AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ಪ್ರಕರಣ: ವಿಚಾರಣೆಗೆ ಹಾಜರಾದ ನಿರ್ದೇಶಕ ಮಿಲನಾ ಪ್ರಕಾಶ್

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಜೈಲು ಸೇರಿದ್ದು, ದರ್ಶನ್ ಬಂಧನವಾದಾಗ ನಟಿಸುತ್ತಿದ್ದ ‘ಡೆವಿಲ್’ ಸಿನಿಮಾದ ನಿರ್ದೇಶಕ ಮಿಲನಾ ಪ್ರಕಾಶ್ ಅವರಿಗೆ ನೊಟೀಸ್ ನೀಡಿ ವಿಚಾರಣೆ ನಡೆಸಲಾಗುತ್ತಿದೆ.

ದರ್ಶನ್ ಪ್ರಕರಣ: ವಿಚಾರಣೆಗೆ ಹಾಜರಾದ ನಿರ್ದೇಶಕ ಮಿಲನಾ ಪ್ರಕಾಶ್
ಮಂಜುನಾಥ ಸಿ.
|

Updated on: Jul 05, 2024 | 3:06 PM

Share

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನವಾಗಿದ್ದು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ದೇಶಕ ಮಿಲನಾ ಪ್ರಕಾಶ್ ಅವರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಜೂನ್ 11 ರಂದು ದರ್ಶನ್​ರ ಬಂಧನವಾದಾಗ ದರ್ಶನ್ ‘ಡೆವಿಲ್’ ಸಿನಿಮಾದಲ್ಲಿ ನಟಿಸಲೆಂದು ಮೈಸೂರಿಗೆ ತೆರಳಿದ್ದರು. ‘ಡೆವಿಲ್’ ಸಿನಿಮಾವನ್ನು ಪ್ರಕಾಶ್ ನಿರ್ದೇಶನ ಮಾಡುತ್ತಿದ್ದರು. ಮೈಸೂರಿನಲ್ಲಿ ದರ್ಶನ್​ಗೆ ರೂಂ ಬುಕ್ ಮಾಡಿದ್ದಿದ್ದು ಪ್ರಕಾಶ್ ಅವರೇ, ಹಾಗಾಗಿ ಅವರನ್ನು ಪೊಲೀಸರು ವಿಚಾರಣೆ ಮಾಡಿದ್ದಾರೆ.

ದರ್ಶನ್ ನಟಿಸುತ್ತಿರುವ ‘ಡೆವಿಲ್’ ಸಿನಿಮಾವನ್ನು ಮಿಲನಾ ಪ್ರಕಾಶ್ ನಿರ್ದೇಶನ ಮಾಡುತ್ತಿದ್ದಾರೆ. 2017 ರಲ್ಲಿ ದರ್ಶನ್ ನಟನೆಯ ‘ತಾರಕ್’ ಸಿನಿಮಾವನ್ನು ಪ್ರಕಾಶ್ ನಿರ್ದೇಶನ ಮಾಡಿದ್ದರು. ಅದಾದ ಬಳಿಕ ಈಗ ‘ಡೆವಿಲ್’ ಸಿನಿಮಾ ಮೂಲಕವೇ ಪ್ರಕಾಶ್ ಮತ್ತೆ ನಿರ್ದೇಶಕನಾಗಿ ಚಿತ್ರರಂಗಕ್ಕೆ ರೀ ಎಂಟ್ರಿ ನೀಡಲು ಸಜ್ಜಾಗಿದ್ದರು. ಆದರೆ ಚಿತ್ರೀಕರಣ ನಡೆಯುತ್ತಿರುವಾಗಲೇ ದರ್ಶನ್ ಬಂಧನವಾಗಿದೆ.

