಾ ಪಡುಕೋಣೆ ಅವರಿಗೆ ಕೋಟ್ಯಂತರ ಅಭಿಮಾನಿಗಳಿದ್ದಾರೆ. ಬೆಂಗಳೂರಿನಲ್ಲಿ ಅವರನ್ನು ಇಷ್ಟಪಡುವ ಅಪಾರ ಸಂಖ್ಯೆಯ ಜನರಿದ್ದಾರೆ. ದೀಪಿಕಾ ಮತ್ತು ರಣವೀರ್​ ಸಿಂಗ್​ (Ranveer Singh) ಜತೆಯಾಗಿ ‘83’ ಸಿನಿಮಾದಲ್ಲಿ ನಟಿಸಿದ್ದಾರೆ. ಡಿ.24ರಂದು ಈ ಚಿತ್ರ ((83 Movie) ಬಿಡುಗಡೆ ಆಗಲಿದೆ. ಅದರ ಪ್ರಚಾರ ಕಾರ್ಯದ ಸಲುವಾಗಿ ಇತ್ತೀಚೆಗೆ ರಣವೀರ್​ ಸಿಂಗ್​ ಅವರು ಬೆಂಗಳೂರಿಗೆ ಬಂದಿದ್ದರು. ಆ ವೇಳೆ ಅವರು ದೀಪಿಕಾಗೆ ವಿಡಿಯೋ ಕಾಲ್​ ಮಾಡಿ, ಕಿಚ್ಚ ಸುದೀಪ್​ (Kichcha Sudeep) ಅವರ ಪರ್ಸನಲ್​ ಬಾಡಿಗಾರ್ಡ್​ ಜೊತೆ ಮಾತನಾಡಿಸಿದ್ದಾರೆ!

ಕಿಚ್ಚ ಸುದೀಪ್​ ಅವರ ಬಾಡಿ ಗಾರ್ಡ್ ಕಿರಣ್​ ಅವರಿಗೆ ದೀಪಿಕಾ ಎಂದರೆ ವಿಶೇಷ ಅಭಿಮಾನ. ಅದೇ ರೀತಿ ಅವರು ತಮ್ಮ ಕೈ ಮೇಲೆ ಅನೇಕ ಹೆಸರುಗಳ ಟ್ಯಾಟೂ ಹಾಕಿಸಿಕೊಂಡಿದ್ದಾರೆ. ಅದನ್ನು ಕಂಡು ರಣವೀರ್​ ಸಿಂಗ್​ ಅಚ್ಚರಿಪಟ್ಟರು. ಅಲ್ಲದೇ ದೀಪಿಕಾಗೆ ವಿಡಿಯೋ ಕಾಲ್​ ಮಾಡಿ ತೋರಿಸಿದರು. ಈ ವೇಳೆ ಸುದೀಪ್​ ಕೂಡ ಜತೆಗಿದ್ದರು.

ಕಿರಣ್​ ಅವರನ್ನು ಎಲ್ಲರೂ ಕಿಚ್ಚ ಕಿರಣ್​ ಎಂದು ಕರೆಯುತ್ತಾರೆ. ಅವರ ಜತೆ ದೀಪಿಕಾ ಪಡುಕೋಣೆ ಕನ್ನಡದಲ್ಲೇ ಮಾತನಾಡಿದರು. ಸದ್ಯ ಈ ವಿಡಿಯೋ ಸಖತ್​ ವೈರಲ್​ ಆಗುತ್ತಿದೆ. ತಮ್ಮ ನೆಚ್ಚಿನ ನಟಿಯ ಜತೆ ಮಾತನಾಡಿ ಕಿಚ್ಚ ಕಿರಣ್​ ಫುಲ್​ ಖುಷ್​ ಆಗಿದ್ದಾರೆ. ಹಲವು ವರ್ಷಗಳಿಂದ ಅವರು ಸುದೀಪ್​ಗೆ ಬಾಡಿಗಾರ್ಡ್​ ಆಗಿ ಕೆಲಸ ಮಾಡುತ್ತಿದ್ದಾರೆ.

