AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಸದಸ್ಯತ್ವ ಪಡೆದ ಕಾರಣಕ್ಕೆ ಸೌದಿಯಲ್ಲಿ ಪ್ರಸಿದ್ಧ ನಟನ ಕಾರ್ಯಕ್ರಮ ಬಹಿಷ್ಕಾರ?

ತುಳುವಿನಲ್ಲಿ ದೇವದಾಸ್​ ಕಾಪಿಕಾಡ್ ದೊಡ್ಡ ಹೆಸರು ಮಾಡಿದ್ದಾರೆ. ಅವರು ಕಲಾವಿದನಾಗಿ, ನಿರ್ದೇಶಕನಾಗಿ ಗುರುತಿಸಿಕೊಂಡಿದ್ದಾರೆ. ರಂಗಭೂಮಿಯಲ್ಲೂ ಅವರು ಆ್ಯಕ್ಟೀವ್ ಆಗಿದ್ದಾರೆ. ಅವರು ಬುಧವಾರ ಬಿಜೆಪಿ ಸೇರಿದ್ದರು. ಆದರೆ, ಅವರು ಈಗ ಬಿಜೆಪಿ ಸೇರಿಲ್ಲ ಎನ್ನುತ್ತಿದ್ದಾರೆ.

ಬಿಜೆಪಿ ಸದಸ್ಯತ್ವ ಪಡೆದ ಕಾರಣಕ್ಕೆ ಸೌದಿಯಲ್ಲಿ ಪ್ರಸಿದ್ಧ ನಟನ ಕಾರ್ಯಕ್ರಮ ಬಹಿಷ್ಕಾರ?
ಬಿಜೆಪಿ ಸದಸ್ಯತ್ವ ಪಡೆದ ಕಾರಣಕ್ಕೆ ಸೌದಿಯಲ್ಲಿ ಪ್ರಸಿದ್ಧ ನಟನ ಕಾರ್ಯಕ್ರಮ ಬಹಿಷ್ಕಾರ?
ರಾಜೇಶ್ ದುಗ್ಗುಮನೆ
|

Updated on:Sep 06, 2024 | 11:03 AM

Share

ತುಳು ಸಿನಿಮಾದ ನಟ ದೇವದಾಸ್ ಕಾಪಿಕಾಡ್ ಈಗ ವಿವಾದದಲ್ಲಿ ಸಿಲುಕಿಕೊಂಡಿದ್ದಾರೆ. ಅವರು ಇತ್ತೀಚೆಗೆ ಬಿಜೆಪಿ ಸದಸ್ಯತ್ವ ಪಡೆದುಕೊಂಡಿದ್ದರು. ಈ ಬೆಳವಣಿಗೆ ಬೆನ್ನಲ್ಲೇ ಸೌದಿ ಅರೇಬಿಯಾದಲ್ಲಿ ನಡೆಯಬೇಕಿದ್ದ ಇವರ ಕಾಮಿಡಿ ಶೋಗೆ ಬಹಿಷ್ಕಾರದ ಬೆದರಿಕೆ ಬಂದಿದೆ. ಈ ಬೆನ್ನಲ್ಲೇ ಅವರು ದೇವದಾಸ್ ಕಾಪಿಕಾಡ್ ಉಲ್ಟಾ ಹೊಡೆದ್ರಾ ಎಂಬ ಪ್ರಶ್ನೆ ಮೂಡಿದೆ.

ತುಳುವಿನಲ್ಲಿ ದೇವದಾಸ್​ ಕಾಪಿಕಾಡ್ ದೊಡ್ಡ ಹೆಸರು ಮಾಡಿದ್ದಾರೆ. ಅವರು ಕಲಾವಿದನಾಗಿ, ನಿರ್ದೇಶಕನಾಗಿ ಗುರುತಿಸಿಕೊಂಡಿದ್ದಾರೆ. ರಂಗಭೂಮಿಯಲ್ಲೂ ಅವರು ಆ್ಯಕ್ಟೀವ್ ಆಗಿದ್ದಾರೆ. ಅವರು ಬುಧವಾರ (ಸೆಪ್ಟೆಂಬರ್ 4) ಮಾಜಿ ಕೇಂದ್ರ ಸಚಿವ ಡಿ.ವಿ‌.ಸದಾನಂದ ಗೌಡ ಸಮ್ಮುಖದಲ್ಲಿ ಬಿಜಿಪಿ ಸದಸ್ಯತ್ವ ಪಡೆದಿದ್ದರು. ಬಿಜೆಪಿ ಸದಸ್ಯತ್ವ ಅಭಿಯಾನದ ಅಂಗವಾಗಿ ಅವರು ಆನ್​ಲೈನ್ ಸದಸ್ಯತ್ವ ಪಡೆದಿದ್ದರು. ದೇವದಾಸ್ ಕಾಪಿಕಾಡ್ ಬಿಜೆಪಿ ಸದಸ್ಯತ್ವ ಪಡೆದ ಬಗ್ಗೆ ಪಕ್ಷದ ಕಡೆಯಿಂದ ಸಾಮಾಜಿಕ ತಾಣಗಳಲ್ಲಿ ಪೋಸ್ಟ್ ಹಾಕಲಾಗಿತ್ತು.

