AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

JNU ಆಯ್ತು ಈಗ ಹೊಸ ಸಂಕಷ್ಟ ಶುರುವಾಯ್ತು, ವಿವಾದದ ಸುಳಿಯಲ್ಲಿ ದೀಪಿಕಾ

ಯಾಕೋ ಸದ್ಯದ ಮಟ್ಟಿಗೆ ದೀಪಿಕಾ ಪಡುಕೋಣೆ ಟೈಂ ಸರಿಯಾಗಿಲ್ಲ ಅಂತಾ ಕಾಣುತ್ತೆ. ಆ ಕಡೆ ಬಹುನಿರೀಕ್ಷಿತ ಚಿತ್ರ ‘ಛಪಾಕ್’ ಮಕಾಡೆ ಮಲಗಿದ್ರೆ, ಇನ್ನೊಂದ್ಕಡೆ ಅದೇ ಸಿನಿಮಾದ ಪ್ರಮೋಷನ್ ಮಾಡೋಕೆ ಹೋಗಿ ಡಿಪ್ಪಿ ಎಡವಟ್ಟು ಮಾಡ್ಕೊಂಡಿದ್ದಾಳೆ. ಈ ಬಗ್ಗೆ ಸೋಷಿಯಲ್ ಮೀಡಿಯಾಗಳಲ್ಲಿ ದೀಪಿಕಾ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ. ಸ್ಯಾಂಡಲ್​ವುಡ್​ನ ಐಶ್ವರ್ಯ, ಬಾಲಿವುಡ್​ನ ಪದ್ಮಾವತಿ ದೀಪಿಕಾ ಪಡುಕೋಣೆಗೆ ಒಂದಾದ ನಂತರ ಒಂದು ಸಮಸ್ಯೆಗಳು ಎದುರಾಗ್ತಿವೆ. ಅದ್ಯಾವಾಗ ಜೆಎನ್​ಯು ಹೋರಾಟ ನಡೆಯುತ್ತಿದ್ದ ಜಾಗಕ್ಕೆ ದೀಪಿಕಾ ಹೋಗಿ ಬಂದ್ರೋ, ಆಹೊತ್ತಿನಿಂದ ಇಲ್ಲಿಯವರೆಗೆ […]

JNU ಆಯ್ತು ಈಗ ಹೊಸ ಸಂಕಷ್ಟ ಶುರುವಾಯ್ತು,  ವಿವಾದದ ಸುಳಿಯಲ್ಲಿ ದೀಪಿಕಾ
ಸಾಧು ಶ್ರೀನಾಥ್​
|

Updated on: Jan 19, 2020 | 1:21 PM

Share

ಯಾಕೋ ಸದ್ಯದ ಮಟ್ಟಿಗೆ ದೀಪಿಕಾ ಪಡುಕೋಣೆ ಟೈಂ ಸರಿಯಾಗಿಲ್ಲ ಅಂತಾ ಕಾಣುತ್ತೆ. ಆ ಕಡೆ ಬಹುನಿರೀಕ್ಷಿತ ಚಿತ್ರ ‘ಛಪಾಕ್’ ಮಕಾಡೆ ಮಲಗಿದ್ರೆ, ಇನ್ನೊಂದ್ಕಡೆ ಅದೇ ಸಿನಿಮಾದ ಪ್ರಮೋಷನ್ ಮಾಡೋಕೆ ಹೋಗಿ ಡಿಪ್ಪಿ ಎಡವಟ್ಟು ಮಾಡ್ಕೊಂಡಿದ್ದಾಳೆ. ಈ ಬಗ್ಗೆ ಸೋಷಿಯಲ್ ಮೀಡಿಯಾಗಳಲ್ಲಿ ದೀಪಿಕಾ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ.

ಸ್ಯಾಂಡಲ್​ವುಡ್​ನ ಐಶ್ವರ್ಯ, ಬಾಲಿವುಡ್​ನ ಪದ್ಮಾವತಿ ದೀಪಿಕಾ ಪಡುಕೋಣೆಗೆ ಒಂದಾದ ನಂತರ ಒಂದು ಸಮಸ್ಯೆಗಳು ಎದುರಾಗ್ತಿವೆ. ಅದ್ಯಾವಾಗ ಜೆಎನ್​ಯು ಹೋರಾಟ ನಡೆಯುತ್ತಿದ್ದ ಜಾಗಕ್ಕೆ ದೀಪಿಕಾ ಹೋಗಿ ಬಂದ್ರೋ, ಆಹೊತ್ತಿನಿಂದ ಇಲ್ಲಿಯವರೆಗೆ ದೀಪಿಕಾಗೆ ನೆಮ್ಮದಿಯೇ ಇಲ್ಲ. ಆಕಡೆ ‘ಛಪಾಕ್’ ಸಿನಿಮಾ ಮಕಾಡೆ ಮಲಗಿದೆ. ಇನ್ನು ಇದೇ ‘ಛಪಾಕ್’ ಚಿತ್ರಕ್ಕಾಗಿ ಪ್ರಮೋಷನ್ ಮಾಡಲು ಹೋಗಿ ದೀಪಿಕಾ ಎಡವಿದ್ದಾರೆ.