ಜೂನ್ 8ರಂದು ರೇಣುಕಾ ಸ್ವಾಮಿ ಕೊಲೆ ಆದ ಬಳಿಕ ದರ್ಶನ್ ಮೈಸೂರಿಗೆ ತೆರಳಿದ್ದರು. ಅಲ್ಲಿ ನಿರ್ದೇಶಕ ಪ್ರಕಾಶ್ ಅವರನ್ನು ಭೇಟಿ ಆಗಿದ್ದರು. ಪ್ರಕಾಶ್ ಅವರೇ ದರ್ಶನ್​ಗೆ ರ್ಯಾಡಿಸನ್ ಬ್ಲೂ ಹೋಟೆಲ್​ನಲ್ಲಿ ರೂಂ ಮಾಡಿ ಕೊಟ್ಟಿದ್ದರು ಎನ್ನಲಾಗಿದೆ. ಕೊಲೆ ಆದ ಬಳಿಕ ದರ್ಶನ್ ಸೆಟ್​ನಲ್ಲಿ ಚಿತ್ರೀಕರಣದಲ್ಲಿಯೂ ಪಾಲ್ಗೊಂಡಿದ್ದರು ಎನ್ನಲಾಗಿದ್ದು, ಪ್ರಕಾಶ್ ಅವರೊಟ್ಟಿಗೆ ಹೆಚ್ಚು ಸಮಯ ಕಳೆದಿದ್ದಾರೆ. ಈ ಸಮಯದಲ್ಲಿ ಪ್ರಕರಣದ ಬಗ್ಗೆ ದರ್ಶನ್, ಪ್ರಕಾಶ್ ಜೊತೆಗೆ ಏನಾದರೂ ಮಾತನಾಡಿದರಾ ಎಂಬಿತ್ಯಾದಿ ವಿಚಾರ ತಿಳಿಯಲೆಂದು ಅವರನ್ನು ವಿಚಾರಣೆಗೆ ಕರೆಸಲಾಗಿದೆ.

ಇದನ್ನೂ ಓದಿ: ದರ್ಶನ್ ಆರೋಪಿ ಮಾತ್ರ, ಕಣ್ಣಾರೆ ನೋಡದ ಪ್ರಕರಣದ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ ಎಂದ ನಟಿ  

ದರ್ಶನ್ ಬಂಧನ ಆದಾಗಿನಿಂದಲೂ ಪ್ರಕಾಶ್ ಬಹಿರಂಗವಾಗಿ ಕಾಣಿಸಿಕೊಂಡಿರಲಿಲ್ಲ. ಆದರೆ ಈಗ ಪ್ರಕರಣದ ತನಿಖಾಧಿಕಾರಿ ಎಸಿಪಿ ಚಂದನ್ ಎದುರು ಹಾಜರಾಗಿದ್ದಾರೆ. ದರ್ಶನ್ ಬಂಧನದ ಬಳಿಕ ‘ಡೆವಿಲ್’ ಸಿನಿಮಾದ ಚಿತ್ರೀಕರಣವನ್ನು ನಿಲ್ಲಿಸಲಾಗಿದೆ. ಸಿನಿಮಾಕ್ಕೆ ಪ್ರಕಾಶ್ ಹಾಗೂ ಜಯಮ್ಮ ಎಂಬುವರು ಬಂಡವಾಳ ಹೂಡಿದ್ದಾರೆ. ಸಿನಿಮಾದಲ್ಲಿ ದರ್ಶನ್ ಎದುರು ಬಿಗ್​ಬಾಸ್ ವಿನಯ್ ವಿಲನ್ ಆಗಿ ನಟಿಸಿದ್ದಾರೆ ಎನ್ನಲಾಗುತ್ತಿದೆ. ಅವರೇ ಮುಖ್ಯ ವಿಲನ್ ಆಗಿದ್ದಾರಾ ಎಂಬ ಬಗ್ಗೆ ಪೂರ್ಣ ಮಾಹಿತಿ ಇಲ್ಲ.

‘ಡೆವಿಲ್’ ಸಿನಿಮಾದಲ್ಲಿ ನಾಯಕಿಯಾಗಿ ರಚನಾ ರೈ ನಟಿಸುತ್ತಿದ್ದಾರೆ. ಮರಾಠಿ ನಟ ಮಹೇಶ್ ಮಂಜ್ರೇಕರ್ ಸಹ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಬಿಗ್​ಬಾಸ್ ವಿನಯ್ ಗೌಡ ಸಹ ಇದ್ದಾರೆ. ಸಿನಿಮಾಕ್ಕೆ ಅಜನೀಶ್ ಲೋಕನಾಥ್ ನೀಡಿದ್ದಾರೆ. ದರ್ಶನ್ ಹೊರಗೆ ಬರುವವರೆಗೆ ಸಿನಿಮಾದ ಚಿತ್ರೀಕರಣ ನಡೆಯುವುದಿಲ್ಲ. ದರ್ಶನ್ ಯಾವಾಗ ಹೊರಗೆ ಬರುತ್ತಾರೆಯೋ ಕಾದು ನೋಡಬೇಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