AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್​ಗೆ ಹೋಲಿಸಿದರೆ ಸ್ಯಾಂಡಲ್​ವುಡ್​ನಲ್ಲಿ ಕೆಲಸ ಮಾಡೋದು ಸುಲಭ ಎಂದ ರಶ್ಮಿಕಾ ಮಂದಣ್ಣ

ದೀಪಿಕಾ ಪಡುಕೋಣೆ ಅವರು ದಿನಕ್ಕೆ 8 ಗಂಟೆ ಮಾತ್ರ ಕೆಲಸ ಮಾಡುವ ಬಗ್ಗೆ ಹೇಳಿದ್ದರು.ಈ ಮಧ್ಯೆ ರಶ್ಮಿಕಾ ಮಂದಣ್ಣ ಅವರು ಸ್ಯಾಂಡಲ್‌ವುಡ್ ಮತ್ತು ಬಾಲಿವುಡ್ ಚಿತ್ರರಂಗದ ಕೆಲಸದ ಸಮಯದ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಸ್ಯಾಂಡಲ್‌ವುಡ್‌ನಲ್ಲಿ ಹೆಚ್ಚು ಸಮಯದ ಕೆಲಸವಿಲ್ಲ ಎಂದು ಅವರು ಹೇಳಿದ್ದಾರೆ. ಬಾಲಿವುಡ್‌ನಲ್ಲಿ 12 ಗಂಟೆಗಳ ಕೆಲಸದ ಸಮಯ ಇರುವುದರಿಂದ, ಚಿತ್ರೀಕರಣದ ಸಮಯದ ಬಗ್ಗೆ ಮೊದಲೇ ಚರ್ಚಿಸಿಕೊಳ್ಳುವುದು ಮುಖ್ಯ ಎಂದು ಅವರು ಸಲಹೆ ನೀಡಿದ್ದಾರೆ.

ಬಾಲಿವುಡ್​ಗೆ ಹೋಲಿಸಿದರೆ ಸ್ಯಾಂಡಲ್​ವುಡ್​ನಲ್ಲಿ ಕೆಲಸ ಮಾಡೋದು ಸುಲಭ ಎಂದ ರಶ್ಮಿಕಾ ಮಂದಣ್ಣ
ರಶ್ಮಿಕಾ
ರಾಜೇಶ್ ದುಗ್ಗುಮನೆ
|

Updated on: Jul 07, 2025 | 8:57 AM

Share

ದೀಪಿಕಾ ಪಡುಕೋಣೆ ಅವರು ಶೂಟಿಂಗ್​ಗೆ ನಿರ್ದಿಷ್ಟ ಸಮಯ ನಿಗದಿ ಮಾಡಬೇಕು ಎಂದು ಕೋರಿದ್ದ ವಿಚಾರ ಸಾಕಷ್ಟು ಚರ್ಚೆಗೆ ಕಾರಣ ಆಯಿತು. ದಿನಕ್ಕೆ 8 ಗಂಟೆ ಮಾತ್ರ ಕೆಲಸ ಮಾಡೋದಾಗಿ ಅವರು ಹೇಳಿದ್ದರು. ಇದರಿಂದ ಅವರಿಗೆ ಸಂದೀಪ್ ರೆಡ್ಡಿ ವಂಗ ಚಿತ್ರದ ಆಫರ್ ತಪ್ಪಿತು. ಈಗ ರಶ್ಮಿಕಾ ಮಂದಣ್ಣ (Rashmika Mandanna) ಅವರು ಈ ಬಗ್ಗೆ ಮಾತನಾಡಿದ್ದಾರೆ. ಅವರು ಈ ಮೊದಲು ‘ಅನಿಮಲ್’ ಸಿನಿಮಾದಲ್ಲಿ ಸಂದೀಪ್ ಜೊತೆ ಕೆಲಸ ಮಾಡಿದ್ದರು.  ಬಲಿವುಡ್​ಗೆ ಹೋಲಿಸಿದರೆ ಸ್ಯಾಂಡಲ್​ವುಡ್​ನಲ್ಲಿ ಕೆಲಸ ಮಾಡೋದು ಸುಲಭ ಎಂಬರ್ಥದಲ್ಲಿ ರಶ್ಮಿಕಾ ಮಂದಣ್ಣ ಮಾತನಾಡಿದ್ದಾರೆ.

‘ನಾನು ಕನ್ನಡ, ತೆಲುಗು, ತಮಿಳು ಇಂಡಸ್ಟ್ರಿಯಲ್ಲಿ ಕೆಲಸ ಮಾಡಿದ್ದೇನೆ. ಅದು ಆಫೀಸ್ ಕಚೇರಿ ಅವಧಿ ತರವೇ ಇರುತ್ತದೆ. ಬೆಳಿಗ್ಗೆ ಒಂಭತ್ತರಿಂದ ಸಂಜೆ ಆರು ಗಂಟೆವರೆಗೆ ಚಿತ್ರೀಕರಣೆ ಮಾಡಿದರೆ ಆಯಿತು. ಶೂಟ್ ಬಳಿಕ ಕುಟುಂಬದ ಜೊತೆ ಸಮಯ ಕಳೆಯಬಹುದು, ನಿದ್ದೆ ಮಾಡಬಹುದು. ಆದರೆ, ಹಿಂದಿಯಲ್ಲಿ ಹಾಗಲ್ಲ. ಅಲ್ಲಿ 12 ಗಂಟೆ ಶಿಫ್ಟ್. ಬೆಳಿಗ್ಗೆ 9ರಿಂದ ರಾತ್ರಿ 9ರವರೆಗೆ ಕೆಲಸ ಮಾಡಬೇಕು. ನನಗೆ ಎರಡೂ ಇಷ್ಟ. ಸಿನಿಮಾ ಯಾವುದನ್ನು ಕೇಳುತ್ತದೆಯೋ ಅದನ್ನು ಮಾಡುತ್ತೇನೆ’ ಎಂದಿದ್ದಾರೆ ಅವರು.

