AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಸದಸ್ಯತ್ವ ಪಡೆದ ಕಾರಣಕ್ಕೆ ಸೌದಿಯಲ್ಲಿ ಪ್ರಸಿದ್ಧ ನಟನ ಕಾರ್ಯಕ್ರಮ ಬಹಿಷ್ಕಾರ?

ತುಳುವಿನಲ್ಲಿ ದೇವದಾಸ್​ ಕಾಪಿಕಾಡ್ ದೊಡ್ಡ ಹೆಸರು ಮಾಡಿದ್ದಾರೆ. ಅವರು ಕಲಾವಿದನಾಗಿ, ನಿರ್ದೇಶಕನಾಗಿ ಗುರುತಿಸಿಕೊಂಡಿದ್ದಾರೆ. ರಂಗಭೂಮಿಯಲ್ಲೂ ಅವರು ಆ್ಯಕ್ಟೀವ್ ಆಗಿದ್ದಾರೆ. ಅವರು ಬುಧವಾರ ಬಿಜೆಪಿ ಸೇರಿದ್ದರು. ಆದರೆ, ಅವರು ಈಗ ಬಿಜೆಪಿ ಸೇರಿಲ್ಲ ಎನ್ನುತ್ತಿದ್ದಾರೆ.

ಬಿಜೆಪಿ ಸದಸ್ಯತ್ವ ಪಡೆದ ಕಾರಣಕ್ಕೆ ಸೌದಿಯಲ್ಲಿ ಪ್ರಸಿದ್ಧ ನಟನ ಕಾರ್ಯಕ್ರಮ ಬಹಿಷ್ಕಾರ?
ಬಿಜೆಪಿ ಸದಸ್ಯತ್ವ ಪಡೆದ ಕಾರಣಕ್ಕೆ ಸೌದಿಯಲ್ಲಿ ಪ್ರಸಿದ್ಧ ನಟನ ಕಾರ್ಯಕ್ರಮ ಬಹಿಷ್ಕಾರ?
ರಾಜೇಶ್ ದುಗ್ಗುಮನೆ
|

Updated on:Sep 06, 2024 | 11:03 AM

Share

ತುಳು ಸಿನಿಮಾದ ನಟ ದೇವದಾಸ್ ಕಾಪಿಕಾಡ್ ಈಗ ವಿವಾದದಲ್ಲಿ ಸಿಲುಕಿಕೊಂಡಿದ್ದಾರೆ. ಅವರು ಇತ್ತೀಚೆಗೆ ಬಿಜೆಪಿ ಸದಸ್ಯತ್ವ ಪಡೆದುಕೊಂಡಿದ್ದರು. ಈ ಬೆಳವಣಿಗೆ ಬೆನ್ನಲ್ಲೇ ಸೌದಿ ಅರೇಬಿಯಾದಲ್ಲಿ ನಡೆಯಬೇಕಿದ್ದ ಇವರ ಕಾಮಿಡಿ ಶೋಗೆ ಬಹಿಷ್ಕಾರದ ಬೆದರಿಕೆ ಬಂದಿದೆ. ಈ ಬೆನ್ನಲ್ಲೇ ಅವರು ದೇವದಾಸ್ ಕಾಪಿಕಾಡ್ ಉಲ್ಟಾ ಹೊಡೆದ್ರಾ ಎಂಬ ಪ್ರಶ್ನೆ ಮೂಡಿದೆ.

ತುಳುವಿನಲ್ಲಿ ದೇವದಾಸ್​ ಕಾಪಿಕಾಡ್ ದೊಡ್ಡ ಹೆಸರು ಮಾಡಿದ್ದಾರೆ. ಅವರು ಕಲಾವಿದನಾಗಿ, ನಿರ್ದೇಶಕನಾಗಿ ಗುರುತಿಸಿಕೊಂಡಿದ್ದಾರೆ. ರಂಗಭೂಮಿಯಲ್ಲೂ ಅವರು ಆ್ಯಕ್ಟೀವ್ ಆಗಿದ್ದಾರೆ. ಅವರು ಬುಧವಾರ (ಸೆಪ್ಟೆಂಬರ್ 4) ಮಾಜಿ ಕೇಂದ್ರ ಸಚಿವ ಡಿ.ವಿ‌.ಸದಾನಂದ ಗೌಡ ಸಮ್ಮುಖದಲ್ಲಿ ಬಿಜಿಪಿ ಸದಸ್ಯತ್ವ ಪಡೆದಿದ್ದರು. ಬಿಜೆಪಿ ಸದಸ್ಯತ್ವ ಅಭಿಯಾನದ ಅಂಗವಾಗಿ ಅವರು ಆನ್​ಲೈನ್ ಸದಸ್ಯತ್ವ ಪಡೆದಿದ್ದರು. ದೇವದಾಸ್ ಕಾಪಿಕಾಡ್ ಬಿಜೆಪಿ ಸದಸ್ಯತ್ವ ಪಡೆದ ಬಗ್ಗೆ ಪಕ್ಷದ ಕಡೆಯಿಂದ ಸಾಮಾಜಿಕ ತಾಣಗಳಲ್ಲಿ ಪೋಸ್ಟ್ ಹಾಕಲಾಗಿತ್ತು.