ಪ್ರಚಾರದ ಅಬ್ಬರದಲ್ಲಿ ದೀಪಿಕಾ ಎಡವಟ್ಟು! ಅಂದಹಾಗೆ ವಿಭಿನ್ನ ಕಥೆಯ ಮೂಲಕವೇ ಇಡೀ ಭಾರತ ಸಿನಿಮಾರಂಗದ ಗಮನ ಸೆಳೆದಿದ್ದ ಛಪಾಕ್ ಮೂವಿ, ಅಟ್ಟರ್ ಫ್ಲಾಪ್ ಆಗಿದೆ. ಅತ್ತ ಜನರಿಂದಲೂ ದೀಪಿಕಾ ಕೆಂಗಣ್ಣಿಗೆ ಗುರಿಯಾಗಿರುವಾಗಲೇ, ಇತ್ತ ಬಾಕ್ಸ್ ಆಫೀಸ್​ನಲ್ಲು ಸದ್ದು ಮಾಡುತ್ತಿಲ್ಲ. ಹೀಗಾಗಿ ಚಿತ್ರ ಬಿಡುಗಡೆಯಾಗಿ 1 ವಾರದ ನಂತರವೂ ಪ್ರಮೋಷನ್​ಗಾಗಿ ಡಿಪ್ಪಿ ಹೊಸದೊಂದು ಪ್ರಯತ್ನ ಮಾಡಿದ್ದರು. ಟಿಕ್​ಟಾಕ್ ಮೂಲಕ ಪ್ರಮೋಟ್ ಮಾಡಲು ಹೋಗಿದ್ದಾಗ, ಆಸಿಡ್ ಸಂತ್ರಸ್ತರಿಗೆ ಅವಮಾನ ಮಾಡಲಾಗಿದೆ ಅಂತಾ ದೀಪಿಕಾ ವಿರುದ್ಧ ಸೋಷಿಯಲ್ ಮೀಡಿಯಾಗಳಲ್ಲಿ ಸಿಕ್ಕಾಪಟ್ಟೆ ಆಕ್ರೋಶ ವ್ಯಕ್ತವಾಗುತ್ತಿದೆ.

ದೀಪಿಕಾ ಸಿನಿ ಭವಿಷ್ಯದ ಮೇಲೆ ವ್ಯತಿರಿಕ್ತ ಪರಿಣಾಮ? ಇನ್ನು ಈ ಘಟನೆಗಳೆಲ್ಲಾ ನೇರ ಪರಿಣಾಮ ಬೀರುತ್ತಿರೋದು ದೀಪಿಕಾ ಪಡುಕೋಣೆಯ ಸಿನಿ ಭವಿಷ್ಯದ ಮೇಲೆ. ಒಂದ್ಕಡೆ ಜಾಹೀರಾತು ಕಂಪೆನಿಗಳು ಕೂಡ ಹೆದರಿಕೊಂಡಿದ್ದರೆ, ಮುಂದೆ ದೀಪಿಕಾಗೆ ಬರುವ ಸಿನಿಮಾ ಆಫರ್​ಗಳಿಗೂ ಪ್ರಸಕ್ತ ಘಟನೆಗಳು ಎಫೆಕ್ಟ್ ಕೊಡುವ ಸಾಧ್ಯತೆ ದಟ್ಟವಾಗಿದೆ.

ಒಟ್ನಲ್ಲಿ ದೀಪಿಕಾ ಏನೋ ಮಾಡಲು ಹೋಗಿ ಏನೋ ಮಾಡ್ಕೊಂಡಿದ್ದಾರೆ. ಪ್ರಮೋಷನ್​ನಲ್ಲಿ ಮಾಡಿಕೊಂಡ ಯಡವಟ್ಟು ಮತ್ತೊಂದು ಎಫೆಕ್ಟ್ ಕೊಡುತ್ತಿದೆ. ಆದರೆ ಇದನ್ನೆಲ್ಲಾ ದೀಪಿಕಾ ಭವಿಷ್ಯದಲ್ಲಿ ಹೇಗೆ ಫೇಸ್ ಮಾಡುತ್ತಾರೆ ಅನ್ನೋದನ್ನ ಮುಂದಿನ ದಿನಗಳಲ್ಲಿ ಕಾದು ನೋಡಬೇಕಿದೆ.

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?