ಬಿಜೆಪಿ ಸದಸ್ಯತ್ವ ಪಡೆದ ಕಾರಣಕ್ಕೆ ಸೌದಿಯಲ್ಲಿ ಪ್ರಸಿದ್ಧ ನಟನ ಕಾರ್ಯಕ್ರಮ ಬಹಿಷ್ಕಾರ?

ತುಳುವಿನಲ್ಲಿ ದೇವದಾಸ್​ ಕಾಪಿಕಾಡ್ ದೊಡ್ಡ ಹೆಸರು ಮಾಡಿದ್ದಾರೆ. ಅವರು ಕಲಾವಿದನಾಗಿ, ನಿರ್ದೇಶಕನಾಗಿ ಗುರುತಿಸಿಕೊಂಡಿದ್ದಾರೆ. ರಂಗಭೂಮಿಯಲ್ಲೂ ಅವರು ಆ್ಯಕ್ಟೀವ್ ಆಗಿದ್ದಾರೆ. ಅವರು ಬುಧವಾರ ಬಿಜೆಪಿ ಸೇರಿದ್ದರು. ಆದರೆ, ಅವರು ಈಗ ಬಿಜೆಪಿ ಸೇರಿಲ್ಲ ಎನ್ನುತ್ತಿದ್ದಾರೆ.

ಬಿಜೆಪಿ ಸದಸ್ಯತ್ವ ಪಡೆದ ಕಾರಣಕ್ಕೆ ಸೌದಿಯಲ್ಲಿ ಪ್ರಸಿದ್ಧ ನಟನ ಕಾರ್ಯಕ್ರಮ ಬಹಿಷ್ಕಾರ?
ಬಿಜೆಪಿ ಸದಸ್ಯತ್ವ ಪಡೆದ ಕಾರಣಕ್ಕೆ ಸೌದಿಯಲ್ಲಿ ಪ್ರಸಿದ್ಧ ನಟನ ಕಾರ್ಯಕ್ರಮ ಬಹಿಷ್ಕಾರ?
Follow us
|

Updated on:Sep 06, 2024 | 11:03 AM

ತುಳು ಸಿನಿಮಾದ ನಟ ದೇವದಾಸ್ ಕಾಪಿಕಾಡ್ ಈಗ ವಿವಾದದಲ್ಲಿ ಸಿಲುಕಿಕೊಂಡಿದ್ದಾರೆ. ಅವರು ಇತ್ತೀಚೆಗೆ ಬಿಜೆಪಿ ಸದಸ್ಯತ್ವ ಪಡೆದುಕೊಂಡಿದ್ದರು. ಈ ಬೆಳವಣಿಗೆ ಬೆನ್ನಲ್ಲೇ ಸೌದಿ ಅರೇಬಿಯಾದಲ್ಲಿ ನಡೆಯಬೇಕಿದ್ದ ಇವರ ಕಾಮಿಡಿ ಶೋಗೆ ಬಹಿಷ್ಕಾರದ ಬೆದರಿಕೆ ಬಂದಿದೆ. ಈ ಬೆನ್ನಲ್ಲೇ ಅವರು ದೇವದಾಸ್ ಕಾಪಿಕಾಡ್ ಉಲ್ಟಾ ಹೊಡೆದ್ರಾ ಎಂಬ ಪ್ರಶ್ನೆ ಮೂಡಿದೆ.

ತುಳುವಿನಲ್ಲಿ ದೇವದಾಸ್​ ಕಾಪಿಕಾಡ್ ದೊಡ್ಡ ಹೆಸರು ಮಾಡಿದ್ದಾರೆ. ಅವರು ಕಲಾವಿದನಾಗಿ, ನಿರ್ದೇಶಕನಾಗಿ ಗುರುತಿಸಿಕೊಂಡಿದ್ದಾರೆ. ರಂಗಭೂಮಿಯಲ್ಲೂ ಅವರು ಆ್ಯಕ್ಟೀವ್ ಆಗಿದ್ದಾರೆ. ಅವರು ಬುಧವಾರ (ಸೆಪ್ಟೆಂಬರ್ 4) ಮಾಜಿ ಕೇಂದ್ರ ಸಚಿವ ಡಿ.ವಿ‌.ಸದಾನಂದ ಗೌಡ ಸಮ್ಮುಖದಲ್ಲಿ ಬಿಜಿಪಿ ಸದಸ್ಯತ್ವ ಪಡೆದಿದ್ದರು. ಬಿಜೆಪಿ ಸದಸ್ಯತ್ವ ಅಭಿಯಾನದ ಅಂಗವಾಗಿ ಅವರು ಆನ್​ಲೈನ್ ಸದಸ್ಯತ್ವ ಪಡೆದಿದ್ದರು. ದೇವದಾಸ್ ಕಾಪಿಕಾಡ್ ಬಿಜೆಪಿ ಸದಸ್ಯತ್ವ ಪಡೆದ ಬಗ್ಗೆ ಪಕ್ಷದ ಕಡೆಯಿಂದ ಸಾಮಾಜಿಕ ತಾಣಗಳಲ್ಲಿ ಪೋಸ್ಟ್ ಹಾಕಲಾಗಿತ್ತು.