‘ಈ ಕೆಲಸದ ಅವಧಿ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಇದು ಅವರವರಿಗೆ ಬಿಟ್ಟ ವಿಚಾರ. ಪ್ರತಿ ಸಿನಿಮಾ ಆರಂಭಕ್ಕೂ ಮೊದಲು ಕಲಾವಿದರು ಈ ಬಗ್ಗೆ ತಂಡದ ಜೊತೆ ಮಾತನಾಡಬೇಕು. ಎಷ್ಟು ಗಂಟೆ ಶೂಟ್ ಇರುತ್ತದೆ, ಯಾವ ಸಂದರ್ಭದಲ್ಲಿ ಶೂಟ್ ಮಾಡಲಾಗುತ್ತದೆ ಎಂಬುದನ್ನು ಚರ್ಚಿಸಿಕೊಳ್ಳಬೇಕು’ ಎಂದು ಹೇಳಿದ್ದಾರೆ.

ಇದನ್ನೂ ಓದಿ
Image
‘ನನಗೆ ಗಾಯತ್ರಿ ಮಂತ್ರ, ಹನುಮಾನ್ ಚಾಲೀಸ್ ಕೇಳೋದು ಇಷ್ಟ’; ಮುಸ್ಲಿಂ ನಟಿ
Image
‘ಬಂಧನ’ ಸಿನಿಮಾ ತಡೆಯಲು ಬ್ಲೇಡ್ ಹೊಡೆದು, ಖಾರದ ಪುಡಿ ಎರಚಿದ್ದರು
Image
‘ಟಾಕ್ಸಿಕ್’ ಚಿತ್ರದಿಂದ ರವಿ ಬಸ್ರೂರು ಔಟ್? ರಾಕ್​ಸ್ಟಾರ್​ಗೆ ಮಣೆ?  
Image
ಮತ್ತೊಂದು ‘ಅನಿಮಲ್’; ‘ಧುರಂಧರ್’ ಚಿತ್ರದಲ್ಲಿ ರಣವೀರ್ ಸಿಂಗ್ ರಕ್ಕಸ ಅವತಾರ

‘ಕೆಲವೊಮ್ಮೆ ಬೆಳಿಗ್ಗೆ 9ಕ್ಕೆ ಶೂಟ್ ಶುರುವಾಗಿ 9ಕ್ಕೆ ಮುಗಿಯಬೇಕಿರುತ್ತದೆ. ಆದರೆ, ಮುಂದಿನ ದಿನದವರೆಗೂ ಅದು ಸಾಗುತ್ತದೆ. ಈ ಮೂಲಕ ಅದು 36 ಗಂಟೆ, 48 ಗಂಟೆ ನಿದ್ದೆ ಇಲ್ಲದೆ ಕೆಲಸ ಮಾಡಿದಂತಾಗುತ್ತದೆ. ಸಿನಿಮಾ ಶೂಟ್​ನಲ್ಲಿ ಈ ರೀತಿ ಆಗೋದು ಕಾಮನ್’ ಎಂದಿದ್ದಾರೆ ರಶ್ಮಿಕಾ.

ಇದನ್ನೂ ಓದಿ: ಮತ್ತೊಂದು ತೆಲುಗು ಸಿನಿಮಾ ಅವಕಾಶ ಕಳೆದುಕೊಂಡರೇ ದೀಪಿಕಾ ಪಡುಕೋಣೆ 

‘ಕೆಲಸ ಮಾಡುವ ವಿಚಾರದಲ್ಲಿ ಎಲ್ಲರಿಗೂ ವಿವಿಧ ಅಭಿಪ್ರಾಯಗಳಿವೆ. ಅದು ಸರಿಯಾಗಿದೆ. ನೀವು ಹೋಗಿ ನಿಮ್ಮ ನಿರ್ದೇಶಕರಿಗೆ, ಇದು ನಾನು ಕೆಲಸ ಮಾಡಲು ಬಯಸುವ ಸಮಯದ ಚೌಕಟ್ಟು. ನಾವು ಇದನ್ನು ಮಾಡಬಹುದೇ’ ಎಂದು ಕೇಳಿದ್ದು ನ್ಯಾಯ. ಇದು ಅವರಿಗೆ ಬಿಟ್ಟಿದ್ದು. ಆದರೆ, ಚಿತ್ರರಂಗದಲ್ಲಿ 2-3 ದಿನ ನಿದ್ದೆ ಇಲ್ಲದೆ ಕೆಲಸ ಮಾಡಲೇಬೇಕಾದ ಅನಿವಾರ್ಯತೆ ಇದೆ’ ಎಂದಿದ್ದಾರೆ ಅವರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!