ಕಿಚ್ಚ ಸುದೀಪ್​ ಅವರಿಗೆ ಎಲ್ಲ ಭಾಷೆಯ ಚಿತ್ರರಂಗದಲ್ಲೂ ಅಭಿಮಾನಿಗಳಿದ್ದಾರೆ. ಈಗ ಅವರು ‘83’ ಸಿನಿಮಾವನ್ನು ಕನ್ನಡದಲ್ಲಿ ಪ್ರಸ್ತುತಪಡಿಸುತ್ತಿದ್ದಾರೆ. 1983ರ ಕ್ರಿಕೆಟ್​ ವಿಶ್ವಕಪ್​ನಲ್ಲಿ ಭಾರತ ತಂಡ ಜಯಶಾಲಿಯಾದ ಘಟನೆಯನ್ನು ಆಧರಿಸಿ ಈ ಸಿನಿಮಾ ತಯಾರಾಗಿದೆ. ಕನ್ನಡಕ್ಕೂ ಡಬ್​ ಆಗಿ ಈ ಚಿತ್ರ ತೆರೆಕಾಣಲಿದೆ. 3ಡಿ ಅವತರಣಿಕೆಯಲ್ಲೂ ಬಿಡುಗಡೆ ಆಗುತ್ತಿದೆ. ಡಿ.18ರಂದು ಬೆಂಗಳೂರಿನಲ್ಲಿ ನಡೆದ ‘83’ ಸುದ್ದಿಗೋಷ್ಠಿಯಲ್ಲಿ ರಣವೀರ್​ ಸಿಂಗ್​ ಮತ್ತು ಕಿಚ್ಚ ಸುದೀಪ್​ ಪಾಲ್ಗೊಂಡಿದ್ದರು. ಈ ವೇಳೆ ರಣವೀರ್​ ಸಿಂಗ್​ ಅವರಿಗೆ ಸುದೀಪ್​ ಕೆಲವು ಕನ್ನಡ ಡೈಲಾಗ್​ ಹೇಳಿಕೊಟ್ಟರು. ಅದನ್ನು ಅಚ್ಚುಕಟ್ಟಾಗಿ ಹೇಳಿದ ರಣವೀರ್​ಗೆ ಎಲ್ಲರಿಂದ ಚಪ್ಪಾಳೆ ಸಿಕ್ಕಿತು. ಈ ಸಿನಿಮಾವನ್ನು ಕಬೀರ್​ ಖಾನ್​ ನಿರ್ದೇಶನ ಮಾಡಿದ್ದಾರೆ. ಕಪಿಲ್​ ದೇವ್​ ಪಾತ್ರದಲ್ಲಿ ರಣವೀರ್​ ಸಿಂಗ್​ ನಟಿಸಿದ್ದಾರೆ.

ಇದನ್ನೂ ಓದಿ:

ಈ ಫೋಟೋಗಾಗಿ 36 ವರ್ಷಗಳಿಂದ ಕಾದಿದ್ದ ಸುದೀಪ್​; ಕಿಚ್ಚನ ಬಾಲ್ಯದ ಕನಸು ಈಗ ನನಸಾಯ್ತು

ಒಂದೇ ವೇದಿಕೆ ಮೇಲೆ ಸುದೀಪ್​, ರಣವೀರ್​, ಕಪಿಲ್​ ದೇವ್​; ‘83’ ಸುದ್ದಿಗೋಷ್ಠಿ ನೋಡಲು ಇಲ್ಲಿ ಕ್ಲಿಕ್​ ಮಾಡಿ