ಫೋಸ್ಟ್ ವೈರಲ್ ಬೆನ್ನಲ್ಲೇ ದೇವದಾಸ್ ಕಾಪಿಕಾಡ್​ಗೆ ಬಹಿಷ್ಕಾರದ ಬಿಸಿ ತಟ್ಟಿತ್ತು. ಸೆ.13 ಹಾಗೂ 14ರಂದು ಸೌದಿಯ ಜುಬೈಲ್​ನ ಪುಲಿ ರೆಸ್ಟೋರೆಂಟ್​ನಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ‘ಬಿಜೆಪಿ ಸದಸ್ಯತ್ವ ಪಡೆದ ಹಿನ್ನೆಲೆ ಕಾರ್ಯಕ್ರಮ ಬಹಿಷ್ಕರಿಸಿ’ ಎಂಬ ಪೋಸ್ಟ್ ವೈರಲ್ ಆಗಿದೆ. ಬಹಿಷ್ಕಾರ ಬೆದರಿಕೆ ಬೆನ್ನಲ್ಲೇ ಕಾಪಿಕಾಡ್ ಉಲ್ಟಾ ಹೊಡೆದಿದ್ದಾರೆ.

‘ನಾನು ಬಿಜೆಪಿ ಸದಸ್ಯತ್ವ ಪಡೆದಿಲ್ಲ. ಸದ್ಯ ಸಾಮಾಜಿಕ ತಾಣಗಳಲ್ಲಿ ಸ್ಪಷ್ಟನೆ ಆಡಿಯೋ ಹರಿಬಿಟ್ಟಿದ್ದಾರೆ. ಬಿಜೆಪಿ ನಾಯಕರ ಜೊತೆ ಕೇವಲ ಸೌಹಾರ್ದ ಭೇಟಿ ನಡೆದಿದೆ. ನಾನು ಯಾವುದೇ ಪಕ್ಷಕ್ಕೂ ಸೇರಿದವನಲ್ಲ. ಯಾವುದೇ ಪಕ್ಷಕ್ಕೆ ಸೇರ್ಪಡೆಯೂ ಆಗಿಲ್ಲ. ಎಲ್ಲಾ ಪಕ್ಷಗಳ ಮುಖಂಡರ ಜೊತೆ ನನಗೆ ಉತ್ತಮ ಸಂಬಂಧ ಇದೆ’ ಎಂದು ದೇವದಾಸ್ ಕಾಪಿಕಾಡ್ ಸ್ಪಷ್ಟನೆ ಕೊಟ್ಟಿದ್ದಾರೆ.

ಇದನ್ನೂ ಓದಿ: ಶಿಲ್ಪಾ ಶೆಟ್ಟಿಗೆ ತುಳು ಭಾಷೆಯ ಮೇಲೆ ಇರೋ ಪ್ರೀತಿ ಎಂಥದ್ದು? ಇಲ್ಲಿದೆ ವಿಡಿಯೋ 

ಸೌದಿ ಕಾರ್ಯಕ್ರಮದ ಬಹಿಷ್ಕಾರದ ಬೆದರಿಕೆಗೆ ದೇವದಾಸ್ ಕಾಪಿಕಾಡ್ ತತ್ತರಿಸಿದರಾ ಎಂಬ ಪ್ರಶ್ನೆ ಮೂಡಿದೆ. ತುಳು ರಂಗಭೂಮಿಯಲ್ಲಿ ದೇವದಾಸ್ ಆ್ಯಕ್ಟೀವ್ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:37 am, Fri, 6 September 24

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