ಫೋಸ್ಟ್ ವೈರಲ್ ಬೆನ್ನಲ್ಲೇ ದೇವದಾಸ್ ಕಾಪಿಕಾಡ್​ಗೆ ಬಹಿಷ್ಕಾರದ ಬಿಸಿ ತಟ್ಟಿತ್ತು. ಸೆ.13 ಹಾಗೂ 14ರಂದು ಸೌದಿಯ ಜುಬೈಲ್​ನ ಪುಲಿ ರೆಸ್ಟೋರೆಂಟ್​ನಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ‘ಬಿಜೆಪಿ ಸದಸ್ಯತ್ವ ಪಡೆದ ಹಿನ್ನೆಲೆ ಕಾರ್ಯಕ್ರಮ ಬಹಿಷ್ಕರಿಸಿ’ ಎಂಬ ಪೋಸ್ಟ್ ವೈರಲ್ ಆಗಿದೆ. ಬಹಿಷ್ಕಾರ ಬೆದರಿಕೆ ಬೆನ್ನಲ್ಲೇ ಕಾಪಿಕಾಡ್ ಉಲ್ಟಾ ಹೊಡೆದಿದ್ದಾರೆ.

‘ನಾನು ಬಿಜೆಪಿ ಸದಸ್ಯತ್ವ ಪಡೆದಿಲ್ಲ. ಸದ್ಯ ಸಾಮಾಜಿಕ ತಾಣಗಳಲ್ಲಿ ಸ್ಪಷ್ಟನೆ ಆಡಿಯೋ ಹರಿಬಿಟ್ಟಿದ್ದಾರೆ. ಬಿಜೆಪಿ ನಾಯಕರ ಜೊತೆ ಕೇವಲ ಸೌಹಾರ್ದ ಭೇಟಿ ನಡೆದಿದೆ. ನಾನು ಯಾವುದೇ ಪಕ್ಷಕ್ಕೂ ಸೇರಿದವನಲ್ಲ. ಯಾವುದೇ ಪಕ್ಷಕ್ಕೆ ಸೇರ್ಪಡೆಯೂ ಆಗಿಲ್ಲ. ಎಲ್ಲಾ ಪಕ್ಷಗಳ ಮುಖಂಡರ ಜೊತೆ ನನಗೆ ಉತ್ತಮ ಸಂಬಂಧ ಇದೆ’ ಎಂದು ದೇವದಾಸ್ ಕಾಪಿಕಾಡ್ ಸ್ಪಷ್ಟನೆ ಕೊಟ್ಟಿದ್ದಾರೆ.

ಇದನ್ನೂ ಓದಿ: ಶಿಲ್ಪಾ ಶೆಟ್ಟಿಗೆ ತುಳು ಭಾಷೆಯ ಮೇಲೆ ಇರೋ ಪ್ರೀತಿ ಎಂಥದ್ದು? ಇಲ್ಲಿದೆ ವಿಡಿಯೋ 

ಸೌದಿ ಕಾರ್ಯಕ್ರಮದ ಬಹಿಷ್ಕಾರದ ಬೆದರಿಕೆಗೆ ದೇವದಾಸ್ ಕಾಪಿಕಾಡ್ ತತ್ತರಿಸಿದರಾ ಎಂಬ ಪ್ರಶ್ನೆ ಮೂಡಿದೆ. ತುಳು ರಂಗಭೂಮಿಯಲ್ಲಿ ದೇವದಾಸ್ ಆ್ಯಕ್ಟೀವ್ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:37 am, Fri, 6 September 24