ಸ್ವಜನಪಕ್ಷಪಾತವಿಲ್ಲದ ಏಕೈಕ ಸ್ಥಳವೆಂದರೆ ಸೇನೆ; ಸಿಡಿಎಸ್ ಅನಿಲ್ ಚೌಹಾಣ್
ಸ್ವಜನಪಕ್ಷಪಾತವಿಲ್ಲದ ಏಕೈಕ ಸ್ಥಳವೆಂದರೆ ಸೇನೆ; ಸಿಡಿಎಸ್ ಅನಿಲ್ ಚೌಹಾಣ್
ಶಾಹೀನ್ ಅಫ್ರಿದಿ ಬ್ಯಾಟಿಂಗ್ ಶ್ಲಾಘಿಸಿದ ಕುಲ್ದೀಪ್ ಯಾದವ್
ಶಾಹೀನ್ ಅಫ್ರಿದಿ ಬ್ಯಾಟಿಂಗ್ ಶ್ಲಾಘಿಸಿದ ಕುಲ್ದೀಪ್ ಯಾದವ್
ಬುರುಡೆ ಜತೆ ಸಿಕ್ಕ ID ಕಾರ್ಡ್,ವಾಕಿಂಗ್ ಸ್ಟಿಕ್ ಬಗ್ಗೆ ಸತ್ಯ ಬಿಚ್ಚಿಟ ಮಗ
ಬುರುಡೆ ಜತೆ ಸಿಕ್ಕ ID ಕಾರ್ಡ್,ವಾಕಿಂಗ್ ಸ್ಟಿಕ್ ಬಗ್ಗೆ ಸತ್ಯ ಬಿಚ್ಚಿಟ ಮಗ
ಬೆಂಗಳೂರಿನಲ್ಲಿ ಮಳೆ ರುದ್ರನರ್ತನ: ವಾಹನ ಸವಾರರಿಗೆ ನರಕ ದರ್ಶನ
ಬೆಂಗಳೂರಿನಲ್ಲಿ ಮಳೆ ರುದ್ರನರ್ತನ: ವಾಹನ ಸವಾರರಿಗೆ ನರಕ ದರ್ಶನ
ಸಂಪುಟ ಸಭೆಯಲ್ಲಿ ಜಾತಿ ಜ್ವಾಲೆ:ಏರು ಧ್ವನಿಯಲ್ಲೇ ಸಚಿವರಿಂದ ಆಕ್ಷೇಪ
ಸಂಪುಟ ಸಭೆಯಲ್ಲಿ ಜಾತಿ ಜ್ವಾಲೆ:ಏರು ಧ್ವನಿಯಲ್ಲೇ ಸಚಿವರಿಂದ ಆಕ್ಷೇಪ
ಧರ್ಮಸ್ಥಳ ಕೇಸ್: ಇಂದು ಇನ್ನಷ್ಟು ತಲೆಬುರುಡೆ, ಅಸ್ಥಿಪಂಜರಗಳು ಪತ್ತೆ
ಧರ್ಮಸ್ಥಳ ಕೇಸ್: ಇಂದು ಇನ್ನಷ್ಟು ತಲೆಬುರುಡೆ, ಅಸ್ಥಿಪಂಜರಗಳು ಪತ್ತೆ
ಒಳನುಸುಳುಕೋರರನ್ನು ರಕ್ಷಿಸಲು ರಾಹುಲ್ ಗಾಂಧಿ ಯಾತ್ರೆ; ಅಮಿತ್ ಶಾ ವಾಗ್ದಾಳಿ
ಒಳನುಸುಳುಕೋರರನ್ನು ರಕ್ಷಿಸಲು ರಾಹುಲ್ ಗಾಂಧಿ ಯಾತ್ರೆ; ಅಮಿತ್ ಶಾ ವಾಗ್ದಾಳಿ
ಆಳಂದ ಮತಗಳ್ಳತನ:ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ ಪ್ರಿಯಾಂಕ್ ಖರ್ಗೆ
ಆಳಂದ ಮತಗಳ್ಳತನ:ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ ಪ್ರಿಯಾಂಕ್ ಖರ್ಗೆ
ಇನ್ಮುಂದೆ ಕಿಚ್ಚ ಸುದೀಪ್ ಅವರೇ ವಿಷ್ಣುವರ್ಧನ್​ ಮಗ: ಅಭಿಮಾನದ ಮಾತು
ಇನ್ಮುಂದೆ ಕಿಚ್ಚ ಸುದೀಪ್ ಅವರೇ ವಿಷ್ಣುವರ್ಧನ್​ ಮಗ: ಅಭಿಮಾನದ ಮಾತು
ವಿಷ್ಣುವರ್ಧನ್ ಎಂದಿಗೂ ನಮ್ಮ ಜೊತೆಗೇ ಇರುತ್ತಾರೆ: ಶಿವರಾಜ್ ಕುಮಾರ್
ವಿಷ್ಣುವರ್ಧನ್ ಎಂದಿಗೂ ನಮ್ಮ ಜೊತೆಗೇ ಇರುತ್ತಾರೆ: ಶಿವರಾಜ್ ಕುಮಾರ್