ಫೋಸ್ಟ್ ವೈರಲ್ ಬೆನ್ನಲ್ಲೇ ದೇವದಾಸ್ ಕಾಪಿಕಾಡ್​ಗೆ ಬಹಿಷ್ಕಾರದ ಬಿಸಿ ತಟ್ಟಿತ್ತು. ಸೆ.13 ಹಾಗೂ 14ರಂದು ಸೌದಿಯ ಜುಬೈಲ್​ನ ಪುಲಿ ರೆಸ್ಟೋರೆಂಟ್​ನಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ‘ಬಿಜೆಪಿ ಸದಸ್ಯತ್ವ ಪಡೆದ ಹಿನ್ನೆಲೆ ಕಾರ್ಯಕ್ರಮ ಬಹಿಷ್ಕರಿಸಿ’ ಎಂಬ ಪೋಸ್ಟ್ ವೈರಲ್ ಆಗಿದೆ. ಬಹಿಷ್ಕಾರ ಬೆದರಿಕೆ ಬೆನ್ನಲ್ಲೇ ಕಾಪಿಕಾಡ್ ಉಲ್ಟಾ ಹೊಡೆದಿದ್ದಾರೆ.

‘ನಾನು ಬಿಜೆಪಿ ಸದಸ್ಯತ್ವ ಪಡೆದಿಲ್ಲ. ಸದ್ಯ ಸಾಮಾಜಿಕ ತಾಣಗಳಲ್ಲಿ ಸ್ಪಷ್ಟನೆ ಆಡಿಯೋ ಹರಿಬಿಟ್ಟಿದ್ದಾರೆ. ಬಿಜೆಪಿ ನಾಯಕರ ಜೊತೆ ಕೇವಲ ಸೌಹಾರ್ದ ಭೇಟಿ ನಡೆದಿದೆ. ನಾನು ಯಾವುದೇ ಪಕ್ಷಕ್ಕೂ ಸೇರಿದವನಲ್ಲ. ಯಾವುದೇ ಪಕ್ಷಕ್ಕೆ ಸೇರ್ಪಡೆಯೂ ಆಗಿಲ್ಲ. ಎಲ್ಲಾ ಪಕ್ಷಗಳ ಮುಖಂಡರ ಜೊತೆ ನನಗೆ ಉತ್ತಮ ಸಂಬಂಧ ಇದೆ’ ಎಂದು ದೇವದಾಸ್ ಕಾಪಿಕಾಡ್ ಸ್ಪಷ್ಟನೆ ಕೊಟ್ಟಿದ್ದಾರೆ.

ಇದನ್ನೂ ಓದಿ: ಶಿಲ್ಪಾ ಶೆಟ್ಟಿಗೆ ತುಳು ಭಾಷೆಯ ಮೇಲೆ ಇರೋ ಪ್ರೀತಿ ಎಂಥದ್ದು? ಇಲ್ಲಿದೆ ವಿಡಿಯೋ 

ಸೌದಿ ಕಾರ್ಯಕ್ರಮದ ಬಹಿಷ್ಕಾರದ ಬೆದರಿಕೆಗೆ ದೇವದಾಸ್ ಕಾಪಿಕಾಡ್ ತತ್ತರಿಸಿದರಾ ಎಂಬ ಪ್ರಶ್ನೆ ಮೂಡಿದೆ. ತುಳು ರಂಗಭೂಮಿಯಲ್ಲಿ ದೇವದಾಸ್ ಆ್ಯಕ್ಟೀವ್ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:37 am, Fri, 6 September 24

ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?