ಭದ್ರತಾ ಪಡೆಯಿಂದ ಉಗ್ರನ ಎನ್​ಕೌಂಟರ್​, ವಿಡಿಯೋ ಸೆರೆಹಿಡಿದ ಡ್ರೋನ್
ಭದ್ರತಾ ಪಡೆಯಿಂದ ಉಗ್ರನ ಎನ್​ಕೌಂಟರ್​, ವಿಡಿಯೋ ಸೆರೆಹಿಡಿದ ಡ್ರೋನ್
ಭಜರಂಗದಳ, VHPಯಿಂದ ಬಿಸಿ ರೋಡ್ ಚಲೋ ಕರೆ, ಪೊಲೀಸ್​​ ಬಿಗಿ ಬಂದೋಬಸ್ತ್​​
ಭಜರಂಗದಳ, VHPಯಿಂದ ಬಿಸಿ ರೋಡ್ ಚಲೋ ಕರೆ, ಪೊಲೀಸ್​​ ಬಿಗಿ ಬಂದೋಬಸ್ತ್​​
ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ಮಲಗಿದ್ದ ವ್ಯಕ್ತಿ
ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ಮಲಗಿದ್ದ ವ್ಯಕ್ತಿ
Daily Devotional: ಪತ್ನಿಯ ಪೂಜಾ ಫಲ ಪತಿಗೆ ಸಲ್ಲುತ್ತಾ? ವಿಡಿಯೋ ನೋಡಿ
Daily Devotional: ಪತ್ನಿಯ ಪೂಜಾ ಫಲ ಪತಿಗೆ ಸಲ್ಲುತ್ತಾ? ವಿಡಿಯೋ ನೋಡಿ
Nithya Bhavishya: ಅನಂತಪದ್ಮನಾಭ ವ್ರತ ಸೋಮವಾರದ ದಿನ ಭವಿಷ್ಯ ತಿಳಿಯಿರಿ
Nithya Bhavishya: ಅನಂತಪದ್ಮನಾಭ ವ್ರತ ಸೋಮವಾರದ ದಿನ ಭವಿಷ್ಯ ತಿಳಿಯಿರಿ
ಆಟೋ ಡ್ರೈವರ್​ ಆದ ರಾಧಿಕಾ ಕುಮಾರಸ್ವಾಮಿ; ‘ಭೈರಾದೇವಿ’ ಪ್ರಚಾರಕ್ಕೆ ಚಾಲನೆ
ಆಟೋ ಡ್ರೈವರ್​ ಆದ ರಾಧಿಕಾ ಕುಮಾರಸ್ವಾಮಿ; ‘ಭೈರಾದೇವಿ’ ಪ್ರಚಾರಕ್ಕೆ ಚಾಲನೆ
ಆರ್​ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ ಕನ್ನಡಿಗ ರಾಹುಲ್
ಆರ್​ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ ಕನ್ನಡಿಗ ರಾಹುಲ್
ಮಾನವ ಸರಪಳಿ ವೇಳೆ ಡೊಳ್ಳಿನ ನಾದಕ್ಕೆ ತಾಳ ಹಾಕಿದ ಇ ತುಕಾರಾಂ
ಮಾನವ ಸರಪಳಿ ವೇಳೆ ಡೊಳ್ಳಿನ ನಾದಕ್ಕೆ ತಾಳ ಹಾಕಿದ ಇ ತುಕಾರಾಂ
ಚೆನ್ನೈನಲ್ಲಿ ಕೊಹ್ಲಿ, ರೋಹಿತ್ ಭರ್ಜರಿ ಬ್ಯಾಟಿಂಗ್ ಪ್ರಾಕ್ಟೀಸ್
ಚೆನ್ನೈನಲ್ಲಿ ಕೊಹ್ಲಿ, ರೋಹಿತ್ ಭರ್ಜರಿ ಬ್ಯಾಟಿಂಗ್ ಪ್ರಾಕ್ಟೀಸ್
ಚಿಕ್ಕಮಗಳೂರಿನಲ್ಲಿ ಪ್ಯಾಲಿಸ್ತೀನ್‌ ಧ್ವಜ ಹಿಡಿದು ಮುಸ್ಲಿಂ ಯುವಕರ ಓಡಾಟ
ಚಿಕ್ಕಮಗಳೂರಿನಲ್ಲಿ ಪ್ಯಾಲಿಸ್ತೀನ್‌ ಧ್ವಜ ಹಿಡಿದು ಮುಸ್ಲಿಂ ಯುವಕರ ಓಡಾಟ